Sunday, August 30, 2026
Home Blog Page 335

ಬೆಂಗಳೂರು-ಜೈಪುರ ಇಂಡಿಗೊ ವಿಮಾನದಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ (Women gave birth in Indigo Aeroplane)

ಬೆಂಗಳೂರು-ಜೈಪುರ ಇಂಡಿಗೊ ವಿಮಾನದಲ್ಲಿ ಮಹಿಳೆಯೊಬ್ಬರಿಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ತಕ್ಷಣ ಕಾರ್ಯಪ್ರವೃತ್ತರಾದ ಸಿಬ್ಬಂದಿಯವರು ಅದೇ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಡಾ. ಸುಬಹಾನಾ ನಜೀರ್ ಅವರ ನೆರವು ಲಭಿಸಿತು. 

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೈದ್ಯೆ ಡಾ ಸುಬಹಾನಾ ನಜೀರ್ ಅವರು ಇಂಡಿಗೊ ಸಿಬ್ಬಂದಿಯ ಸಹಾಯದಿಂದ ಅದೇ ವಿಮಾನದಲ್ಲಿ ಮಹಿಳೆಯನ್ನು ಸುರಕ್ಷಿತವಾಗಿ ಹೆರಿಗೆ ಮಾಡಿಸಿದರು.
   

“ವಿಮಾನದಲ್ಲಿದ್ದ ವೈದ್ಯರು  ಸಿಬ್ಬಂದಿಯ ಸಹಾಯದಿಂದ ಮಗುವನ್ನು ಹೆರಿಗೆ ಮಾಡಿಸಿದರು.  ಹೆಣ್ಣು ಮಗು ಜನಿಸಿದ ನಂತರ ಜೈಪುರ ವಿಮಾನ ನಿಲ್ದಾಣಕ್ಕೆ ವೈದ್ಯರು ಮತ್ತು ಆಂಬುಲೆನ್ಸ್ ಆಗಮಿಸಲು ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ” ಎಂದು ಇಂಡಿಗೊ ಸಂಸ್ಥೆ ತಿಳಿಸಿದೆ.  

ಬಿಜೆಪಿಯ ಮಂಡಿ ಸಂಸತ್ ಸದಸ್ಯ ರಾಮ್ ಸ್ವರೂಪ್ ಶರ್ಮಾ ಅಸಹಜ ಸಾವು (BJP Mandi MP Ram Swaroop Sharma found dead)

ಬಿಜೆಪಿ ಮಂಡಿ ಸಂಸದ ರಾಮ್ ಸ್ವರೂಪ್ ಶರ್ಮಾ ಅವರು ತನ್ನ ದೆಹಲಿ ಮನೆಯಲ್ಲಿ ಮೃತಪಟ್ಟಿದ್ದಾರೆ.   ದೇಹವನ್ನು ಮರಣೋತ್ತರ ಪರೀಕ್ಷೆಗೆ ತೆಗೆದುಕೊಂಡು ಹೋಗಲಾಗಿದೆ.  

ಹಿಮಾಚಲ ಪ್ರದೇಶದ ಮಂಡಿಯ ಬಿಜೆಪಿ ಸಂಸದ ರಾಮ್ ಸ್ವರೂಪ್ ಶರ್ಮಾ ಅವರು ದೆಹಲಿಯ ಗೋಮತಿ ಅಪಾರ್ಟ್ ಮೆಂಟ್ ನಲ್ಲಿ ಬುಧವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ. ಮೂಲಗಳ ಪ್ರಕಾರ, ಶವವನ್ನು ಮರಣೋತ್ತರ ಪರೀಕ್ಷೆಗೆ ಡಾ.ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ತೆಗೆದುಕೊಂಡು ಹೋಗಲಾಗಿದೆ.

ಬಿಜೆಪಿ ಸಂಸದರ ನಿವಾಸದಲ್ಲಿದ್ದ ಪೊಲೀಸರು ಪ್ರಸ್ತುತ ಇದು ಆತ್ಮಹತ್ಯೆಯಿಂದ ಸಾವನ್ನಪ್ಪಿದ ಪ್ರಕರಣವೇ ಎಂದು ತನಿಖೆ ನಡೆಸುತ್ತಿದ್ದೇವೆ, ಏಕೆಂದರೆ ಅವರ ಮೃತ ದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ ಎಂದು ಹೇಳಿದ್ದಾರೆ.  ಅವರು ಒಬ್ಬ ಸಿಬ್ಬಂದಿಯಿಂದ ಕರೆ ಸ್ವೀಕರಿಸಿದ್ದಾರೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದರು, ಮತ್ತು ಆತನು ರಾಮ್ ಸ್ವರೂಪ್ ಶರ್ಮಾ ಅವರ ನಿವಾಸವನ್ನು ತಲುಪಿದಾಗ, ಅವರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡುಬಂದರು ಮತ್ತು ಒಳಗಿನಿಂದ ಬಾಗಿಲು ಮುಚ್ಚಿತ್ತು ಎಂದು ತಿಳಿದುಬಂದಿದೆ.

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಕೂಡ ಸ್ಥಳಕ್ಕೆ ಭೇಟಿ ನೀಡಿದ್ದಾರೆ.    
  ಬಿಜೆಪಿ ತನ್ನ ಸಂಸದೀಯ ಸಭೆಯನ್ನು ರದ್ದುಪಡಿಸಿದೆ ಪಶ್ಚಿಮ ಬಂಗಾಳ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಲು ಬುಧವಾರ ನಡೆಯಬೇಕಿದ್ದ ಬಿಜೆಪಿ ಸಂಸದೀಯ ಸಭೆ ಬಿಜೆಪಿ ಸಂಸದರ ನಿಧನದ ನಂತರ ಈಗ ರದ್ದುಗೊಂಡಿದೆ.  


  1958 ರಲ್ಲಿ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಜನಿಸಿದ ಶರ್ಮಾ ಮೊದಲ ಬಾರಿಗೆ ಲೋಕಸಭೆಗೆ 2014 ರಲ್ಲಿ ಆಯ್ಕೆಯಾದರು. 2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಅವರನ್ನು ಮತ್ತೆ ಮಂಡಿಯಿಂದ ಮರು ಆಯ್ಕೆ ಮಾಡಲಾಯಿತು.  ಅವರು ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯಲ್ಲೂ ಸೇವೆ ಸಲ್ಲಿಸಿದ್ದರು. ರಾಮ್ ಸ್ವರೂಪ್ ಶರ್ಮಾ ಅವರಿಗೆ ಪತ್ನಿ ಮತ್ತು ಮೂವರು ಗಂಡು ಮಕ್ಕಳಿದ್ದಾರೆ.   ಸಂಸದರ ನಿಧನಕ್ಕೆ ಪ್ರಧಾನಿ, ಗೃಹ ಸಚಿವರು ಮತ್ತು ಇತರ ಹಿರಿಯ ಕ್ಯಾಬಿನೆಟ್ ಮಂತ್ರಿಗಳು ಮತ್ತು ಬಿಜೆಪಿಯ ಮುಖಂಡರು ಸಂತಾಪ ಸೂಚಿಸಿದ್ದಾರೆ.

ಜೀವನ ಸಂದೇಶಗಳನ್ನು ಸಾರುವ ಕಲ್ಚಾರರ ವಿಭಿನ್ನ ಆಲೋಚನೆಗಳು – “ಆ ಲೋಚನ”

‘ಆ ಲೋಚನ’ ಒಂದು ವಿಭಿನ್ನ ವಿಶಿಷ್ಟ ಕೃತಿ. ಲೋಚನ ಎಂದರೆ ಕಣ್ಣು. ಆ ಲೋಚನ ಎಂದರೆ ಒಳಗಣ್ಣು ಎಂದು ಭಾವಿಸಿದರೆ ತಪ್ಪಲ್ಲ. ಲೇಖಕ ಕಲಾವಿದ ಶ್ರೀ ರಾಧಾಕೃಷ್ಣ ಕಲ್ಚಾರರು ತನ್ನ ಒಳಗಣ್ಣ ನೋಟಕ್ಕೆ ಆಹಾರವಾದ ಉತ್ಕೃಷ್ಟ ವಿಚಾರಗಳಿಗೆ ಇಲ್ಲಿ ಬರಹ ರೂಪ ನೀಡಿದ್ದಾರೆ. 

