Saturday, August 29, 2026
Home Blog Page 35

ಖ್ಯಾತ ಯಕ್ಷಗಾನ ಕಲಾವಿದ ಬಂಟ್ವಾಳ ಜಯರಾಮ ಆಚಾರ್ಯ ಹೃದಯಾಘಾತದಿಂದ ನಿಧನ

ಬೆಂಗಳೂರಿನಲ್ಲಿ ನಡೆಯಲಿದ್ದ ಯಕ್ಷಗಾನ ಕಾರ್ಯಕ್ರಮದಲ್ಲಿ ಭಾಗವಹಿಸಲು ನಿನ್ನೆ ಬೆಳಗ್ಗೆ ಬೆಂಗಳೂರಿಗೆ ಬಂದಿದ್ದ ತಂಡದಲ್ಲಿದ್ದ ಬಂಟ್ವಾಳ ಜಯರಾಮ ಆಚಾರ್ಯರು ಇಂದು ಮುಂಜಾನೆ ನಾಲ್ಕು ಗಂಟೆಗೆ ತೀವ್ರವಾದ ಹೃದಯಾಘಾತದಿಂದ ನಿಧನರಾದರು.

ಸಹ ಕಲಾವಿದರು ಆಸ್ಪತ್ರೆಗೆ ಸೇರಿಸಿದರೂ ಪ್ರಯೋಜನವಾಗಲಿಲ್ಲ. ಸ್ಥಳೀಯ ಆಸ್ಪತ್ರೆಯಲ್ಲಿರುವ ಮೃತದೇಹವನ್ನು ಆಮೇಲೆ ಆಂಬುಲೆನ್ಸ್ ಮೂಲಕ ಊರಿಗೆ ತರಲಾಗುತ್ತದೆ ಎಂದು ತಿಳಿದುಬಂದಿದೆ.

ಅಗಲಿದ ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರ ಆತ್ಮಕ್ಕೆ ಸದ್ಗತಿ ದೊರಕಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇವೆ.

ಹಾಸ್ಯಗಾರ ಶ್ರೀ ಬಂಟ್ವಾಳ ಜಯರಾಮ ಆಚಾರ್ಯರು ಸರಳ, ಸಜ್ಜನ, ನಿಗರ್ವಿ, ವಿನಯವಂತ ಹಾಸ್ಯಗಾರರು. ಇವರು ಜನಿಸಿದ್ದು 12-10-1957ರಂದು. ತಂದೆ ಬಂಟ್ವಾಳ ಗಣಪತಿ ಆಚಾರ್ಯ, ತಾಯಿ ಶ್ರೀಮತಿ ಭವಾನಿ ಅಮ್ಮ. ಗಣಪತಿ ಆಚಾರ್ಯರು ತನ್ನ ಕುಲವೃತ್ತಿಯಾದ ಚಿನ್ನದ ಕೆಲಸ ಮಾಡುವುದು ಮಾತ್ರವಲ್ಲದೆ ಆ ಕಾಲದ ಉತ್ತಮ ಕಲಾವಿದರಾಗಿದ್ದರು. ಹಾಸ್ಯಗಾರರಾಗಿ ಕಲಾಸೇವೆಯನ್ನು ಮಾಡುತ್ತಿದ್ದವರು. ಬಳ್ಳಂಬೆಟ್ಟು, ಹೆರ್ಗ, ಅಮ್ಟಾಡಿ, ಸೊರ್ನಾಡು ಮೇಳಗಳಲ್ಲಿ ತಿರುಗಾಟ ನಡೆಸಿದ್ದರು.

ಶ್ರೀ ಧರ್ಮಸ್ಥಳ ಲಲಿತ ಕಲಾ ಕೇಂದ್ರದಲ್ಲಿ ನಾಟ್ಯ ಕಲಿತ ಜಯರಾಮ ಆಚಾರ್ಯರು ಅದೇ ವರ್ಷ ಕಟೀಲು ಮೇಳಕ್ಕೆ ಕಲಾವಿದನಾಗಿ ಸೇರಿಕೊಂಡರು. ಬಲಿಪ ನಾರಾಯಣ ಭಾಗವತರು ಭಾಗವತರಾಗಿದ್ದ ಮೇಳದಲ್ಲಿ 4 ವರ್ಷಗಳ ಕಾಲ ತಿರುಗಾಟ ನಡೆಸಿದರು.
ಕಟೀಲು ಮೇಳದಲ್ಲಿ 4 ವರ್ಷ ತಿರುಗಾಟ ನಡೆಸಿದ ನಂತರ ಡಾ. ಶ್ರೀಧರ ಭಂಡಾರಿಯವರ ಸಂಚಾಲಕತ್ವದ ಪುತ್ತೂರು ಮೇಳದಲ್ಲಿ ತಿರುಗಾಟ ಮಾಡಿದರು.

