Saturday, August 29, 2026
Home Blog Page 39

ಆನ್‌ಲೈನ್‌ನಲ್ಲಿ ವಂಚನೆ: ಶಿಕ್ಷಕನ ಖಾತೆಯಿಂದ 91 ಲಕ್ಷ ರೂ. ವರ್ಗಾವಣೆ ಮಾಡಿಸಿಕೊಂಡ ಅಪಾಯಕಾರಿ ವಂಚಕರು

0


ಆನ್‌ಲೈನ್‌ನಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಹಣ ಕೊಡುತ್ತೇವೆ ಎಂದು ಶಿಕ್ಷಕರಿಗೆ ನಂಬಿಸಿ, ಆಸೆ ತೋರಿಸಿ 91.90 ಲಕ್ಷ ರೂ. ವಂಚಿಸಿರುವ ಘಟನೆ ದಾವಣಗೆರೆ ಸಮೀಪ ನಡೆದಿದೆ.

ಶಿಕ್ಷಕ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯನಾಗಿದ್ದ. ಎನ್ ಜಿ ಸಿ (ನ್ಯೂಮೌಂಟ್ ಗೋಲ್ಡ್ ಕ್ಯಾಪಿಟಲ್) ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿದಾಗ ಇದು ಅಮೆರಿಕದ ಟ್ರೇಡಿಂಗ್ ಮತ್ತು ಮೈನಿಂಗ್ ಕಂಪನಿ ಎಂದು ತಿಳಿಸಿ ಶಿಕ್ಷಕನಿಂದ ದಾಖಲೆಗಳನ್ನು ಪಡೆದು ರಿಜಿಸ್ಟರ್ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ನಂತರ ಖಾತೆ ತೆರೆಯಲು ಸೂಚನೆ ಬಂತು. ಶಿಕ್ಷಕರು ಲಾಭದ ಆಸೆಯಿಂದ ಸೂಚನೆಗಳನ್ನು ಪಾಲಿಸತೊಡಗಿದರು. ಲಾಭಾಂಶದ ಆಸೆ ತೋರಿಸಿ ವಂಚಕರು ಹಂತ ಹಂತವಾಗಿ ಹಣ ವರ್ಗಾವಣೆ ಮಾಡಿಸಿದ್ದರು.

ಶಿಕ್ಷಕ ತನ್ನ ಖಾತೆಯಿಂದ 27.40 ಲಕ್ಷ ರೂ. ಹಣವನ್ನು ಬಿಡಿಸಲು ಪ್ರಯತ್ನಿಸಿದಾಗ ನಿಮ್ಮ ಖಾತೆ ಲಾಕ್ ಆಗಿದೆ ಎಂದು ಹೇಳಿದ್ದಾರೆ.

ಅದನ್ನು ಅನ್ ಲಾಕ್ ಮಾಡಬೇಕಾದರೆ ಸ್ವಲ್ಪ ಹಣವನ್ನು ವರ್ಗಾವಣೆ ಮಾಡಲು ಹೇಳಿದರು
ನಿಮ್ಮ ಅಕೌಂಟ್‌ನಲ್ಲಿ ಲಾಭಾಂಶ ಸೇರಿ ಇರುವ ಒಟ್ಟು 2 ಕೋಟಿ ರೂ. ಹಣ ಇದ್ದು, ಪಡೆಯಲು ಮತ್ತೆ 47.29 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿ ಎಂದು ವಂಚಕರು ಸಂದೇಶ ಕಳುಹಿಸಿದರು.

ಇಷ್ಟೆಲ್ಲಾ ಆದರೂ ಶಿಕ್ಷಕನಿಗೆ ಸಂಶಯ ಬರಲಿಲ್ಲ. ಶಿಕ್ಷಕ 2 ಕೋಟಿ ರೂ ಹಣ ಬರುತ್ತದೆ ಎಂದು ನಂಬಿ 47.29 ಲಕ್ಷ ವರ್ಗಾವಣೆ ಮಾಡಿದ್ದಾರೆ.. ಹಣ ಬಾರದೇ ಮೋಸ ಹೋಗಿರುವುದು ಆಮೇಲೆ ಅರಿವಿಗೆ ಬಂತು.


“ಅಪರಿಚಿತ ವ್ಯಕ್ತಿಗಳು ಎನ್‌ಜಿಸಿ ಕಂಪನಿಯಲ್ಲಿ ಹಣ ಹೂಡಿಕೆ ಮಾಡಿದರೆ ಅತ್ಯಧಿಕ ಲಾಭ ಕೊಡುತ್ತೇನೆಂದು ನಂಬಿಸಿದ್ದಾರೆ. ನನ್ನ ಖಾತೆಯಿಂದ ಆನ್‌ಲೈನ್ ಮೂಲಕ ಒಟ್ಟು 91 ಲಕ್ಷ ರೂ. ಹಣವನ್ನು ವರ್ಗಾವಣೆ ಮಾಡಿಸಿಕೊಂಡಿದ್ದಾರೆ. ಯಾವುದೇ ಕಮಿಷನ್ ಹಣ ನೀಡಿದೆ ಮೋಸ ಮಾಡಲಾಗಿದೆ” ಎಂದು ವಂಚನೆಗೆ ಒಳಗಾದ ದಾವಣಗೆರೆ ನಗರದ ನಿಟ್ಟುವಳ್ಳಿ ನಿವಾಸಿ ಖಾಸಗಿ ಶಾಲೆಯ ಶಿಕ್ಷಕ ಸಿಇಎನ್ ಕ್ರೈಮ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಕಿಡ್ನಿ ಸ್ಟೋನ್ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಯುವತಿ ಸಾವು