ಹೊಸದಿಗಂತ ದಿನಪತ್ರಿಕೆಯಲ್ಲಿ ಪ್ರಕಟವಾದ ‘ಆ ಲೋಚನ’ ಎಂಬ ಅಂಕಣದಲ್ಲಿ ಪ್ರಕಟವಾದ ಲೇಖನಗಳನ್ನು ಒಟ್ಟುಗೂಡಿಸಿ ಅದೇ ಹೆಸರಿನಲ್ಲಿ ಪುಸ್ತಕವನ್ನು ಹೊರತಂದಿದ್ದಾರೆ. ಈ ಪುಸ್ತಕದಲ್ಲಿರುವ ಕೆಲವು ಲೇಖನಗಳನ್ನು ನಾನು ಈ ಮೊದಲೇ ಪತ್ರಿಕೆಯಲ್ಲಿ ಓದಿದ್ದೆನಾದರೂ ಎಲ್ಲವನ್ನೂ ಓದಲಾಗಿರಲಿಲ್ಲ.

ಆದರೆ ಲೇಖಕ ರಾಧಾಕೃಷ್ಣ ಕಲ್ಚಾರರೇ ಹೇಳುವಂತೆ ಒಟ್ಟಾಗಿ ಪುಸ್ತಕ ರೂಪದಲ್ಲಿ ಓದುವ ಅನುಭವವೇ ಬೇರೆ. ಈ ಪುಸ್ತಕದಲ್ಲಿರುವ ಪ್ರತಿಯೊಂದು ಲೇಖನವೂ ನಮ್ಮನ್ನು ಓದಿಸಿಕೊಂಡು ಹೋಗುವ ಗುಣವನ್ನು ಹೊಂದಿದೆ. ಮಾತ್ರವಲ್ಲ, ಎಲ್ಲ ಲೇಖನಗಳಲ್ಲಿಯೂ ಉತ್ಕೃಷ್ಟ ಜೀವನ ಸಂದೇಶಗಳಿವೆ. ಮಾನವ ಬದುಕಿನ  ಪಾಠಗಳಿವೆ. ಈ ದೃಷ್ಟಿಯಲ್ಲಿ ‘ಆ ಲೋಚನ’ ಪುಸ್ತಕ ಪ್ರಪಂಚದಲ್ಲಿ ಮಹತ್ವವನ್ನು ಪಡೆಯುತ್ತದೆ.

ಜೀವನವೆಂಬುದು ಒಂದು ಪಾಠಶಾಲೆಯಿದ್ದಂತೆ. ಇಲ್ಲಿ ಅನವರತವೂ ನಾವು ಬದುಕಲು ಕಲಿಯಬೇಕಾಗುತ್ತದೆ. ಕಲ್ಚಾರರ ಎಲ್ಲಾ ಲೇಖನಗಳೂ ಈ ದಿಸೆಯಲ್ಲಿ ದಿಕ್ಸೂಚಿಯ ಹಾಗೆ ಕೆಲಸ ಮಾಡುತ್ತದೆ. ನಮ್ಮನ್ನು ಪದೇ ಪದೇ ಆಲೋಚಿಸುವಂತೆ ಮಾಡುತ್ತದೆ ಎಂಬುದು ಈ ಪುಸ್ತಕವನ್ನು ಓದಿದ ಯಾರಿಗಾದರೂ ಅರ್ಥವಾಗುವ ವಿಚಾರ.

ಲೇಖಕರು ಇಲ್ಲಿ  ಸರಳ, ಸುಂದರ ಭಾಷೆಯಿಂದಲೂ ಸುಲಲಿತ ಜೀವನಕ್ಕೆ ಹಿತವೆನಿಸುವ ಸಲಹೆಗಾರನಾಗಿಯೂ ಓದುಗರ ಮನಸ್ಸಿಗೆ ಹತ್ತಿರವಾಗುತ್ತಾರೆ. ಇಷ್ಟವಾಗುತ್ತಾರೆ. ಲೇಖಕ ಕಲ್ಚಾರರು ಈ ಬರಹಗಳ ಗುಚ್ಛದಲ್ಲಿ ಹಲವಾರು ವಿಭಿನ್ನ ವಿಚಾರ, ಸಮಸ್ಯೆಗಳ ಬಗ್ಗೆ ಬರೆದಿದ್ದಾರೆ. ಸಮಸ್ಯೆಗಳನ್ನು ಎತ್ತಿ ತೋರಿಸುವುದರ ಜೊತೆಗೆ ಪರಿಹಾರಗಳನ್ನೂ ಸೂಚಿಸಿದ್ದಾರೆ. ಕೆಲವೊಮ್ಮೆ ಲೇಖಕರು ಒಬ್ಬ ಮಾನಸಿಕ ಸಲಹೆಗಾರನ ರೂಪದಲ್ಲಿ ಮನಸ್ಸಿಗೆ ಹತ್ತಿರವಾಗುತ್ತಾರೆ. ಪುಸ್ತಕದ ಓದು ನಮ್ಮನ್ನು ಮತ್ತೆ ಮತ್ತೆ ಚಿಂತಿಸುವಂತೆ ಮಾಡುತ್ತದೆ. ನಮ್ಮದೇ ತಪ್ಪು ಒಪ್ಪುಗಳ ಬಗ್ಗೆ ಮನಸ್ಸು ಆತ್ಮಾವಲೋಕನ ಮಾಡುವಂತೆ ಪ್ರೇರೇಪಿಸುತ್ತದೆ. 

ಸ್ವತಃ ತಾಳಮದ್ದಳೆಯ ಅರ್ಥಧಾರಿಯಾಗಿರುವ ಲೇಖಕರು ಈ ಲೇಖನಗಳಲ್ಲಿ ಹಲವಾರು ಸಂದರ್ಭಗಳಲ್ಲಿ ಪ್ರಸ್ತುತ ಜೀವನದ ಆಗುಹೋಗುಗಳನ್ನು ಪೌರಾಣಿಕ ಘಟನೆಗಳೊಂದಿಗೆ ಹೋಲಿಸಿ ಸಮೀಕರಿಸುತ್ತಾರೆ. ಇದು ಓದುಗರ ಮೇಲೆ ಅದ್ಭುತ ಪರಿಣಾಮವನ್ನು ಬೀರಲು ಸಾಧ್ಯವಿದೆ. ಬಂಟ್ವಾಳದ ಸೇವಂತಿ ಪ್ರಕಾಶನದವರು ಪ್ರಕಟಿಸಿದ ಈ ಕೃತಿ ‘ಆ ಲೋಚನ’ ಶ್ರೇಷ್ಠ ಬರಹಗಳ ಗುಚ್ಛ ಎಂದು ನಿಸ್ಸಂಶಯವಾಗಿ ಹೇಳಬಹುದು. 

‘ಆ ಲೋಚನ’ ಪುಸ್ತಕದ ಲೇಖಕರು: ಶ್ರೀ ರಾಧಾಕೃಷ್ಣ ಕಲ್ಚಾರ್, ವಿಟ್ಲ. ದೂರವಾಣಿ: 9449086653, email: [email protected]

ಮೇಳಗಳ ಇಂದಿನ (17.03.2021) ಯಕ್ಷಗಾನ ಪ್ರದರ್ಶನಗಳ ವಿವರ

ಮೇಳಗಳ ಇಂದಿನ (17.03.2021) ಯಕ್ಷಗಾನ ಪ್ರದರ್ಶನಗಳ ವಿವರ

ಶ್ರೀ ಧರ್ಮಸ್ಥಳ ಮೇಳ ==  ಕನ್ನಂಗಿ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಆವರಣ – ಶ್ರೀ ಕೃಷ್ಣ ಲೀಲಾಮೃತಂ 

ಕಟೀಲು ಒಂದನೇ ಮೇಳ =  = ಶ್ರೀ ದೇವತಾ ಭಜನಾ ಮಂದಿರ ದೇವಗಿರಿ, ತಿಂಗಳಾಡಿ ಪುತ್ತೂರು 

ಕಟೀಲು ಎರಡನೇ ಮೇಳ ==  ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರ ಪೊನ್ನಗಿರಿ 

