ಹತ್ರಾಸ್ನಲ್ಲಿ ನಡೆದ ಸತ್ಸಂಗದಲ್ಲಿ ಕಾಲ್ತುಳಿತದಿಂದ 116 ಸಾವು ವರದಿಯಾಗಿದೆ. ಉತ್ತರ ಪ್ರದೇಶದ ಹತ್ರಾಸ್ನಲ್ಲಿ ಮಂಗಳವಾರ ನಡೆದ ‘ಸತ್ಸಂಗ’ (ಧಾರ್ಮಿಕ ಕಾರ್ಯಕ್ರಮ)ದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ.
ಈವರೆಗೆ 116 ಮಂದಿ ಸಾವನ್ನಪ್ಪಿದ್ದಾರೆ ಎಂದು ಇನ್ಸ್ಪೆಕ್ಟರ್ ಜನರಲ್ (ಅಲಿಗಢ) ಶಲಭ್ ಮಾಥುರ್ ಹೇಳಿದ್ದಾರೆ. “ಕಾರ್ಯಕ್ರಮದಲ್ಲಿ ಅನುಮತಿಸಿದ್ದಕ್ಕಿಂತ ಹೆಚ್ಚು ಜನಸಂದಣಿ ಇದ್ದ ಕಾರಣ ಸತ್ಸಂಗದ ಸಂಘಟಕರ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ಉನ್ನತ ಮಟ್ಟದ ತನಿಖೆಗೆ ಆದೇಶಿಸಲಾಗಿದೆ” ಎಂದು ಅವರು ಹೇಳಿದರು. ಸಾವನ್ನಪ್ಪಿದ 116 ಜನರಲ್ಲಿ 108 ಮಹಿಳೆಯರು, ಏಳು ಮಕ್ಕಳು ಮತ್ತು ಒಬ್ಬ ಪುರುಷ. ಈ ಪೈಕಿ ಇದುವರೆಗೆ 72 ಜನರನ್ನು ಗುರುತಿಸಲಾಗಿದೆ.
ರಾಜ್ಯ ಸರ್ಕಾರದಿಂದ ಮೃತರಿಗೆ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಣೆ ಮಾಡಲಾಗಿದ್ದು, ಕೇಂದ್ರ ಸರ್ಕಾರ ಕೂಡ ಅಷ್ಟೇ ಮೊತ್ತವನ್ನು ನೀಡಲಿದೆ ಎಂದು ತಿಳಿದುಬಂದಿದೆ.
ಸಕರ್ ವಿಶ್ವ ಹರಿ ಅಥವಾ ಭೋಲೆ ಬಾಬಾ ಎಂದು ಕರೆಯಲ್ಪಡುವ ಸ್ವಯಂ-ಘೋಷಿತ ದೇವಮಾನವ ನಾರಾಯಣ ಸಾಕರ್ ಹರಿಗಾಗಿ ಮಾನವ್ ಮಂಗಲ್ ಮಿಲನ್ ಸದ್ಭಾವನಾ ಸಮಾಗಮ್ ಸಮಿತಿಯು ಸತ್ಸಂಗವನ್ನು ಆಯೋಜಿಸಿದೆ. ಕಾಲ್ತುಳಿತ ಘಟನೆಯ ನಂತರ ಪತ್ತೆಯಾಗದ ಭೋಲೆ ಬಾಬಾಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಕಾಲ್ತುಳಿತದಲ್ಲಿ ಭಕ್ತರು ತುಳಿತಕ್ಕೆ ಸಿಲುಕಿ ಉಸಿರುಗಟ್ಟಿ ನರಳಿದರು ಮತ್ತು ದೇಹಗಳು ಪರಸ್ಪರರ ಮೇಲೆ ರಾಶಿ ಬಿದ್ದು ಸತ್ತು ಹೋದರು .
ಸ್ಥಳದಿಂದ ವೀಡಿಯೊಗಳು ಜನರು ಬಲಿಪಶುಗಳನ್ನು, ಸತ್ತ ಅಥವಾ ಪ್ರಜ್ಞಾಹೀನರನ್ನು ಆಂಬ್ಯುಲೆನ್ಸ್ಗಳು, ಟ್ರಕ್ಗಳು ಮತ್ತು ಕಾರುಗಳಲ್ಲಿ ಸಿಕಂದರ ರಾವ್ ಟ್ರಾಮಾ ಸೆಂಟರ್ಗೆ ಕರೆತರುತ್ತಿರುವುದನ್ನು ತೋರಿಸಿದೆ.
