ಅಂಬಲಪಾಡಿಯ ಶ್ರೀ ಲಕ್ಷ್ಮೀಜನಾರ್ದನ ಯಕ್ಷಗಾನ ಕಲಾ ಮಂಡಳಿಯ 62ನೇ ವಾರ್ಷಿಕ ಮಹಾಸಭೆ ಮುರಲಿ ಕಡೆಕಾರ್ ಅಧ್ಯಕ್ಷತೆಯಲ್ಲಿ ಸೆಪ್ಟಂಬರ್ 27, 2020ರಂದು ಜರಗಿತು. ಪ್ರಕಾಶ್ ಹೆಬ್ಬಾರ್ ಗತಸಭೆ ವರದಿ ಮಂಡಿಸಿದರು. ಕೆ.ಜೆ. ಕೃಷ್ಣ ವಾರ್ಷಿಕ ವರದಿ ಮಂಡಿಸಿದರು. ಎ. ನಟರಾಜ ಉಪಾಧ್ಯರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿ.ಎ ಗಣೇಶ್ ಹೆಬ್ಬಾರ್ ಅವರನ್ನು ಲೆಕ್ಕಪರಿಶೋಧಕರಾಗಿ ನಿಯುಕ್ತಿಗೊಳಿಸಲಾಯಿತು. 2020-21ನೇ ಸಾಲಿಗೆ ಈ ಕೆಳಗಿನ ಆಡಳಿತ ಮಂಡಳಿಯನ್ನು ಆರಿಸಲಾಯಿತು.
ಅಧ್ಯಕ್ಷ : ಮುರಲಿ ಕಡೆಕಾರ್, ಉಪಾಧ್ಯಕ್ಷ : ಕೆ. ಅಜಿತ್ ಕುಮಾರ್, ಕಾರ್ಯದರ್ಶಿ : ಕೆ.ಜೆ ಕೃಷ್ಣ, ಜತೆಕಾರ್ಯದರ್ಶಿ : ಪ್ರಕಾಶ್ ಹೆಬ್ಬಾರ್, ಕೋಶಾಧಿಕಾರಿ : ಎ. ನಟರಾಜ ಉಪಾಧ್ಯ, ಸದಸ್ಯರು : ಕೆ.ಜೆ ಗಣೇಶ್, ಡಾ. ಗಣಪತಿ ಭಟ್, ಪ್ರವೀಣ್ ಉಪಾಧ್ಯ, ನಾರಾಯಣ ಎಂ. ಹೆಗಡೆ, ಮಂಜುನಾಥ ತೆಂಕಿಲ್ಲಾಯ, ಜಯ.ಕೆ, ಮಾಧವ ಕೆ., ರಮೇಶ ಸಾಲಿಯಾನ್, ಕೆ.ಜೆ ಸುಧೀಂದ್ರ, ವಸಂತ ಪಾಲನ್
ಸಲಹಾ ಸಮಿತಿ : ಎಸ್.ವಿ ಭಟ್, ಶ್ರೀರಮಣ ಆಚಾರ್ಯ, ವಿಜಯ್ ಕುಮಾರ್, ವಿಠಲ ಗಾಣಿಗ, ವಿದ್ಯಾಪ್ರಸಾದ್, ಜಗದೀಶ, ಅರವಿಂದ ಆಚಾರ್ಯ, ಪ್ರಶಾಂತ್ ಕೆ.ಎಸ್, ಸುನೀಲ್, ನಚಿಕೇತ
ಈ ಸಂದರ್ಭದಲ್ಲಿ ಅಧ್ಯಕ್ಷರಾದ ಮುರಲಿ ಕಡೆಕಾರ್ ಮಾತನಾಡಿ ಸಂಸ್ಥೆಯ ನೂತನ ಕಟ್ಟಡ ಇನ್ನು ಮೂರು ತಿಂಗಳಲ್ಲಿ ಪೂರ್ಣಗೊಳ್ಳಲಿದ್ದು, ಮುಂದೆ ಅದರಲ್ಲಿ ನಿರಂತರ ಕಲಾ ಚಟುವಟಿಕೆಗಳನ್ನು ನಡೆಸುವ ಹೊಣೆಗಾರಿಕೆ ನಮ್ಮೆಲ್ಲರಿಗಿದೆ ಎಂದು ನುಡಿದರು. ಕಾರ್ಯದರ್ಶಿ ಕೆ.ಜೆ ಕೃಷ್ಣ ಧನ್ಯವಾದ ಸಮರ್ಪಿಸಿದರು.