ತರುವಾಯ ಮತ್ತೆ ಕಟೀಲು ಮೇಳದಲ್ಲಿ ನೆಲ್ಲಿಕಟ್ಟೆ ನಾರಾಯಣ ಹಾಸ್ಯಗಾರರ ಜತೆಯಲ್ಲಿ ಕಲಾಸೇವೆಯನ್ನು ಮಾಡಿದರು
ಮುಂದಿನ 5 ವರ್ಷಗಳ ಕಾಲ ಮತ್ತೆ ಪುತ್ತೂರು ಮೇಳದಲ್ಲಿ ಹಾಸ್ಯಗಾರನಾಗಿ ಕಲಾಸೇವೆಯನ್ನು ಮಾಡಿದ ಬಂಟ್ವಾಳ ಜಯರಾಮ ಆಚಾರ್ಯರು ಮತ್ತು ಕರ್ನೂರು ಕೊರಗಪ್ಪ ರೈಗಳ ಸಂಚಾಲಕತ್ವದ ಕದ್ರಿ ಮೇಳವನ್ನು ಸೇರಿಕೊಂಡರು.


ನಂತರ ಕುಂಬಳೆ ಮೇಳದಲ್ಲಿ ತಿರುಗಾಟ ಮಾಡಿದರು.
ನಂತರ ಬಂಟ್ವಾಳ ಜಯರಾಮ ಆಚಾರ್ಯರು ಕಲಾಸೇವೆಯನ್ನು ಮಾಡಿದ್ದು ಸುರತ್ಕಲ್ಲು ಮೇಳದಲ್ಲಿ (2 ವರ್ಷ).
ಪುನಃ ಕದ್ರಿ ಮೇಳದಲ್ಲಿ 11 ವರುಷಗಳ ತಿರುಗಾಟ. ದಿನೇಶ ಅಮ್ಮಣ್ಣಾಯರ ಭಾಗವತಿಕೆ. ಅರುವ ಕೊರಗಪ್ಪ ಶೆಟ್ರು, ಪುಳಿಂಚ ರಾಮಯ್ಯ ಶೆಟ್ರು, ಮನೋಹರ ಕುಮಾರರೊಂದಿಗೆ ಹಾಸ್ಯಗಾರರಾಗಿ ಕಲಾಸೇವೆ ಮಾಡಿದರು.


ಬಳಿಕ ಕಲ್ಲಾಡಿ ವಿಠಲ ಶೆಟ್ಟರ ಸಂಚಾಲಕತ್ವದ, ಶ್ರೀ ಕುರಿಯ ಗಣಪತಿ ಶಾಸ್ತ್ರಿಗಳು ಭಾಗವತರಾಗಿದ್ದ ಕಟೀಲು 3ನೇ ಮೇಳದಲ್ಲಿ ಬಂಟ್ವಾಳ ಜಯರಾಮ ಆಚಾರ್ಯರು ಹಾಸ್ಯಗಾರರಾಗಿ ರಂಜಿಸಿದರು. ಮತ್ತೆ 2 ವರುಷಗಳ ಕಾಲ ಎಡನೀರು ಮೇಳ, 9 ವರ್ಷಗಳ ಕಾಲ ಹೊಸನಗರ ಮೇಳ, 2017ರಿಂದ 7 ವರ್ಷಗಳ ಕಾಲ ಹನುಮಗಿರಿ ಮೇಳದಲ್ಲಿ. ಹೀಗೆ, 53 ವರುಷಗಳ ಕಲಾಸೇವೆ ಹಾಸ್ಯಗಾರ ಬಂಟ್ವಾಳ ಜಯರಾಮ ಆಚಾರ್ಯರದ್ದು.


ಯಕ್ಷಗಾನ ಕಲಾವಿದರಾಗಿ ಅಪಾರ ಜನಪ್ರಿಯತೆ, ಅಭಿಮಾನಿಗಳನ್ನು ಗಳಿಸಿರುವ ಬಂಟ್ವಾಳ ಜಯರಾಮ ಆಚಾರ್ಯರ ನಿಧನ ಯಕ್ಷಗಾನ ಕಲಾಕ್ಷೇತ್ರಕ್ಕೆ ತುಂಬಲಾರದ ನಷ್ಟ. ಮೃತರು ಪತ್ನಿ ಶ್ಯಾಮಲಾ ಮತ್ತು ಇಬ್ಬರು ಮಕ್ಕಳಾದ ವರ್ಷಾ ಮತ್ತು ವರುಣ್ ಅವರನ್ನು ಅಗಲಿದ್ದಾರೆ.

