Monday, August 3, 2026
Home Blog Page 47

ಮಾಜಿ ಗೆಳತಿಯನ್ನು ಸ್ಪ್ಯಾನರ್‌ನಿಂದ ಹೊಡೆದು ಕೊಂದ ಯುವಕ – “ನೀನು ನನಗೆ ಯಾಕೆ ಹೀಗೆ ಮೋಸ ಮಾಡಿದೆ?” ಎಂದು ಹೇಳುತ್ತಾ ಸಾಯುವವರೆಗೂ ಹೊಡೆದ ಕ್ರೂರಿ


ರೋಹಿತ್ ಯಾದವ್, ತನ್ನ ಮಾಜಿ ಗೆಳತಿ ಆರತಿ ಯಾದವ್ ತನಗೆ ಮೋಸ ಮಾಡಿ ಹೊಸ ಸಂಬಂಧ ಹೊಂದಿದ್ದಾಳೆ ಎಂದು ಶಂಕಿಸಿ, ಸ್ಪ್ಯಾನರ್‌ನಿಂದ ಅವಳು ಸಾಯುವವರೆಗೂ ಅವಳ ಮೇಲೆ ಹೊಡೆತಗಳ ಮಳೆಗರೆದರು, ಈ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ.

ಮುಂಬೈ ಬಳಿಯ ಜನನಿಬಿಡ ರಸ್ತೆಯೊಂದರಲ್ಲಿ 20 ವರ್ಷದ ಯುವಕನೊಬ್ಬ ತನ್ನ ಮಾಜಿ ಗೆಳತಿಯನ್ನು ಸ್ಪ್ಯಾನರ್‌ನಿಂದ ಹೊಡೆದು ಕೊಂದಿದ್ದಾನೆ, ಅವನನ್ನು ತಡೆಯಲು ಏನೂ ಮಾಡದ ಜನಸಮೂಹವು ಸುತ್ತುವರಿದಿರುವುದನ್ನು ವೀಡಿಯೋದಲ್ಲಿ ಕಾಣಬಹುದು.

ರೋಹಿತ್ ಯಾದವ್, ತನ್ನ ಮಾಜಿ ಆರತಿ ಯಾದವ್ ಹೊಸ ಸಂಬಂಧಕ್ಕೆ ತೆರಳಿದ್ದಾಳೆ ಎಂದು ಶಂಕಿಸಿ, ಸ್ಪ್ಯಾನರ್‌ನಿಂದ ಅವಳು ಸಾಯುವವರೆಗೂ ಅವಳ ಮೇಲೆ ಹೊಡೆತಗಳ ಮಳೆಗರೆದನು,

ಆರತಿ ಯಾದವ್ ಕೆಲಸಕ್ಕೆ ಹೋಗುತ್ತಿದ್ದಾಗ ವಸೈನ ಪೂರ್ವ ಚಿಂಚ್‌ಪಾಡಾ ಪ್ರದೇಶದಲ್ಲಿ ಬೆಳಿಗ್ಗೆ 8:30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. 

ರೋಹಿತ್ ಯಾದವ್ ಅವಳ ಹಿಂದೆ ಓಡಿ ಬಂದು ಸ್ಪ್ಯಾನರ್‌ನಿಂದ ತಲೆಗೆ ಹೊಡೆದಾಗ ಆರತಿ ಪಾದಚಾರಿಗಳಿಂದ ತುಂಬಿದ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವುದನ್ನು ಅತ್ಯಂತ ಗೊಂದಲದ ಭದ್ರತಾ ದೃಶ್ಯಗಳು ತೋರಿಸುತ್ತವೆ. ಹೊಡೆತದ ಬಲವು ಅವಳನ್ನು ನೆಲಕ್ಕೆ ಬೀಳುವಂತೆ ಮಾಡುತ್ತದೆ. ಅವಳು ತನ್ನ ತಲೆಯನ್ನು ಎತ್ತಲು ಪ್ರಯತ್ನಿಸುತ್ತಿರುವಾಗ

ಒಬ್ಬ ವ್ಯಕ್ತಿ ರೋಹಿತ್‌ನನ್ನು ತಡೆಯಲು ಪ್ರಯತ್ನಿಸುತ್ತಿರುವುದನ್ನು ನೋಡಲಾಗುತ್ತದೆ, ಅವನು ಅವನನ್ನು ದೂರ ತಳ್ಳುತ್ತಾನೆ ಮತ್ತು ಸ್ಪ್ಯಾನರ್‌ನಿಂದ ಬೆದರಿಕೆ ಹಾಕುತ್ತಾನೆ.  ಮನುಷ್ಯನು ಹಿಂತಿರುಗುತ್ತಾನೆ, ಮತ್ತು ಉನ್ಮಾದದ ​​ಆಕ್ರಮಣವನ್ನು ತಡೆಯಲು ಬೇರೆ ಯಾರೂ ಪ್ರಯತ್ನಿಸುವುದಿಲ್ಲ.