0

ಕೋಲಾರ: ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ದ ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ. ನಂಬಿಗಾನಹಳ್ಳಿ ಗ್ರಾಮದ ನಿವಾಸಿ 22 ವರ್ಷದ ದೀಪ್ತಿ ಸಾವನ್ನಪ್ಪಿದ ಯುವತಿ. ಇದು ನಡೆದದ್ದು ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದಲ್ಲಿ.

ಕೋಲಾರದ ಶ್ರೇಯ ಆಸ್ಪತ್ರೆಯಲ್ಲಿ ಮಾಲೂರು ತಾಲೂಕಿನ ನಂಬಿಗಾನಹಳ್ಳಿ ಗ್ರಾಮದ ದೀಪ್ತಿ (22) ಮೃತಪಟ್ಟ ಯುವತಿ. ಕಿಡ್ನಿ ಸ್ಟೋನ್ ಕಾರಣ ಬುಧವಾರ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು.

ಕಿಡ್ನಿ ಸ್ಟೋನ್ ಕಾರಣ ಯುವತಿ ಲ್ಯಾಪ್ರೋಸ್ಕೋಪಿ ಶಸ್ತ್ರಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಗುರುವಾರ ಆಪರೇಶನ್ ಮಾಡುವುದಾಗಿ ವೈದ್ಯರು ತಿಳಿಸಿದ್ದರು.

ಆದರೆ ವೈದ್ಯರು ಸಂಜೆ 5 ಗಂಟೆ ಸುಮಾರಿನಲ್ಲಿ ಯುವತಿ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ ಎಂದು ಹೆತ್ತವರಿಗೆ ತಿಳಿಸಿದ್ದಾರೆ.


ಆಸ್ಪತ್ರೆಯ ಡಾಕ್ಟರ್ ವಿರುದ್ಧ ಪೋಷಕರಿಂದ ತೀವ್ರ ಆಕ್ಷೇಪ ವ್ಯಕ್ತವಾಗಿದ್ದು, ವೈದ್ಯರ ನಿರ್ಲಕ್ಷ್ಯವೇ ದೀಪ್ತಿಯ ಸಾವಿಗೆ ಕಾರಣ ಎಂದಿದ್ದಾರೆ. ಡಾಕ್ಟರ್ ನೀಡಿದ್ದ ಅನಸ್ತೇಶಿಯಾ ಡೋಸ್ ಹೆಚ್ಚಾಗಿ ಆಕೆ ಸಾವಿಗೀಡಾಗಿದ್ದಾಳೆ ಎಂದು ಪೋಷಕರು ಆರೋಪಿಸಿದ್ದಾರೆ. ಸ್ಥಳಕ್ಕೆ ಕೋಲಾರ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಕೆಲಸದ ವೇಳೆ ನರ್ಸ್ ಕುಸಿದು ಬಿದ್ದು ಸಾವು

0

ಸೌದಿ ಅರೇಬಿಯಾದಲ್ಲಿ ಕೆಲಸದ ವೇಳೆ ನರ್ಸ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ

ರಿಯಾದ್: ಸೌದಿ ಅರೇಬಿಯಾದಲ್ಲಿ ಕೇರಳದ ನರ್ಸ್ ಕರ್ತವ್ಯದ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ದಿಲೀಪ್ ಮತ್ತು ಲೀನಾ ದಿಲೀಪ್ ದಂಪತಿಯ ಪುತ್ರಿ ವಯಲೂರ್ ನೆಲ್ಲಾಯಿ ಮೂಲದ ಡೆಲ್ಮಾ ದಿಲೀಪ್ (26) ಮೃತಪಟ್ಟಿದ್ದಾರೆ.

ಡೆಲ್ಮಾ ಸೌದಿ ಅರೇಬಿಯಾದ ಮದೀನಾದಲ್ಲಿರುವ ಮೌವಾಸತ್ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಡೆಲ್ಮಾ ದಿಲೀಪ್ ಅವರು ಕರ್ತವ್ಯದಲ್ಲಿದ್ದಾಗ ಆಸ್ಪತ್ರೆಯಲ್ಲಿ ಕುಸಿದು ಬಿದ್ದಿದ್ದಾರೆ ಎಂದು ಸಹೋದ್ಯೋಗಿಗಳು ಹೇಳುತ್ತಾರೆ.

