ದಿನಾಂಕ 25.04.2021ನೇ ಆದಿತ್ಯವಾರದಂದು ಸಂಜೆ ಘಂಟೆ 7ರಿಂದ ರಾತ್ರಿ ಘಂಟೆ 12ರ ವರೆಗೆ, ಕಟೀಲು ಸಿತ್ಲ ಶ್ರೀಮಾ ನಿಲಯದ ಮುಂಭಾಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.
ದಿನಾಂಕ 23.04.2021ನೇ ಶುಕ್ರವಾರದಂದು ಮಚ್ಚಾರು ಪಡೀಲು ಶ್ರೀ ದೇವಿಕೃಪಾ ಮನೆಯಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ‘ಶ್ರೀ ದೇವಿ ಮಹಾತ್ಮೆ’ ಎಂಬ ಯಕ್ಷಗಾನ ಬಯಲಾಟ ನಡೆಯಲಿದೆ.
ಕ್ಯಾಂಡ್ಯನ್ ನೃತ್ಯವು ಶ್ರೀಲಂಕಾದ ಉದಾರತ ಎಂದು ಕರೆಯಲ್ಪಡುವ ಮಧ್ಯ ಬೆಟ್ಟಗಳ ಪ್ರದೇಶದ ಕ್ಯಾಂಡಿ ಎಂದು ಕರೆಯಲ್ಪಡುವ ಪ್ರದೇಶಕ್ಕೆ ಜನಪ್ರಿಯ ಮತ್ತು ಸ್ಥಳೀಯ ವಿವಿಧ ನೃತ್ಯ ಪ್ರಕಾರಗಳನ್ನು ಒಳಗೊಂಡಿದೆ, ಕ್ಯಾಂಡ್ಯನ್ ನೃತ್ಯದ ವೀಡೀಯೋ.
ಶ್ರೀ ಮಹಾಲಕ್ಷ್ಮಿ ಭಜನಾ ಮಂದಿರ, ದೊಡ್ಡಡ್ಕ ಇದರ 28 ನೇ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬೆಳಿಗ್ಗೆ ಗಣಪತಿ ಹವನ, ಮಹಾಲಕ್ಷ್ಮಿ ಪೂಜೆ, ಶ್ರೀ ನರಹರಿ ಭಟ್ ಪಾಲೆಚ್ಚಾರು ಇವರಿಂದ ಕಥಾವಾಚನ , ಮಹಾಪೂಜೆ, ಅನ್ನಸಂತರ್ಪಣೆ ,ಭಜನಾ ಕಾರ್ಯಗಳು ನಡೆದವು.
ಧಾರ್ಮಿಕ ಸಭಾ ಕಾರ್ಯಕ್ರಮ ದ ಅಧ್ಯಕ್ಷತೆಯನ್ನು ನಿವೃತ್ತ ಅಧ್ಯಾಪಕ ಶ್ರೀ ನರಹರಿ ಭಟ್ ಪಾಲೆಚ್ಚಾರು ವಹಿಸಿದ್ದರು. ಅತಿಥಿಗಳಾಗಿ ನ್ಯಾಯವಾದಿ ಶ್ರೀ ಚೇತನ್ ನಾಯಕ್ ಸಾಮೇತಡ್ಕ, ಸಂಚಾರಿ ಪೊಲೀಸ್ ಉಪ-ನಿರೀಕ್ಷಕರಾದ ಶ್ರೀ ರಾಮ ನಾಯ್ಕ ಗೆಣಸಿನಕುಮೇರು, ಉಪಸ್ಥಿತರಿದ್ದರು.
ಭಜನಾ ಮಂದಿರದ ಅಧ್ಯಕ್ಷರಾದ ಶ್ರೀ ಜಗದೀಶ್ ಭಂಡಾರಿ, ಗೆಣಸಿನ ಕುಮೇರು ಪ್ರಸ್ತಾವಿಸಿ, ಸ್ವಾಗತಿಸಿದರು. ಕಾರ್ಯದರ್ಶಿ ಶ್ರೀ ವೆಂಕಟಕೃಷ್ಣ ಭಟ್ ವರದಿ ವಾಚಿಸಿ , ಲೆಕ್ಕಪತ್ರ ಮಂಡಿಸಿದರು. ಮಂದಿರದ ಸೇವಾಟ್ರಸ್ಟ್ ನ ಅಧ್ಯಕ್ಷರಾದ ಶ್ರೀ ಸೇಸಪ್ಪ ನಾಯ್ಕ್ ವಂದನಾರ್ಪಣೆಗೈದರು.