ಸಿಕಂದರಾ ರಾವ್ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ರವೇಂದ್ರ ಕುಮಾರ್ ಪ್ರಕಾರ, ಕಾರ್ಯಕ್ರಮದ ಕೊನೆಯಲ್ಲಿ ‘ಸತ್ಸಂಗ’ ನಡೆಸಿದ ಭೋಲೆ ಬಾಬಾರ ದರ್ಶನ ಪಡೆಯಲು ಭಕ್ತರು ಪ್ರಯತ್ನಿಸಿದಾಗ ಕಾಲ್ತುಳಿತ ಸಂಭವಿಸಿದೆ.
ಅವರು ಬಾಬಾನ ಪಾದದ ಸುತ್ತಲೂ ಸ್ವಲ್ಪ ಮಣ್ಣನ್ನು ಸಂಗ್ರಹಿಸಲು ಬಯಸಿದ್ದರು ಎಂದು ಅವರು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದರು.
ಘಟನೆಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಸಹಾಯವಾಣಿ ಕೇಂದ್ರವನ್ನು ತೆರೆದಿದೆ. ಸಾರ್ವಜನಿಕರಿಗಾಗಿ 05722227041 ಮತ್ತು 05722227042. ನಂಬರ್ ಗಳನ್ನು ನೀಡಿದೆ.
ಕಟೀಲು ಮೇಳದ ಖ್ಯಾತ ಅನುಭವೀ ಕಲಾವಿದರಾದ ವಾಟೆಪಡ್ಪು ವಿಷ್ಣು ಶರ್ಮರು ಬರೆದ ಕೃತಿಯಿದು. ರಂಗದಲ್ಲಿ ಸಹ ಕಲಾವಿದರ ಜತೆ ಉತ್ತಮ ರೀತಿಯಲ್ಲಿ ಸಂಭಾಷಿಸುವ ಶ್ರೀ ವಿಷ್ಣು ಶರ್ಮರೊಂದಿಗೆ ಮೇಳದ ತಿರುಗಾಟ ನಡೆಸುವ ಅವಕಾಶ ಮತ್ತು ಭಾಗ್ಯವು ನನಗೂ ಸಿಕ್ಕಿದೆ. ರಂಗದಲ್ಲಿ ಅವರೊಂದಿಗೆ ಅಭಿನಯಿಸಿದ್ದೇನೆ, ಸಂಭಾಷಿಸಿದ್ದೇನೆ. ಆ ಕ್ಷಣಗಳನ್ನು ಅನುಭವಿಸಿ ಸಂತೋಷಪಟ್ಟಿದ್ದೇನೆ. ಅವರ ಒಡನಾಟವು ಸದಾ ನೆನಪಿನಲ್ಲಿ ಉಳಿಯುವಂತಹ ಕ್ಷಣಗಳು. ಮುಂದೆಯೂ ಆ ಅವಕಾಶವು ಬರಬಹುದೆಂದು ಭಾವಿಸುವೆ.
ಈ ಪುಸ್ತಕದಲ್ಲಿ ಶ್ರೀ ವಿಷ್ಣು ಶರ್ಮರು ಶ್ರೀಕೃಷ್ಣ ಪಾರಿಜಾತ, ನರಕಾಸುರ ಮೋಕ್ಷ, ದ್ರೌಪದಿ ವಸ್ತ್ರಾಪಹಾರ ಮತ್ತು ದುಶ್ಶಾಸನ ವಧೆ ಎಂಬ ನಾಲ್ಕು ಪ್ರಸಂಗಗಳಿಗೆ ಪದ್ಯ ಸಹಿತ ಸಂಭಾಷಣೆಗಳನ್ನು ಬರೆದು ನೀಡಿರುತ್ತಾರೆ. ಸರಳ ಸುಂದರವಾಗಿ ಸಂಭಾಷಣೆಗಳನ್ನು ಬರೆದಿರುತ್ತಾರೆ. ಹವ್ಯಾಸಿ ಮತ್ತು ವೃತ್ತಿ ಕಲಾವಿದರಿಗೂ ಇದು ಉಪಯುಕ್ತ ಪುಸ್ತಕವು.
ಈ ಕೃತಿಯ ಪ್ರಕಟಣೆಗೆ ಸಹಕಾರ ನೀಡಿದವರು ಶ್ರೀ ಭಾಸ್ಕರ ಆಳ್ವ, ಪನ್ಪೇವ್, ಮುಂಬಯಿ. ಇದು 2023ರಲ್ಲಿ ಬಿಡುಗಡೆಯಾಗಿತ್ತು. ಕಟೀಲು ಆರೂ ಮೇಳಗಳ ಪ್ರಥಮ ಸೇವೆಯಾಟದ ಶುಭ ದಿನದಂದು ಈ ಪುಸ್ತಕವು ಓದುಗರ ಕೈ ಸೇರಿತ್ತು.
ನೂರ ಎಪ್ಪತ್ತಾರು ಪುಟಗಳ ಈ ಪುಸ್ತಕದ ಬೆಲೆ ರೂಪಾಯಿ ನೂರ ಎಂಭತ್ತು ಮಾತ್ರ. ಮುದ್ರಕರು ಶ್ರೀ ಅನಂತ ಪ್ರಕಾಶ ಮುದ್ರಣಾಲಯ ಕಿನ್ನಿಗೋಳಿ. ಈ ಪುಸ್ತಕವನ್ನು ಶ್ರೀ ಶರ್ಮರು ತಮ್ಮ ಸಹಕಲಾವಿದರಾಗಿದ್ದ ದಿವಂಗತ ಕಟೀಲು ಶ್ರೀನಿವಾಸ ರಾವ್ ( ಶೀನಯ್ಯ) ಅವರಿಗೆ ಅರ್ಪಿಸಿದ್ದಾರೆ.
ಹಿರಿಯ ಕಲಾವಿದರಾದ ಸುಣ್ಣಂಬಳ ಶ್ರೀ ವಿಶ್ವೇಶ್ವರ ಭಟ್ ಈ ಪುಸ್ತಕದ ಬಗೆಗೆ “ಪ್ರಯೋಜನ ಸಿದ್ಧಿ” ಎಂಬ ಶೀರ್ಷಿಕೆಯಡಿ ಬರೆದ ಲೇಖನವೂ ಕಟೀಲು ಮೇಳದ ಭಾಗವತರಾದ ಅಂಡಾಲ ಶ್ರೀ ದೇವೀಪ್ರಸಾದ ಶೆಟ್ಟಿ ಅವರು ಬರೆದ ಲೇಖನವೂ ಈ ಪುಸ್ತಕದಲ್ಲಿದೆ. ಸಹ ಕಲಾವಿದರೂ, ಆತ್ಮೀಯರೂ ಆದ ಶ್ರೀ ವಿಷ್ಣು ಶರ್ಮ ಅವರಿಗೆ ಅಭಿನಂದನೆಗಳು ಮತ್ತು ಶುಭಾಶಯಗಳು.
ಪುಸ್ತಕದ ಲೇಖಕರು: ವಾಟೆಪಡ್ಪು ವಿಷ್ಣು ಶರ್ಮ ಪೋನ್: 9901985207
ಪುರಾಣಗಳಲ್ಲಿ ಬರುವ ನಾರದನದು ಅತಿ ವಿಶಿಷ್ಟವೂ ಕೌತುಕವೂ ಆದ ವ್ಯಕ್ತಿತ್ವದ ಪಾತ್ರ. ನೋಟಕರಾಗಿ ನಾವು ಹಲವಾರು ಬಗೆಯಲ್ಲಿ ಅಥವಾ ದೃಷ್ಟಿಕೋನದಿಂದ ನಾರದನನ್ನು ಕಂಡಿದ್ದೇವೆ. ಆದರೆ ಪಾತ್ರಧಾರಿಯಾಗಿ ನಾರದನ ಪಾತ್ರಚಿತ್ರಣ ಹೇಗೆ. ಅದು ಅಷ್ಟು ಸುಲಭವಲ್ಲ.