ಡಾ. ರಮಾನಂದ ಬನಾರಿಯವರಿಗೆ ದೇಶಮಂಗಲ ಕೃಷ್ಣ ಕಾರಂತರ ಜನ್ಮದಿನೋತ್ಸವದ ವಿಶೇಷ ಗೌರವ ಪುರಸ್ಕಾರ

18 ನೇ ತಾರೀಕು ಶುಕ್ರವಾರ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದಲ್ಲಿ ನಡೆಯಲಿರುವ ದೇಶಮಂಗಲ ದಿ. ಕೃಷ್ಣ ಕಾರಂತರ ಜನ್ಮ ದಿನೋತ್ಸವ- ಸಂಸ್ಮರಣೆ ಕಾರ್ಯಕ್ರಮದ ಸಂದರ್ಭದಲ್ಲಿ

ಗಡಿನಾಡು ಕಾಸರಗೋಡಿನ ಖ್ಯಾತವೈದ್ಯರೂ, ಯಕ್ಷಗಾನ ತಾಳಮದ್ದಳೆಯ ಪ್ರಬುದ್ಧ ಅರ್ಥದಾರಿಗಳೂ, ಉತ್ತಮ ಸಾಹಿತಿಗಳೂ, ಸಂಶೋಧಕರೂ ಆಗಿದ್ದು, ಕಾಸರಗೋಡಿನ ಕನ್ನಡ ಪರ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದು , ಸಮಾಜಮುಖಿಯಾಗಿ ಕಾರ್ಯಗಳಿಂದ ಜನಪ್ರಿಯರಾಗಿರುವ

ಮುತ್ಸದ್ದಿ ಡಾ.ರಮಾನಂದ ಬನಾರಿ ಯವರಿಗೆ ಗಣ್ಯರ ಉಪಸ್ಥಿತಿಯಲ್ಲಿ ದೇಶಮಂಗಲ ಕೃಷ್ಣ ಕಾರಂತರ ಸಂಸ್ಮರಣೆಯೊಂದಿಗೆ ಗೌರವ ಪುರಸ್ಕಾರ ನೀಡಲಾಗುವುದು ಎಂದು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಪ್ರಕಟಣೆ ಮೂಲಕ ತಿಳಿಸಿದೆ.

ದೇಶಮಂಗಲ ಕಾರಂತರ ನೂರ ಎಂಟನೇ ಜನ್ಮ ದಿನಾಚರಣೆ ಅಕ್ಟೋಬರ್ 18 ರಂದು.

ಈ ಹಿಂದೆ ಪ್ರತಿಷ್ಠಾನವು ಜನ್ಮ ಶತಮಾನೋತ್ಸವವನ್ನು ವಿಜ್ರಂಭಣೆಯಿಂದ ಒಂದು ವರುಷ ಪೂರ್ತಿ ಆಚರಿಸಿರುತ್ತದೆ.

ಜರ್ಮನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಉಜಿರೆಯ ಯುವಕ ಹೃದಯಾಘಾತದಿಂದ ನಿಧನ

ಜರ್ಮನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿದ್ದ ಉಜಿರೆಯ ಯುವಕ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಜರ್ಮನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಆಗಿರುವ ಉಜಿರೆ ಸಮೀಪದ‌ ನಿವಾಸಿ ಆದಿತ್ಯ ಭಟ್ ನಿನ್ನೆ ತನ್ನ ಸ್ವಗೃಹದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಉಜಿರೆಯ ಅತ್ತಾಜೆಯ ಅವರ ಮನೆಯಲ್ಲಿ ನಿನ್ನೆ ಅಕ್ಟೋಬರ್ 11ರಂದು ಆಯುಧ ಪೂಜೆಯ ಕಾರ್ಯಕ್ರಮ ಇತ್ತು. ಆ ಕೆಲಸದಲ್ಲಿ ಇರುವಾಗಲೇ ಅವರಿಗೆ ಒಮ್ಮೆಲೇ ಎದೆ ನೋವು ಕಾಣಿಸಿಕೊಂಡ ಕಾರಣ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು.

ಆದರೆ ಆಸ್ಪತ್ರೆಗೆ ತಲುಪುವ ಮೊದಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಅತ್ತಾಜೆಯಲ್ಲಿ ವಾಸವಾಗಿರುವ ರಮೇಶ್ ಭಟ್ ಮತ್ತು ಶಾರದಾ ದಂಪತಿಯ ಪುತ್ರರಾದ ಆದಿತ್ಯ ಭಟ್(29) ಅವರು ತಂದೆ, ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.

ಜಾಂಬವತಿ ಕಲ್ಯಾಣ – ಯಕ್ಷಗಾನ ಪ್ರದರ್ಶನ

ಕಳೆದ 23 ವರ್ಷದಿಂದ ವೀಣಾ ಮೋಹನ್ ಸಾರಥಿಯ ಬೆಂಗಳೂರಿನ ಯಕ್ಷಾಂಗಣ ಟ್ರಸ್ಟ್ ರವರಿಂದ ದಿನಾಂಕ 09-10-2024ರಂದು ನವರಾತ್ರಿಯ ಉತ್ಸವದಲ್ಲಿ ಬೆಂಗಳೂರಿನ ಬುಲ್‌ಟೆಂಪಲ್ ರಸ್ತೆ ಹತ್ತಿರ ಅನ್ನಪೂರ್ಣ ಸಭಾಭವನದಲ್ಲಿ ಮಕ್ಕಳ ತಂಡದಿಂದ “ಜಾಂಬವತಿ ಕಲ್ಯಾಣ” ಯಕ್ಷಗಾನ ಪ್ರದರ್ಶನ ನಡೆಯಿತು.