ಕೂಡಲೇ ಆಕೆಯನ್ನು ತುರ್ತು ವಿಭಾಗಕ್ಕೆ ಕರೆದೊಯ್ಯಲಾಯಿತು. ಶೀಘ್ರದಲ್ಲೇ ಡೆಲ್ಮಾಳನ್ನು ವೆಂಟಿಲೇಟರ್‌ಗೆ ಸ್ಥಳಾಂತರಿಸಲಾಯಿತು

ಆದರೆ ಆಕೆಯ ಜೀವವನ್ನು ಉಳಿಸಲಾಗಲಿಲ್ಲ. ಹೃದಯಾಘಾತವೇ ಸಾವಿಗೆ ಕಾರಣ ಎಂದು ವರದಿಗಳು ತಿಳಿಸಿವೆ.

ಲೈಂಗಿಕ ಕಿರುಕುಳ – ಚಿತ್ರನಟ ಹಾಗೂ ಶಾಸಕ ಮುಖೇಶ್ ಬಂಧನ, ಇನ್ನೋರ್ವ ನಟ ಸಿದ್ದೀಕ್ ಗೆ ಬಂಧನದ ಭೀತಿ

0

ಲೈಂಗಿಕ ಕಿರುಕುಳ ಆರೋಪದ ಮೇಲೆ ನಟಿಯೊಬ್ಬರ ದೂರಿನ ಹಿನ್ನೆಲೆಯಲ್ಲಿ, ನಟ ಹಾಗೂ ಕೊಲ್ಲಂ ಶಾಸಕ ಎಂ ಮುಖೇಶ್ ಅವರನ್ನು ಮಂಗಳವಾರ ಬಂಧಿಸಲಾಗಿದೆ.

ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸುತ್ತಿದ್ದಂತೆ, ಅಮ್ಮಾ ಮಾಜಿ ಪ್ರಧಾನ ಕಾರ್ಯದರ್ಶಿ ಸಿದ್ದಿಕ್ ತಲೆಮರೆಸಿಕೊಂಡಿದ್ದು, ಇನ್ನೂ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದಾರೆ. ಮುಖೇಶ್ ಬಂಧನ ಮತ್ತು ಸಿದ್ದಿಕ್ ನ್ಯಾಯಾಲಯದಿಂದ ‘ಬೆಲ್ಟ್ ಟ್ರೀಟ್ಮೆಂಟ್’ ಪಡೆಯುವುದರೊಂದಿಗೆ, ಮಂಗಳವಾರ ಮಲಯಾಳಂ ಮೇಲೆ ಕರಾಳ ಛಾಯೆ ಆವರಿಸಿತು.

ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ಸಿ.ಎಸ್.ಡಯಾಸ್ ಅವರು, ಸಾಂದರ್ಭಿಕ ಸಾಕ್ಷ್ಯಗಳ ಆಧಾರದ ಮೇಲೆ ಸಿದ್ದಿಕ್ ವಿರುದ್ಧದ ಪ್ರಾಥಮಿಕ ಪ್ರಕರಣ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ. ದೂರು ಅತ್ಯಂತ ಗಂಭೀರವಾಗಿದೆ ಮತ್ತು ಅತ್ಯಾಚಾರದ ವ್ಯಾಪ್ತಿಯಲ್ಲಿ ಬರುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಲೈಂಗಿಕ ಸಾಮರ್ಥ್ಯ ಪರೀಕ್ಷೆಗೆ ಒಳಗಾಗುವಂತೆ ಸಿದ್ದಿಕ್‌ಗೆ ಸೂಚಿಸಲಾಗಿದೆ. ನಟ ವಿದೇಶಕ್ಕೆ ಹಾರುವುದನ್ನು ತಡೆಯಲು ತನಿಖಾ ತಂಡ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ. ಆಲುವಾ ಮತ್ತು ಕಾಕ್ಕನಾಡ್‌ನಲ್ಲಿರುವ ಅವರ ಮನೆಗೆ ಬೀಗ ಹಾಕಲಾಗಿದ್ದು, ಮೊಬೈಲ್‌ ಸ್ವಿಚ್‌ ಆಫ್‌ ಆಗಿತ್ತು.

ಪೊಲೀಸರು ಕೊಚ್ಚಿಯ ಐಷಾರಾಮಿ ಹೋಟೆಲ್‌ಗಳಲ್ಲಿ ಸಿದ್ದಿಕ್‌ಗಾಗಿ ಹುಡುಕಾಟ ನಡೆಸಿದ್ದಾರೆ. ಮಂಗಳವಾರ ಬೆಳಿಗ್ಗೆ 10.30 ಕ್ಕೆ ಮುಖೇಶ್ ಅವರು ತಮ್ಮ ವಕೀಲರೊಂದಿಗೆ ಮರೈನ್ ಡ್ರೈವ್‌ನಲ್ಲಿರುವ ಕರಾವಳಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಎಐಜಿ ಪೂಂಗುಝಾಲಿ ಅವರ ಮುಂದೆ ಹಾಜರಾದರು.

ಮಧ್ಯಾಹ್ನ 1.15ರವರೆಗೆ ವಿಚಾರಣೆ ನಡೆಯಿತು. ಎರ್ನಾಕುಲಂ ಜನರಲ್ ಆಸ್ಪತ್ರೆಯಲ್ಲಿ ಲೈಂಗಿಕ ಸಾಮರ್ಥ್ಯ ಪರೀಕ್ಷೆಯನ್ನು ತೆಗೆದುಕೊಂಡ ನಂತರ ಅವರನ್ನು ಬಿಡುಗಡೆ ಮಾಡಲಾಯಿತು. ಮುಖೇಶ್ ಠಾಣೆಯಿಂದ ಹೊರಬಂದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆಯನ್ನು ನಿರಾಕರಿಸಿದರು.