ಪಾತ್ರಧಾರಿಯೊಬ್ಬ ನಾರದನ ಪಾತ್ರವನ್ನು ನಿರ್ವಹಿಸುವುದು ಒಂದು ದೊಡ್ಡ ಸವಾಲು. ಬೇರೆಯ ರಂಗ ಪ್ರಕಾರಗಳನ್ನು ಸ್ವಲ್ಪ ಬದಿಗಿರಿಸಿ ಯಕ್ಷಗಾನದ ಬಗ್ಗೆ ವಿಚಾರ ಮಾಡಿದಾಗ ನಮಗೆ ಇಲ್ಲಿ ನಾರದನ ಪಾತ್ರಕ್ಕೆ ಅತ್ಯಂತ ಗೌರವವನ್ನು ತಂದುಕೊಟ್ಟ ಕೆಲವೇ ಕೆಲವು ಕಲಾವಿದರನ್ನು ಕಾಣಸಿಗಬಹುದು.
ಯಕ್ಷಗಾನದಲ್ಲಿ ನಾರದ ಪಾತ್ರ ಸಾಮಾನ್ಯವಾಗಿ ಹಾಸ್ಯಗಾರರೇ ನಿರ್ವಹಿಸುವ ಪಾತ್ರ. ಆದುದರಿಂದಲೇ ನಾರದನ ಕ್ಯಾರೆಕ್ಟರ್ ಕೆಲವೊಮ್ಮೆ ನಗೆಪಾಟಲಿಗೀಡಾದದ್ದು ಸುಳ್ಳಲ್ಲ! ಆದರೆ ಯಕ್ಷಗಾನ ಹಾಸ್ಯ ಕಲಾವಿದರು ನಾರದನ ಪಾತ್ರವನ್ನು ನಿರ್ವಹಿಸುವಾಗ ತಮ್ಮ ಎಂದಿನ ಹಾಸ್ಯದ ಮೂಡಿನಿಂದ ಹೊರಬರಬೇಕಾದ ಅಗತ್ಯ ಈಗಿನ ದಿನಗಳಲ್ಲಿ ಖಂಡಿತವಾಗಿಯೂ ಇದೆ.
ನಾರದನೇನು? ಮತ್ತು ನಾರದನ ಉದ್ದೇಶವೇನು ಎಂಬುದನ್ನು ಮನನ ಮಾಡಿಕೊಂಡು ನಾರದನ ಪಾತ್ರವನ್ನು ರಂಗದಲ್ಲಿ ಚಿತ್ರಸುವ ಯಕ್ಷಗಾನ ಹಾಸ್ಯ ಕಲಾವಿದರು ಕೇವಲ ಬೆರಳೆಣಿಕೆಯಲ್ಲಿ ಕಾಣಸಿಗುತ್ತಾರೆ. ಅಂತಹವರಲ್ಲಿ ಕಟೀಲು ಮೇಳದ ಹಾಸ್ಯ ಕಲಾವಿದರಾದ ರವಿಶಂಕರ ವಳಕ್ಕುಂಜ ಅವರೂ ಒಬ್ಬರು.
ರವಿಶಂಕರ್ ವಳಕ್ಕುಂಜ ಅವರು ಪ್ರಸ್ತುತ ತೆಂಕುತಿಟ್ಟು ಯಕ್ಷಗಾನದ ಪ್ರಬುದ್ಧ, ಪ್ರಸಿದ್ಧ ಹಾಸ್ಯಗಾರರು. ನಾರದನ ಪಾತ್ರವೊಂದು ಕೆಲವರ ಕೈಯಲ್ಲಿ ಸಿಕ್ಕಿ ಅವಹೇಳನಕ್ಕೆ ಸಿಲುಕಿ ನಲುಗಿಹೋಗುತ್ತಿದ್ದ ಕಾಲಘಟ್ಟದಲ್ಲಿ ನಾರದ ಯಾರು ಮತ್ತು ನಾರದನ ಅಂತರಂಗವೇನು ಎಂಬುದನ್ನು ಪ್ರೇಕ್ಷಕರಿಗೆ ಮನನ ಮಾಡಿಕೊಟ್ಟು ನಾರದ ಪಾತ್ರವನ್ನು ನಿರ್ವಹಿಸಿದ ಕಲಾವಿದ. ಈ ದೃಷ್ಟಿಯಿಂದ ನೋಡಿದರೆ ರವಿಶಂಕರ್ ವಳಕ್ಕುಂಜ ಅವರು ಪ್ರಸ್ತುತ ಹಾಸ್ಯ ಕಲಾವಿದರ ನಡುವೆ ತಾನು ಪ್ರತ್ಯೇಕವಾಗಿಯೇ ನಿಲ್ಲುತ್ತಾರೆ.