ಕಟೀಲು ಮೂರನೇ ಮೇಳ= ಕಟೀಲು ಕ್ಷೇತ್ರ ಶ್ರೀ ಮಹಾಲಕ್ಷ್ಮಿ ಸದನ  

ಕಟೀಲು ನಾಲ್ಕನೇ ಮೇಳ  == ಪಡೀಲು ಗರಡಿ ಬಳಿ ಮಿಜಾರು 

ಕಟೀಲು ಐದನೇ ಮೇಳ ==  ಕಟೀಲು ಕ್ಷೇತ್ರ ಶ್ರೀ ಸರಸ್ವತಿ ಸದನ 

ಕಟೀಲು ಆರನೇ ಮೇಳ == ‘ ಕೊಂಪದವುಗುತ್ತು ಕೊಕ್ಕಾರು ಮೂಡುಪೆರಾರ 

ಮಂದಾರ್ತಿ ಒಂದನೇ ಮೇಳ  ==  ದೇವಸ ಸಣ್ಣಮನೆ ಮಣೂರು ಕೋಟ  

ಮಂದಾರ್ತಿ ಎರಡನೇ ಮೇಳ   ==  ಮಂದಾರತಿ ನಿಲಯ ಹಿರೇಸರ ಆರಗ 

ಮಂದಾರ್ತಿ ಮೂರನೇ ಮೇಳ  ==   ಹುಲಿಯೆರಿ ಕುರ್ಸಿ ಕಾಲ್ತೋಡು

ಮಂದಾರ್ತಿ ನಾಲ್ಕನೇ ಮೇಳ   ==  ಚಿಕ್ಕಜೇನಿ 

ಮಂದಾರ್ತಿ    ಐದನೇ ಮೇಳ  ==  ವಡಹೊಸಹಳ್ಳಿ ಹೆದ್ದಾರಿಪುರ 

ಶ್ರೀ ಹನುಮಗಿರಿ ಮೇಳ  ==  ಕೋಟೇಶ್ವರ ರಥಬೀದಿ – ಅಧ್ವರತ್ರಯ (ರಾತ್ರಿ 8ರಿಂದ)

ಶ್ರೀ ಸಾಲಿಗ್ರಾಮ ಮೇಳ == ಕಾಲ್ತೋಡು ಪೈನಾಡಿ ಜೋಗಿ ಜೆಡ್ಡು ಜಟ್ಟಿಗೇಶ್ವರ ದೇವಸ್ಥಾನ – ಚಂದ್ರಮುಖಿ ಸೂರ್ಯಸಖಿ 

ಶ್ರೀ ಪೆರ್ಡೂರು ಮೇಳ == ಮಹಾಲಕ್ಷ್ಮಿ ಬಡಾವಣೆ ಪ್ರೆಸ್ ಕಾಲನಿ ಸೋಮಿನಕೊಪ್ಪ ವಿನೋಬನಗರ ಶಿವಮೊಗ್ಗ – ಸುದರ್ಶನ ವಿಜಯ, ಚಂದ್ರಹಾಸ     

ಶ್ರೀ ಮಾರಣಕಟ್ಟೆ ಮೇಳ ‘ಎ‘ == ಕಲ್ಲಗದ್ದೆಮನೆ ಕೋಟಿಯಾಡಿ ಬಿಜೂರು 

ಶ್ರೀ ಮಾರಣಕಟ್ಟೆ ಮೇಳ ‘ಬಿ == ಯಳರಬೈಲು ಕೊಡ್ಲಾಡಿ ಬಾಂಡ್ಯ 

ಶ್ರೀ ಮಾರಣಕಟ್ಟೆ ಮೇಳ ‘ಸಿ ==  ಹನ್ಕಿ ಶೆಟ್ಟಿಪಾಲ ಹಳ್ಳಿಹೊಳೆ (ಕಮಲಶಿಲೆ ಮೇಳದೊಂದಿಗೆ ಕೂಡಾಟ) 

ಶ್ರೀ ಪಾವಂಜೆ ಮೇಳ  ==  ಶ್ರೀ ಕ್ಷೇತ್ರ ಸುಬ್ರಹ್ಮಣ್ಯ – ಶ್ರೀ ದೇವಿ ಮಹಾತ್ಮೆ (ಸಂಜೆ 6.45ರಿಂದ ರಾತ್ರಿ 12)

ಶ್ರೀ ಹಟ್ಟಿಯಂಗಡಿ ಮೇಳ == ಗಡಿಕಟ್ಟೆ   

ಕಮಲಶಿಲೆ ಮೇಳ ‘ಎ‘ = ಹನ್ಕಿ ಶೆಟ್ಟಿಪಾಲ ಹಳ್ಳಿಹೊಳೆ (ಮಾರಣಕಟ್ಟೆ ಮೇಳದೊಂದಿಗೆ ಕೂಡಾಟ) 

ಕಮಲಶಿಲೆ ಮೇಳ ‘ಬಿ‘ ==  ಮಂಗಳೂರು ಕ್ಯಾಶ್ಯೂ ರಿಪ್ಪನ್ ಪೇಟೆ 

ಶ್ರೀ ಬಪ್ಪನಾಡು ಮೇಳ == ದಿವ್ಯ ಸಾಗರ ಬಯಲು ಮೈದಾನ, ಮುದ್ರಾಡಿ – ಬನತ ಬಂಗಾರ್ (ಕಾಲಮಿತಿ)

ಶ್ರೀ ಅಮೃತೇಶ್ವರೀ ಮೇಳ == ಜಡ್ಡಿನಮನೆ ಮೂಡುಕೆದೂರು 

ಶ್ರೀ ಬೋಳಂಬಳ್ಳಿ ಮೇಳ==  ಸೋಮೇಶ್ವರ ರೋಡ್ ಪಡುವರಿ 

ಶ್ರೀ ಸೌಕೂರು ಮೇಳ ==  ಭಟ್ಕಳ ಬೆಳ್ಕೆ ಬೆದ್ರಕೇರಿ ಶ್ರೀ ಜಟ್ಟಿಗೇಶ್ವರ ದೇವಸ್ಥಾನ – ಚಕ್ರ ಚಂಡಿಕಾ, ಕನಕಾಂಗಿ   

ಶ್ರೀ ಹಾಲಾಡಿ ಮೇಳ == ಕೊಳಗಿ ಬಸವೇಶ್ವರ ಮೈದಾನ – ನೂತನ ಪ್ರಸಂಗ 

ಶ್ರೀ ಬೆಂಕಿನಾಥೇಶ್ವರ ಮೇಳ  ==  ಕರ್ಪೆ ನೆಕ್ಲಾಜೆ -ಮಹಿಮೆದ ಮಂತ್ರದೇವತೆ 

ಶ್ರೀ ಮಡಾಮಕ್ಕಿ ಮೇಳ == ಕಮ್ಮರಡಿ ಚಿಪ್ಳಕಟ್ಟೆ ರಾಮಲಿಂಗೇಶ್ವರ ದೇವಸ್ಥಾನ – ನಾಗ ಮಂಡಲ   

ಶ್ರೀ ಕ್ಷೇತ್ರ ಗೋಳಿಗರಡಿ ಮೇಳ == ಹರಿಹರಪುರ ಬಸ್ ನಿಲ್ದಾಣ – ಶ್ರೀ ಗೋಳಿಗರಡಿ ಕ್ಷೇತ್ರ ಮಹಾತ್ಮೆ 

ಶ್ರೀ ಹಿರಿಯಡಕ ಮೇಳ == ಗುರುಪುರ ಜಲ್ಲಿಗುಡ್ಡೆ – ಮಾಯೊದ ಅಜ್ಜೆ (ಕಾಲಮಿತಿ, ತುಳು)) 