ಆಲುವಾ ಸ್ಥಳೀಯ ನಟಿಯ ಪ್ರಕಾರ, ಮುಕೇಶ್ ಅವರು ಚಲನಚಿತ್ರ ಪಾತ್ರಗಳನ್ನು ನೀಡುವ ನೆಪದಲ್ಲಿ ಮರಡುವಿನ ವಿಲ್ಲಾದಲ್ಲಿ ಲೈಂಗಿಕವಾಗಿ ಹಲ್ಲೆ ನಡೆಸಿದ್ದಾರೆ. ಶೂಟಿಂಗ್ ನಡೆಯುತ್ತಿದ್ದ ಪಾಲಕ್ಕಾಡ್ ಒಟ್ಟಪಾಲಂನಲ್ಲಿ ಕಾರಿನೊಳಗೆ ಆಕೆಯ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ದೂರುದಾರರ ಹೇಳಿಕೆ ಮತ್ತು ಸಾಕ್ಷ್ಯಗಳ ಸಂಗ್ರಹವು ಈಗಾಗಲೇ ಪೂರ್ಣಗೊಂಡಿದೆ.

ನಟಿ ದೂರು ಸಲ್ಲಿಸಲು ಎಂಟು ವರ್ಷಗಳ ಕಾಲ ಕಾಯುತ್ತಿರುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸಿದ್ದಿಕ್ ಮತ್ತು ಅವರ ವಕೀಲರನ್ನು ಹೈಕೋರ್ಟ್ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ದೂರನ್ನು ‘ಆಧಾರವಿಲ್ಲದ ಲೈಂಗಿಕ ಆರೋಪಗಳು’ ಎಂದು ಕರೆದ ವಕೀಲರನ್ನು ನ್ಯಾಯಾಲಯ ತೀವ್ರವಾಗಿ ಟೀಕಿಸಿತು.

“ಅನುಭವವು ಪಾತ್ರದ ಪ್ರತಿಬಿಂಬವಲ್ಲ. ಇದು ಸಂಕಟದ ಸಾಕ್ಷಿಯಾಗಿದೆ. ದೂರಿನ ವಿಳಂಬಕ್ಕೆ ಹಲವು ಕಾರಣಗಳಿರಬಹುದು. ಸಮಾಜ ಅದನ್ನು ಹೇಗೆ ನೋಡುತ್ತದೆ ಎಂಬ ಚಿಂತೆ ಇರಬಹುದು. ಜೀವನ ಮತ್ತು ಕೆಲಸಕ್ಕೆ ಬೆದರಿಕೆಯ ಭಯ ಇರಬಹುದು ಎಂದು ನ್ಯಾಯಾಲಯವು ಹೇಳಿದೆ.

ಸಿದ್ದಿಕ್ ಅವರ ಪುತ್ರ ಶಾಹೀನ್ ಅವರು ಹಿರಿಯ ವಕೀಲ ಬಿ. ರಾಮನ್ ಪಿಳ್ಳೈ ಅವರೊಂದಿಗೆ ಸಂವಾದ ನಡೆಸಿದರು ಮತ್ತು ಬಹುಶಃ ಸುಪ್ರೀಂ ಕೋರ್ಟ್‌ಗೆ ಹೋಗುತ್ತಾರೆ. ಸುಪ್ರೀಂ ಕೋರ್ಟ್‌ನಲ್ಲಿ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಂಗೀಕರಿಸಿದರೆ, ಸದ್ಯಕ್ಕೆ ಬಂಧನವನ್ನು ತಪ್ಪಿಸಬಹುದು ಎಂದು ಭಾವಿಸಲಾಗಿದೆ.

ಕಡಬದ್ವಯ ಸಂಸ್ಮರಣೆ, ಯಕ್ಷಗಾನ ಪ್ರಶಸ್ತಿ ಪ್ರದಾನ, ಯಕ್ಷಗಾನ ಬಯಲಾಟ – ಬಂಟ್ವಾಳ ಜಯರಾಮ ಆಚಾರ್ಯರಿಗೆ ಕಡಬದ್ವಯ ಪ್ರಶಸ್ತಿ

0

ಕಡಬದ್ವಯ ಸಂಸ್ಮರಣೆ, ಯಕ್ಷಗಾನ ಪ್ರಶಸ್ತಿ ಪ್ರದಾನ, ಯಕ್ಷಗಾನ ಬಯಲಾಟ – ಬಂಟ್ವಾಳ ಜಯರಾಮ ಆಚಾರ್ಯರಿಗೆ ಕಡಬದ್ವಯ ಪ್ರಶಸ್ತಿ

ಈ ಬಾರಿಯ ಕಡಬದ್ವಯ ಸಂಸ್ಮರಣ ಯಕ್ಷಗಾನ ಪ್ರಶಸ್ತಿ ಪ್ರದಾನ ಸಮಾರಂಭ 27-10-2024ನೇ ಆದಿತ್ಯವಾರ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ, ರಥಬೀದಿ ಮಂಗಳೂರು ಇಲ್ಲಿ ನಡೆಯಲಿದೆ.