ಭಾಗವತರಾಗಿ ಸುಬ್ರಾಯ ಹೆಬ್ಬಾರ್, ಮದ್ದಲೆಯಲ್ಲಿ ಅಕ್ಷಯ್‌ಕುಮಾರ್, ಚಂಡೆವಾದಕರಾಗಿ ಶ್ರೀನಿವಾಸ ಪ್ರಭು ಭಾಗವಹಿಸಿದರು.

ಮಕ್ಕಳಾದ ಶ್ರೀವತ್ಸ, ಶ್ರೀರಾಮ, ಶ್ರೀ ವಿದ್ಯಾ, ಧನ್ಯ, ಚಿನ್ಮಯಿ, ಮೇಘನ, ಅಹನಾ ಮತ್ತು ಶ್ರೇಯಾರವರು ಭಾಗವಹಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಕಾರದಲ್ಲಿ ನಡೆದ ಯಕ್ಷಗಾನ ಪ್ರಸಂಗದ ನಿರ್ದೇಶನವನ್ನು ಪ್ರಿಯಾಂಕ ಕೆ. ಮೋಹನ್ ಮಾಡಿದರು

ವರದಿ: ಕೋಟ ಸುದರ್ಶನ ಉರಾಳ
ಮೊ: 9448547237

150 ವರ್ಷಗಳ ವರೆಗೆ ಬದುಕಲು ದಂಪತಿಗಳ ಹೊಸ ತಂತ್ರ – ನವೀನ ಆವಿಷ್ಕಾರ, ಚಿಕಿತ್ಸೆಗಳಿಂದ ಇದು ಸಾಧ್ಯ ಎಂದು ತೋರಿಸಲು ಹೊರಟ ಗಂಡ-ಹೆಂಡತಿ!

ಈ ದಂಪತಿಗಳು ಬಯೋಹ್ಯಾಕಿಂಗ್ ತಂತ್ರಗಳನ್ನು ಬಳಸಿಕೊಂಡು 150 ವರ್ಷಗಳವರೆಗೆ ಬದುಕುವ ಗುರಿಯನ್ನು ಹೊಂದಿದ್ದಾರೆ.

ಅಮೆರಿಕದ ದಂಪತಿ 100 ವರ್ಷಕ್ಕಿಂತ ಹೆಚ್ಚು ಕಾಲ ಬದುಕುವ ಯೋಜನೆ ಹಾಕಿಕೊಂಡಿದ್ದಾರೆ. ಕೈಲಾ ಬಾರ್ನೆಸ್ ಲೆಂಟಿಸ್ (33) ಮತ್ತು ಅವರ ಪತಿ ವಾರೆನ್ ಲೆಂಟಿಸ್ (36) ಮಿಡ್‌ವೆಸ್ಟ್‌ನ 150 ವರ್ಷಗಳ ಕಾಲ ಬದುಕುವ ಗುರಿಯೊಂದಿಗೆ ‘ಬಯೋಹ್ಯಾಕಿಂಗ್’ ವಿಧಾನವನ್ನು ಬಳಸುತ್ತಿದ್ದಾರೆ.

ಸಂಸ್ಥೆ. ಆರೋಗ್ಯ ಮತ್ತು ಯೋಗಕ್ಷೇಮವನ್ನು ಹೆಚ್ಚಿಸುವ ಉದ್ದೇಶದಿಂದ ಅವರು ತಮ್ಮ ದಿನಚರಿಗಳನ್ನು ವ್ಯವಸ್ಥೆಗೊಳಿಸಿದ್ದಾರೆ. ಈ ವಿಧಾನಗಳು 76 ವರ್ಷಗಳ ಸರಾಸರಿ ಅಮೇರಿಕನ್ ಜೀವಿತಾವಧಿಯಿಂದ 150 ವರ್ಷಗಳವರೆಗೆ ಬದುಕಲು ಸಹಾಯ ಮಾಡುತ್ತದೆ ಎಂದು ದಂಪತಿಗಳು ನಂಬುತ್ತಾರೆ.

ಇಬ್ಬರೂ ತಮ್ಮ ದಿನವನ್ನು ಪಲ್ಸ್ ವಿದ್ಯುತ್ಕಾಂತೀಯ ಕ್ಷೇತ್ರ ಚಿಕಿತ್ಸೆಯೊಂದಿಗೆ ಪ್ರಾರಂಭಿಸುತ್ತಾರೆ. ಇದಕ್ಕಾಗಿ ಮನೆಯಲ್ಲಿ ಕ್ಲಿನಿಕಲ್ ಸಾಧನವನ್ನು ಬಳಸಲಾಗುತ್ತದೆ. ಸಾಕಷ್ಟು ಸೂರ್ಯನ ಬೆಳಕನ್ನು ಪಡೆಯಲು ವ್ಯಾಯಾಮ ಮತ್ತು ಬೆಳಗಿನ ನಡಿಗೆ ಅನುಸರಿಸಿ.