ಶ್ರೀ ಶನೀಶ್ವರ ಮೇಳ ==  ಸೈಬ್ರಕಟ್ಟೆ 

ಶ್ರೀ ಸಿಗಂದೂರು ಮೇಳ == ಯಳಜಿತ್  

ಶ್ರೀ ನೀಲಾವರ ಮೇಳ  == ಚಿಕ್ಕು ಅಮ್ಮನವರ ದೇವಸ್ಥಾನ ಬೀಜಾಡಿ ಗೋಪಾಡಿ – ದೈವ ಮಂಟಪ 

ಶ್ರೀ ಮಂಗಳಾದೇವಿ ಮೇಳ == ಕಣಿಯೂರು ಮಠದ ಬಳಿ – ಶ್ರೀ ದೇವಿ ಮಹಾತ್ಮೆ 

ಶ್ರೀ ಗುತ್ಯಮ್ಮ ಮೇಳ, ಸೋಮವಾರಸಂತೆ, ಹೊಸಳ್ಳಿ ತೀರ್ಥಹಳ್ಳಿ  == ಹಾಲ್ಮುತ್ತೂರು    

ಶ್ರೀ ಮೇಗರವಳ್ಳಿ ಮೇಳ == ಮೀನಗುಂದ ಶ್ರೀ ರಾಮಲಿಂಗೇಶ್ವರ ದೇವಸ್ಥಾನ – ಕುಲದೈವ ಪಂಜುರ್ಲಿ 

ಕೀರಿಕ್ಕಾಡು ದಿ। ಮಾಸ್ತರ್ ವಿಷ್ಣು ಭಟ್ಟರು ಮತ್ತು ಯಕ್ಷಗಾನಕ್ಕೆ ಕೀರಿಕ್ಕಾಡು ಮನೆತನದ ಅನುಪಮ ಕೊಡುಗೆಗಳು (ಭಾಗ – 5)

ಪ್ರತಿದಿನವೂ ಸಂಜೆ ಹೊತ್ತು ಮನೆಯಲ್ಲಿ ಪಾಠ. ಶಿಷ್ಯರ ಸಂಖ್ಯೆಯೂ ಹೆಚ್ಚಾಗುತ್ತಾ ಹೋಗಿತ್ತು. ಉರವರೆಲ್ಲರಿಗೂ ಮಾಸ್ತರರು ಅತಿ ಪ್ರಿಯರಾಗಿದ್ದರು. ಗುರುಗಳೆಂದೇ ಸಂಭೋದಿಸಿ ಗೌರವಿಸುತ್ತಿದ್ದರು. ಪಾಠದ ಜೊತೆ ಕೂಟಗಳನ್ನೂ ನಡೆಸಲಾರಂಭಿಸಿದರು. ಸಾಮಾನ್ಯರಿಗೂ ಸುಲಭವಾಗಿ ಅರ್ಥವಾಗುವ ರೀತಿಯಲ್ಲಿ  ಕಲಿಸುವ ಕಲೆಯು ಮಾಸ್ತರರಿಗೆ ಕೀರಿಕ್ಕಾಡಿನಲ್ಲಿರುವಾಗಲೇ ಕರಗತವಾಗಿತ್ತು.

ಕಲಿಕಾಸಕ್ತರಾಗಿ ಬರುವವರ ಸಂಖ್ಯೆ ಹೆಚ್ಚಾದುದು ಇದೇ ಕಾರಣದಿಂದ. ನಾಯಕತ್ವ, ಸಂಘಟನಾ ಕೌಶಲವೂ ರಕ್ತಗತವಾಗಿಯೇ ಬಂದಿತ್ತು. 1944ನೇ ಇಸವಿಯಲ್ಲಿ (ಕೀರಿಕ್ಕಾಡಿನಿಂದ ಬನಾರಿಗೆ ಬಂದ ಮಾರನೇ ವರ್ಷ) ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘ ಎಂಬ ಸಂಸ್ಥೆಯನ್ನು ಹುಟ್ಟು ಹಾಕಿದ್ದರು. ಕೀರಿಕ್ಕಾಡು ಸಮೀಪದ ಮುನಿಯೂರು ಶ್ರೀ ಗೋಪಾಲಕೃಷ್ಣ ದೇವರ ಪರಮ ಭಕ್ತರಾಗಿದ್ದರು ಮಾಸ್ತರರು. ತಮ್ಮ ಇಷ್ಟ ದೇವರ ಹೆಸರಿನಲ್ಲಿಯೇ ಸಂಸ್ಥೆಯನ್ನು ಆರಂಭಿಸಿ ಯಕ್ಷಗಾನ ಸಂಬಂಧೀ ಚಟುವಟಿಕೆಗಳಲ್ಲಿ ತೊಡಗಿದರು.

ಯಕ್ಷಗಾನ ತರಗತಿಗಳನ್ನು ನಡೆಸಲು ಮನೆಯ ಹತ್ತಿರವೇ ಸೋಗೆ ಮಾಡಿನ ಕಟ್ಟಡವನ್ನು ನಿರ್ಮಿಸಿದ್ದರು. ಅದನ್ನು ನಾಟಕ ಶಾಲೆ ಎಂದು ಎಲ್ಲರೂ ಕರೆಯುತ್ತಿದ್ದರು. ಆಗ ಬಯಲಾಟಗಳು ನಡೆಯುತ್ತಿರಲಿಲ್ಲ. ಯಕ್ಷಗಾನ ನಾಟಕ ನಡೆಯುತ್ತಿತ್ತು. ಹಾಗಾಗಿ ನಾಟಕ ಶಾಲೆ ಎಂಬ ಹೆಸರಾಯಿತು. 1944ರಲ್ಲಿ ಶಿಷ್ಯಂದಿರನ್ನು ಸಿದ್ದಗೊಳಿಸಿ ಪ್ರಥಮ ವಾರ್ಷಿಕೋತ್ಸವವನ್ನೂ ನಡೆಸಿದ್ದರು. ದೇಲಂಪಾಡಿ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆದ ಪ್ರಥಮ ವಾರ್ಷಿಕೋತ್ಸವದಲ್ಲಿ ಪೊಳಲಿ ಶಂಕರನಾರಾಯಣ ಶಾಸ್ತ್ರಿಗಳು , ದೊಡ್ಡ ಸಾಮಗರು, ನಾರಾಯಣ ಕಿಲ್ಲೆಯವರು, ಫಕೀರ ಶೆಟ್ಟಿಯವರು, ಮೊದಲಾದವರು ಭಾಗವಹಿಸಿದ್ದರು.

ಮಳೆಗಾಲದ ತಾಳಮದ್ದಲೆಗಳನ್ನೂ ದೇಲಂಪಾಡಿ ಶಾಲೆಯಲ್ಲಿ ನಡೆಸುತ್ತಿದ್ದರು. ವಾರಕ್ಕೊಂದು ತಾಳಮದ್ದಳೆ ನಿರಂತರ. ಬನಾರಿ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕಾರ್ಯಕ್ರಮಗಳಲ್ಲಿ ಅಡೂರು ಶಿವ ಮದ್ದಳೆಗಾರರು, ಅಣ್ಣಿ ಭಾಗವತರು, ನಡುಮನೆ ಜತ್ತಪ್ಪ ರೈಗಳು, ಈಶ್ವರಯ್ಯ ಭಾಗವತರು, ಪೊಳಲಿ ಶಾಸ್ತ್ರಿಗಳು, ಪುಂಡೂರು ಗೋಪಾಲಕೃಷ್ಣ ಪುಣಿಚಿತ್ತಾಯರು, ಕೋಟೆಕುಂಜ ನಾರಾಯಣ ಶೆಟ್ಟರು, ಮಹಾಬಲ ನೋಂಡರು, ಮೈಂದಪ್ಪ ರೈಗಳು ಹೆಚ್ಚಾಗಿ ಭಾಗವಹಿಸುತ್ತಿದ್ದರು. ಕೀರಿಕ್ಕಾಡು ಮಾಸ್ತರರಿಂದ ಸ್ಥಾಪಿಸಲ್ಪಟ್ಟ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದಡಿ ಹಿಮ್ಮೇಳ ಮುಮ್ಮೇಳಗಳ ತರಗತಿಗಳೂ ಆರಂಭವಾಗಿತ್ತು.