ಮುರಲಿ ಕಡೆಕಾರ್ ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಪುನರಾಯ್ಕೆ
ಯಕ್ಷಗಾನ ಕಲಾರಂಗದ ಅಧ್ಯಕ್ಷರಾಗಿ ಎಂ. ಗಂಗಾಧರ ರಾವ್ ಆಯ್ಕೆ
ಉಡುಪಿಯ ಹಿರಿಯ ಸಾಂಸ್ಕೃತಿಕ ಸಂಘಟನೆ ಯಕ್ಷಗಾನ ಕಲಾರಂಗದ 45ನೇ ಮಹಾಸಭೆಯಲ್ಲಿ ಆಯ್ಕೆಯಾದ ಕಾರ್ಯಕಾರಿ ಸಮಿತಿಯು ಸೆಪ್ಟಂಬರ್ 28, 2020ರಂದು ಸಭೆ ನಡೆಸಿ ಎಂ. ಗಂಗಾಧರ್ ರಾವ್ ಇವರನ್ನು ಅಧ್ಯಕ್ಷರಾಗಿ ಆಯ್ಕೆ ಮಾಡಿತು. 2020-21ನೇ ಸಾಲಿಗೆ ಆಯ್ಕೆಗೊಂಡ ಪದಾಧಿಕಾರಿಗಳು.
ಉಪಾಧ್ಯಕ್ಷರು : ಎಸ್.ವಿ.ಭಟ್, ಪಿ.ಕಿಶನ್ ಹೆಗ್ಡೆ, ವಿ.ಜಿ.ಶೆಟ್ಟಿ, ಕಾರ್ಯದರ್ಶಿ: ಮುರಲಿ ಕಡೆಕಾರ್, ಜತೆಕಾರ್ಯದರ್ಶಿಗಳು : ನಾರಾಯಣ ಎಂ.ಹೆಗಡೆ, ಎಚ್.ಎನ್. ಶೃಂಗೇಶ್ವರ, ಕೋಶಾಧಿಕಾರಿ : ಮನೋಹರ ಕೆ., ಸದಸ್ಯರು : ಕೆ. ಗಣೇಶ್ ರಾವ್, ತಲ್ಲೂರು ಶಿವರಾಮ ಶೆಟ್ಟಿ, ಬಿ.ನಾರಾಯಣ, ಪ್ರೊ. ಕೆ. ಸದಾಶಿವ ರಾವ್, ಪ್ರೊ.ಎಂ.ಎಲ್.ಸಾಮಗ, ಗಣರಾಜ್ ಭಟ್, ಭುವನಪ್ರಸಾದ್ ಹೆಗ್ಡೆ, ಕೆ.ಎಸ್ ಸುಬ್ರಹ್ಮಣ್ಯ ಬಾಸ್ರಿ, ಅನಂತರಾಜ ಉಪಾಧ್ಯ, ಎಚ್.ಎನ್.ವೆಂಕಟೇಶ್, ವಿಜಯ್ ಕುಮಾರ್ ಮುದ್ರಾಡಿ, ಎ. ನಟರಾಜ ಉಪಾಧ್ಯ, ಕೆ. ಅಜಿತ್ ಕುಮಾರ್, ವಿದ್ಯಾಪ್ರಸಾದ್, ಅಶೋಕ್ ಎಂ, ದಿನೇಶ್ ಪಿ. ಪೂಜಾರಿ, ರಾಜೇಶ್ ನಾವಡ,
ಆಹ್ವಾನಿತರು : ಕೆ. ಗೋಪಾಲ, ರಮೇಶ್ ರಾವ್, ಗಣೇಶ್ ಬ್ರಹ್ಮಾವರ, ಪೃಥ್ವಿರಾಜ್ ಕವತ್ತಾರ್, ಕೆ. ಆನಂದ ಶೆಟ್ಟಿ, ನಾಗರಾಜ ಹೆಗಡೆ, ರಾಜೀವಿ, ಸಂತೋಷ್ ಕುಮಾರ್ ಶೆಟ್ಟಿ, ಕೃಷ್ಣಮೂರ್ತಿ ಭಟ್ ಪುತ್ತೂರು, ಡಾ. ಶೈಲಜಾ, ಕಿಶೋರ್. ಸಿ. ಉದ್ಯಾವರ, ಪ್ರಸಾದ್ ರಾವ್ ಪುತ್ತೂರು, ಸುದರ್ಶನ ಬಾಯರಿ, ಗಣೇಶ್ ರಾವ್ ಎಲ್ಲೂರು, ರಮಾನಾಥ ಶ್ಯಾನುಭಾಗ.