ಈ ವರ್ಷದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭದ ಜೊತೆಗೆ ಯಕ್ಷಗಾನ ಬಯಲಾಟ ಕಾರ್ಯಕ್ರಮಗಳ ರಸದೌತಣ ಇರಲಿದೆ.

ಈ ಬಾರಿ ಕಡಬದ್ವಯ ಪ್ರಶಸ್ತಿಯನ್ನು ಖ್ಯಾತ ಹಾಸ್ಯ ಕಲಾವಿದರಾದ ಶ್ರೀ ಬಂಟ್ವಾಳ ಜಯರಾಮ ಆಚಾರ್ಯರಿಗೆ ನೀಡಿ ಗೌರವಿಸಲಾಗುವುದು ಎಂದು ಸಮಿತಿಯ ಪ್ರಕಟಣೆ ತಿಳಿಸಿದೆ.

ವಿವರಗಳಿಗೆ ಕರಪತ್ರದ ಚಿತ್ರಗಳನ್ನು ನೋಡಿ.

ಖ್ಯಾತ ಯಕ್ಷಗಾನ ಕಲಾವಿದ ನಿಧನ

0

ತೆಂಕುತಿಟ್ಟಿನ ಹಿರಿಯ ಯಕ್ಷಗಾನ ಕಲಾವಿದ ಮುಂಡ್ಕೂರು ವಸಂತ ಶೆಟ್ಟಿ (83) 21.09.2024ರಂದು ನಿಧನ ಹೊಂದಿದರು.

ಮುಂಡ್ಕೂರು ಕೃಷ್ಣ ಶೆಟ್ಟಿಯವರಲ್ಲಿ ಹೆಜ್ಜೆಗಾರಿಕೆ ಕಲಿತು ಮುಂಡ್ಕೂರು ಮೇಳದಲ್ಲಿ ಹವ್ಯಾಸಿ ವೇಷಧಾರಿಯಾಗಿ, ಮುಂದೆ ಉದ್ಯೋಗ ನಿಮಿತ್ತ ಮುಂಬಯಿ ಸೇರಿ ಯಕ್ಷಗಾನಾಸಕ್ತಿಯಿಂದ ಮತ್ತೆ ಊರಿಗೆ ಬಂದು ಕಟೀಲು ಮೇಳ ಸೇರಿದರು.

ಬೆಳ್ಮಣ್ಣು ಮತ್ತು ಬಪ್ಪನಾಡು ಮೇಳಗಳಲ್ಲೂ ಕೆಲವು ತಿರುಗಾಟ ಮಾಡಿದ್ದರು. ಪೀಠಿಕಾ ಮತ್ತು ಒಡ್ಡೋಲಗದ ಪಾತ್ರಗಳಿಂದ ಆರಂಭಗೊಡ ಇವರ ಯಕ್ಷಪಯಣ, ಮುಂದೆ ಹವ್ಯಾಸಿ ಸಂಘ ಸಂಸ್ಥೆಗಳ ಆಟಗಳಲ್ಲಿ ಅತಿಕಾಯ, ರಕ್ತಬೀಜದಂತಹ ಪ್ರಮುಖ ಪಾತ್ರಗಳನ್ನು ಸಮರ್ಥವಾಗಿ ನಿರ್ವಹಿಸುವಷ್ಟು ಪ್ರೌಢತೆ ಸಾಧಿಸಿತ್ತು.

ಅವರು ಪತ್ನಿ, ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ. ಕಳೆದ ವರ್ಷ ಸಂಸ್ಥೆ ಕಟೀಲಿನಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ನೀಡಿ ಗೌರವಿಸಿತ್ತು.

ವಸಂತ ಶೆಟ್ಟಿಯವರ ನಿಧನಕ್ಕೆ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಮತ್ತು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನ – ಎಂಟು ಜನರ ಮೇಲೆ ಮಾನನಷ್ಟ ದೂರು ದಾಖಲಿಸಿದ ರಿಮಾ ಕಲ್ಲಿಂಗಲ್

0


ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಇಮೇಜ್ ಹಾಳು ಮಾಡುವ ಉದ್ದೇಶ ಹೊಂದಿರುವ ವ್ಯಕ್ತಿಗಳ ವಿರುದ್ಧ ಎರ್ನಾಕುಲಂ ಡಿಸಿಪಿಗೆ ನಟಿ ರಿಮಾ ಕಲ್ಲಿಂಗಲ್ ಮಾನನಷ್ಟ ದೂರು ನೀಡಿದ್ದಾರೆ.