ಆ ಬಳಿಕ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ, ಹನುಮಗಿರಿ ಇವರಿಂದ ‘ಓಂ ನಮಃ ಶಿವಾಯ, ರಕ್ತರಾತ್ರಿ’ ಎಂಬ ಯಕ್ಷಗಾನ ಬಯಲಾಟ ಜರಗಿತು.
ಯಕ್ಷಗಾನ ನೃತ್ಯ ಕಲಿಕೆ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕಾರಣವಾಗುತ್ತದೆ. ಬದುಕಿಗೊಂದು ಶಿಸ್ತು ಕಲಿಸುತ್ತದೆ ಎಂದು ಅಂಬಲಪಾಡಿ ಶ್ರೀ ಲಕ್ಷ್ಮೀಜನಾರ್ದನ ದೇವಳದ ಧರ್ಮದರ್ಶಿ ಡಾ.ನಿ.ಬೀ. ವಿಜಯ ಬಲ್ಲಾಳ್ ಅಭಿಪ್ರಾಯಪಟ್ಟರು. ಅವರು ಅಂಬಲಪಾಡಿ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾಮಂಡಳಿಯ ನೂತನ ಕಟ್ಟಡ ‘ಶ್ರೀ ಜನಾರ್ದನ ಮಂಟಪ’ದಲ್ಲಿ ಜ್ಯೋತಿ ಬೆಳಗಿಸಿ ಯಕ್ಷಗಾನ ಕಲಿಕಾ ತರಗತಿ ಉದ್ಘಾಟಿಸಿ ಮಾತನಾಡುತ್ತಿದ್ದರು.
ನೂತನ ಕಟ್ಟಡಕ್ಕೆ ಅಗತ್ಯವಿರುವ ಮೂಲ ಸೌಕರ್ಯ ಮತ್ತು ಪೀಠೋಪಕರಣಗಳ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು. ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಇಂದಿರಾ ಶಿವರಾಯ ಪೊಲಿಟೆಕ್ನ್ನಿಕಲ್ ಕಾಲೇಜಿನ ನಿರ್ದೇಶಕ ಡಾ. ಮೋಹನ್ದಾಸ್ ಭಟ್ ಅಭ್ಯಾಗತರಾಗಿ ಭಾಗವಹಿಸಿದರು.
ಯಕ್ಷಗಾನ ಗುರು ನರಸಿಂಹ ತುಂಗ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕವಿಲ್ಲದೆ ಪ್ರತೀ ಭಾನುವಾರ ತರಗತಿ ನಡೆಸಲಾಗುತ್ತದೆ. ಎಲ್ಲ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಪೆನ್ನು ವಿತರಿಸಲಾಯಿತು. ಸಂಸ್ಥೆಯ ಅಧ್ಯಕ್ಷ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಸಂಸ್ಥೆಯ ಸದಸ್ಯ ಮಂಜುನಾಥ ತೆಂಕಿಲಾಯ ವಂದಿಸಿದರು.
ಕೋಶಾಧಿಕಾರಿ ನಟರಾಜ ಉಪಾಧ್ಯ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ಉಪಾಧ್ಯಕ್ಷ ಕೆ.ಅಜಿತ್ಕುಮಾರ್ ಸದಸ್ಯರುಗಳಾದ ಪ್ರೊ| ನಾರಾಯಣ ಎಂ. ಹೆಗಡೆ, ಜಯ ಕೆ., ಪ್ರವೀಣ ಉಪಾಧ್ಯ, ಪ್ರಕಾಶ್ ಹೆಬ್ಬಾರ್, ಸುನಿಲ್ ಕುಮಾರ್, ರಮೇಶ್ ಸಾಲ್ಯಾನ್ ಉಪಸ್ಥಿತರಿದ್ದರು.