ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದಲ್ಲಿ ದಿನಾಂಕ 15.09.2024ನೇ ಆದಿತ್ಯವಾರ ಸಂಜೆ 4 ಘಂಟೆಗೆ ಸರಿಯಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಕರ್ಣಾರ್ಜುನ’ ಎಂಬ ಯಕ್ಷಗಾನ ತಾಳಮದ್ದಳೆ ನಡೆಯಲಿದೆ.
ಸಿರಿಬಾಗಿಲು ಪ್ರತಿಷ್ಠಾನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಕೆ.ಎಂ .ಸಿ .ಆಸ್ಪತ್ರೆ ಅತ್ತಾವರ ಮಂಗಳೂರು ಇವರಿಂದ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನದಲ್ಲಿ ದಿನಾಂಕ 14- 09- 2024 ನೇ ಶನಿವಾರದಂದು ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.
ಸಿರಿಬಾಗಿಲು ಪ್ರತಿಷ್ಠಾನದಿಂದ ಕೆ.ಎಂ.ಸಿ .ಆಸ್ಪತ್ರೆ ಅತ್ತಾವರ ಇವರ ಎರಡನೇ ವೈದ್ಯಕೀಯ ಶಿಬಿರವಾಗಿರುತ್ತದೆ. ಈ ಶಿಬಿರವನ್ನು ಕಾಸರಗೋಡಿನ ಹಿರಿಯ ವೈದ್ಯರಾದಂತಹ ಡಾಕ್ಟರ್ ಬಿ. ಎಸ್. ರಾವ್ ಅವರು ದೀಪ ಪ್ರಜ್ವಲನೆಯ ಮೂಲಕ ಉದ್ಘಾಟಿಸಿದರು .
ಇಂತಹ ಶಿಬಿರಗಳು ಗ್ರಾಮೀಣ ಪ್ರದೇಶದಲ್ಲಿ ನಡೆದು ಬಡಬಗ್ಗರಿಗೆ ಇದರಿಂದ ಉಪಯೋಗವಾಗಬೇಕು. ಈ ಶಿಬಿರದ ಪ್ರಯೋಜನವನ್ನು ಎಲ್ಲರೂ ಪಡೆದುಕೊಳ್ಳಬೇಕು, ಸಿರಿಬಾಗಿಲು ಪ್ರತಿಷ್ಠಾನ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಇಂತಹ ಚಟುವಟಿಕೆ ನಡೆಸುತ್ತಿರುವುದು ಹೆಮ್ಮೆಯ ವಿಚಾರ ಎಂದರು.
ಕೆ.ಎಂ.ಸಿ.ಆಸ್ಪತ್ರೆಯ ಕ್ಯಾನ್ಸರ್ ತಜ್ಞರಾದಂತಹ ಡಾಕ್ಟರ್ ಅರವಿಂದ ಎನ್. ಅವರು ಕ್ಯಾನ್ಸರ್ ಕಾಯಿಲೆ ಬಗ್ಗೆ ಜಾಗೃತಿಗಾಗಿ ಮಾಹಿತಿಯನ್ನು ನೀಡಿದರು. ಮಧ್ಯಪಾನ ,ಗುಟ್ಕ ಸೇವನೆ, ಸಿಗರೇಟ್ ಸೇವನೆ ಇತ್ಯಾದಿ ದುಶ್ಚಟಗಳಿಂದ ಸಮಾಜದ ಎಲ್ಲರೂ ಮುಕ್ತರಾಗಬೇಕು ಎಂದರು. ಕ್ಯಾನ್ಸರ್ ಇಂದ ಯಾರು ಭಯಭೀತರಾಗಬೇಕಾಗಿಲ್ಲ. ಕ್ಯಾನ್ಸರ್ ಬಂದರೆ ಹೇಗೆ ಗುಣಪಡಿಸಬಹುದು? ಯಾವ ರೀತಿ ಜಾಗೃತಿ ವಹಿಸಬೇಕು ?ಇತ್ಯಾದಿ ವಿಚಾರಗಳನ್ನು ತೆರೆದಿಟ್ಟರು.