ಅರ್ಥಗಾರಿಕೆಯನ್ನು ಮಾಸ್ತರ್ ವಿಷ್ಣು ಭಟ್ಟರೇ ಹೇಳಿಕೊಡುತ್ತಿದ್ದರು. ನಡುಮನೆ ಜತ್ತಪ್ಪ ರೈಗಳು ಭಾಗವತಿಕೆಯನ್ನೂ ಕಡಾರು ನಾರಾಯಣ ಭಟ್ಟರು ನಾಟ್ಯವನ್ನೂ ಹೇಳಿಕೊಡುತ್ತಿದ್ದರು. ಪ್ರತಿಫಲಾಪೇಕ್ಷೆಯಿಲ್ಲದ ಕಲಾಸೇವೆ ಅದಾಗಿತ್ತು. ಹೀಗೆ ಗುರುಕುಲ ಮಾದರಿಯ ತರಬೇತಿ ಕೇಂದ್ರವನ್ನು ಮೊತ್ತ ಮೊದಲು ತೆರೆದು ಮುನ್ನಡೆಸಿದ ಕೀರ್ತಿ ವಿಷ್ಣು ಭಟ್ಟರದ್ದು. ಕಲಿಕಾಸಕ್ತರು ದುಶ್ಚಟಗಳನ್ನು ಮಾಡದೆಯೇ ತರಬೇತಿಗೆ ಬರುತ್ತೇವೆ ಎಂದು ದೇವರೆದುರು ಪ್ರಮಾಣ ಮಾಡಬೇಕೆಂಬ ನಿಯಮವನ್ನು ಇರಿಸಿದ್ದರು. ಹೀಗೆ ವಿದ್ಯಾದಾನದ ಜೊತೆ ಸಮಾಜದ ಕೆಡುಕುಗಳನ್ನು ತಿದ್ದುವ ಕೆಲಸವನ್ನು ಮಾಡಿದ್ದರು.

ಯಕ್ಷಗಾನ ಶಾಲೆಯಲ್ಲಿ ಅಕ್ಷರಾಭ್ಯಾಸವನ್ನೂ ಮಾಡಿಸುತ್ತಿದ್ದರು. ಉಚ್ಚಾರದೋಷಗಳಿದ್ದರೆ ತಿದ್ದಿ, ಭಾವನಾತ್ಮಕವಾಗಿ ಅಭಿನಯಿಸುವ ರೀತಿಯನ್ನು ಹೇಳಿಕೊಡುತ್ತಿದ್ದರು. ಅರ್ಥಗಾರಿಕೆ ಕಲಿಯುವವರು ಮೊದಲು ಪದ್ಯ ಬಾಯಿಪಾಠ ಮಾಡಬೇಕಿತ್ತು. ಬಳಿಕ ಮರುದಿನ ಬಾಯಿಪಾಠ ಮಾಡಿ ಒಪ್ಪಿಸಬೇಕೆಂಬ ನಿರ್ಣಯದೊಂದಿಗೆ ಅರ್ಥ ಬರೆದು ಕೊಡುತ್ತಿದ್ದರು. 1946ರಲ್ಲಿ ಮಾಸ್ತರರು ತನ್ನ ಖರ್ಚಿನಲ್ಲೇ ತಾತ್ಕಾಲಿಕ ಕಲಾಮಂದಿರವನ್ನು ನಿರ್ಮಿಸಿದ್ದರು. ಜೊತೆಗೆ ಚೆಂಡೆ,ಮದ್ದಳೆ,ಜಾಗಟೆ, ಶ್ರುತಿ ಪೆಟ್ಟಿಗೆ, ಎಲ್ಲವನ್ನೂ ಕೊಡಿಸಿದ್ದರು. 1947ರಲ್ಲಿ ಮೂರನೇ ವರ್ಷ ‘ಯಕ್ಷಗಾನ ನಾಟಕ’ದ  ತರಬೇತಿಯೂ ನಡೆದು ಅಗತ್ಯವಿರುವ ಪೆರೇಡ್, ವೇಷಭೂಷಣಗಳನ್ನೂ ಸಿದ್ಧಪಡಿಸಿದ್ದರು.

ನಾಟ್ಯವಿಲ್ಲದ ಈ ಪ್ರದರ್ಶನಗಳಲ್ಲಿ ಅಭಿನಯಕ್ಕೆ ಹೆಚ್ಚಿನ ಪ್ರಾಶಸ್ತ್ಯ. ಕುರಿಯ, ಕೊಳ್ಯೂರು, ಚೊಕ್ಕಾಡಿಗಳಲ್ಲಿ ಇಂತಹಾ ತಂಡಗಳೂ ಕಾರ್ಯಾಚರಿಸುತ್ತಿತ್ತೆಂಬ ಹೇಳಿಕೆಯಿದೆ. ಮಾಸ್ತರರ ನೇತೃತ್ವದ ಯಕ್ಷಗಾನ ನಾಟಕ ಸಂಘದ ಪ್ರದರ್ಶನಗಳು ದೂರದ ಮಡಿಕೇರಿಯಲ್ಲಿಯೂ ನಡೆದು ಪ್ರೇಕ್ಷಕರ ಪ್ರಶಂಸೆಗೊಳಗಾಯಿತು. ಮತ್ತೆ ಯಕ್ಷಗಾನದ ಮೂಲ ಸ್ವರೂಪದತ್ತ ಒಲವು ಮೂಡಿ ಆ ನಿಟ್ಟಿನಲ್ಲಿಯೇ ತೊಡಗಿಸಿಕೊಂಡಿದ್ದರು. ಈ ಬಿಡುವಿಲ್ಲದ ಚಟುವಟಿಕೆಗಳ ನಡುವೆಯೂ ದೊಡ್ಡ ದೊಡ್ಡ ಕೂಟಗಳಲ್ಲಿ ಭಾಗವಹಿಸುತ್ತಿದ್ದರು. “ತನ್ನ ಸರಳ ಸುಂದರ ಅರ್ಥಗರ್ಭಿತ ಸಂಭಾಷಣೆಗಳಿಂದ ‘ಕೀರಿಕ್ಕಾಡು ಶೈಲಿ’ಯನ್ನು ಹುಟ್ಟುಹಾಕಿದರು.

ಕೀರಿಕ್ಕಾಡು ಮಾಸ್ತರರ ಅರ್ಥಗಾರಿಕೆಯಲ್ಲಿ ಎಲ್ಲವೂ ಹೈಲೈಟ್ಸ್ ಆಗಿತ್ತು. ಪ್ರತಿಯೊಂದು ಪಾತ್ರವನ್ನೂ ಅತ್ಯುತ್ತಮವಾಗಿ ಚಿತ್ರಿಸುತ್ತಿದ್ದ ಮಹಾನ್ ಪ್ರತಿಭೆ ಅವರು” ಎಂದು ಹಳೆಯ ಪ್ರೇಕ್ಷಕರು ಹೇಳುವುದನ್ನು ನಾವು ಕೇಳಿದ್ದೇವೆ. ಶ್ರೀಕೃಷ್ಣ, ಶ್ರೀರಾಮ, ಭರತ, ಸಂಜಯ, ಧರ್ಮರಾಯ, ವಿಭೀಷಣ, ಸುಧನ್ವ,ಮೊದಲಾದ ಸಾತ್ವಿಕ ಪಾತ್ರಗಳಲ್ಲೂ ಕರ್ಣ, ವಾಲಿ, ಕೌರವ, ಬಲರಾಮ,ಅರ್ಜುನ, ಶೂರ್ಪನಖಾ, ಅಜಮುಖಿ ಮೊದಲಾದ ವೀರರಸದ ಪಾತ್ರಗಳಲ್ಲೂ ಸಮಾನವಾಗಿ ಇವರು ಮಿಂಚಿದವರಂತೆ.

ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಸಂಘದ ಕಾರ್ಯಕ್ರಮಗಳಲ್ಲಿ ತೆಂಕಿನ ಹೆಚ್ಚಿನ ಎಲ್ಲಾ ಕಲಾವಿದರೂ ಪ್ರೀತಿಯಿಂದ ಭಾಗವಹಿಸುತ್ತಿದ್ದರು. ಪ್ರಕೃತಿ ಚಿಕಿತ್ಸಾ ನಿಪುಣರಾಗಿ, ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅನೇಕರಿಗೆ ಚಿಕಿತ್ಸೆ ನೀಡಿ ನೆರವಾಗಿದ್ದರು. ಖ್ಯಾತ ಭಾಗವತ ದಾಮೋದರ ಮಂಡೆಚ್ಚರಿಗೆ ಕೀರಿಕ್ಕಾಡು ಮಾಸ್ತರರಲ್ಲಿ  ಅಪಾರ ಗೌರವ. ಪೆರ್ಲಂಪಾಡಿಯಲ್ಲಿ ಬನಾರಿ ಯಕ್ಷಗಾನ ನಾಟಕ ಸಂಘದ ಪ್ರದರ್ಶನದಲ್ಲಿ ಮಂಡೆಚ್ಚರು ಮೊತ್ತಮೊದಲು ಭಾಗವತರಾಗಿ ರಂಗವೇರಿದ್ದರು. ಆಗಾಗ ಪತ್ರ ಬರೆಯುತ್ತಿದ್ದು ದಾಮೋದರ ಮಂಡೆಚ್ಚರ ಬರಹ (ಅಕ್ಷರ ) ಅತ್ಯಂತ ಸುಂದರ ಎಂದು ಮಾಸ್ತರರು ಹೇಳುತ್ತಿದ್ದರಂತೆ.

ಭಾಗವತರು ಸುಖವಾಗಿ ಹಾಡುವ ಹಾಗೆ ಪ್ರಸಂಗ ರಚಿಸಿದ ಕವಿಗಳಲ್ಲಿ ಕೀರಿಕ್ಕಾಡು ಮಾಸ್ತರರು ಪ್ರಮುಖರು ಎಂಬ ಅಭಿಪ್ರಾಯವನ್ನು ಮಂಡೆಚ್ಚರು ಪ್ರಕಟಿಸಿದ್ದರು. ಪ್ರಸಂಗ ಬರೆಯುವುದೆಂದರೆ ಮಾಸ್ತರರಿಗೆ ನೀರು ಕುಡಿದಷ್ಟು ಸುಲಭ ಎಂಬ ಅಭಿಪ್ರಾಯವನ್ನು ಖ್ಯಾತ ಪ್ರಸಂಗಕರ್ತ ಅಮೃತ ಸೋಮೇಶ್ವರರು ವ್ಯಕ್ತಪಡಿಸಿದ್ದರು. 

ಲೇಖನ: ರವಿಶಂಕರ್ ವಳಕ್ಕುಂಜ

ಅಸ್ಟ್ರಾಜೆನೆಕಾ ಲಸಿಕೆ – ಇಟಲಿ, ಜರ್ಮನಿ, ಫ್ರಾನ್ಸ್ ಗಳಲ್ಲಿ ಸ್ಥಗಿತ

0

ಹಲವಾರು ದೇಶಗಳು ಗಂಭೀರ ಅಡ್ಡಪರಿಣಾಮಗಳನ್ನು ವರದಿ ಮಾಡಿದ ನಂತರ ಜರ್ಮನಿ, ಫ್ರಾನ್ಸ್ ಮತ್ತು ಇಟಲಿ ಅಸ್ಟ್ರಾಜೆನೆಕಾ COVID-19 ಲಸಿಕೆ ನೀಡುವುದನ್ನು ಸ್ಥಗಿತಗೊಳಿಸಿವೆ. ಆದರೆ ಅಸ್ಟ್ರಾಜೆನೆಕಾ ಲಸಿಕೆ ಸುರಕ್ಷಿತ ಎಂದು WHO ಹೇಳಿದೆ.

ಗಂಭೀರವಾದ ರಕ್ತ ಹೆಪ್ಪುಗಟ್ಟುವಿಕೆಯ ವರದಿಗಳ ನಂತರ, ಈ ಯುರೋಪಿಯನ್ ರಾಷ್ಟ್ರಗಳು ಸೋಮವಾರ ಅಸ್ಟ್ರಾಜೆನೆಕಾ ಲಸಿಕೆ ನೀಡುವುದನ್ನು ನಿಲ್ಲಿಸಿದರು. ಸೋಮವಾರ, ಜರ್ಮನಿ, ಇಟಲಿ ಮತ್ತು ಫ್ರಾನ್ಸ್ ಅಸ್ಟ್ರಾಜೆನೆಕಾದ ಕೋವಿಡ್ -19 ಲಸಿಕೆಯನ್ನು ನಿಲ್ಲಿಸಿದ ನಂತರ ಅವರನ್ನು ಸ್ಪೇನ್, ಪೋರ್ಚುಗಲ್, ಸ್ಲೊವೇನಿಯಾ ಮತ್ತು ಲಾಟ್ವಿಯಾ ಅನುಸರಿಸಿದುವು.

ಆದರೂ ಅಸ್ಟ್ರಾಜೆನೆಕಾ ತನ್ನ ಕರೋನವೈರಸ್ ಲಸಿಕೆಯನ್ನು ಸಮರ್ಥಿಸಿಕೊಂಡಿದೆ, ಇದರ ವಿಶ್ಲೇಷಣೆಯು ಲಸಿಕೆ ಸ್ವೀಕರಿಸುವವರಲ್ಲಿ ರಕ್ತ ಹೆಪ್ಪುಗಟ್ಟುವಿಕೆಯ “ಹೆಚ್ಚಿದ ಅಪಾಯದ ಪುರಾವೆಗಳಿಲ್ಲ” ಎಂದು ಹೇಳಿದೆ.

ಕುರಿಯ ವಿಠಲ ಶಾಸ್ತ್ರಿ, ನೆಡ್ಲೆ ನರಸಿಂಹ ಭಟ್, ಕರವೋಳು ದೇರಣ್ಣ ಶೆಟ್ಟಿ ಸಂಸ್ಮರಣೆ, ಪ್ರಶಸ್ತಿ ಪ್ರದಾನ

ಕುರುಡು ಪದವು ಉಪ್ಪಳದ ಕುರಿಯ ವಿಠಲ ಶಾಸ್ತ್ರಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಸಂಸ್ಥೆಯು ಪ್ರತಿವರ್ಷದಂತೆ ಈ ಬಾರಿ ಪದ್ಯಾಣದ ಮಹಾಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಯಕ್ಷಗಾನದ ತೆಂಕುತಿಟ್ಟಿನ ಅಗ್ರಮಾನ್ಯ ಕಲಾವಿದರಾದ ಕುರಿಯ ವಿಠಲ ಶಾಸ್ತ್ರಿ, ನೆಡ್ಲೆ ನರಸಿಂಹ ಭಟ್, ಕರವೋಳು ದೇರಣ್ಣ ಶೆಟ್ಟಿಯವರ ಸಂಸ್ಮರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಇತ್ತೀಚೆಗೆ ಸಂಘಟಿಸಿತು.

ಕೋಟದ ಸಾಲಿಗ್ರಾಮ ಮಕ್ಕಳ ಮೇಳದ ಸ್ಥಾಪಕ ನಿರ್ದೇಶಕ ಎಚ್. ಶ್ರೀಧರ ಹಂದೆಯವರಿಗೆ ಕುರಿಯ ವಿಠಲ ಶಾಸ್ತ್ರಿ ಸಂಸ್ಮರಣಾ ಪ್ರಶಸ್ತಿ, ತೆಂಕು ಬಡಗಿನ ಖ್ಯಾತ ಹಾಸ್ಯಗಾರ ಪೆರುವಡಿ ನಾರಾಯಣ ಭಟ್ ಅವರಿಗೆ ಕರೋಳು ದೇರಣ್ಣ ಶೆಟ್ಟಿ ಸಂಸ್ಮರಣಾ ಪ್ರಶಸ್ತಿ, ಯಕ್ಷ ಛಾಂದಸ, ಪ್ರಸಂಗ ಕವಿ ಗಣೇಶ ಕೊಲೆಕಾಡಿ ಅವರಿಗೆ ನೆಡ್ಲೆ ನರಸಿಂಹ ಭಟ್ ಸಂಸ್ಮರಣ ಪ್ರಶಸ್ತಿಯನ್ನಿತ್ತು ಗೌರವಿಸಲಾಯಿತು.