ಇದೀಗ ಪ್ರಕರಣವನ್ನು ಹೆಚ್ಚಿನ ತನಿಖೆಗಾಗಿ ಎರ್ನಾಕುಲಂ ಸೆಂಟ್ರಲ್ ಎಸಿಪಿಗೆ ಹಸ್ತಾಂತರಿಸಲಾಗಿದೆ. ವರದಿಗಳ ಪ್ರಕಾರ, ದೂರಿನಲ್ಲಿ ಎಂಟು ವ್ಯಕ್ತಿಗಳನ್ನು ಹೆಸರಿಸಲಾಗಿದೆ,

ರಿಮಾ ಅವರು ಮಾದಕ ವ್ಯಸನಿಯಾಗಿದ್ದಾರೆ ಎಂಬ ಆರೋಪವನ್ನು ಒಳಗೊಂಡಂತೆ ಸುಳ್ಳು ಮಾಹಿತಿಯನ್ನು ಈ ವ್ಯಕ್ತಿಗಳು ಹರಡಿದ್ದಾರೆ ಮಾತ್ರವಲ್ಲದೆ, ಆಕೆಯ ಪ್ರತಿಷ್ಠೆಗೆ ಧಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕಾಳಿಂಗ ನಾವಡ ಪ್ರಶಸ್ತಿ 2024 – ಯಾರಿಗೆ ಒಲಿಯಿತು ಅದೃಷ್ಟ?

0


ಯಕ್ಷಗಾನದ ಕಂಚಿನ ಕಂಠದ ಭಾಗವತರೆಂದೇ ಪ್ರಸಿದ್ಧರಾದ ಶ್ರೀಯುತ ಕಾಳಿಂಗ ನಾವಡರ ನೆನಪಿನಲ್ಲಿ ಬೆಂಗಳೂರಿನ ಪ್ರತಿಷ್ಟಿತ ಸಾಂಸ್ಕೃತಿಕ ಸಂಸ್ಥೆಯಾದ ಕಲಾಕದಂಬ ಆರ್ಟ್ ಸೆಂಟರ್ ಪ್ರತೀ ವರ್ಷ ಯಕ್ಷಗಾನದ ಸಾಧಕರೊಬ್ಬರಿಗೆ ಕಾಳಿಂಗ ನಾವಡ ಪ್ರಶಸ್ತಿ ನೀಡುತ್ತಿದೆ.

ಹತ್ತು ಸಾವಿರ ನಗದು, ಬೆಳ್ಳಿ ತಟ್ಟೆ, ಪ್ರಶಸ್ತಿ ಪತ್ರ, ನೆನಪಿನ ಕಾಣ ಕೆಯನ್ನು ಕಾಳಿಂಗ ನಾವಡ ಪ್ರಶಸ್ತಿ ಒಳಗೊಂಡಿರುತ್ತದೆ.

ಗುಂಡ್ಮಿ ಸದಾನಂದ ಐತಾಳ್, ಸುಬ್ರಹ್ಮಣ್ಯ ಧಾರೇಶ್ವರ್, ಕೆಪ್ಪೆಕೆರೆ ಸುಬ್ರಾಯ ಹೆಗಡೆ, ಎಳ್ಳಾರೆ ವೆಂಕಟ್ರಾಯ ನಾಯಕ್, ನೆಬ್ಬೂರು ನಾರಾಯಣ ಹೆಗಡೆ,ಕರ್ಕಿ ಪ್ರಭಾಕರ ಭಂಡಾರಿ, ಕೆ.ಪಿ ಹೆಗ್ಡೆ, ಟಿ ಜಯಂತ್ ಕುಮಾರ್, ಮಂದಾರ್ತಿ ರಾಮಕೃಷ್ಣ, ಶ್ರೀಧರ ಹೆಬ್ಬಾರ್, ಗೋವಿಂದ ಉರಾಳ,ಶಂಕರ ಭಾಗವತ ಯಲ್ಲಾಪುರ, ಬಿದ್ಕಲ್‌ಕಟ್ಟೆ ಕೃಷ್ಣಯ್ಯ ಆಚಾರ್ಯಹಾಗೂ ಸುರೇಶ್ ರಾವ್ ಬಾರ್ಕೂರ್ ಅವರು ಈಗಾಗಲೇ ಕಾಳಿಂಗ ನಾವಡ ಪ್ರಶಸ್ತಿಗೆ ಬಾಜನರಾಗಿದ್ದಾರೆ.

ಈ ಸಾಲಿನ “ಕಾಳಿಂಗ ನಾವಡ ಪ್ರಶಸ್ತಿ” ಯನ್ನು ಸುಮಾರು 46 ವರ್ಷಗಳಿಂದ ಯಕ್ಷಗಾನದ ವೀರ ವಾದ್ಯವೆನಿಸಿದ ಚಂಡೆಯ ನುಡಿಸಾಣಿಕೆಯಲ್ಲಿ ನೈಪುಣ್ಯತೆಯನ್ನು ಸಾಧಿಸಿ ಚಂಡೆಯ ಗಂಡುಗಲಿ ಎಂದು ಖ್ಯಾತರಾದ

ಕೋಟ ಶಿವಾನಂದರವರಿಗೆ ಬೆಂಗಳೂರಿನ ಚಾಮರಾಜಪೇಟೆಯ ಉದಯಭಾನು ಸಭಾಂಗಣದ ವೇದಿಕೆಯಲ್ಲಿ 27-10-2024 ರ ಸಂಜೆ 4 ಘಂಟೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ನೀಡಲಾಗುವುದೆಂದು ಕಲಾಕದಂಬ ಆರ್ಟ್ ಸೆಂಟರ್ ನ ನಿರ್ದೇಶಕರಾದ ಡಾ.ರಾಧಾಕೃಷ್ಣ ಉರಾಳರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಪೇಜರ್ ಸ್ಫೋಟ ಆಯ್ತು… ಈಗ ಲೆಬನಾನ್‌ನಲ್ಲಿ ಹಿಜ್ಬುಲ್ಲಾ ವಾಕಿ-ಟಾಕಿಗಳು ಸ್ಫೋಟ, 3 ಸಾವು – ಇಸ್ರೇಲ್ ನ ವಿನೂತನ ಯುದ್ಧತಂತ್ರ?