ಕಲಾ ವಲಯದ ಶ್ರೇಷ್ಠ ಸಂಸ್ಥೆ ಸಿರಿಬಾಗಿಲು ಪ್ರತಿಷ್ಠಾನ ಇಂತಹ ಚಟುವಟಿಕೆ ನಡೆಸುತ್ತಿರುವುದು ತಂಬಾ ಸಂತಸ ತಂದಿದೆ ಅಂದರು. ಶ್ರೀ ವಾಸುದೇವ ಕಾರಂತ ಉಜಿರೆಕೆರೆ, ಇ. ಕೆ. ನಾಯಿನಾರ್ ಹಾಸ್ಪಿಟಲ್ ನ ಎಲುಬು ತಜ್ಞರಾದ ಡಾ. ಹರಿ ಕಿರಣ ಬಂಗೇರ ಉಪಸ್ಥಿತರಿದ್ದರು.
ಶ್ರೀ ಜಗದೀಶ ಕೆ. ಕೂಡ್ಲು ನಿರೂಪಿಸಿದರೆ, ಚಂದ್ರಕಲಾ ನೀರಾಳ ವಂದಿಸಿದರು. ಪ್ರತಿಷ್ಠಾನದ ಅಧ್ಯಕ್ಷ ರಾಮಕೃಷ್ಣ ಮಯ್ಯ ಅತಿಥಿಗಳನ್ನು ಸ್ವಾಗತಿಸಿದರು. ಆ ಬಳಿಕ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇದರ ವೈದ್ಯಕೀಯ ಶಿಬಿರದ ಸಂಘಟಕ ಶ್ರೀ ಉದಯ ಭಟ್ ನೇತೃತ್ವದಲ್ಲಿ ಶಿಬಿರ ನಡೆಯಿತು.
150ಕ್ಕೂ ಹೆಚ್ಚು ಜನರಿಗೆ ಇದರಿಂದ ಪ್ರಯೋಜನ ಪಡೆಯುವಂತಾಯಿತು. ಪ್ರತಿಷ್ಠಾನದ ಟ್ರಸ್ಟಿ ಸುಮಿತ್ರಾ ಮಯ್ಯ, ಶ್ರೀ ಮುಖ ಮಯ್ಯ, ಶ್ರೀರಾಜ್ ಮಯ್ಯ, ಶಿವ ನಾರಾಯಣ ವಾಟ್ಸಾಪ್ ಬಳಗದ ಸದಸ್ಯರು ಸಹಕರಿಸಿದರು.ಊರಿನ ಪ್ರಮುಖರು ಭಾಗವಹಿಸಿದರು.
‘ಯಕ್ಷದೀಪ’ ಆನ್ ಲೈನ್ ಸುದ್ದಿ ಜಾಲತಾಣವು ಯಶಸ್ವಿ ಐದನೇ ವರ್ಷಕ್ಕೆ ಪದಾರ್ಪಣೆಗೊಂಡಿದೆ ಎಂದು ತಿಳಿಸಲು ಸಂತೋಷಪಡುತ್ತೇವೆ. ಈ ಸಂದರ್ಭದಲ್ಲಿ ನಮ್ಮೆಲ್ಲಾ ಓದುಗರಿಗೆ ಹೃತ್ಪೂರ್ವಕ ಕೃತಜ್ಞತೆಯನ್ನು ಅರ್ಪಿಸುತ್ತೇವೆ.
ಕೊರೊನಾ ಸಂದರ್ಭದಲ್ಲಿ ಬಂದ ಆರ್ಥಿಕ ಸಂಕಷ್ಟ ನಮ್ಮನ್ನು ಅನಿವಾರ್ಯವಾಗಿ ಪ್ರಿಂಟಿಂಗ್ ಮಾಧ್ಯಮದಿಂದ ಡಿಜಿಟಲ್ ಮಾಧ್ಯಮಕ್ಕೆ ದೂಡಿತು.
ಈ ಸಂದರ್ಭದಲ್ಲಿ ನಮ್ಮೆಲ್ಲಾ ಓದುಗರು ನಮ್ಮನ್ನು ಕೈಹಿಡಿದು ಪ್ರೋತ್ಸಾಹಿಸಿದರು. ಅವರಿಗೆ ಎಲ್ಲರಿಗೂ ಯಾವಾಗಲೂ ಕೃತಜ್ಞತೆಯ ಭಾವವನ್ನು ಹೊಂದಿರುತ್ತೇವೆ.