ನೋಡುಗರು ರೆಕಾರ್ಡ್ ಮಾಡಿದ ಮತ್ತೊಂದು ವೀಡಿಯೊದಲ್ಲಿ, ರೋಹಿತ್ ಮಹಿಳೆಯ ದೇಹದ ಮೇಲೆ ನಿಂತಿರುವುದು, ಸ್ಪ್ಯಾನರ್ ಅನ್ನು ಹಿಡಿದಿರುವುದು ಕಂಡುಬರುತ್ತದೆ.  ಅವನು ಅವಳ ಮುಖವನ್ನು ಹಿಡಿಯಲು ಕೆಳಗೆ ಬಾಗಿ ಶವದೊಂದಿಗೆ ಮಾತನಾಡಲು ಪ್ರಾರಂಭಿಸುತ್ತಾನೆ. “ನನಗೇಕೆ ಹೀಗೆ ಮಾಡಿದೆ, ಯಾಕೆ ಹೀಗೆ ಮಾಡಿದೆ?” ಮತ್ತೊಮ್ಮೆ ಅವಳನ್ನು ಹೊಡೆಯುವ ಮೊದಲು ಅವನು ಹಿಂದಿಯಲ್ಲಿ ಕಿರುಚುತ್ತಾನೆ. ನಂತರ ಅವನು ರಕ್ತಸಿಕ್ತ ಸ್ಪ್ಯಾನರ್ ಅನ್ನು ಪಕ್ಕಕ್ಕೆ ಎಸೆದು ಜನಸಂದಣಿಯತ್ತ ಹೊರನಡೆದನು.

ರೋಹಿತ್ ಯಾದವ್ ಅವರನ್ನು ಬಂಧಿಸಲಾಗಿದೆ ಮತ್ತು ಕೊಲೆ ಆರೋಪ ಹೊರಿಸಲಾಗುವುದು ಎಂದು ಪೊಲೀಸರು ಹೇಳುತ್ತಾರೆ.  ಆರತಿ ತಮ್ಮ ಸಂಬಂಧವನ್ನು ಕೊನೆಗೊಳಿಸಿದ್ದರಿಂದ ಅವನು ಅಸಮಾಧಾನಗೊಂಡಿದ್ದರು ಮತ್ತು ಅವಳು ಬೇರೊಬ್ಬರನ್ನು ಕಂಡುಕೊಂಡಿದ್ದಾರೆ ಎಂದು ಅವನು ಶಂಕಿಸಿದ್ದ.

ವೀಡಿಯೋ – ಉದ್ಘಾಟನೆಗೂ ಮುನ್ನವೇ ಕುಸಿದ ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೇತುವೆ

ವೀಡಿಯೋ ದೃಶ್ಯಗಳು ಸೇತುವೆಯು, ವೇಗವಾಗಿ ಹರಿಯುವ ನದಿಯ ಮೇಲೆ, ಒಂದು ಬದಿಗೆ ವಾಲಿರುವುದನ್ನು ತೋರಿಸುತ್ತದೆ ಮತ್ತು ಸೇತುವೆಯ ಬಳಿ ದಡದಲ್ಲಿ ಜನಸಂದಣಿಯು ಜಮಾಯಿಸಿದಾಗ, ಅದು ಕುಸಿದ ಕ್ಷಣವನ್ನು ತೋರಿಸುತ್ತದೆ.

ಬಿಹಾರದ ಅರಾರಿಯಾದಲ್ಲಿ ನಿರ್ಮಾಣ ಹಂತದ ಸೇತುವೆಯ ಒಂದು ಭಾಗ ಇಂದು ಕುಸಿದಿದೆ. ಕೋಟಿಗಟ್ಟಲೆ ಖರ್ಚು ಮಾಡಿ ಬಕ್ರಾ ನದಿಗೆ ನಿರ್ಮಿಸಿದ ಕಾಂಕ್ರೀಟ್ ಸೇತುವೆ ಸೆಕೆಂಡ್ ಗಳಲ್ಲಿ ಬೇರ್ಪಟ್ಟಿದೆ.

ಯಾವುದೇ ಗಾಯಗಳ ವರದಿಯಾಗಿಲ್ಲ.
ಬಿಹಾರದ ಅರಾರಿಯಾ ಜಿಲ್ಲೆಯ ಕುರ್ಸಕಾಂತ ಮತ್ತು ಸಿಕ್ತಿ ನಡುವಿನ ಪ್ರಯಾಣವನ್ನು ಸುಲಭಗೊಳಿಸಲು ಸೇತುವೆಯನ್ನು ನಿರ್ಮಿಸಲಾಗಿದೆ. ₹ 12 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಸೇತುವೆ ಉದ್ಘಾಟನೆಗೂ ಮುನ್ನವೇ ಕುಸಿದಿದೆ. 

ಸಿಕ್ತಿ ಶಾಸಕ ವಿಜಯ್ ಕುಮಾರ್ ಎಎನ್‌ಐಗೆ, “ನಿರ್ಮಾಣ ಕಂಪನಿಯ ಮಾಲೀಕರ ನಿರ್ಲಕ್ಷ್ಯದಿಂದ ಸೇತುವೆ ಕುಸಿದಿದೆ, ಆಡಳಿತವು ತನಿಖೆ ನಡೆಸಬೇಕು ಎಂದು ನಾವು ಒತ್ತಾಯಿಸುತ್ತೇವೆ.” ಎಂದು ಹೇಳಿದರು.

ಕುಸಿದ ಭಾಗವು ಸೆಕೆಂಡುಗಳಲ್ಲಿ ಕೊಚ್ಚಿಕೊಂಡುಹೋಯಿತು ಮತ್ತು ಜನರು ಸುರಕ್ಷತೆಯ ಸ್ಥಳದ ಕಡೆಗೆ ಓಡಲು ಪ್ರಾರಂಭಿಸಿದರು.