0


ಲೆಬನಾನ್‌ನಲ್ಲಿ ವಾಕಿ-ಟಾಕಿ ಸ್ಫೋಟ: ಪೇಜರ್ ಸ್ಫೋಟಗಳು ಇರಾನ್ ಬೆಂಬಲಿತ ಹಿಜ್ಬುಲ್ಲಾವನ್ನು ಅಸ್ತವ್ಯಸ್ತಗೊಳಿಸುವಂತೆ ಮಾಡಿದ ಒಂದು ದಿನದ ನಂತರ, ಸಶಸ್ತ್ರ ಗುಂಪು ಬಳಸುವ ಕೈಯಲ್ಲಿ ಹಿಡಿದ ರೇಡಿಯೋಗಳು ಇಂದು ಸ್ಫೋಟಗೊಂಡವು. ಪೇಜರ್‌ಗಳನ್ನು ಖರೀದಿಸಿದ ಅದೇ ಸಮಯದಲ್ಲಿ ರೇಡಿಯೊಗಳನ್ನು ಹೆಜ್ಬೊಲ್ಲಾಹ್ ಖರೀದಿಸಿದರು.

ನಿನ್ನೆ ನಡೆದ ಇದೇ ರೀತಿಯ ದಾಳಿಯಲ್ಲಿ ಬುಧವಾರ ಲೆಬನಾನ್‌ನ ಸಶಸ್ತ್ರ ಗುಂಪಿನ ಹಿಜ್ಬುಲ್ಲಾ ಸದಸ್ಯರು ಬಳಸಿದ ವಾಕಿ-ಟಾಕಿಗಳು ಸ್ಫೋಟಗೊಂಡ ನಂತರ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ನೂರಾರು ಜನರು ಗಾಯಗೊಂಡಿದ್ದಾರೆ. ದೇಶದ ದಕ್ಷಿಣ ಪ್ರದೇಶ ಮತ್ತು ರಾಜಧಾನಿ ಬೈರುತ್‌ನ ಉಪನಗರಗಳಲ್ಲಿ ಸ್ಫೋಟಗಳು ವರದಿಯಾಗಿವೆ.

ಟೆಹ್ರಾನ್ ಟೈಮ್ಸ್ ಪ್ರಕಾರ, ಹಿಂದಿನ ದಿನ ಕೊಲ್ಲಲ್ಪಟ್ಟವರಿಗೆ ಇರಾನ್ ಬೆಂಬಲಿತ ಹೆಜ್ಬುಲ್ಲಾ ಆಯೋಜಿಸಿದ ಅಂತ್ಯಕ್ರಿಯೆಯ ಬಳಿ ಕನಿಷ್ಠ ಒಂದು ಸ್ಫೋಟ ಸಂಭವಿಸಿದೆ.

ಮಂಗಳವಾರ, ಲೆಬನಾನ್‌ನಲ್ಲಿ ಹೆಜ್ಬೊಲ್ಲಾಹ್ ಸದಸ್ಯರು ಬಳಸಿದ ಪೇಜರ್‌ಗಳು ಸ್ಫೋಟಗೊಂಡವು, ಇದರ ಪರಿಣಾಮವಾಗಿ ಕನಿಷ್ಠ 12 ಜನರು ಸಾವನ್ನಪ್ಪಿದರು ಮತ್ತು 2,750 ಜನರು ಗಾಯಗೊಂಡರು.

ಗಮನಾರ್ಹವಾಗಿ, ಕಳೆದ ವರ್ಷ ಅಕ್ಟೋಬರ್‌ನಲ್ಲಿ ಗಾಜಾ ಯುದ್ಧ ಪ್ರಾರಂಭವಾದ ನಂತರ ಮೊಬೈಲ್ ಫೋನ್‌ಗಳನ್ನು ತಪ್ಪಿಸುವಂತೆ ಮತ್ತು ಇಸ್ರೇಲಿ ಉಲ್ಲಂಘನೆಗಳನ್ನು ತಡೆಯಲು ತನ್ನದೇ ಆದ ದೂರಸಂಪರ್ಕ ವ್ಯವಸ್ಥೆಯನ್ನು ಅವಲಂಬಿಸಿರುವಂತೆ ಹೆಜ್ಬೊಲ್ಲಾ ತನ್ನ ಸದಸ್ಯರಿಗೆ ಸೂಚಿಸಿತ್ತು. ಲೆಬನಾನಿನ ಆಂತರಿಕ ಭದ್ರತಾ ಪಡೆಗಳು ದೇಶದಾದ್ಯಂತ ಹಲವಾರು ವೈರ್‌ಲೆಸ್ ಸಂವಹನ ಸಾಧನಗಳನ್ನು ಸ್ಫೋಟಿಸಲಾಗಿದೆ ಎಂದು ಹೇಳಿದರು,

ಇದು ತನ್ನ ಸಂವಹನದ “ಇಸ್ರೇಲಿ ಉಲ್ಲಂಘನೆ” ಎಂದು ಹಿಜ್ಬುಲ್ಲಾ ನಾಯಕತ್ವ ಹೇಳಿದೆ.