ದಿನವಿಡೀ ವಿವಿಧ ಆರೋಗ್ಯ ತಂತ್ರಜ್ಞಾನ ವ್ಯವಸ್ಥೆಗಳನ್ನು ಸಹ ಬಳಸಲಾಗುವುದು.

ಕೆಲವು ದಿನಗಳಲ್ಲಿ ಸಾವಯವ ಊಟದ ನಂತರ ಸಂಜೆ ಬೆಟ್ಟದ ಇಳಿಜಾರುಗಳಲ್ಲಿ ದೀರ್ಘ ನಡಿಗೆ, ಸೂರ್ಯಾಸ್ತದ ಬಳಿ ಉಗಿ ಸ್ನಾನ. ರಾತ್ರಿಯಲ್ಲಿ ಒಳಾಂಗಣದಲ್ಲಿ ಕೆಂಪು ದೀಪಗಳನ್ನು ಬಳಸಲಾಗುತ್ತದೆ. ಒಂಬತ್ತು ಗಂಟೆಗೆ ಸರಿಯಾಗಿ ಮಲಗುತ್ತಾರೆ.

ಅಮೆರಿಕದಲ್ಲಿ ವಾಡಿಕೆಯ ಬಯೋಹ್ಯಾಕಿಂಗ್ ಒಂದು ಟ್ರೆಂಡ್ ಆಗುತ್ತಿದೆ. ಇದು ಜೈವಿಕ ವಯಸ್ಸನ್ನು (ನೈಸರ್ಗಿಕ ವಯಸ್ಸು) ನಿಧಾನಗೊಳಿಸುವ ಅಥವಾ ಹಿಮ್ಮೆಟ್ಟಿಸುವ ವಿಧಾನವಾಗಿದೆ.

10ನೇ ತರಗತಿ ವಿದ್ಯಾರ್ಥಿಯು ತನ್ನ ಶಿಕ್ಷಕಿಯ ಅಶ್ಲೀಲ ವೀಡಿಯೋ ಚಿತ್ರೀಕರಿಸಿ ಬ್ಲ್ಯಾಕ್‌ಮೇಲ್ ಮಾಡಿದ ಪ್ರಕರಣ – 4 ಮಂದಿಯ ಬಂಧನ

0

ಆಗ್ರಾದಲ್ಲಿ 10 ನೇ ತರಗತಿಯ ವಿದ್ಯಾರ್ಥಿ ಮತ್ತು ಅವನ ಮೂವರು ಸ್ನೇಹಿತರು ಸೇರಿದಂತೆ ನಾಲ್ವರು ಹದಿಹರೆಯದವರನ್ನು ಆಗ್ರಾದಲ್ಲಿ ಬಂಧಿಸಲಾಯಿತು,

ವಿದ್ಯಾರ್ಥಿಗಳು ಆಗ್ರಾದಲ್ಲಿ ಶಿಕ್ಷಕಿ ಸ್ನಾನ ಮಾಡುವ ವೀಡಿಯೊವನ್ನು ರಹಸ್ಯವಾಗಿ ಚಿತ್ರೀಕರಿಸಿದ ನಂತರ ಶಿಕ್ಷಕಿಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾರೆ. ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಸೇರಿ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿದ್ದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ಶಿಕ್ಷಕಿ ತನ್ನ ನಿವಾಸದಲ್ಲಿ ವಿದ್ಯಾರ್ಥಿಗೆ ಪಾಠ ಹೇಳುತ್ತಿದ್ದರು. ಆರೋಪಿ ತನ್ನ ಭೇಟಿಯೊಂದರಲ್ಲಿ ಆಕೆ ಸ್ನಾನ ಮಾಡುತ್ತಿರುವ ವಿಡಿಯೋವನ್ನು ರೆಕಾರ್ಡ್ ಮಾಡಿಕೊಂಡಿದ್ದಾನೆ. ನಂತರ ನಂತರ ಆಕೆಗೆ ಶಾರೀರಿಕ ಸಂಬಂಧಕ್ಕೆ ಒತ್ಯಾಯಿಸಿ ವಿಡಿಯೋ ಬಳಸಿ ಬ್ಲಾಕ್ ಮೇಲ್ ಮಾಡಿದ್ದಾನೆ.

ಶಿಕ್ಷಕಿ ದೂರವಾಗಲು ಪ್ರಯತ್ನಿಸಿದಾಗ ಮತ್ತು ಅವರ ಸಂಪರ್ಕವನ್ನು ನಿರ್ಬಂಧಿಸಿದಾಗ, ವಿದ್ಯಾರ್ಥಿಯು ತನ್ನ ಸ್ನೇಹಿತರಲ್ಲಿ ವೀಡಿಯೊವನ್ನು ವೈರಲ್ ಮಾಡಿದರು ಮತ್ತು ನಂತರ ಅದನ್ನು Instagram ನಲ್ಲಿ ಪೋಸ್ಟ್ ಮಾಡಿದರು. ಸಾರ್ವಜನಿಕ ಅವಮಾನಕ್ಕೆ ಹೆದರಿದ ಶಿಕ್ಷಕಿ ಆತ್ಮಹತ್ಯೆಗೆ ಯೋಚಿಸಿದರು.