ಕುಸಿದ ಭಾಗದ ಹೆಚ್ಚಿನ ಭಾಗವನ್ನು ನದಿಯ ಮೇಲೆ ನಿರ್ಮಿಸಲಾಗಿದೆ. ಬಕ್ರಾ ನದಿಯ ದಡದಲ್ಲಿ ನಿರ್ಮಿಸಲಾದ ವಿಭಾಗವು ಹಾಗೆಯೇ ಉಳಿದಿದೆ. 

ಖ್ಯಾತ ತಾಳಮದ್ದಳೆ ಅರ್ಥಧಾರಿ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಯಕ್ಷಗಾನ ಸಂಘಗಳಿಂದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗಳಿಗೆ ಗೌರವಾರ್ಪಣೆ

ಹಿರಿಯ ಯಕ್ಷಗಾನ ಅರ್ಥಧಾರಿ ಮೂಡಂಬೈಲು ಸಿ.ಗೋಪಾಲಕೃಷ್ಣ ಶಾಸ್ತ್ರಿ ಇವರನ್ನು ಬೆಳ್ತಂಗಡಿ ತಾಲೂಕಿನ ಪಡಂಗಡಿ ಶ್ರೀನಿಲಯದಲ್ಲಿ
ಪುತ್ತೂರು ಬೊಳುವಾರು ಶ್ರೀ ಆಂಜನೇಯ ಯಕ್ಷಗಾನ ಕಲಾಸಂಘದ ಅಧ್ಯಕ್ಷರಾದ ಭಾಸ್ಕರ ಬಾರ್ಯ ಮತ್ತು ಉಪ್ಪಿನಂಗಡಿ ಶ್ರೀ ಕಾಳಿಕಾಂಬಾ ಯಕ್ಷಗಾನ ಕಲಾ ಸೇವಾ ಸಂಘದ ಅಧ್ಯಕ್ಷ ದಿವಾಕರ ಆಚಾರ್ಯ ಗೇರುಕಟ್ಟೆ ಗೌರವಿಸಿದರು.

ಶ್ರೀಮತಿ ಸ್ವರ್ಣಲತಾ ಭಾಸ್ಕರ್ ಉಪಸ್ಥಿತರಿದ್ದರು.

88 ವರ್ಷದ ಹಿರಿಯ ವಿದ್ವಾಂಸರಾದ ಶಾಸ್ತ್ರಿಯವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ, ದಶಾವತಾರ ಉಪನ್ಯಾಸಗಳು, ಅರ್ಥ ಸಹಿತ ಕುಮಾರ ವಿಜಯ ಮುಂತಾದ ಅಪೂರ್ವ ಕೃತಿಗಳನ್ನು ರಚಿಸಿದ್ದು ಯಕ್ಷಗಾನ ಆಸಕ್ತರಿಗೆ ಉಪಯುಕ್ತವಾದ ಕೃತಿಗಳಾಗಿವೆ.

ಶೇಣಿ, ಸಾಮಗ, ಪೆರ್ಲ,ಕಾಂತ ರೈ , ಜೋಷಿ ಮೊದಲಾದ ಮಹಾನ್ ಕಲಾವಿದರೊಂದಿಗೆ ಅರ್ಥಧಾರಿಯಾಗಿ ಜನಪ್ರಿಯರಾಗಿದ್ದ ಇವರು ಕಳೆದ ಮೂರು ವರ್ಷಗಳಿಂದ ತಾಳಮದ್ದಳೆಯಲ್ಲಿ ಭಾಗವಹಿಸದೆ ಇದ್ದರೂ ವಿಶ್ರಾಂತ ಜೀವನದಲ್ಲಿ ತನ್ನ ಜ್ಞಾನ,ಅನುಭವಗಳನ್ನು ಕಲಾಸಕ್ತರ ಜೊತೆ ಹಂಚಿಕೊಳ್ಳುತ್ತ ಸಕ್ರಿಯವಾಗಿದ್ದಾರೆ.

ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ

ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ

ದಿನಾಂಕ 16.06.2024 ನೇ ಆದಿತ್ಯವಾರ ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ ಕಾರ್ಯಕ್ರಮ ಜರಗಲಿದೆ.

ಪೆರಿಯಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಭಾಂಗಣದಲ್ಲಿ ದಿನಾಂಕ 16.04.2024ರ ಆದಿತ್ಯವಾರದಂದು ಅಪರಾಹ್ನ 2 ಘಂಟೆಯಿಂದ ಹಿರಿಯ ಕಲಾವಿದರಿಂದ ಯಕ್ಷಗಾನ ತಾಳಮದ್ದಳೆಯ ಅರ್ಥಗಾರಿಕೆ ಕಮ್ಮಟ ಕಾರ್ಯಾಗಾರ ನಡೆಯಲಿದೆ.

ಕಲಾಭಿಮಾನಿಗಳನ್ನು ಸಂಘಟಕರು ಆದರದಿಂದ ಆಮಂತ್ರಿಸಿದ್ದಾರೆ.

ವಿವರಗಳಿಗೆ ಮೇಲಿನ ಚಿತ್ರವನ್ನು ನೋಡಿ.

ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ

0

ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ

ಯಕ್ಷಶಿಕ್ಷಣ ಟ್ರಸ್ಟ್( ರಿ) ಉಡುಪಿ ಕಳೆದ 17 ವರ್ಷಗಳಿಂದ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ಯಕ್ಷಗಾನ ತರಬೇತಿ ನೀಡುತ್ತಿದ್ದು, ಈ ವರ್ಷ ಶಾಸಕರಾದ ಗುರುರಾಜ ಗಂಟಿಹೊಳೆಯವರ ಅಪೇಕ್ಷೆಯಂತೆ ಬೈಂದೂರು ವಿಧಾನಸಭಾ ವ್ಯಾಪ್ತಿಯ 11 ಶಾಲೆಗಳು ಸೇರಿ ಒಟ್ಟೂ 91 ಶಾಲೆಗಳಲ್ಲಿ ಯಕ್ಷಶಿಕ್ಷಣ ನಡೆಸಲು ಯೋಜಿಸಿದೆ.

ಈ ಪ್ರಯುಕ್ತ ಯಕ್ಷಗಾನ ಗುರುಗಳ ಸಮಾಲೋಚನಾ ಸಭೆ 12.06.2024 ರಂದು ಯಕ್ಷಗಾನ ಕಲಾರಂಗದ ಐವೈಸಿ ಸಭಾಂಗಣದ ಹೊರಾಂಗಣದಲ್ಲಿ ಜರಗಿತು.

ಉಡುಪಿ ಕ್ಷೇತ್ರದ ಶಾಸಕ, ಟ್ರಸ್ಟ್ ನ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಮಾತನಾಡಿ, ಯಕ್ಷಶಿಕ್ಷಣ ಟ್ರಸ್ಟ್ ಕಾರ್ಯನಿರ್ವಹಣೆಯಲ್ಲಿ ಕಲಾರಂಗದ ಕಾರ್ಯಕರ್ತರ ದುಡಿಮೆ ದೊಡ್ಡದು, ನಾವೆಲ್ಲ ಒಟ್ಟಾಗಿ ಈ ಮಹಾಭಿಯನವನ್ನು ಯಶಸ್ವಿಯಾಗಿಸೋಣ ಎಂದರು.

ಕಾಪು ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಮಾತನಾಡಿ ಮಕ್ಕಳಿಗೆ ಸಂಸ್ಕಾರ ನೀಡುವ ಈ ಕಲಾಪ್ರಕಾರ ಉಳಿಸಿ ಬೆಳೆಸುವಲ್ಲಿ ಯಕ್ಷ ಗುರುಗಳ ಕೊಡುಗೆ ಮಹತ್ತ್ವದ್ದು ಎಂದು ಅಭಿಪ್ರಾಯ ಪಟ್ಟರು.

ಹಿರಿಯ ಟ್ರಸ್ಟಿ ಎಸ್. ವಿ. ಭಟ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಗುರುಗಳಿಗೆ ಉಪಯುಕ್ತ ಮಾಹಿತಿ ನೀಡಿದರು. ಕೋಶಾಧಿಕಾರಿ ಎಚ್. ಎನ್ ಶೃಂಗೇಶ್ವರ, ಟ್ರಸ್ಟಿಗಳಾದ ವಿ. ಜಿ. ಶೆಟ್ಟಿ, ನಾರಾಯಣ ಎಂ. ಹೆಗಡೆ, ಮೀನಾಲಕ್ಷಣ ಅಡ್ಯಂತಾಯ, ಗಣೇಶ್ ಬ್ರಹ್ಮಾವರ, ನಾಗರಾಜ ಹೆಗಡೆ ಉಪಸ್ಥಿತರಿದ್ದರು.

40 ಕಲಾವಿದರು ಗುರುಗಳಾಗಿ ಸೇವೆ ಸಲ್ಲಿಸಲಿರುವರು. ಗುರುಗಳಿಗೆ ಶಾಲೆಗಳನ್ನು ಹಂಚಿಕೆಮಾಡಿ ಅಗತ್ಯ ಸೂಚನೆ ನೀಡಲಾಯಿತು.

ಮಾಡಾವು (ಪುತ್ತೂರು) ಪರಿಸರದಲ್ಲಿ ಆನೆಗಳ ಹಾವಳಿ, ಬೆಳೆ ನಾಶ

ಪುತ್ತೂರು ತಾಲೂಕಿನ ಮಾಡಾವು ಎಂಬಲ್ಲಿನ ಸುತ್ತಲಿನ ಪ್ರದೇಶದಲ್ಲಿ ಆನೆಗಳ ಸಂಚಾರ ಕಂಡುಬಂದಿದೆ.

ನಿನ್ನೆ (05.06.2024) ರಾತ್ರಿ ವೇಳೆಯಲ್ಲಿ ಮಾಡಾವು ಕಟ್ಟೆ ಸಮೀಪದ ಕೃಷಿಕರ ಅಡಿಕೆ ತೋಟಗಳಿಗೆ ಆನೆಗಳು ಭೇಟಿ ನೀಡಿವೆ. ಬಾಳೆಯ ಗಿಡಗಳು ನೆಲಸಮವಾಗಿರುವುದು ಕಂಡುಬಂದಿದೆ.