ವಾಕಿ-ಟಾಕಿಗಳನ್ನು ಐದು ತಿಂಗಳ ಹಿಂದೆ ಹೆಜ್ಬೊಲ್ಲಾ ಖರೀದಿಸಿದೆ, ಅದೇ ಸಮಯದಲ್ಲಿ ಪೇಜರ್‌ಗಳನ್ನು ಖರೀದಿಸಲಾಗಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ.

ಅಂಬಲಪಾಡಿ ಯಕ್ಷಗಾನ ಕಲಾ ಮಂಡಳಿಯ ಅಧ್ಯಕ್ಷರಾಗಿ ಕೆ. ಅಜಿತ್ ಕುಮಾರ್ ಆಯ್ಕೆ

0


ಉಡುಪಿ : ಅಂಬಲಪಾಡಿಯ ಶ್ರೀ ಲಕ್ಷ್ಮೀ ಜನಾರ್ದನ ಯಕ್ಷಗಾನ ಕಲಾ ಮಂಡಳಿಯ 66ನೇ ವಾರ್ಷಿಕ ಮಹಾಸಭೆ ಕೆ. ಅಜಿತ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ 16, 2024ರಂದು ಜರಗಿತು.

ಪ್ರಕಾಶ್ ಹೆಬ್ಬಾರ್ ಗತಸಭೆ ವರದಿ ಮಂಡಿಸಿದರು. ಎ. ನಟರಾಜ ಉಪಾಧ್ಯರು ವಾರ್ಷಿಕ ಲೆಕ್ಕಪತ್ರ ಮಂಡಿಸಿದರು. ಸಿಎ ಗಣೇಶ್ ಹೆಬ್ಬಾರ್‌ರನ್ನು ಲೆಕ್ಕಪರಿಶೋಧಕರಾಗಿ ನಿಯುಕ್ತಿಗೊಳಿಸಲಾಯಿತು.
2024-25ನೇ ಸಾಲಿಗೆ ಈ ಕೆಳಗಿನ ಆಡಳಿತ ಮಂಡಳಿಯನ್ನು ಆರಿಸಲಾಯಿತು.


ಅಧ್ಯಕ್ಷ : ಕೆ. ಅಜಿತ್ ಕುಮಾರ್, ಉಪಾಧ್ಯಕ್ಷ : ಕೆ. ಜೆ. ಗಣೇಶ್, ಕಾರ್ಯದರ್ಶಿ : ಪ್ರಕಾಶ ಹೆಬ್ಬಾರ್, ಜತೆಕಾರ್ಯದರ್ಶಿ : ನಚಿಕೇತ, ಕೋಶಾಧಿಕಾರಿ : ಎ. ನಟರಾಜ ಉಪಾಧ್ಯ, ಗೌರವ ಸಲಹೆಗಾರ : ಎ. ರಾಘವೇಂದ್ರ ಉಪಾಧ್ಯ.


ಕಾರ್ಯಕಾರಿ ಸಮಿತಿ ಸದಸ್ಯರು : ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ಎ. ಪ್ರವೀಣ್ ಉಪಾಧ್ಯ, ಕೆ. ಜೆ. ಕೃಷ್ಣ, ಮಂಜುನಾಥ ತೆಂಕಿಲ್ಲಾಯ, ವಸಂತ ಪಾಲನ್, ಸುನಿಲ್ ಕುಮಾರ್, ಕೆ. ಜೆ. ಸುಧೀಂದ್ರ, ರಮೇಶ ಸಾಲಿಯಾನ್, ಜಯ ಕೆ.


ವಿಶೇಷ ಆಹ್ವಾನಿತರು : ಎಸ್. ವಿ. ಭಟ್, ವಿಜಯ್‌ಕುಮಾರ್, ವಿದ್ಯಾಪ್ರಸಾದ್, ಮಾಧವ ಕೆ., ಪ್ರಶಾಂತ್ ಕೆ. ಎಸ್., ಅರವಿಂದ ಆಚಾರ್ಯ, ದೀಪ್ತ ಆಚಾರ್ಯ, ಎ. ಸತ್ಯಜಿತ್ ಉಪಾಧ್ಯ, ರಮ್ಯ ಮಲ್ಪೆ, ವಾರಿಜ ಮಲ್ಪೆ, ವಾಗೀಶ ರಾವ್.


ಕಾರ್ಯದರ್ಶಿ ಪ್ರಕಾಶ್ ಹೆಬ್ಬಾರ್ ಧನ್ಯವಾದ ಸಮರ್ಪಿಸಿದರು.