ಶಿಕ್ಷಕಿಯು ಹೆಚ್ಚಿನ ಸಂಪರ್ಕವನ್ನು ತಿರಸ್ಕರಿಸಿದ ನಂತರ, ವಿದ್ಯಾರ್ಥಿಯು ತನ್ನ ಸ್ನೇಹಿತರನ್ನು ಭೇಟಿಯಾಗುವಂತೆ ಅವಳಿಗೆ ಒತ್ತಡ ಹೇರಿದ,

ಆಗ್ರಾದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸೂರಜ್ ರೈ ಅವರ‌ ನೇತೃತ್ವದಲ್ಲಿ ವಿದ್ಯಾರ್ಥಿ ಮತ್ತು ಅವರ ಮೂವರು ಸಹಚರರನ್ನು ಬಂಧಿಸಲಾಯಿತು. ಇನ್‌ಸ್ಟಾಗ್ರಾಮ್ ಪುಟವನ್ನು ರಚಿಸಿದ ಒಬ್ಬ ಶಂಕಿತ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಎದೆಯ ಒಂದು ಬದಿಯಲ್ಲಿ ಪ್ಲಾಸ್ಟರ್ ನೊಂದಿಗೆ ಆಸ್ಪತ್ರೆಯಿಂದ ಮನೆಗೆ ಮರಳಿದ ಗಾಯಕಿ ಅಮೃತಾ ಸುರೇಶ್

ಗಾಯಕಿ ಅಮೃತಾ ಸುರೇಶ್ ಆಸ್ಪತ್ರೆಯಿಂದ ಮನೆಗೆ ಬಂದಿದ್ದಾರೆ ಎಂದು ವರದಿಯಾಗಿದೆ. ಅಮೃತಾ ಅವರ ಸಹೋದರಿ ಅಭಿರಾಮಿ ಸುರೇಶ್ ಅವರು ಕಳೆದ ದಿನ ಅವರು ಆಸ್ಪತ್ರೆಗೆ ದಾಖಲಾಗಿರುವ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಅಮೃತಾ ಈಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ. ಸ್ವತಃ ಗಾಯಕಿ ಇದನ್ನು Instagram ನಲ್ಲಿ ಘೋಷಿಸಿದ್ದಾರೆ. ಅಮೃತಾ ಇನ್‌ಸ್ಟಾಗ್ರಾಮ್‌ನಲ್ಲಿ “ನನ್ನನ್ನು ಪರೀಕ್ಷಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದಗಳು. ನಿಮ್ಮ ಪ್ರಾರ್ಥನೆಗೆ ಧನ್ಯವಾದಗಳು” ಎಂಬ ಶೀರ್ಷಿಕೆಯೊಂದಿಗೆ ಈ ವಿಚಾರವನ್ನು ಅಪ್‌ಲೋಡ್ ಮಾಡಿದ್ದಾರೆ.

ಗಾಯಕಿ ಶೇರ್ ಮಾಡಿರುವ ಚಿತ್ರದಲ್ಲಿ ಆಕೆಯ ಎದೆಯ ಒಂದು ಭಾಗದಲ್ಲಿ ಪ್ಲಾಸ್ಟರ್ ಅಂಟಿಸಿರುವುದು ಕೂಡ ಕಾಣಿಸುತ್ತಿದೆ.ವರ್ಷಗಳ ಹಿಂದೆ ವಿಚ್ಛೇದನ ಪಡೆದಿರುವ ಅಮೃತಾ ಸುರೇಶ್ ಮತ್ತು ನಟ ಬಾಲಾ ನಡುವಿನ ವಿವಾದ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖ ಚರ್ಚೆಯಾಗಿದೆ.

ಮಗಳನ್ನು ಭೇಟಿಯಾಗಲು ಬಿಡುತ್ತಿಲ್ಲ ಎಂಬ ಆರೋಪಕ್ಕೆ ಬಾಲಾ ಮುಂದಾದಾಗ ತೊಂದರೆ ಶುರುವಾಗಿದೆ. ನಂತರ, ಅವರ ಮಗಳು ಆವಂತಿಕಾ ಅವರು ತಂದೆ ಬಾಲಾ ವಿರುದ್ಧ ವೀಡಿಯೊವನ್ನು ಹಂಚಿಕೊಂಡಿದ್ದಾರೆ.

ಅಮೃತಾ ಅವರು ನಟ ಬಾಲರಿಂದ ಅನುಭವಿಸಿದ ಚಿತ್ರಹಿಂಸೆಯ ಬಗ್ಗೆ ಹೇಳಲು ಬಂದಾಗ ಈ ವಿಷಯವು ದೊಡ್ಡ ಚರ್ಚೆಯ ವಿಷಯವಾಯಿತು.