ಆನೆಯ ದಾಳಿಯಿಂದಾಗಿ ಅಲ್ಲಲ್ಲಿ ಬೆಳೆ ನಾಶ, ಕೃಷಿ ನಷ್ಟ ಸಂಭವಿಸಿದೆ. ಹಲವಾರು ಬಾಳೆಗಿಡಗಳು ನೆಲಸಮವಾಗಿದ್ದು ಆನೆಯ ಹೆಜ್ಜೆಯ ಗುರುತುಗಳು ಅಲ್ಲಲ್ಲಿ ಸ್ಪಷ್ಟವಾಗಿ ಕಾಣುತ್ತದೆ.

ಇನ್ನೊಂದು ತೋಟದಲ್ಲಿ ಹಲಸಿನ ಹಣ್ಣುಗಳು ಧರಾಶಾಯಿಯಾಗಿದ್ದು ಆನೆಗಳು ಹಲಸಿನ ಹಣ್ಣುಗಳನ್ನು ಯಥೇಚ್ಛವಾಗಿ ಸೇವಿಸಿವೆ. ಆನೆಗಳ ಲದ್ದಿಗಳು ಅನೇಕ ಕಡೆಗಳಲ್ಲಿ ಕಂಡುಬಂದಿದೆ.

ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಮಾಧವ ನಾಯ್ಕ ನಿಧನ

ಹಿರಿಯ ಯಕ್ಷಗಾನ ಕಲಾವಿದ ಪೇತ್ರಿ ಮಾಧವ ನಾಯ್ಕ ನಿಧನ.

ಬಡಗುತಿಟ್ಟಿನ ಬಣ್ಣದ ವೇಷ ಹಾಗೂ ಮುಂಡಾಸು ವೇಷಕ್ಕೆ ಖ್ಯಾತಿಹೊಂದಿದ ಪೇತ್ರಿ ಮಾಧವ ನಾಯ್ಕ (84 ವರ್ಷ) ಪೇತ್ರಿಯ ಸ್ವಗೃದಲ್ಲಿ ಇಂದು (05.06.2024) ನಿಧನರಾದರು.

ಮಾರಣಕಟ್ಟೆ, ಮಂದಾರ್ತಿ, ಪೆರ್ಡೂರು, ಸಾಲಿಗ್ರಾಮ, ಅಮೃತೇಶ್ವರೀ, ಕೊಲ್ಲೂರು ಹಾಗೂ ಮುಲ್ಕಿ ಮೇಳಗಳಲ್ಲಿ 23 ವರ್ಷಗಳ ಕಾಲ ಮತ್ತು ಡಾ. ಶಿವರಾಮ ಕಾರಂತರ ನೇತೃತ್ವದ ಯಕ್ಷರಂಗದಲ್ಲಿ 30 ವರ್ಷಗಳ ಕಾಲ ವೇಷಧಾರಿಯಾಗಿ ಕಲಾ ಪ್ರತಿಭೆಯನ್ನು ಮೆರೆದಿದ್ದರು.

ಯಕ್ಷರಂಗದ ಪ್ರಮುಖ ವೇಷಧಾರಿಯಾಗಿ ವಿವಿಧ ದೇಶಗಳನ್ನು ಸಂಚರಿಸಿದ್ದರು. ಬಣ್ಣದ ವೇಷಕ್ಕೆ ವಿಶೇಷ ಕೊಡುಗೆಯನ್ನು ನೀಡಿದ ಮಾಧವ ನಾಯ್ಕರು ರಾವಣ, ಘಟೋತ್ಕಚ, ಹಿಡಿಂಬಾಸುರ, ತಾರಾಕಾಸುರ, ಶೂರ್ಪನಖೆ, ಹಿಡಿಂಬೆ, ಲಂಕಿಣ , ವೃತ್ರಜ್ವಾಲೆ ಹೀಗೆ ಗಂಡು ಬಣ್ಣ ಮತ್ತು ಹೆಣ್ಣು ಬಣ್ಣ ಎರಡರಲ್ಲೂ ನೈಪುಣ್ಯತೆ ಹೊಂದಿದ್ದರು.

ಇವರಿಗೆ ಕರ್ನಾಟಕ ರಾಜ್ಯೋತ್ಸವ, ಯಕ್ಷಗಾನ ಅಕಾಡೆಮಿ, ಯಕ್ಷಗಾನ ಕಲಾರಂಗದ ಹೀಗೆ ಹಲವು ಪ್ರಶಸ್ತಿಗಳು ಸಂದಿವೆ. ಕಳೆದ ವಾರ ಮಂದಾರ್ತಿ ಮೇಳದ ಸೇವೆಯಾಟದ ದಿನ 1 ಲಕ್ಷ ಮೊತ್ತದ ಪ್ರತಿಷ್ಠಿತ ಹಾರಾಡಿ ರಾಮಗಾಣಿಗ ಪ್ರಶಸ್ತಿ ಪ್ರಾಪ್ತಿಯಾಗಿತ್ತು.

ಪತ್ನಿ, ಓರ್ವ ಪುತ್ರಿ, ಐವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತ ಪಡಿಸಿದ್ದಾರೆ.

ಸೇರಾಜೆ ಸೀತಾರಾಮ ಭಟ್ಟ ಮತ್ತು ಜಬ್ಬಾರ ಸಮೊ ಅವರಿಗೆ ಯಕ್ಷಗಾನ ಪ್ರಶಸ್ತಿ.