ವೇದಮೂರ್ತಿ ಮುಗುಳಿ ತಿರುಮಲೇಶ್ವರ ಭಟ್ ಸಭಾಧ್ಯಕ್ಷತೆ ವಹಿಸಿದ್ದರು. ಕರ್ಣಾಟಕ ಯಕ್ಷಗಾನ ಅಕಾಡೆಮಿಯ ಸದಸ್ಯರಾದ ಯೋಗೀಶ್ ರಾವ್ ಚಿಗುರುಪಾದೆ ಸಂಸ್ಮರಣ ಭಾಷಣ ಮಾಡಿದರು. ನಿವೃತ್ತ ಪ್ರಾಧ್ಯಾಪಕ, ತಾಳಮದ್ದಳೆ ಅರ್ಥಧಾರಿ ಜಿ. ಕೆ. ಭಟ್ ಸೇರಾಜೆ ಅಭಿನಂದನಾ ಮಾತುಗಳನ್ನಾಡಿದರು.ಸತೀಶ್ ಆಳ್ವ ಇರಾ, ಸೇರಾಜೆ ಸತ್ಯನಾರಾಯಣ ಭಟ್ ಶುಭಾಶಂಸನೆಗೈದರು. ಹಿರಿಯ ಭಾಗವತ ಕುರಿಯ ಗಣಪತಿ ಶಾಸ್ತ್ರಿ, ಸಾಹಿತಿ ಜನಾರ್ದನ ಹಂದೆ ಮಂಗಳೂರು ಉಪಸ್ಥಿತರಿದ್ದರು.

ಕುರಿಯ ಗೋಪಾಲಕೃಷ್ಣ ಶಾಸ್ತ್ರಿ ಸ್ವಾಗತಿಸಿದರು. ಸೇರಾಜೆ ಶ್ರೀನಿವಾಸ ಭಟ್ ನಿರ್ವಹಿಸಿದರು. ಸಭಾ ಕಾರ್ಯಕ್ರಮದ ಮೊದಲು ವಿದ್ಯಾ ಜಯರಾಂ ಮತ್ತು ಬಳಗದವರಿಂದ ಶಾಸ್ತ್ರೀಯ ಸಂಗೀತ ಮತ್ತು ಬಳಿಕ ಕುರಿಯ ವಿಠಲ ಶಾಸ್ತ್ರಿ ಸ್ಮಾರಕ ಲಲಿತ ಕೇಂದ್ರದ ವಿದ್ಯಾರ್ಥಿಗಳಿಂದ ಯಕ್ಷಗಾನ ಪ್ರದರ್ಶನ ನಡೆಯಿತು.

ಭಕ್ತ ಸುಧನ್ವ ಮತ್ತು ಭಾರ್ಗವ ವಿಜಯ – ‘ಶ್ರೀ ದುರ್ಗಾ ಸೇವಾ ಸಂಘ ಕನ್ಯಾನ’ ವತಿಯಿಂದ ಮಾರ್ಚ್ 18ಕ್ಕೆ ಕಟೀಲು ಮೇಳದ ಆಟ 

 ‘ಶ್ರೀ ದುರ್ಗಾ ಸೇವಾ ಸಂಘ ಕನ್ಯಾನ’ ಇವರ ವತಿಯಿಂದ 18.03.2021ನೇ ಗುರುವಾರ ಕನ್ಯಾನದ ಶ್ರೀ ಸರಸ್ವತಿ ವಿದ್ಯಾಲಯದ ವಠಾರದಲ್ಲಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಕಲಾ ಮಂಡಳಿಯವರಿಂದ ರಾತ್ರಿ 9.30ಕ್ಕೆ ಸರಿಯಾಗಿ  ‘ಭಕ್ತ ಸುಧನ್ವ ಮತ್ತು ಭಾರ್ಗವ ವಿಜಯ’ ಎಂಬ ಯಕ್ಷಗಾನ ಪ್ರದರ್ಶನ ನಡೆಯಲಿದೆ. 

ರಾತ್ರಿ 8.30 ಘಂಟೆಗೆ ಚೌಕಿ ಪೂಜೆ ಮತ್ತು ಆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. 

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಏಪ್ರಿಲ್ ತಿಂಗಳಿನಲ್ಲಿ ಭಾರತಕ್ಕೆ ಭೇಟಿ (UK PM Boris Johnson will visit India in April)

ಯುಕೆ ಪ್ರಧಾನಿ ಬೋರಿಸ್ ಜಾನ್ಸನ್ ಏಪ್ರಿಲ್ ತಿಂಗಳಿನಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಬ್ರಿಟನ್ ಗೆ ಅವಕಾಶಗಳನ್ನು ಹೆಚ್ಚಿಸುವ ಪ್ರಯತ್ನದಲ್ಲಿ ಬ್ರಿಟಿಷ್ ಪ್ರಧಾನ ಮಂತ್ರಿ ಬೋರಿಸ್ ಜಾನ್ಸನ್ ಏಪ್ರಿಲ್ ಅಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರ ಕಚೇರಿ ಸೋಮವಾರ ತಿಳಿಸಿದೆ.

ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಯುನೈಟೆಡ್ ಕಿಂಗ್‌ಡಂಗೆ ಅವಕಾಶಗಳನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ಬ್ರಿಟಿಷ್ ಪ್ರಧಾನಿ ಬೋರಿಸ್ ಜಾನ್ಸನ್ ಏಪ್ರಿಲ್ ಅಂತ್ಯದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಅವರ ಕಚೇರಿ ಸೋಮವಾರ ತಿಳಿಸಿದೆ.

ಯುರೋಪಿಯನ್ ಒಕ್ಕೂಟದಿಂದ ಬ್ರಿಟನ್ ನಿರ್ಗಮಿಸಿದ ನಂತರ ಇದು ಅವರ ಮೊದಲ ಪ್ರಮುಖ ಅಂತರರಾಷ್ಟ್ರೀಯ ಪ್ರವಾಸವಾಗಿದೆ. ಗಣರಾಜ್ಯೋತ್ಸವದಲ್ಲಿ ಬ್ರಿಟಿಷ್ ಪ್ರಧಾನ ಮಂತ್ರಿಯನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು ಆದರೆ ಯುಕೆ ನಲ್ಲಿ COVID-19 ಪ್ರಕರಣಗಳು ಹೆಚ್ಚಾಗಿದ್ದರಿಂದ ಮತ್ತು ಹೊಸ ಒತ್ತಡ ಹರಡಿದ್ದರಿಂದ ಯೋಜನೆಗಳನ್ನು ರದ್ದುಗೊಳಿಸಲಾಯಿತು. ಉಭಯ ದೇಶಗಳ ನಡುವಿನ ವ್ಯಾಪಾರ ಮಾತುಕತೆಯನ್ನು ಚುರುಕುಗೊಳಿಸುವ ಪ್ರಯತ್ನಗಳ ಭಾಗವಾಗಿ ಜಾನ್ಸನ್ ಜನವರಿ ಪ್ರವಾಸವನ್ನು ಯೋಜಿಸಿದ್ದರು.

ಮೇಳಗಳ ಇಂದಿನ (16.03.2021) ಯಕ್ಷಗಾನ ಪ್ರದರ್ಶನಗಳ ವಿವರ

ಮೇಳಗಳ ಇಂದಿನ (16.03.2021) ಯಕ್ಷಗಾನ ಪ್ರದರ್ಶನಗಳ ವಿವರ

ಶ್ರೀ ಧರ್ಮಸ್ಥಳ ಮೇಳ ==  ಮೃಗವಧೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರ – ಶ್ರೀ ಧರ್ಮಸ್ಥಳ ಕ್ಷೇತ್ರ ಮಹಾತ್ಮೆ 