ಹಗಲು ವೇಷ – ಕರ್ನಾಟಕದ ವಿಶಿಷ್ಟ ಜಾನಪದ ಕಲೆ Hagalu Vesha, Folk Art of Karnataka (ಭಾರತದ ಕಲಾವೈವಿಧ್ಯತೆ – ಭಾಗ 1)
‘ಹಗಲು ವೇಷ’ ಎಂಬುದು ಕರ್ನಾಟಕದ ಒಂದು ವಿಶಿಷ್ಟ ಜಾನಪದ ಕಲೆ. ಇದು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿಯೂ ‘ಪಗತಿ ವೇಷಂ’ ಎಂಬ ಹೆಸರಿನಲ್ಲಿಯೂ ಪ್ರದರ್ಶಿಸಲ್ಪಡುತ್ತದೆ. ಇದು ಹೆಚ್ಚಾಗಿ ಒಂದು ಪ್ರವಾಸಿ ಕಲಾವಿದರ ತಂಡವಾಗಿದ್ದು ಅಲ್ಲಲ್ಲಿ ತೆರೆದ ಸ್ಥಳಗಳಲ್ಲಿ ಪ್ರದರ್ಶನ ನೀಡುತ್ತಾರೆ. ಯಾವುದೇ ರಂಗಸಜ್ಜಿಕೆಯಿಲ್ಲದೆ ನೆಲದ ಮೇಲೆ ಪ್ರದರ್ಶನಗಳನ್ನು ನೀಡುತ್ತಾರೆ. ಹೆಸರೇ ಸೂಚಿಸುವಂತೆ ಇದು ಹಗಲಿನಲ್ಲಿ ಪ್ರದಶನಗೊಳ್ಳುವ ಕಲೆ. ಪೌರಾಣಿಕ ಕಥೆಗಳನ್ನೇ ಹೆಚ್ಚಾಗಿ ಪ್ರದರ್ಶನಕ್ಕೆ ಅಳವಡಿಸುವುದರಿಂದ ಅದಕ್ಕೆ ಬೇಕಾದ ಪರಿಕರಗಳಾದ ಬಣ್ಣಗಾರಿಕೆ, ವೇಷಭೂಷಣಗಳು, ಆಯುಧಗಳು ಎಲ್ಲವನ್ನೂ ಈ ‘ಹಗಲು ವೇಷ’ ಎಂಬ ಕಲೆಯಲ್ಲಿ ಸಮರ್ಥವಾಗಿ ಬಳಸಿಕೊಳ್ಳಲಾಗುತ್ತದೆ. ಈ ಕಲೆಯಲ್ಲಿ ಯಾವುದೇ ಬರೆದು ಸಿದ್ಧಪಡಿಸಿದ ಪಾಠಾಕ್ಷರಗಳಿರುವುದಿಲ್ಲ. ಹಾಡುಗಾರನು ಹಾರ್ಮೋನಿಯಂ ಜೊತೆಗೆ ಹಾಡಿದ ಹಾಡಿಗೆ ತಬಲಾ ಸಾಥ್ ಇರುತ್ತದೆ. ಕಲಾವಿದರ ತಂಡವು ಸ್ಥಳದಿಂದ ಸ್ಥಳಕ್ಕೆ ತೆರಳುತ್ತಾ ಆಯಾ ಪ್ರದೇಶಗಳಲ್ಲಿ ತಮ್ಮ ಡೇರೆಯ ಬಿಡಾರಗಳನ್ನು ನಿರ್ಮಿಸಿ ಪ್ರದರ್ಶನಗಳನ್ನು ನೀಡುತ್ತಾರೆ. ಕೆಲವೊಮ್ಮೆ ಪೌರಾಣಿಕ ಕಥೆಗಳಲ್ಲದೆ ದೈನಂದಿನ ಜೀನಕ್ಕೆ ಸಂಬಂಧಪಟ್ಟ ಸಾಮಾಜಿಕ ಕತೆಗಳನ್ನೂ ಇತಿಹಾಸದ ಕತೆಗಳನ್ನೂ ಪ್ರದರ್ಶಿಸಲಾಗುತ್ತದೆ. ಪುರುಷರೇ ಕಲಾವಿದರಾಗಿ ಪಾತ್ರಗಳನ್ನು ನಿರ್ವಹಿಸುವ ಪರಂಪರೆಯು ಈ ಜಾನಪದ ಕಲೆಗಿತ್ತು. ಮೊದಲೆಲ್ಲಾ ಸ್ತ್ರೀ ಪಾತ್ರಗಳನ್ನೂ ಪುರುಷರೇ ನಿರ್ವಹಿಸುತ್ತಿದ್ದರು. ಇದೊಂದು ಆಕರ್ಷಕವೂ ರಂಜನೀಯವೂ ನಮ್ಮ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಲೆಯೂ ಆಗಿದೆ.
ಎಸ್. ಪಿ. ಬಾಲಸುಬ್ರಹ್ಮಣ್ಯಂ ಅಗಲಿಕೆಗೆ ದುಃಖಿಸಿದ ಎಸ್. ಜಾನಕಿ
ಎಸ್. ಪಿ. ಬಾಲಸುಬ್ರಹ್ಮಣ್ಯಂ ಮತ್ತು ತಮ್ಮ ಒಡನಾಟದ ಬಗ್ಗೆ ಜನಪ್ರಿಯ ಗಾಯಕಿ ಎಸ್. ಜಾನಕಿ ಭಾವನಾತ್ಮಕವಾಗಿ ಮಾತನಾಡಿದರು.
ಎಸ್. ಪಿ. ಬಾಲಸುಬ್ರಹ್ಮಣ್ಯಂ ಸರಳತೆ ಮತ್ತು ಆದರ್ಶಕ್ಕೆ ಈ ವೀಡಿಯೊ ಸಾಕ್ಷಿ
ಎಸ್. ಪಿ. ಬಾಲಸುಬ್ರಹ್ಮಣ್ಯಂ ಸರಳತೆಗೆ ಮತ್ತು ಅವರು ಹಿರಿಯರನ್ನು ಗೌರವಿಸುವ ರೀತಿಯನ್ನು ಮಾತಿನಲ್ಲಿ, ಬರಹದಲ್ಲಿ ಬಣ್ಣಿಸಲು ಸಾಧ್ಯವಿಲ್ಲ. ಅವರು ಎಲ್ಲದಕ್ಕೂ ನಮಗೆ ಆದರ್ಶ ಮತ್ತು ಪೂಜನೀಯ ವ್ಯಕ್ತಿ. ಹಿರಿಯ ಗಾಯಕರಾದ ಕೆ.ಜೆ. ಯೇಸುದಾಸ್ ಬಗ್ಗೆ ಅವರ ಭಕ್ತಿ ಭಾವಗಳು ಅನುಕರಣೀಯ.
‘ಮನಸಿಜ ಪಿತ ನೀನು’ – ಯಕ್ಷಗಾನ ವೀಡಿಯೊ
ಮಧುಸೂದನ ಅಲೆವೂರಾಯರ ಯು ಟ್ಯೂಬ್ ಚಾನೆಲ್ ನ ಈ ವಿಡಿಯೋ ಬಹಳವಾಗಿ ಇಷ್ಟವಾಗುತ್ತದೆ. ಯಾಕೆಂದರೆ ಬಲಿಪರ ಸುಂದರ ಪದ್ಯಕ್ಕೆ ಚಿಪ್ಪಾರು ಕೃಷ್ಣಯ್ಯ ಬಲ್ಲಾಳರ ಮದ್ದಳೆಯ ಕೈಚಳಕದ ಜೊತೆ ಸೇರಿದಾಗ ಅದೊಂದು ಅಪೂರ್ವ ಅನುಭವ.