ವಿಚ್ಛೇದನಕ್ಕೆ ಕಾರಣವಾದ ಚಿತ್ರಹಿಂಸೆಯ ಮದುವೆಯಿಂದ ಉಂಟಾದ ಗಾಯಗಳಿಗೆ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದೇನೆ ಎಂದು ಅಮೃತಾ ಈ ಹಿಂದೆ ಹಂಚಿಕೊಂಡ ವೀಡಿಯೊದಲ್ಲಿ ಹೇಳಿದ್ದರು.

ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

ಅಂಬಿಕಾ ವಿದ್ಯಾಲಯದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾಗಿ ಡಾ.ದೀಪಕ್ ರೈ ಆಯ್ಕೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯಲ್ಲಿನ ಅಂಬಿಕಾ ವಿದ್ಯಾಲಯ ಸಿಬಿಎಸ್‌ಇ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ನೂತನ ಅಧ್ಯಕ್ಷರಾಗಿ,

ತಾಲೂಕು ವೈದ್ಯಾಧಿಕಾರಿ ಡಾ.ದೀಪಕ್ ರೈ ಆಯ್ಕೆಯಾಗಿದ್ದಾರೆ.

ಬುಧವಾರ ನಡೆದ ಸಂಘದ ಸಭೆಯಲ್ಲಿ ಈ ಆಯ್ಕೆ ನಡೆಸಲಾಯಿತು.

ನಿಕಟಪೂರ್ವ ಅಧ್ಯಕ್ಷೆ ಸೀಮಾ ನಾಗರಾಜ್ ಅವರು ಡಾ.ದೀಪಕ್ ರೈ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಸ್ನೇಹಿತನನ್ನು ಮರಕ್ಕೆ ಕಟ್ಟಿಹಾಕಿ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣ: ಆರೋಪಿಯ ರೇಖಾಚಿತ್ರಗಳನ್ನು ಬಿಡುಗಡೆ ಮಾಡಿದ ಪೊಲೀಸರು

ಗುರುವಾರ ರಾತ್ರಿ ನಗರದ ಹೊರವಲಯದ ಪ್ರತ್ಯೇಕ ಸ್ಥಳದಲ್ಲಿ 21 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಆಕೆಯ ಪುರುಷ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಲೆಮರೆಸಿಕೊಂಡಿರುವ ಇಬ್ಬರು ವ್ಯಕ್ತಿಗಳ ರೇಖಾಚಿತ್ರಗಳನ್ನು ಪುಣೆ ಪೊಲೀಸರು ಶುಕ್ರವಾರ ಬಿಡುಗಡೆ ಮಾಡಿದ್ದಾರೆ. ಪ್ರಕರಣದ ಶಂಕಿತ ಆರೋಪಿಯನ್ನು ಮುಂಜಾನೆ ಬಂಧಿಸಲಾಗಿತ್ತು.

ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ಸ್ನೇಹಿತ ನೀಡಿದ ಹೇಳಿಕೆಯ ಪ್ರಕಾರ ಈ ರೇಖಾಚಿತ್ರಗಳನ್ನು ರಚಿಸಲಾಗಿದ್ದು, ಮೂವರು ದಾಳಿಕೋರರಲ್ಲಿ ಇಬ್ಬರನ್ನು ಚಿತ್ರಿಸಲಾಗಿದೆ.

ಎರಡು ರೇಖಾಚಿತ್ರಗಳು ಸಿದ್ಧವಾಗಿವೆ. ಬದುಕುಳಿದವರ ಪುರುಷ ಸ್ನೇಹಿತ ನೀಡಿದ ಮಾಹಿತಿಯ ಪ್ರಕಾರ ಅವುಗಳಲ್ಲಿ ಒಂದು ಶೇಕಡಾ 90 ರಷ್ಟು ನಿಖರವಾಗಿದೆ ಮತ್ತು ಇನ್ನೊಂದು 70 ಶೇಕಡಾ ನಿಖರವಾಗಿದೆ” ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಪೊಲೀಸರು ಮೂರು ಮೊಬೈಲ್ ಫೋನ್ ಸಂಖ್ಯೆಗಳನ್ನು ಸಹ ಒದಗಿಸಿದ್ದಾರೆ — 8691999689, 8275200947, 9307545045 – ಮತ್ತು ಪ್ರಕರಣದ ಬಗ್ಗೆ ಯಾವುದೇ ಮಾಹಿತಿ ದೊರೆತಲ್ಲಿ ಸಂಪರ್ಕಿಸುವಂತೆ ನಾಗರಿಕರಿಗೆ ಮನವಿ ಮಾಡಿದ್ದಾರೆ.