ಕಟೀಲು ಒಂದನೇ ಮೇಳ =  = ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ರಥಬೀದಿ 

ಕಟೀಲು ಎರಡನೇ ಮೇಳ ==  ಮಾಡೂರು ಕೋಟೆಕಾರ್   

ಕಟೀಲು ಮೂರನೇ ಮೇಳ= ಪಡುಬಾಳಿಕೆಮನೆ ಕೆಂಜಾರು, ಪೇಜಾವರ ಮಠದ ಬಳಿ 

ಕಟೀಲು ನಾಲ್ಕನೇ ಮೇಳ  == ‘ಸಮೀಕ್ಷ’, ಕಾರ್ನಾಡು ಮುಲ್ಕಿ  

ಕಟೀಲು ಐದನೇ ಮೇಳ ==  ಮಾರ್ನಬೈಲು 

ಕಟೀಲು ಆರನೇ ಮೇಳ == ‘ ‘ಶ್ರೀ ದೇವಿ ನಿಲಯ’ ಬಾರೆಬೆಟ್ಟು ಕೊಳ್ನಾಡು 

ಮಂದಾರ್ತಿ ಒಂದನೇ ಮೇಳ  ==  ಕೂಡ್ಲಿ ಬಾರ್ಕೂರು – ಕೂಡಾಟ 

ಮಂದಾರ್ತಿ ಎರಡನೇ ಮೇಳ   ==  ಕುದ್ರುವಾಣಿ ಕುಳ್ಳುಂಡೆ  ಸಿಂಗನಬಿದ್ರೆ 

ಮಂದಾರ್ತಿ ಮೂರನೇ ಮೇಳ  ==   ಬೆಳ್ಯಾಡಿ ಮಕ್ಕಿಮನೆ ಸೇನಾಪುರ ಬಂಟ್ವಾಡಿ 

ಮಂದಾರ್ತಿ ನಾಲ್ಕನೇ ಮೇಳ   ==  ಹೆಗ್ಗೋಡು ಹೊನ್ನೇಸರ ಸಾಗರ  

ಮಂದಾರ್ತಿ    ಐದನೇ ಮೇಳ  ==  ಆವಿನಹಳ್ಳಿ ಸಾಗರ 

ಶ್ರೀ ಹನುಮಗಿರಿ ಮೇಳ  ==  ವಡ್ಡರ್ಸೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ – ಬಪ್ಪನಾಡು ಕ್ಷೇತ್ರ ಮಹಾತ್ಮೆ (ರಾತ್ರಿ 9.30ರಿಂದ)

ಶ್ರೀ ಸಾಲಿಗ್ರಾಮ ಮೇಳ == ಕೊಪ್ಪ ಹುಲುಮಕ್ಕಿ – ಕಾರ್ತವೀರ್ಯ, ಜ್ವಾಲಾ ಪ್ರತಾಪ, ವೀರ ಅಭಿಮನ್ಯು  

ಶ್ರೀ ಪೆರ್ಡೂರು ಮೇಳ == ಪೆರ್ಡೂರು – ಸಂಪೂರ್ಣ ಶ್ರೀ ದೇವಿ ಮಹಾತ್ಮೆ   

ಶ್ರೀ ಮಾರಣಕಟ್ಟೆ ಮೇಳ ‘ಎ‘ == ಬೆಳ್ಮಾರ್ ಹೌಸ್, ಆರೂರು ಉಡುಪಿ  

ಶ್ರೀ ಮಾರಣಕಟ್ಟೆ ಮೇಳ ‘ಬಿ == ಬಾಳೆಹಿತ್ಲು ಚಾವಡಿಮನೆ ಬಾಳಿಕೆರೆ ದೇವಲ್ಕುಂದ 

ಶ್ರೀ ಮಾರಣಕಟ್ಟೆ ಮೇಳ ‘ಸಿ ==  ಎಲ್ಲೂರು ಬಾಳ್ಕೊಡ್ಲು ಗೋಳಿಹೊಳೆ 

ಶ್ರೀ ಪಾವಂಜೆ ಮೇಳ  ==  ನೆಲ್ಯಾಡಿ – ಮಾನಿಷಾದ (ಸಂಜೆ 6.45ರಿಂದ ರಾತ್ರಿ 12)

ಶ್ರೀ ಹಟ್ಟಿಯಂಗಡಿ ಮೇಳ == ತಾಳಗುಪ್ಪ – ದಿವ್ಯ ಸನ್ನಿಧಿ  

ಕಮಲಶಿಲೆ ಮೇಳ ‘ಎ‘ = ಜನಾರ್ದನ ದೇವಸ್ಥಾನದ ಹತ್ತಿರ, ಕೂಡ್ಲಿ ಬಾರ್ಕೂರು 

ಕಮಲಶಿಲೆ ಮೇಳ ‘ಬಿ‘ ==  ಗಂಗನಕೊಡಿಗೆ ಕಂಚಿನಕೆರೆ ಕಳಸ  

ಶ್ರೀ ಬಪ್ಪನಾಡು ಮೇಳ == ಕೆಂಚನೂರು ತಲಗದ್ದೆ ಕುಂದಾಪುರ – ಬಪ್ಪನಾಡು ಕ್ಷೇತ್ರ ಮಹಾತ್ಮೆ 

ಶ್ರೀ ಅಮೃತೇಶ್ವರೀ ಮೇಳ == ಕೊಯಿಕಾಡಿ ಕೆಳಹೆಬ್ಬಾಗಿಲುಮನೆ ಮೊಳಹಳ್ಳಿ 

ಶ್ರೀ ಬೋಳಂಬಳ್ಳಿ ಮೇಳ==  ಮಡಿಕಲ್ ಉಪ್ಪುಂದ  

ಶ್ರೀ ಸೌಕೂರು ಮೇಳ ==  ಗುಲ್ವಾಡಿ ತಾತಯ್ಯನಮಠ – ಮೇಘ ಮಯೂರಿ  

ಶ್ರೀ ಹಾಲಾಡಿ ಮೇಳ == ಮೂಗಿನಗುಡಿ ಈಶ್ವರ ದೇವಸ್ಥಾನ ಕಾನಮನೆ ಮಳಲಿ – ಭಸ್ಮಾಸುರ ಮತ್ತು ಪೌರಾಣಿಕ ಪ್ರಸಂಗ 

ಶ್ರೀ ಬೆಂಕಿನಾಥೇಶ್ವರ ಮೇಳ  ==  ನಿಟ್ಟೆ ಕೆಮ್ಮಣ್ಣು ದುರ್ಗಾಪರಮೇಶ್ವರಿ ದೇವಸ್ಥಾನದ ಬಯಲು ರಂಗಮಂಟಪ  – ಸತ್ಯೊದ ಸ್ವಾಮಿ ಕೊರಗಜ್ಜ 

ಶ್ರೀ ಮಡಾಮಕ್ಕಿ ಮೇಳ == ದೇವಂಗಿ ಆದಿಶಕ್ತಿ ದೇವಸ್ಥಾನ – ಮಡಾಮಕ್ಕಿ ಕ್ಷೇತ್ರ ಮಹಾತ್ಮೆ  

ಶ್ರೀ ಕ್ಷೇತ್ರ ಗೋಳಿಗರಡಿ ಮೇಳ == ಶೃಂಗೇರಿ ರಾಜಾ ನಗರದ ರಕ್ತೇಶ್ವರಿ ಬನ – ಸಿರಿವಂತ ಶಿವರಾಯ   

ಶ್ರೀ ಹಿರಿಯಡಕ ಮೇಳ == ಕಲ್ಲಮುಂಡ್ಕೂರು ದೈಲಬೆಟ್ಟು – ಪವಿತ್ರ ಫಲ್ಗುಣಿ 

ಶ್ರೀ ಶನೀಶ್ವರ ಮೇಳ ==  ಉಮಾಮಹೇಶ್ವರಿ ದೇವಸ್ಥಾನ ಮುತ್ತೂರ್ ಗ್ರಾಮ, ಹೊಸನಗರ 

ಶ್ರೀ ಸಿಗಂದೂರು ಮೇಳ == ಸಿದ್ಧಾಪುರ ಬೆತ್ತಬೈಲು 

ಶ್ರೀ ನೀಲಾವರ ಮೇಳ  == ಹೆರಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರ 

ಶ್ರೀ ಗುತ್ಯಮ್ಮ ಮೇಳ, ಸೋಮವಾರಸಂತೆ, ಹೊಸಳ್ಳಿ ತೀರ್ಥಹಳ್ಳಿ  == ಕೆಸ್ತೂರು   

ಶ್ರೀ ಮೇಗರವಳ್ಳಿ ಮೇಳ == ಹುಂಬಾಗಿಲು ಹೊನ್ನವಳ್ಳಿ ಬ್ರಹ್ಮಲಿಂಗೇಶ್ವರ ದೇವಸ್ಥಾನ – ಮೇಗರವಳ್ಳಿ ಕ್ಷೇತ್ರ ಮಹಾತ್ಮೆ