ಆದರೂ ಕೆಲವು ಮಂದಿ ಆ ಕಷ್ಟದ ಸನ್ನಿವೇಶದಲ್ಲಿ ಬೆನ್ನ ಹಿಂದೆ ಕುಹಕವಾಡಿದರು. ಆ ನೋವು ಹಾಗೆಯೇ ಉಳಿದಿದೆ. ಇನ್ನು ಕೆಲವರು ಈಗ ತಾವೂ ಡಿಜಿಟಲ್ ಮಾಧ್ಯಮಕ್ಕೆ ಮೊರೆಹೋಗಿದ್ದಾರೆ.
ಏನೇ ಇದ್ದರೂ ಓದುಗರ ಬೆಂಬಲ ಹೀಗೆಯೇ ಇರಲಿ ಎಂದು ಆಶಿಸುತ್ತಾ ಮುಂದುವರಿಯಲು ಸಹೃದಯಿ ಓದುಗರ ಪ್ರೋತ್ಸಾಹವನ್ನು ಸದಾ ಆಶಿಸುತ್ತೇವೆ.
ಆನ್ಲೈನ್ನಲ್ಲಿ ಸ್ನೇಹ ಬೆಳೆಸಿದ ವ್ಯಕ್ತಿಯೊಬ್ಬ 20 ದಿನಗಳ ಕಾಲ ಹುಡುಗಿಯೊಬ್ಬಳನ್ನು ಹೈದರಾಬಾದ್ ಹೋಟೆಲ್ ಕೊಠಡಿಯಲ್ಲಿ ಬೀಗ ಹಾಕಿ ದೌರ್ಜನ್ಯ ಎಸಗಿದ್ದಾನೆ.
ಶನಿವಾರ ಹೈದರಾಬಾದ್ ಪೊಲೀಸರ ವಿಭಾಗವಾದ “ಶೀ ತಂಡ” ಬಾಲಕಿಯನ್ನು ರಕ್ಷಿಸಿದ್ದು, 19 ವರ್ಷದ ಆರೋಪಿಯನ್ನು ಬಂಧಿಸಲಾಗಿದೆ.
ಆಕೆಯ ಪ್ರಸ್ತುತ ಸ್ಥಳವನ್ನು ತನ್ನ ಪೋಷಕರೊಂದಿಗೆ ವಾಟ್ಸಾಪ್ ಮೂಲಕ ಹಂಚಿಕೊಂಡ ನಂತರ ತೆಲಂಗಾಣದ ಭೈಂಸಾ ಪಟ್ಟಣದ ನಿವಾಸಿಯಾಗಿರುವ ವಿದ್ಯಾರ್ಥಿನಿಯನ್ನು ನಾರಾಯಣಗುಡಾದ ಹೋಟೆಲ್ನಿಂದ ಶೀ ಟೀಮ್ಸ್ ಹೈದರಾಬಾದ್ ರಕ್ಷಿಸಿದೆ.
20 ದಿನಗಳ ಕಾಲ ಇಲ್ಲಿನ ಹೋಟೆಲ್ ಕೋಣೆಯಲ್ಲಿ ಬಂಧಿಯಾಗಿದ್ದ 18 ವರ್ಷದ ವಿದ್ಯಾರ್ಥಿನಿಯೊಬ್ಬಳನ್ನು ಆನ್ಲೈನ್ನಲ್ಲಿ ಸ್ನೇಹ ಬೆಳೆಸಿದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಹೈದರಾಬಾದ್ ಪೊಲೀಸ್ ವಿಭಾಗವಾದ “SHE ಟೀಮ್ಸ್” ರಕ್ಷಿಸಿದೆ.
ಶನಿವಾರ ಬಾಲಕಿಯನ್ನು ರಕ್ಷಿಸಲಾಗಿದ್ದು, 19 ವರ್ಷದ ಆರೋಪಿಯನ್ನು ಬಂಧಿಸಲಾಗಿದ್ದು, ಆತನ ವಿರುದ್ಧ ನಾರಾಯಣಗುಡ ಪೊಲೀಸ್ ಠಾಣೆಯಲ್ಲಿ ಬಿಎನ್ಎಸ್ನ ಸಂಬಂಧಿತ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಆರೋಪಿ ಬೆದರಿಕೆ ಹಾಕಿದರು ಮತ್ತು ಹೈದರಾಬಾದ್ಗೆ ಬರುವಂತೆ ಒತ್ತಾಯಿಸಿದರು ಮತ್ತು ಅವರು 20 ದಿನಗಳ ಕಾಲ ಹೋಟೆಲ್ ಕೊಠಡಿಯಲ್ಲಿ ಬೀಗ ಹಾಕಿದ್ದರು ಎಂದು ಸಂತ್ರಸ್ತೆ ಹೇಳಿದ್ದಾಳೆ, ಆಕೆ ತನ್ನ ಪ್ರಸ್ತುತ ಸ್ಥಳವನ್ನು ತ್ವರಿತ ಸಂದೇಶ ಅಪ್ಲಿಕೇಶನ್ ಮೂಲಕ ತನ್ನ ಪೋಷಕರಿಗೆ ಹಂಚಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
SHE ತಂಡಗಳು ನಾರಾಯಣಗುಡಾದಲ್ಲಿ ಬೀಗ ಹಾಕಲಾದ ಹೋಟೆಲ್ ಕೋಣೆಯಲ್ಲಿ ಬಾಲಕಿಯನ್ನು ಪತ್ತೆಹಚ್ಚಿ ಪತ್ತೆ ಹಚ್ಚಿ ಆಕೆಯನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೇವಾ ಭಾರತಿ ಜೋಡುಕಲ್ಲು ಇದರ ಆಶ್ರಯದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಅಂಗದ ಸಂಧಾನ – ಶರಸೇತು ಬಂಧನ’ ಎಂಬ ತಾಳಮದ್ದಳೆ ನಡೆಯಲಿದೆ.
ದಿನಾಂಕ 07-09.2024ನೇ ಶನಿವಾರ ಬೆಳಗ್ಗೆ 9.30ರಿಂದ ಈ ತಾಳಮದ್ದಳೆ ಆರಂಭವಾಗಲಿದೆ.
ದೂರದರ್ಶನದ ರಿಯಾಲಿಟಿ ಶೋ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಗಾಯಕಿ ದುರ್ಗಾ ವಿಶ್ವನಾಥ್ ಮತ್ತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಗುರುವಾಯೂರು ದೇವಸ್ಥಾನದಲ್ಲಿ ಸರಳ ಸಮಾರಂಭ ನಡೆದಿದ್ದು, ಕೇವಲ ಹತ್ತಿರದ ಸಂಬಂಧಿಕರು ಮತ್ತು ಸ್ನೇಹಿತರು ಮಾತ್ರ ಹಾಜರಿದ್ದರು.
ವರ ರಿಜು, ಕಣ್ಣೂರು ಮೂಲದವರಾಗಿದ್ದು, ಗುರುವಾಯೂರು ದೇವಸ್ವಂ ಉದ್ಯೋಗಿಯಾಗಿದ್ದಾರೆ. ದುರ್ಗಾ ಹಸಿರು ಬಣ್ಣದ ಕಾಂಜೀವರಂ ಸೀರೆಯನ್ನು ಧರಿಸಿ ಸರಳ, ಸೊಗಸಾಗಿ ಕಂಗೊಳಿಸುತ್ತಿದ್ದರು.
ದುರ್ಗಾ ಈ ಹಿಂದೆ ಉದ್ಯಮಿ ಡೆನ್ನಿಸ್ ಅವರನ್ನು ಮದುವೆಯಾಗಿದ್ದರು, ಅವರಿಗೆ ಮಗಳಿದ್ದಾಳೆ. ಕೆಲವು ವರ್ಷಗಳ ಹಿಂದೆ ದಂಪತಿಗಳು ಬೇರ್ಪಟ್ಟರು, ಆದರೂ ದುರ್ಗಾ ತಮ್ಮ ಪ್ರತ್ಯೇಕತೆಯ ಹಿಂದಿನ ಕಾರಣಗಳನ್ನು ಸಾರ್ವಜನಿಕವಾಗಿ ಚರ್ಚಿಸದಿರಲು ನಿರ್ಧರಿಸಿದರು.
ಐಡಿಯಾ ಸ್ಟಾರ್ ಸಿಂಗರ್ನ ಎರಡನೇ ಸೀಸನ್ನಲ್ಲಿ ರನ್ನರ್ ಅಪ್ ಆಗಿ ಖ್ಯಾತಿಗೆ ಏರಿದರು, ದುರ್ಗಾ ನಂತರ ಹಿನ್ನೆಲೆ ಗಾಯಕರಾಗಿ ಪರಿವರ್ತನೆಗೊಂಡರು, ಹಲವಾರು ಚಲನಚಿತ್ರಗಳ ಹಾಡುಗಳಿಗೆ ಧ್ವನಿ ನೀಡಿದರು.
19 ವರ್ಷದ ಕಾನೂನು ವಿದ್ಯಾರ್ಥಿನಿ ಅನಿಕಾ ರಸ್ತೋಗಿ ಅವರ ದೇಹವು ಲಕ್ನೋದ ಆಶಿಯಾನಾ ಪ್ರದೇಶದ ರಾಮ್ ಮನೋಹರ್ ಲೋಹಿಯಾ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯದ ಹಾಸ್ಟೆಲ್ ಕೋಣೆಯ ನೆಲದ ಮೇಲೆ ಬಿದ್ದಿರುವುದು ಪತ್ತೆಯಾಗಿದೆ.
ಮೂರನೇ ವರ್ಷದ ಎಲ್ಎಲ್ಬಿ ವಿದ್ಯಾರ್ಥಿನಿಯಾಗಿರುವ ಅನಿಕಾ, ಪ್ರಸ್ತುತ ದೆಹಲಿಯ ರಾಷ್ಟ್ರೀಯ ತನಿಖಾ ಸಂಸ್ಥೆಯಲ್ಲಿ (ಎನ್ಐಎ) ಇನ್ಸ್ಪೆಕ್ಟರ್ ಜನರಲ್ ಆಗಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ ಅಧಿಕಾರಿ ಸಂತೋಷ್ ರಸ್ತೋಗಿ ಅವರ ಪುತ್ರಿ.
ನಿನ್ನೆ ತಡರಾತ್ರಿ ಅನಿಕಾ ಹಾಸ್ಟೆಲ್ ಕೋಣೆಯಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣ ಆಕೆಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಕೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ಘೋಷಿಸಿದರು. ಆಕೆಯ ಸಾವಿಗೆ ಕಾರಣ ಅಸ್ಪಷ್ಟವಾಗಿದ್ದು, ಆಶಿಯಾನಾ ಪೊಲೀಸರು ತನಿಖೆ ಆರಂಭಿಸಿದ್ದಾರೆ
ಆರಂಭಿಕ ವರದಿಗಳ ಪ್ರಕಾರ, ಅನಿಕಾ ಕಳೆದ ರಾತ್ರಿ ತನ್ನ ಕೋಣೆಗೆ ಮರಳಿದ್ದಳು ಮತ್ತು ನಂತರ ಯಾವುದೇ ಕರೆಗಳಿಗೆ ಪ್ರತಿಕ್ರಿಯಿಸಲಿಲ್ಲ. ಆಕೆಯ ಮೌನದಿಂದ ಚಿಂತಿತರಾದ ಆಕೆಯ ಸ್ನೇಹಿತರು ಆಕೆಯ ಕೋಣೆಯ ಬಾಗಿಲು ಒಡೆದು ನೋಡಿದಾಗ ಆಕೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದನ್ನು ಕಂಡರು. ಕೊಠಡಿ ಒಳಗಿನಿಂದ ಲಾಕ್ ಆಗಿರುವುದನ್ನು ಪೊಲೀಸರು ಖಚಿತಪಡಿಸಿದ್ದು, ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.
ಅನಿಕಾಳ ಬಟ್ಟೆ ಹಾಗೇ ಇತ್ತು ಮತ್ತು ಆಕೆಯ ದೇಹದಲ್ಲಿ ಯಾವುದೇ ಗಾಯಗಳಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಸಾವಿಗೆ ಕಾರಣ ತಿಳಿಯಲು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯು ಸಂಶಯಾಸ್ಪದ ವ್ಯಕ್ತಿಗಳ ಸುಳಿವನ್ನು ನೀಡಬಹುದು ಎಂದು ನಿರೀಕ್ಷಿಸಲಾಗಿದೆ.
ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಮತ್ತು ಸಮೂಹ ಸಂಪನ್ಮೂಲ ಕೇಂದ್ರ ಕುಂಬ್ರ ಇವರ ಜಂಟಿ ಆಶ್ರಯದಲ್ಲಿ ಕುಂಬ್ರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯು ಆಗಸ್ಟ್ ರಂದು ಏಕತ್ತಡ್ಕ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ದರ್ಬೆತ್ತಡ್ಕ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದುಕೊಂಡು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಹಿರಿಯ ವಿಭಾಗದಲ್ಲಿ 7ನೇ ತರಗತಿಯ ಪ್ರತೀಕ್ಷಾ ಆಶುಭಾಷಣದಲ್ಲಿ ಪ್ರಥಮ, ಸಂಸ್ಕ್ರತ ಧಾರ್ಮಿಕ ಪಠಣದಲ್ಲಿ ತೃತೀಯ, 6ನೇ ತರಗತಿಯ ತೇಜಸ್ ಎಲ್.ಕೆ ದೇಶಭಕ್ತಿ ಗೀತೆಯಲ್ಲಿ ಪ್ರಥಮ, ಭಕ್ತಿಗೀತೆಯಲ್ಲಿ ತೃತೀಯ, 6ನೇ ತರಗತಿಯ ಜಲಜಾಕ್ಷಿ ಕನ್ನಡ ಕಂಠಪಾಠದಲ್ಲಿ ದ್ವಿತೀಯ, 5ನೇ ತರಗತಿಯ ಎಸ್. ತೇಜಸ್ ನಾಯ್ಕ್ ಮಿಮಿಕ್ರಿಯಲ್ಲಿ ದ್ವಿತೀಯ, 5ನೇ ತರಗತಿಯ ಲಕ್ಷ್ಮೀಶ ಕ್ಲೇ ಮಾಡೆಲಿಂಗ್ ನಲ್ಲಿ ತೃತೀಯ ಬಹುಮಾನ ಪಡೆದಿರುತ್ತಾರೆ.
ಹಾಗೂ ಕಿರಿಯ ವಿಭಾಗದಲ್ಲಿ 4ನೇ ತರಗತಿಯ ತಸ್ವಿನ್ ಆರ್.ಎಚ್ ಭಕ್ತಿಗೀತೆಯಲ್ಲಿ ಪ್ರಥಮ, ಇಂಗ್ಲೀಷ್ ಕಂಠಪಾಠದಲ್ಲಿ ತೃತೀಯ, 4ನೇ ತರಗತಿಯ ಜಾಹ್ನವಿ ಡಿ.ಜಿ. ಛದ್ಮವೇಷದಲ್ಲಿ ಪ್ರಥಮ, 3ನೇ ತರಗತಿಯ ದಿಶಾ.ಡಿ ಅಭಿನಯ ಗೀತೆಯಲ್ಲಿ ತೃತೀಯ, 4ನೇ ತರಗತಿಯ ರಂಜಿತ್ ಕುಮಾರ್ ಕ್ಲೇ ಮಾಡೆಲಿಂಗ್ ನಲ್ಲಿ ತೃತೀಯ,
4ನೇ ತರಗತಿಯ ಮನ್ವಿ.ಕೆ ಕಥೆ ಹೇಳುವುದರಲ್ಲಿ ತೃತೀಯ ಬಹುಮಾನ ಗಳಿಸಿದ್ದು, ಪ್ರಥಮ ಬಹುಮಾನ ಪಡೆದ ಪ್ರತೀಕ್ಷಾ, ತೇಜಸ್.ಎಲ್.ಕೆ, ತಸ್ವಿನ್ ಆರ್.ಎಚ್ ಮತ್ತು ಜಾಹ್ನವಿ ಡಿ.ಜಿ. ಇವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿರುತ್ತಾರೆ ಎಂದು ದರ್ಬೆತ್ತಡ್ಕ ಶಾಲಾ ಪ್ರಭಾರ ಮುಖೋಪಾಧ್ಯಾಯರಾದ ಶ್ರೀ ರಾಜು ಇವರು ತಿಳಿಸಿದ್ದಾರೆ.