ಸೇರಾಜೆ ಸೀತಾರಾಮ ಮತ್ತು ಜಬ್ಬಾರ ಸಮೊ ಅವರಿಗೆ ಯಕ್ಷಗಾನ ಕಲಾರಂಗ ಪ್ರಶಸ್ತಿ.

ಉಡುಪಿ ಯಕ್ಷಗಾನ ಕಲಾರಂಗವು ಸಹೃದಯಿ ಕಲಾ ಪೋಷಕ ಮಟ್ಟಿ ಮುರಲೀಧರ ರಾವ್ ಮತ್ತು ಅರ್ಥಧಾರಿ, ಪಂಡಿತ ಪೆರ್ಲ ಕೃಷ್ಣ ಭಟ್ ನೆನಪಿನಲ್ಲಿ ನೀಡುವ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಗೆ

ಅನುಕ್ರಮವಾಗಿ ಅರ್ಥಧಾರಿ, ಹವ್ಯಾಸಿ ವೇಷಧಾರಿ ಜಬ್ಬಾರ ಸಮೊ ಹಾಗೂ ಅರ್ಥಧಾರಿ, ಹವ್ಯಾಸಿ ಕಲಾವಿದ, ಪ್ರಸಂಗಕರ್ತ, ಪ್ರವಚನಕಾರ ಸೇರಾಜೆ ಸೀತಾರಾಮ ಭಟ್ಟ ಆಯ್ಕೆಯಾಗಿದ್ದಾರೆ.

ಇದೇ ಜೂನ್ 23, ಭಾನುವಾರದಂದು ಅಪರಾಹ್ನ 3.00 ಗಂಟೆಗೆ ಸಂಸ್ಥೆಯ ನೂತನ ಕಟ್ಟಡ ಇನ್ಫೋಸಿಸ್ ಫೌಂಡೇಶನ್ ಯಕ್ಷಗಾನ ಡೆವಲಪ್‌ಮೆಂಟ್, ಟ್ರೈನಿಂಗ್ ಅಂಡ್ ರಿಸರ್ಚ್ ಸೆಂಟರ್‌ನಲ್ಲಿ ಪ್ರಶಸ್ತಿ ಪ್ರದಾನ ಮತ್ತು ತಾಳಮದ್ದಲೆ ಜರಗಲಿದೆ ಎಂಬುವುದಾಗಿ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಶಸ್ತಿಯು ರೂ. 20,000/- ನಗದು ಪುರಸ್ಕಾರ ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿರುತ್ತದೆ.

ಯಕ್ಷಗಾನ ಕಲಾರಂಗದ ವಾರ್ಷಿಕ ಸಮಾವೇಶ, ಸಂವಾದ, ಕಲಾವಿದರ ವೈದ್ಯಕೀಯ ತಪಾಸಣೆ, ಸಹಾಯಧನ, ಯಕ್ಷಗಾನ ಪ್ರದರ್ಶನ

ಯಕ್ಷಗಾನ ಸರ್ವಾಂಗ ಸುಂದರ ಕಲೆ – ಪುತ್ತಿಗೆ ಶ್ರೀ

ಯಕ್ಷಗಾನ ಕಲೆಯ ಎಲ್ಲಾ ಅಂಗಗಳನ್ನು ಹೊಂದಿರುವ ಪರಿಪೂರ್ಣ ಕಲಾ ಪ್ರಕಾರ. ಅದನ್ನು ಪ್ರಸ್ತುತ ಪಡಿಸುವ ಕಲಾವಿದರು ಸಮಾಜಕ್ಕೆ ಪುರಾಣದ ಸಂದೇಶವನ್ನು ತಿಳಿಸುವ ಶ್ರೇಷ್ಠ ವಿದ್ವಾಂಸರು, ಯಕ್ಷಗಾನ ಕಲಾರಂಗ ಮಾಡುತ್ತಿರುವ ಸಮಾಜಮುಖಿ ಕೆಲಸ ಅನನ್ಯ ಮತ್ತು ಅಗಾಧ ಎಂಬುದಾಗಿ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಮೇ 31ರಂದು ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಯಕ್ಷಗಾನ ಕಲಾರಂಗ ಆಯೋಜಿಸಿದ 25ನೇ ವರ್ಷದ ಕಲಾವಿದರ ಸಮಾರಂಭದಲ್ಲಿ ಅನುಗ್ರಹ ಸಂದೇಶ ನೀಡುತ್ತಾ ನುಡಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಮಾಜಿ ಅಧ್ಯಕ್ಷರೂ, ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷರಾಗಿ ನಿಯುಕ್ತಿಗೊಂಡ ಡಾ. ತಲ್ಲೂರು ಶಿವರಾಮ ಶೆಟ್ಟಿಯವರನ್ನು ಸ್ವಾಮೀಜಿಯವರು ಸ್ಮರಣಿಕೆ, ಶಾಲು, ಅಭಿನಂದನಾ ಪತ್ರ ನೀಡಿ ಹರಸಿದರು.