ರೇಖಾಚಿತ್ರಗಳ ಆಧಾರದ ಮೇಲೆ ಆರೋಪಿಗಳ ಪತ್ತೆಗೆ 14 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಮಹಿಳೆ ಮಹಾರಾಷ್ಟ್ರ ಸರ್ಕಾರ ನಡೆಸುತ್ತಿರುವ ಪುಣೆಯ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಕೆಯ ಕೌನ್ಸೆಲಿಂಗ್ ನಡೆಯುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏನಿದು ಘಟನೆ?

ಪುಣೆಯ ಬೋಪದೇವ್ ಘಾಟ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಮತ್ತು ಆಕೆಯ ಸ್ನೇಹಿತೆಯ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ.

ಆರೋಪಿಗಳ ಪೈಕಿ ಒಬ್ಬ ಕಾರ್ಯಕರ್ತ ಎಂಬುದಾಗಿ ಹೇಳಿಕೊಂಡು ಕಾರಿನಲ್ಲಿ ಅವರ ಬಳಿ ಬಂದಿದ್ದಾನೆ. ಈ ಪ್ರದೇಶದಲ್ಲಿ ದಂಪತಿಗಳನ್ನು ನಿಷೇಧಿಸಲಾಗಿದೆ ಎಂದು ಆರೋಪಿಗಳು ಹೇಳಿಕೊಂಡು ಇಬ್ಬರ ಫೋಟೋಗಳನ್ನು ತೆಗೆದಿದ್ದಾರೆ.

ಆರೋಪಿಗಳಲ್ಲಿ ಒಬ್ಬ ಮಹಿಳೆಯನ್ನು ಬೆದರಿಸಿ ತನ್ನ ಕಾರಿಗೆ ಬಲವಂತವಾಗಿ ಹತ್ತಿಸಿದ್ದಾನೆ. ಆಕೆಯನ್ನು ಬೇರೆ ಸ್ಥಳಕ್ಕೆ ಕರೆದುಕೊಂಡು ಹೋದ ನಂತರ ಕಾರನ್ನು ನಿಲ್ಲಿಸಿ ಮಹಿಳೆಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿ ಮರಕ್ಕೆ ಕಟ್ಟಿ ಹಾಕಿದ್ದಾರೆ. ಬಳಿಕ ಮೂವರು ಮಹಿಳೆಯ ಮೇಲೆ ಸರದಿಯಂತೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಪಿಜಿಯ 5ನೇ ಮಹಡಿಯಿಂದ ಹಾರಿ ಇಂಜಿನಿಯರ್ ಯುವತಿ ಆತ್ಮಹತ್ಯೆ


ಬೆಂಗಳೂರಿನಲ್ಲಿ ಟೆಕ್ಕಿ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಸಾಫ್ಟ್‌ವೇರ್‌ ಇಂಜಿನಿಯರ್ ಆಗಿದ್ದ ಹುಡುಗಿ ತಾನಿದ್ದ ಪೇಯಿಂಗ್ ಗೆಸ್ಟ್ ಹೌಸ್ ನ (PG) 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಳು.

ಈ ಘಟನೆ ನಡೆದದ್ದು ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿ.

ಗುರುವಾರ ಸಂಜೆಯ ವೇಳೆಯಲ್ಲಿ ಘಟನೆ ನಡೆದಿದೆ. ವೈಟ್‌ಫೀಲ್ಡ್ ಪ್ರಶಾಂತ್ ಲೇಔಟ್‌ನ ಪಿಜಿಯ ಐದನೇ ಹಂತದಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ಈ ಯುವತಿ ಆಂಧ್ರಪ್ರದೇಶದ ಕಡಪ ಮೂಲದವಳು. ಈಕೆಯ ಹೆಸರು ಗೌತಮಿ. ಆತ್ಮಹತ್ಯೆ ಮಾಡಿಕೊಂಡ ಯುವತಿ ಗೌತಮಿ ನಗರದ ಖಾಸಗಿ ಕಂಪನಿಯಲ್ಲಿ ಟೆಕ್ಕಿಯಾಗಿ ಕೆಲಸ ಮಾಡುತ್ತಿದ್ದಳು,

ಆತ್ಮಹತ್ಯೆಗೂ ಮುನ್ನ ಮುನ್ನ ಆಕೆ ಬರೆದ ಡೆತ್‌ನೋಟ್ ಪೊಲೀಸರಿಗೆ ಲಭ್ಯವಾಗಿದೆ., ಅದರಲ್ಲಿ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಮೃತದೇಹವನ್ನು ಪೋಸ್ಟ್ ಮಾರ್ಟಂ ಮಾಡದೆ, ತಂದೆ ತಾಯಿಗೆ ಹಸ್ತಾಂತರ ಮಾಡಿ ಅಂತ ಬರೆದಿದ್ದಾಳೆ.

ಕೊನೆಯಲ್ಲಿ ಹೆತ್ತವರಿಗೆ ‘ಸಾರಿ ಕ್ಷಮಿಸಿ’ ಎಂದು ಬರೆದಿದ್ದಾಳೆ ಎಂದು ತಿಳಿದುಬಂದಿದೆ. ಪ್ರಕರಣ ದಾಖಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ.