Wednesday, March 11, 2026
Home Blog Page 46

ಮಂಗಳೂರು ವಿವಿ ಯಕ್ಷಮಂಗಳ ಪ್ರಶಸ್ತಿ ಪ್ರಕಟ: ಶ್ರೀಧರ ಹಂದೆ, ಎಂ.ಕೆ.ರಮೇಶ್ ಆಚಾರ್ಯ ಅವರಿಗೆ ಯಕ್ಷಮಂಗಳ ಪ್ರಶಸ್ತಿ, ರಾಧಾಕೃಷ್ಣ ಕಲ್ಚಾರ್ ಅವರ ‘ಪೀಠಿಕಾ ಪ್ರಕರಣ’ ಗ್ರಂಥಕ್ಕೆ ಕೃತಿ ಪ್ರಶಸ್ತಿ

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23 ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ ಹಾಗೂ ತೆಂಕು ಮತ್ತು ಬಡಗುತಿಟ್ಟಿನ ಹಿರಿಯ ಸ್ತ್ರೀವೇಷ ಕಲಾವಿದ ಎಂ.ಕೆ.ರಮೇಶ್ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ.

ಯಕ್ಷಮಂಗಳ ಕೃತಿ ಪ್ರಶಸ್ತಿಗೆ ರಾಧಾಕೃಷ್ಣ ಕಲ್ಚಾರ್ ಅವರ ‘ಪೀಠಿಕಾ ಪ್ರಕರಣ’ ಕೃತಿಯು ಆಯ್ಕೆಯಾಗಿದೆ.
ಯಕ್ಷಮಂಗಳ ಪ್ರಶಸ್ತಿಯು 25,000 ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಸನ್ಮಾನಗಳನ್ನೊಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು 10,000 ನಗದು, ಪ್ರಶಸ್ತಿ, ಸ್ಮರಣಿಕೆಗಳನ್ನು ಒಳಗೊಂಡಿದೆ.

ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರ ನೇತೃತ್ವದಲ್ಲಿ ಪ್ರೊ.ಪಾದೆಕಲ್ಲು ವಿಷ್ಣುಭಟ್ , ಯಕ್ಷಗಾನ ಸಂಘಟಕರ ಮುರಲೀ ಕಡೇಕಾರ್ ಹಾಗೂ ಕೇಂದ್ರದ ನಿರ್ದೇಶಕರಾದ ಡಾ.ಧನಂಜಯ ಕುಂಬ್ಳೆ ಅವರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ‌ ಸಭೆಯಲ್ಲಿ ಈ ಹೆಸರುಗಳನ್ನು ಸರ್ವಾನುಮತದಿಂದ ಶಿಫಾರಸು ಮಾಡಲಾಯಿತು.

ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಯಕ್ಷಮಂಗಳ ಪ್ರಶಸ್ತಿ ಪ್ರದಾನ‌ ಮಾಡಲಾಗುವುದು ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿ ವಿಜೇತರ ಪರಿಚಯ

ಶ್ರೀಧರ ಹಂದೆ:
ಬಡಗುತಿಟ್ಟು ಯಕ್ಷಗಾನ ಕ್ಷೇತ್ರದಲ್ಲಿ ಹಿರಿಯ ಕಲಾವಿದರಾಗಿ,‌ ಯಕ್ಷಗಾನ ಸಂಘಟಕರಾಗಿ ಗುರುತಿಸಿರುವ ಶ್ರೀಧರ ಹಂದೆಯವರು ಮಕ್ಕಳ ಯಕ್ಷಗಾನ ಮೇಳವೆಂಬ ಪರಿಕಲ್ಪನೆಯನ್ನು ಮೊಟ್ಟ ಮೊದಲ ಬಾರಿ ಸಾಕಾರಗೊಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಉಪನ್ಯಾಸಕರಾಗಿ, ಮುಖ್ಯೋಪಧ್ಯಾಯರಾಗಿ ಸೇವೆ ಸಲ್ಲಿಸಿದ ಇವರು 1991ರಲ್ಲಿ ರಾಷ್ಟ್ರಪತಿ ಶಂಕರ್ ದಯಾಳ್ ಶರ್ಮರವರಿಂದ ಅತ್ಯುತ್ತಮ ಶಿಕ್ಷಕ ರಾಷ್ಟ್ರಪತಿಯನ್ನು ಪಡೆದಿರುತ್ತಾರೆ. ಮಕ್ಕಳಿಗೆ ಯಕ್ಷಕಲೆಯನ್ನು ಶಾಸ್ತ್ರೀಯವಾಗಿ ತರಬೇತಿ ನೀಡಿದ್ದಾರೆ. ಭಾರತ ಮಾತ್ರವಲ್ಲ ಅಮೇರಿಕಾ, ಬೆಹರೈನ್, ಲಂಡನ್, ಮೆಂಚೆಸ್ಟರ್ ಮುಂತಾದೆಡೆ ಪ್ರದರ್ಶನ ನೀಡುವ ಮೂಲಕ ಯಕ್ಷಗಾನವನ್ನು ವಿಶ್ವವ್ಯಾಪಿಗೊಳಿಸಲು ಶ್ರಮಿಸಿದವರು.

ಕಳೆದ 43 ವರ್ಷಗಳಲ್ಲಿ 2000ಕ್ಕೂ ಮಿಕ್ಕಿ ಮಕ್ಕಳ ಯಕ್ಷ ಪ್ರದರ್ಶನ ನೀಡಿದ ಕೀರ್ತಿ ಇವರದ್ದು. ಯಕ್ಷಗಾನ ಭಾಗವತ, ಗಮಕಿ, ಕವಿ, ನಟ-ನಿರ್ದೆಶಕ, ನಾಟಕಕಾರ, ಸಂಘಟಕನಾಗಿಯೂ ಗುರುತಿಸಿಕೊಂಡಿರುವ ಇವರು ಯಕ್ಷಗಾನ ಕ್ಷೇತ್ರಕ್ಕೆ ಅನನ್ಯ ಕೊಡುಗೆ ನೀಡಿದ್ದಾರೆ.

ಎಂ.ಕೆ.ರಮೇಶ್ ಆಚಾರ್ಯ:

ತೆಂಕು ಹಾಗೂ ಬಡಗುತಿಟ್ಟು ಯಕ್ಷಗಾನ ರಂಗದ ಸರ್ವ ಸಮರ್ಥ ಸ್ತ್ರೀವೇಷ ಕಲಾವಿದರಾಗಿರುವ ಎಂ.ಕೆ.ರಮೇಶ್ ಆಚಾರ್ಯ ಅವರು ಯಕ್ಷಗಾನ ತಾಳಮದ್ದಳೆಯ ಅರ್ಥಧಾರಿ, ಯಕ್ಷಗುರು, ಪ್ರಸಂಗಕರ್ತರಾಗಿಯೂ ಗುರುತಿಸಿದ್ದಾರೆ.

ಸಾಂಪ್ರದಾಯಿಕ ನೆಲೆಯಲ್ಲಿಯೇ ಪೌರಾಣಿಕ ಪಾತ್ರಗಳನ್ನು ಯಕ್ಷಗಾನ ರಂಗಭೂಮಿಯಲ್ಲಿ ಪ್ರದರ್ಶಿಸುವ. ಎಂ.ಕೆ‌.ಆಚಾರ್ಯ ಅವರು ಸ್ತ್ರೀಪಾತ್ರಕೊಪ್ಪುವ ರೂಪ, ಮಧುರ ಕಂಠ, ಆಂಗಿಕ ಲಾಲಿತ್ಯ, ಪ್ರಗಲ್ಭ ಪಾಂಡಿತ್ಯ, ಸಶಕ್ತ ರಂಗನಡೆಯೊಂದಿಗೆ ಸ್ತ್ರೀಪಾತ್ರಧಾರಿಯಾಗಿ ಜನಮೆಚ್ಚುಗೆ ಗಳಿಸಿದ್ದರು.

ಮಂದಾರ್ತಿ, ಧರ್ಮಸ್ಥಳ, ಸುರತ್ಕಲ್, ಸಾಲಿಗ್ರಾಮ, ಸೌಕೂರು, ಪೆರ್ಡೂರು, ಮಂಗಳಾದೇವಿ ಮೇಳಗಳಲ್ಲಿ ಹಲವು ದಶಕಗಳ ಕಾಲ ಸೇವೆ ಸಲ್ಲಿಸಿದ್ದಾರೆ. ಇವರ ಚಂದ್ರಮತಿ, ದ್ರೌಪದಿ, ರುಕ್ಮಿಣಿ, ಶಾಂತಲೆ, ಸೀತೆ, ಮೇನಕೆ, ಸೈರೇಂದ್ರಿ ಮೊದಲಾದ ಸ್ತ್ರೀಪಾತ್ರಗಳು ಕಲಾರಸಿಕರ ಮನೆಗೆದ್ದಿವೆ. ಉತ್ತಮ ಅರ್ಥಧಾರಿಯಾಗಿ, ಪ್ರಸಂಗಕರ್ತರಾಗಿಯೂ ಗುರುತಿಸಿಕೊಂಡಿರುವ ಇವರು ಅನೇಕ ವಿದ್ಯಾರ್ಥಿಗಳಿಗೆ ಯಕ್ಷ ಶಿಕ್ಷಣವನ್ನೂ ನೀಡಿ ಯಕ್ಷಗಾನ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ಕಲಾವಿದರಾಗಿದ್ದಾರೆ.

‘ಪೀಠಿಕಾ ಪ್ರಕರಣ’ ಗ್ರಂಥ:

ಖ್ಯಾತ ಅರ್ಥಧಾರಿ ಹಾಗೂ ಲೇಖಕರಾಗಿರುವ ರಾಧಾಕೃಷ್ಣ ಕಲ್ಚಾರ್ ಅವರು ಈಗಾಗಲೇ ಪರಕಾಯ ಪ್ರವೇಶ, ಉಲಿಯ ಉಯ್ಯಾಲೆ, ಅರ್ಥಾಲೋಕ ಮೊದಲಾದ ಕೃತಿಗಳ ಮೂಲಕ ಪ್ರಸಿದ್ಧರಾಗಿದ್ದು ‘ಪೀಠಿಕಾ ಪ್ರಕರಣ’ ಇವರ ಇತ್ತೀಚೆಗಿನ ಒಂದು ಅಪೂರ್ವ ಕೃತಿಯಾಗಿದೆ.

ಇದರಲ್ಲಿ ಮೂವತ್ತೆಂಟು ಪ್ರಸಂಗಗಲ್ಲಿ ಬರುವ ಆಯ್ದ ನೂರನಲ್ವತ್ತು ಪಾತ್ರಗಳ ಈ ಪೀಠಿಕೆ ಯಕ್ಷಗಾನ ಅರ್ಥಧಾರಿಗಳಿಗೆ ಮತ್ತು ವೇಷಧಾರಿಗಳಿಗೆ ಕೈ ದೀವಿಗೆಯಾಗಿದೆ. ಯಕ್ಷಗಾನ ಅರ್ಥಗಾರಿಕೆಯ ಮೌಲಿಕ ಸಂಗತಿಗಳನ್ನು, ವಿಶಿಷ್ಟ ಶಕ್ತಿ ಸಾಮರ್ಥ್ಯವನ್ನು ಕಲ್ಚಾರ್ ಅವರು ಈ ಪೀಠಿಕೆಗಳಲ್ಲಿ ನಿರೂಪಿಸಿದ್ದಾರೆ.

ಕೂಡುಮನೆ – ಕಿರು ಕಾದಂಬರಿ 

‘ಕೂಡುಮನೆ’ (ಕಿರು ಕಾದಂಬರಿ) ಎಂಬ ಈ ಕೃತಿಯು ಮೊದಲು ಪ್ರಕಟಗೊಂಡು ಓದುಗರ ಕೈ ಸೇರಿದ್ದು 1994ರಲ್ಲಿ. 2023ರಲ್ಲಿ ಈ ಪುಸ್ತಕವು ಮರು ಮುದ್ರಣಗೊಂಡು ಸಾಹಿತ್ಯಾಸಕ್ತರಿಗೆ ದೊರಕಿದೆ ಎಂಬುದು ಸಂತೋಷದ ವಿಚಾರ.

ನಿವೃತ್ತ ಉಪಾನ್ಯಾಸಕರೂ ಲೇಖಕರೂ, ತಾಳಮದ್ದಳೆ ಕ್ಷೇತ್ರದ ಹಿರಿಯ ಅರ್ಥಧಾರಿಗಳೂ ಆಗಿರುವ ಶ್ರೀ ರಾಧಾಕೃಷ್ಣ ಕಲ್ಚಾರ್ ಅವರು ಬರೆದ ಹೊತ್ತಗೆಯಿದು. ಕೂಡುಮನೆ ಎಂಬ ಈ ಕಿರು ಕಾದಂಬರಿಯು ಇಪ್ಪತ್ತೆಂಟು ವರ್ಷಗಳ ಹಿಂದೆ ಅನಂತ ಪ್ರಕಾಶ ಸಂಸ್ಥೆಯು ರಾಜ್ಯಮಟ್ಟದಲ್ಲಿ ಏರ್ಪಡಿಸಿದ ಕಾದಂಬರಿ ಸ್ಪರ್ಧೆಯಲ್ಲಿ ಮೊದಲ ಬಹುಮಾನ ಗಳಿಸಿತ್ತು.

ಮೊದಲ ಮುದ್ರಣದ ಪ್ರತಿಗಳೆಲ್ಲಾ ಬಹುಬೇಗನೆ ಓದುಗರ ಕೈಸೇರಿತ್ತು. ಸಾಹಿತ್ಯಾಸಕ್ತರ ಅಪೇಕ್ಷೆಯಂತೆ ಈಗ ಮರು ಮುದ್ರಣಗೊಂಡಿದೆ. ‘ವಿಜ್ಞಾಪನೆ’ ಎಂಬ ಶೀರ್ಷಿಕೆಯಡಿಯಲ್ಲಿ ಲೇಖಕ ಶ್ರೀ ರಾಧಾಕೃಷ್ಣ ಕಲ್ಚಾರ್ ಇವರು ತಮ್ಮ ಅನಿಸಿಕೆಗಳನ್ನು ತಿಳಿಸಿರುತ್ತಾರೆ.

‘ಕೂಡುಮನೆ’ಲಿ  ನಾಂದಿ’ ಎಂಬ ಶೀರ್ಷಿಕೆಯಡಿಯಲ್ಲಿ ಶ್ರೀ ಮುರಳೀಧರ ಉಪಾಧ್ಯ ಹಿರಿಯಡಕ ಅವರು ಮುನ್ನುಡಿಯನ್ನು ಬರೆದಿರುತ್ತಾರೆ. ಪ್ರಕಾಶಕ ಶ್ರೀ ಸಚ್ಚಿದಾನಂದ ಉಡುಪರು ತಮ್ಮ ಅನಿಸಿಕೆಗಳನ್ನು ತಿಳಿಸಿರುತ್ತಾರೆ.

ಇದು ಒಟ್ಟು ಎಪ್ಪತ್ತು ಪುಟಗಳನ್ನು ಹೊಂದಿದ ಕೃತಿ. ಈ ಪುಸ್ತಕದ ಮುದ್ರಕರು ಅನಂತ ಪ್ರಕಾಶ ಮುದ್ರಣಾಲಯ ಕಿನ್ನಿಗೋಳಿ. ಬೆಲೆ ರೂಪಾಯಿ ಎಪ್ಪತ್ತು ಮಾತ್ರ. ಮುಖಪುಟ ವಿನ್ಯಾಸಕರು ಶ್ರೀ ದಿನೇಶ ಹೊಳ್ಳ ಮಂಗಳೂರು. ಈ ಕೃತಿಯು ಐದು ಅಧ್ಯಾಯವನ್ನು ಒಳಗೊಂಡಿದೆ. ಲೇಖಾಕರಿಗೆ ಯಕ್ಷದೀಪ ವತಿಯಿಂದ ಅಭಿನಂದನೆಗಳು. 

ಶ್ರೀ ರಾಧಾಕೃಷ್ಣ ಕಲ್ಚಾರ್ ಅವರ ಇತರ ಕೃತಿಗಳು. 

೧. ಅವರವರ ದಾರಿ ಮತ್ತು ಇತರ ಕಥೆಗಳು (ಕಥಾ ಸಂಕಲನ)

೨. ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ (ವ್ಯಕ್ತಿ ಚಿತ್ರ)

೩. ಪರಕಾಯ ಪ್ರವೇಶ (ಪುರಾಣ ಪಾತ್ರ ಕಥನ)

೪. ಪರಕಾಯ ಪ್ರವೇಶ  – ಭಾಗ ೨

೫. ಆ ಲೋಚನ (ಅಂಕಣ ಲೇಖನಗಳು)

೬. ಅರ್ಥಾಲೋಕ (ತಾಳಮದ್ದಳೆಯೆಂಬ ರಂಗಭೂಮಿಯ ಕುರಿತು)

೭. ಉಲಿಯ ಉಯ್ಯಾಲೆ (ತಾಳಮದ್ದಳೆಯ ಅನುಭವ ಕಥನ)

೮. ಪೀಠಿಕಾ ಪ್ರಕರಣ (ಪುರಾಣ ಪಾತ್ರಗಳ ಆತ್ಮನಿವೇದನೆ)

೯. ತಲ್ಲಣಿಸದಿರು ಮನವೆ (ನೆಮ್ಮದಿಯ ಓದಿಗಾಗಿ ಲೇಖನಗಳು)

ರಾಧಾಕೃಷ್ಣ ಕಲ್ಚಾರ್ , ‘ನಿವೇಶ’, 4/27, ಶಿವಾಜಿನಗರ, ಅಂಚೆ ವಿಟ್ಲ, – 54143, ಬಂಟ್ವಾಳ ತಾಲೂಕು, ದ.ಕ, ಮೊಬೈಲ್ : 9449086653

ಬೆಂಗಳೂರಿನ ದಂಪತಿಗೆ ಅಮೆಜಾನ್ ಪಾರ್ಸೆಲ್ ನಲ್ಲಿ ನಾಗರಹಾವು! ವೀಡಿಯೋ ನೋಡಿ

ಅಮೆಜಾನ್ ಆ್ಯಪ್‌ನಿಂದ ಆನ್‌ಲೈನ್‌ನಲ್ಲಿ ಆರ್ಡರ್ ಮಾಡಿದ ಪ್ಯಾಕೇಜ್‌ನಲ್ಲಿ ಹಾವು ಕಂಡು ಬೆಂಗಳೂರಿನ ದಂಪತಿಗಳು ಬೆಚ್ಚಿಬಿದ್ದಿದ್ದಾರೆ.

ದಂಪತಿಗಳು, ಇಬ್ಬರೂ ಸಾಫ್ಟ್‌ವೇರ್ ಇಂಜಿನಿಯರ್‌ಗಳು, ಆನ್‌ಲೈನ್‌ನಲ್ಲಿ ಎಕ್ಸ್‌ಬಾಕ್ಸ್ ನಿಯಂತ್ರಕವನ್ನು ಆರ್ಡರ್ ಮಾಡಿದ್ದರು ಆದರೆ ತಮ್ಮ ಪ್ಯಾಕೇಜ್‌ನಲ್ಲಿ ನಾಗರಹಾವನ್ನು ನೋಡಿ ಆಘಾತಕ್ಕೊಳಗಾದರು.

ವಿಷಪೂರಿತ ಹಾವು ಅದೃಷ್ಟವಶಾತ್ ಪ್ಯಾಕೇಜಿಂಗ್ ಟೇಪ್‌ಗೆ ಅಂಟಿಕೊಂಡಿತ್ತು ಮತ್ತು ಹಾನಿ ಮಾಡಲು ಸಾಧ್ಯವಾಗಲಿಲ್ಲ.
ದಂಪತಿಗಳು ವಿಡಿಯೋ ರೆಕಾರ್ಡ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಾವು Amazon ನಿಂದ 2 ದಿನಗಳ ಹಿಂದೆ Xbox ನಿಯಂತ್ರಕವನ್ನು ಆರ್ಡರ್ ಮಾಡಿದ್ದೇವೆ ಮತ್ತು ಪ್ಯಾಕೇಜ್‌ನಲ್ಲಿ ಜೀವಂತ ಹಾವನ್ನು ಕಂಡೆವು.

ವಿತರಣಾ ಪಾಲುದಾರರಿಂದ ಪ್ಯಾಕೇಜ್ ಅನ್ನು ನೇರವಾಗಿ ನಮಗೆ ಹಸ್ತಾಂತರಿಸಲಾಗಿದೆ (ಹೊರಗೆ ಬಿಡಲಾಗಿಲ್ಲ). ನಾವು ಸರ್ಜಾಪುರ ರಸ್ತೆಯಲ್ಲಿ ವಾಸಿಸುತ್ತಿದ್ದೇವೆ ಮತ್ತು ಇಡೀ ಘಟನೆಯನ್ನು ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದೇವೆ, ಜೊತೆಗೆ ನಮ್ಮಲ್ಲಿ ಪ್ರತ್ಯಕ್ಷದರ್ಶಿಗಳು ಇದ್ದಾರೆ, ”ಎಂದು ಗ್ರಾಹಕರು ಹೇಳಿದರು.

“ನಾವು ಸಂಪೂರ್ಣ ಮರುಪಾವತಿಯನ್ನು ಸ್ವೀಕರಿಸಿದ್ದೇವೆ, ಆದರೆ ಇಲ್ಲಿ ಹೆಚ್ಚು ವಿಷಪೂರಿತ ಹಾವಿನೊಂದಿಗೆ ನಮ್ಮ ಜೀವವನ್ನು ಅಪಾಯಕ್ಕೆ ಒಳಪಡಿಸಲು ನಾವು ಏನು ಪಡೆಯುತ್ತೇವೆ? ಇದು ಸ್ಪಷ್ಟವಾಗಿ ಅಮೆಜಾನ್‌ನ ನಿರ್ಲಕ್ಷ್ಯ ಮತ್ತು ಅವರ ಕಳಪೆ ಸಾರಿಗೆ/ಗೋದಾಮಿನ ನೈರ್ಮಲ್ಯ ಮತ್ತು ಮೇಲ್ವಿಚಾರಣೆಯಿಂದ ಉಂಟಾದ ಸುರಕ್ಷತಾ ಉಲ್ಲಂಘನೆಯಾಗಿದೆ. ಹೊಣೆಗಾರಿಕೆ ಎಲ್ಲಿದೆ ಸುರಕ್ಷತೆಯಲ್ಲಿ ಅಂತಹ ಗಂಭೀರ ಲೋಪವೇ?” ಎಂದು ದಂಪತಿಗಳು ಪ್ರಶ್ನಿಸಿದರು.

ಗ್ರಾಹಕರ ವೀಡಿಯೊಗೆ ಪ್ರತಿಕ್ರಿಯಿಸಿದ ಕಂಪನಿಯು ಟ್ವೀಟ್ ಮಾಡಿದೆ, “ಅಮೆಜಾನ್ ಆರ್ಡರ್‌ನಲ್ಲಿ ನೀವು ಹೊಂದಿರುವ ಅನಾನುಕೂಲತೆಯ ಬಗ್ಗೆ ತಿಳಿದು ನಾವು ವಿಷಾದಿಸುತ್ತೇವೆ. ಇದನ್ನು ಪರಿಶೀಲಿಸಲು ನಾವು ಬಯಸುತ್ತೇವೆ. ದಯವಿಟ್ಟು ಅಗತ್ಯವಿರುವ ವಿವರಗಳನ್ನು ಇಲ್ಲಿ ಹಂಚಿಕೊಳ್ಳಿ, ಮತ್ತು ನಮ್ಮ ತಂಡವು ನಿಮ್ಮನ್ನು ಸಂಪರ್ಕಿಸುತ್ತದೆ.” ಎಂದು ಅಮೆಜಾನ್ ಹೇಳಿದೆ.

ಹಾವನ್ನು ಜನಸಂಚಾರ ಇಲ್ಲದ ಸುರಕ್ಷಿತ ಸ್ಥಳಕ್ಕೆ ಬಿಡಲಾಗಿದೆ.

ಮಾಜಿ ಗೆಳತಿಯನ್ನು ಸ್ಪ್ಯಾನರ್‌ನಿಂದ ಹೊಡೆದು ಕೊಂದ ಯುವಕ – “ನೀನು ನನಗೆ ಯಾಕೆ ಹೀಗೆ ಮೋಸ ಮಾಡಿದೆ?” ಎಂದು ಹೇಳುತ್ತಾ ಸಾಯುವವರೆಗೂ ಹೊಡೆದ ಕ್ರೂರಿ


ರೋಹಿತ್ ಯಾದವ್, ತನ್ನ ಮಾಜಿ ಗೆಳತಿ ಆರತಿ ಯಾದವ್ ತನಗೆ ಮೋಸ ಮಾಡಿ ಹೊಸ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ, ಸ್ಪ್ಯಾನರ್‌ನಿಂದ ಅವಳು ಸಾಯುವವರೆಗೂ ಅವಳ ಮೇಲೆ ಹೊಡೆತಗಳ ಮಳೆಗರೆದರು, ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಮುಂಬೈ ಬಳಿಯ ಜನನಿಬಿಡ ರಸ್ತೆಯೊಂದರಲ್ಲಿ 20 ವರ್ಷದ ಯುವಕನೊಬ್ಬ ತನ್ನ ಮಾಜಿ ಗೆಳತಿಯನ್ನು ಸ್ಪ್ಯಾನರ್‌ನಿಂದ ಹೊಡೆದು ಕೊಂದಿದ್ದಾನೆ, ಅವನನ್ನು ತಡೆಯಲು ಏನೂ ಮಾಡದ ಜನಸಮೂಹವು ಸುತ್ತುವರಿದಿರುವುದನ್ನು ವೀಡಿಯೋದಲ್ಲಿ ಕಾಣಬಹುದು.

ರೋಹಿತ್ ಯಾದವ್, ತನ್ನ ಮಾಜಿ ಆರತಿ ಯಾದವ್ ಹೊಸ ಸಂಬಂಧಕ್ಕೆ ತೆರಳಿದ್ದಾಳೆ ಎಂದು ಶಂಕಿಸಿ, ಸ್ಪ್ಯಾನರ್‌ನಿಂದ ಅವಳು ಸಾಯುವವರೆಗೂ ಅವಳ ಮೇಲೆ ಹೊಡೆತಗಳ ಮಳೆಗರೆದನು,

ಆರತಿ ಯಾದವ್ ಕೆಲಸಕ್ಕೆ ಹೋಗುತ್ತಿದ್ದಾಗ ವಸೈನ ಪೂರ್ವ ಚಿಂಚ್‌ಪಾಡಾ ಪ್ರದೇಶದಲ್ಲಿ ಬೆಳಿಗ್ಗೆ 8:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. 

ರೋಹಿತ್ ಯಾದವ್ ಅವಳ ಹಿಂದೆ ಓಡಿ ಬಂದು ಸ್ಪ್ಯಾನರ್‌ನಿಂದ ತಲೆಗೆ ಹೊಡೆದಾಗ ಆರತಿ ಪಾದಚಾರಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಅತ್ಯಂತ ಗೊಂದಲದ ಭದ್ರತಾ ದೃಶ್ಯಗಳು ತೋರಿಸುತ್ತವೆ. ಹೊಡೆತದ ಬಲವು ಅವಳನ್ನು ನೆಲಕ್ಕೆ ಬೀಳುವಂತೆ ಮಾಡುತ್ತದೆ. ಅವಳು ತನ್ನ ತಲೆಯನ್ನು ಎತ್ತಲು ಪ್ರಯತ್ನಿಸುತ್ತಿರುವಾಗ

ಒಬ್ಬ ವ್ಯಕ್ತಿ ರೋಹಿತ್‌ನನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ನೋಡಲಾಗುತ್ತದೆ, ಅವನು ಅವನನ್ನು ದೂರ ತಳ್ಳುತ್ತಾನೆ ಮತ್ತು ಸ್ಪ್ಯಾನರ್‌ನಿಂದ ಬೆದರಿಕೆ ಹಾಕುತ್ತಾನೆ.  ಮನುಷ್ಯನು ಹಿಂತಿರುಗುತ್ತಾನೆ, ಮತ್ತು ಉನ್ಮಾದದ ​​ಆಕ್ರಮಣವನ್ನು ತಡೆಯಲು ಬೇರೆ ಯಾರೂ ಪ್ರಯತ್ನಿಸುವುದಿಲ್ಲ.

ನೋಡುಗರು ರೆಕಾರ್ಡ್ ಮಾಡಿದ ಮತ್ತೊಂದು ವೀಡಿಯೊದಲ್ಲಿ, ರೋಹಿತ್ ಮಹಿಳೆಯ ದೇಹದ ಮೇಲೆ ನಿಂತಿರುವುದು, ಸ್ಪ್ಯಾನರ್ ಅನ್ನು ಹಿಡಿದಿರುವುದು ಕಂಡುಬರುತ್ತದೆ.  ಅವನು ಅವಳ ಮುಖವನ್ನು ಹಿಡಿಯಲು ಕೆಳಗೆ ಬಾಗಿ ಶವದೊಂದಿಗೆ ಮಾತನಾಡಲು ಪ್ರಾರಂಭಿಸುತ್ತಾನೆ. “ನನಗೇಕೆ ಹೀಗೆ ಮಾಡಿದೆ, ಯಾಕೆ ಹೀಗೆ ಮಾಡಿದೆ?” ಮತ್ತೊಮ್ಮೆ ಅವಳನ್ನು ಹೊಡೆಯುವ ಮೊದಲು ಅವನು ಹಿಂದಿಯಲ್ಲಿ ಕಿರುಚುತ್ತಾನೆ. ನಂತರ ಅವನು ರಕ್ತಸಿಕ್ತ ಸ್ಪ್ಯಾನರ್ ಅನ್ನು ಪಕ್ಕಕ್ಕೆ ಎಸೆದು ಜನಸಂದಣಿಯತ್ತ ಹೊರನಡೆದನು.

ರೋಹಿತ್ ಯಾದವ್ ಅವರನ್ನು ಬಂಧಿಸಲಾಗಿದೆ ಮತ್ತು ಕೊಲೆ ಆರೋಪ ಹೊರಿಸಲಾಗುವುದು ಎಂದು ಪೊಲೀಸರು ಹೇಳುತ್ತಾರೆ.  ಆರತಿ ತಮ್ಮ ಸಂಬಂಧವನ್ನು ಕೊನೆಗೊಳಿಸಿದ್ದರಿಂದ ಅವನು ಅಸಮಾಧಾನಗೊಂಡಿದ್ದರು ಮತ್ತು ಅವಳು ಬೇರೊಬ್ಬರನ್ನು ಕಂಡುಕೊಂಡಿದ್ದಾರೆ ಎಂದು ಅವನು ಶಂಕಿಸಿದ್ದ.

ವೀಡಿಯೋ – ಉದ್ಘಾಟನೆಗೂ ಮುನ್ನವೇ ಕುಸಿದ ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ

ವೀಡಿಯೋ ದೃಶ್ಯಗಳು ಸೇತುವೆಯು, ವೇಗವಾಗಿ ಹರಿಯುವ ನದಿಯ ಮೇಲೆ, ಒಂದು ಬದಿಗೆ ವಾಲಿರುವುದನ್ನು ತೋರಿಸುತ್ತದೆ ಮತ್ತು ಸೇತುವೆಯ ಬಳಿ ದಡದಲ್ಲಿ ಜನಸಂದಣಿಯು ಜಮಾಯಿಸಿದಾಗ, ಅದು ಕುಸಿದ ಕ್ಷಣವನ್ನು ತೋರಿಸುತ್ತದೆ.

ಬಿಹಾರದ ಅರಾರಿಯಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಇಂದು ಕುಸಿದಿದೆ. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಸೆಕೆಂಡ್ ಗಳಲ್ಲಿ ಬೇರ್ಪಟ್ಟಿದೆ.

ಯಾವುದೇ ಗಾಯಗಳ ವರದಿಯಾಗಿಲ್ಲ.
ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣವನ್ನು ಸುಲಭಗೊಳಿಸಲು ಸೇತುವೆಯನ್ನು ನಿರ್ಮಿಸಲಾಗಿದೆ. ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದಿದೆ. 

ಸಿಕ್ತಿ ಶಾಸಕ ವಿಜಯ್ ಕುಮಾರ್ ಎಎನ್‌ಐಗೆ, “ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿದಿದೆ, ಆಡಳಿತವು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ.” ಎಂದು ಹೇಳಿದರು.

ಕುಸಿದ ಭಾಗವು ಸೆಕೆಂಡುಗಳಲ್ಲಿ ಕೊಚ್ಚಿಕೊಂಡುಹೋಯಿತು ಮತ್ತು ಜನರು ಸುರಕ್ಷತೆಯ ಸ್ಥಳದ ಕಡೆಗೆ ಓಡಲು ಪ್ರಾರಂಭಿಸಿದರು.

ಕುಸಿದ ಭಾಗದ ಹೆಚ್ಚಿನ ಭಾಗವನ್ನು ನದಿಯ ಮೇಲೆ ನಿರ್ಮಿಸಲಾಗಿದೆ. ಬಕ್ರಾ ನದಿಯ ದಡದಲ್ಲಿ ನಿರ್ಮಿಸಲಾದ ವಿಭಾಗವು ಹಾಗೆಯೇ ಉಳಿದಿದೆ. 

ಖ್ಯಾತ ತಾಳಮದ್ದಳೆ ಅರ್ಥಧಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ.ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ
ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು.

ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.

88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.

ಶೇಣಿ, ಸಾಮಗ, ಪೆರ್ಲ,ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.

ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ

ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ

ದಿನಾಂಕ 16.06.2024 ನೇ ಆದಿತ್ಯವಾರ ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ ಕಾರ್ಯಕ್ರಮ ಜರಗಲಿದೆ.

ಪೆರಿಯಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಭಾಂಗಣದಲ್ಲಿ ದಿನಾಂಕ 16.04.2024ರ ಆದಿತ್ಯವಾರದಂದು ಅಪರಾಹ್ನ 2 ಘಂಟೆಯಿಂದ ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ ಕಾರ್ಯಾಗಾರ ನಡೆಯಲಿದೆ.

ಕಲಾಭಿಮಾನಿಗಳನ್ನು ಸಂಘಟಕರು ಆದರದಿಂದ ಆಮಂತ್ರಿಸಿದ್ದಾರೆ.

ವಿವರಗಳಿಗೆ ಮೇಲಿನ ಚಿತ್ರವನ್ನು ನೋಡಿ.

ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ

0

ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ

ಯಕ್ಷಶಿಕ್ಷಣ ಟ್ರಸ್ಟ್( ರಿ) ಉಡುಪಿ ಕಳೆದ 17 ವರ್ಷಗಳಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡುತ್ತಿದ್ದು, ಈ ವರ್ಷ ಶಾಸಕರಾದ ಗುರುರಾಜ ಗಂಟಿಹೊಳೆಯವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ 11 ಶಾಲೆಗಳು ಸೇರಿ ಒಟ್ಟೂ 91 ಶಾಲೆಗಳಲ್ಲಿ ಯಕ್ಷಶಿಕ್ಷಣ ನಡೆಸಲು ಯೋಜಿಸಿದೆ.

ಈ ಪ್ರಯುಕ್ತ ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ 12.06.2024 ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದ ಹೊರಾಂಗಣದಲ್ಲಿ ಜರಗಿತು.

ಉಡುಪಿ ಕ್ಷೇತ್ರದ ಶಾಸಕ, ಟ್ರಸ್ಟ್ ನ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮಾತನಾಡಿ, ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯನಿರ್ವಹಣೆಯಲ್ಲಿ ಕಲಾರಂಗದ ಕಾರ್ಯಕರ್ತರ ದುಡಿಮೆ ದೊಡ್ಡದು, ನಾವೆಲ್ಲ ಒಟ್ಟಾಗಿ ಈ ಮಹಾಭಿಯನವನ್ನು ಯಶಸ್ವಿಯಾಗಿಸೋಣ ಎಂದರು.

ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ ಮಕ್ಕಳಿಗೆ ಸಂಸ್ಕಾರ ನೀಡುವ ಈ ಕಲಾಪ್ರಕಾರ ಉಳಿಸಿ ಬೆಳೆಸುವಲ್ಲಿ ಯಕ್ಷ ಗುರುಗಳ ಕೊಡುಗೆ ಮಹತ್ತ್ವದ್ದು ಎಂದು ಅಭಿಪ್ರಾಯ ಪಟ್ಟರು.

ಹಿರಿಯ ಟ್ರಸ್ಟಿ ಎಸ್. ವಿ. ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಗುರುಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಕೋಶಾಧಿಕಾರಿ ಎಚ್. ಎನ್ ಶೃಂಗೇಶ್ವರ, ಟ್ರಸ್ಟಿಗಳಾದ ವಿ. ಜಿ. ಶೆಟ್ಟಿ, ನಾರಾಯಣ ಎಂ. ಹೆಗಡೆ, ಮೀನಾಲಕ್ಷಣ ಅಡ್ಯಂತಾಯ, ಗಣೇಶ್ ಬ್ರಹ್ಮಾವರ, ನಾಗರಾಜ ಹೆಗಡೆ ಉಪಸ್ಥಿತರಿದ್ದರು.

40 ಕಲಾವಿದರು ಗುರುಗಳಾಗಿ ಸೇವೆ ಸಲ್ಲಿಸಲಿರುವರು. ಗುರುಗಳಿಗೆ ಶಾಲೆಗಳನ್ನು ಹಂಚಿಕೆಮಾಡಿ ಅಗತ್ಯ ಸೂಚನೆ ನೀಡಲಾಯಿತು.

ಮಾಡಾವು (ಪುತ್ತೂರು) ಪರಿಸರದಲ್ಲಿ ಆನೆಗಳ ಹಾವಳಿ, ಬೆಳೆ ನಾಶ

ಪುತ್ತೂರು ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ.

ನಿನ್ನೆ (05.06.2024) ರಾತ್ರಿ ವೇಳೆಯಲ್ಲಿ ಮಾಡಾವು ಕಟ್ಟೆ ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆಗಳು ಭೇಟಿ ನೀಡಿವೆ. ಬಾಳೆಯ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.

ಆನೆಯ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಇನ್ನೊಂದು ತೋಟದಲ್ಲಿ ಹಲಸಿನ ಹಣ್ಣುಗಳು ಧರಾಶಾಯಿಯಾಗಿದ್ದು ಆನೆಗಳು ಹಲಸಿನ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿವೆ. ಆನೆಗಳ ಲದ್ದಿಗಳು ಅನೇಕ ಕಡೆಗಳಲ್ಲಿ ಕಂಡುಬಂದಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಮಾಧವ ನಾಯ್ಕ ನಿಧನ

ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಮಾಧವ ನಾಯ್ಕ ನಿಧನ.

ಬಡಗುತಿಟ್ಟಿನ ಬಣ್ಣದ ವೇಷ ಹಾಗೂ ಮುಂಡಾಸು ವೇಷಕ್ಕೆ ಖ್ಯಾತಿಹೊಂದಿದ ಪೇತ್ರಿ ಮಾಧವ ನಾಯ್ಕ (84 ವರ್ಷ) ಪೇತ್ರಿಯ ಸ್ವಗೃದಲ್ಲಿ ಇಂದು (05.06.2024) ನಿಧನರಾದರು.

ಮಾರಣಕಟ್ಟೆ, ಮಂದಾರ್ತಿ, ಪೆರ್ಡೂರು, ಸಾಲಿಗ್ರಾಮ, ಅಮೃತೇಶ್ವರೀ, ಕೊಲ್ಲೂರು ಹಾಗೂ ಮುಲ್ಕಿ ಮೇಳಗಳಲ್ಲಿ 23 ವರ್ಷಗಳ ಕಾಲ ಮತ್ತು ಡಾ. ಶಿವರಾಮ ಕಾರಂತರ ನೇತೃತ್ವದ ಯಕ್ಷರಂಗದಲ್ಲಿ 30 ವರ್ಷಗಳ ಕಾಲ ವೇಷಧಾರಿಯಾಗಿ ಕಲಾ ಪ್ರತಿಭೆಯನ್ನು ಮೆರೆದಿದ್ದರು.

ಯಕ್ಷರಂಗದ ಪ್ರಮುಖ ವೇಷಧಾರಿಯಾಗಿ ವಿವಿಧ ದೇಶಗಳನ್ನು ಸಂಚರಿಸಿದ್ದರು. ಬಣ್ಣದ ವೇಷಕ್ಕೆ ವಿಶೇಷ ಕೊಡುಗೆಯನ್ನು ನೀಡಿದ ಮಾಧವ ನಾಯ್ಕರು ರಾವಣ, ಘಟೋತ್ಕಚ, ಹಿಡಿಂಬಾಸುರ, ತಾರಾಕಾಸುರ, ಶೂರ್ಪನಖೆ, ಹಿಡಿಂಬೆ, ಲಂಕಿಣ , ವೃತ್ರಜ್ವಾಲೆ ಹೀಗೆ ಗಂಡು ಬಣ್ಣ ಮತ್ತು ಹೆಣ್ಣು ಬಣ್ಣ ಎರಡರಲ್ಲೂ ನೈಪುಣ್ಯತೆ ಹೊಂದಿದ್ದರು.

ಇವರಿಗೆ ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗದ ಹೀಗೆ ಹಲವು ಪ್ರಶಸ್ತಿಗಳು ಸಂದಿವೆ. ಕಳೆದ ವಾರ ಮಂದಾರ್ತಿ ಮೇಳದ ಸೇವೆಯಾಟದ ದಿನ 1 ಲಕ್ಷ ಮೊತ್ತದ ಪ್ರತಿಷ್ಠಿತ ಹಾರಾಡಿ ರಾಮಗಾಣಿಗ ಪ್ರಶಸ್ತಿ ಪ್ರಾಪ್ತಿಯಾಗಿತ್ತು.

ಪತ್ನಿ, ಓರ್ವ ಪುತ್ರಿ, ಐವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.