ಸುಬ್ರಹ್ಮಣ್ಯ ಬೈಪಡಿತ್ತಾಯರು ಬರೆದ ಆಗಸದ ಬೆಳಕು ಪುಸ್ತಕವನ್ನು ಶ್ರೀಪಾದರು ಲೋಕಾರ್ಪಣೆಗೊಳಿಸಿದರು. ಇತ್ತೀಚೆಗೆ ನಿಧನರಾದ ಪುತ್ತೂರು ಗಂಗಾಧರ ಜೋಗಿಯವರ ಧರ್ಮಪತ್ನಿಗೆ ಸಾಂತ್ವನ ನಿಧಿಯನ್ನು ನೀಡಲಾಯಿತು.

21 ಜನ ಕಲಾವಿದರಿಗೆ ತಲಾ ಹತ್ತು ಸಾವಿರದಂತೆ ಗೃಹ ನಿರ್ಮಾಣದ ಉಡುಗೊರೆ ಹಾಗೂ 7 ಮಂದಿ ಕಲಾವಿದರಿಗೆ ವೈದ್ಯಕೀಯ ನೆರವು ವಿತರಿಸಲಾಯಿ. ಇದೇ ಸಂದರ್ಭದಲ್ಲಿ ವೃತ್ತಿಮೇಳದ ಕಲಾವಿದರಿಗೆ ತಮ್ಮ ಹೋಟೆಲ್‌ನಲ್ಲಿ ಉಚಿತವಾಗಿ ಉಪಹಾರ ನೀಡಿ ಪ್ರೋತ್ಸಾಹಿಸುತ್ತಾ ಬಂದ ಆಗುಂಬೆಯ ಗುರುರಾಜ ಅಡಿಗ ಮತ್ತು ಕೊಕ್ಕರ್ಣೆಯ ಕೆ. ಎಸ್. ಶ್ರೀನಿವಾಸ ನಾಯಕ್ ಇವರನ್ನು ಶ್ರೀಪಾದರು ಗೌರವಿಸಿದರು.

ವೇದಿಕೆಯಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಡಾ. ಎಂ. ಪ್ರಭಾಕರ ಜೋಶಿ, ಆನಂದ ಸಿ. ಕುಂದರ್, ಪಿ. ಪುರುಷೋತ್ತಮ ಶೆಟ್ಟಿ, ಬೆಳ್ವೆ ಗಣೇಶ್ ಕಿಣಿ , ಸುರೇಶ್ ನಾಯಕ್ ಕುಯಿಲಾಡಿ, ಸಿಎ ಗಣೇಶ್ ಕಾಂಚನ್, ಹರಿಯಪ್ಪ ಕೋಟ್ಯಾನ್ ಅಭ್ಯಾಗತರಾಗಿ ಭಾಗವಹಿಸಿದ್ದರು.

ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ನಾರಾಯಣ ಎಂ. ಹೆಗಡೆ ವಂದಿಸಿದರು. ಎಚ್. ಎನ್. ಶೃಂಗೇಶ್ವರ ಸಹಕರಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ನಿರೂಪಿಸಿದರು.

ಪೂರ್ವಾಹ್ನ 10.00 ಗಂಟೆಗೆ ಶ್ರೀ ಮಠದ ದಿವಾನರಾದ ಶ್ರೀ ನಾಗರಾಜ ಅಚಾರ್ಯ ಸಮಾವೇಶವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. 9.00ರಿಂದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ತಜ್ಞ ವೈದ್ಯರಿಂದ ಉಚಿತ ವೈದ್ಯಕೀಯ ತಪಾಸಣೆ ಮತ್ತು ಚಿಕಿತ್ಸೆ ನಡೆಯಿತು. 10.30ರಿಂದ ಕಲ್ಲೇಶ್ವರ ಸ್ವಾಮಿ ಯಕ್ಷಗಾನ ಮಂಡಳಿ ತಿಪಟೂರು ಇವರಿಂದ ಮೂಡಲಪಾಯ ಯಕ್ಷಗಾನ ದಕ್ಷಯಜ್ಞ ಪ್ರದರ್ಶನಗೊಂಡಿತು.

ಮಧ್ಯಾಹ್ನ 12.00ರಿಂದ ಯೂಟ್ಯೂಬ್ ದಾಖಲೀಕರಣ / ನೇರ ಪ್ರಸಾರ ಪೂರಕವೇ? ಮಾರಕವೇ? ಎಂಬ ವಿಷಯದ ಕುರಿತು 12 ಜನ ಕಲಾವಿದರು ತಮ್ಮ ಅನುಭವವನ್ನು ಹಂಚಿಕೊAಡರು. ಡಾ. ಪ್ರದೀಪ್ ವಿ. ಸಾಮಗ ಈ ಗೋಷ್ಠಿಯ ಸಮನ್ವಯಕಾರರಾಗಿದ್ದರು.

ಸಮಾವೇಶದಲ್ಲಿ ಭಾಗವಹಿಸಿದ ವೃತ್ತಿ ಮೇಳದ ಸುಮಾರು 700 ಕಲಾವಿರಿಗೆ ಉಡುಗೊರೆ, ಸಂಸ್ಥೆಯ ಸುವರ್ಣ ವರ್ಷ ಹಾಗೂ ಯಕ್ಷನಿಧಿಯ ರಜತ ವರ್ಷದ ಸವಿ ನೆನಪಿಗೆ ವಿಶೇಷವಾಗಿ ತಯಾರಿಸಿದ ಸಿಹಿ ಪೊಟ್ಟಣ ವಿತರಿಸಲಾಯಿತು.

ವೃತ್ತಿನಿರತ ಯಕ್ಷಗಾನ ಕಲಾವಿದರ ವಾರ್ಷಿಕ ಸಮಾವೇಶ.

ಉಡುಪಿ : ವೃತ್ತಿನಿರತ ಯಕ್ಷಗಾನ ಕಲಾವಿದರ ಕ್ಷೇಮಾಭಿವೃದ್ಧಿಗಾಗಿ 25 ವರ್ಷಗಳ ಹಿಂದೆ ಸ್ಥಾಪಿಸಲ್ಪಟ್ಟ ಯಕ್ಷಗಾನ ಕಲಾರಂಗದ ಅಂಗಸಂಸ್ಥೆಯಾದ ಯಕ್ಷನಿಧಿಯ ವಾರ್ಷಿಕ ಮಹಾಸಭೆ ಮೇ 31, 2024 ಶುಕ್ರವಾರದಂದು ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಜರಗಲಿದೆ.

ಪೂರ್ವಾಹ್ನ 10.00 ಗಂಟೆಗೆ ಪರ್ಯಾಯ ಪುತ್ತಿಗೆ ಮಠದ ದಿವಾನರಾದ ಶ್ರೀ ನಾಗರಾಜ ಆಚಾರ್ಯರು ಸಮಾವೇಶವನ್ನು ಉದ್ಘಾಟಿಸಲಿದ್ದು, ಅಭ್ಯಾಗತರಾಗಿ ಭಾಗವತ ಶ್ರೀ ಕಲ್ಮನೆ ನಂಜಪ್ಪ ಅವರು ಭಾಗವಹಿಸಲಿದ್ದಾರೆ.

ಅಪರಾಹ್ನ 2.30 ಗಂಟೆಗೆ ಪರ್ಯಾಯ ಮಠಾಧೀಶರುಗಳಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಶ್ರೀ ಶ್ರೀ ಸುಶೀಂದ್ರತೀರ್ಥ ಶ್ರೀಪಾದರುಗಳ ದಿವ್ಯೋಪಸ್ಥಿತಿಯಲ್ಲಿ, ನಾಡೋಜ ಡಾ. ಜಿ. ಶಂಕರ್ ಅಧ್ಯಕ್ಷತೆಯಲ್ಲಿ ಸಭಾಕಲಾಪ ನಡೆಯಲಿದೆ.

ಮುಖ್ಯ ಅಭ್ಯಾಗತರಾಗಿ ಶಾಸಕರುಗಳಾದ ಯಶಪಾಲ್ ಸುವರ್ಣ, ಗುರ್ಮೆ ಸುರೇಶ್ ಶೆಟ್ಟಿ, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ಸಾಮಾಜಿಕ ಧುರೀಣರಾದ ಆನಂದ ಸಿ. ಕುಂದರ್, ಪಿ. ಪುರುಷೋತ್ತಮ ಶೆಟ್ಟಿ, ಕೃಷ್ಣಪ್ರಸಾದ್ ಅಡ್ಯಂತಾಯ, ಬೆಳ್ವೆ ಗಣೇಶ್ ಕಿಣಿ , ಕುಯಿಲಾಡಿ ಸುರೇಶ್ ನಾಯಕ್, ಸಿಎ ಗಣೇಶ್ ಕಾಂಚನ್, ಹರಿಯಪ್ಪ ಕೋಟ್ಯಾನ್, ಹಾಗೂ ಆನಂದ ಪಿ. ಸುವರ್ಣ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಗೃಹನಿರ್ಮಾಣ ಉಡುಗೊರೆ, ವೈದ್ಯಕೀಯ ನೆರವು, ಸಾಂತ್ವನ ನಿಧಿ ಹಾಗೂ ಉಡುಗೊರೆಯನ್ನು ಕಲಾವಿದರಿಗೆ ವಿತರಿಸಲಾಗುವುದು. ಪೂವಾಹ್ನ 9.00 ರಿಂದ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ತಜ್ಞವೈದ್ಯರಿಂದ ಕಲಾವಿದರ ಆರೋಗ್ಯ ತಪಾಸಣೆ ನಡೆಯಲಿದೆ.

ಪೂರ್ವಾಹ್ನ 10.30ಕ್ಕೆ ತುಮಕೂರು ಜಿಲ್ಲೆಯ ಶ್ರೀ ಕಲ್ಲೇಶ್ವರ ಸ್ವಾಮಿ ಯಕ್ಷಗಾನ ಮಂಡಳಿಯ ಕಲಾವಿದರಿಂದ ಮೂಡಲಪಾಯ ಯಕ್ಷಗಾನ ‘ಶ್ರೀದೇವಿ ಮಹಾತ್ಮೈ’ ಯಕ್ಷಗಾನ ಪ್ರಸ್ತುತಗೊಳ್ಳಲಿದೆ.

ಅಪರಾಹ್ನ 12.00 ಗಂಟೆಗೆ ಯೂಟ್ಯೂಬ್ ದಾಖಲೀಕರಣ / ನೇರ ಪ್ರಸಾರ ಒಳಿತು – ಕೆಡುಕುಗಳ ಬಗ್ಗೆ ಕಲಾವಿದರಿಂದ ಸಂವಾದ ಜರಗಲಿದೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.