ರವಿಶಂಕರ್ ವಳಕ್ಕುಂಜ ಅವರು ಲೇಖಕರಾಗಿ ಈಗಾಗಲೇ ಎಲ್ಲರಿಗೂ ಪರಿಚಿತರು ಮತ್ತು ಅವರು ಬರೆದ ಪುಸ್ತಕಗಳು ಯಕ್ಷಗಾನ ವಲಯದಲ್ಲಿ ಬಾರೀ ಜನಪ್ರಿಯತೆಯನ್ನು ಪಡೆದಿವೆ. “ಯಕ್ಷಗಾನ ಪ್ರಸಂಗಗಳಲ್ಲಿ ನಾರದ” ಎಂಬುದು ಇತ್ತೀಚೆಗೆ ಪ್ರಕಟವಾದ ಅವರ ಕೃತಿ. ಎಲ್ಲರೂ ಓದಲೇಬೇಕಾದ ಪುಸ್ತಕ. ಇದರಲ್ಲಿ ಅವರು ಒಟ್ಟು 111 ಯಕ್ಷಗಾನ ಪ್ರಸಂಗಗಳಲ್ಲಿ ಬರುವ ನಾರದನ ಪಾತ್ರದ ಪದ್ಯ ಮತ್ತು ಅದರ ಅರ್ಥವನ್ನು (ಸಂಭಾಷಣೆ) ಬರೆದಿದ್ದಾರೆ. ಯಕ್ಷಗಾನ ಅಭ್ಯಾಸಿಗಳಿಗಂತೂ ಈ ಪುಸ್ತಕ ಅತಿದೊಡ್ಡ ಸಾಹಿತ್ಯ ನಿಧಿ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ.
ಈ ಪುಸ್ತಕದಲ್ಲಿ ಒಟ್ಟು 224 ಪುಟಗಳಿವೆ. ಖ್ಯಾತ ಕಲಾವಿದ, ಸಾಹಿತಿ, ಶಿಕ್ಷಕ ಶ್ರೀ ರಾಧಾಕೃಷ್ಣ ಕಲ್ಚಾರ್ ಅವರ ಪ್ರಬುದ್ಧ ಬರಹದ ಮುನ್ನಡಿಯಿದೆ. ಕಟೀಲು ದೇವಳದ ಆನುವಂಶಿಕ ಅರ್ಚಕರಾದ ಶ್ರೀ ಲಕ್ಷ್ಮೀನಾರಾಯಣ ಆಸ್ರಣ್ಣ, ಶ್ರೀ ಕಮಲಾದೇವೀಪ್ರಸಾದ ಆಸ್ರಣ್ಣ, ವಿದ್ವಾನ್ ಶ್ರೀಹರಿನಾರಾಯಣದಾಸ ಆಸ್ರಣ್ಣರ ಶುಭ ಸಂದೇಶಗಳಿವೆ.
ಲೇಖಕರ ಮಾತು ವಿಭಾಗದಲ್ಲಿ ಲೇಖಕ ರವಿಶಂಕರ್ ವಳಕ್ಕುಂಜ ಅವರು ನಾರದನ ಪಾತ್ರವನ್ನು ಹೇಗೆ ನಿರ್ವಹಿಸಬಹುದು ಎಂಬುದರ ಬಗ್ಗೆ ಟಿಪ್ಪಣಿಯನ್ನು ನೀಡಿದ್ದಾರೆ. ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ಈ ಪುಸ್ತಕ ಮಾರಾಟಕ್ಕೆ ಲಭ್ಯವಿಲ್ಲ. ನಿಮಗೆ ಪುಸ್ತಕ ಬೇಕಾದರೆ ಲೇಖಕರನ್ನೇ ಸಂಪರ್ಕಿಸಬಹುದು.
ಕಲಾವಿದ, ಲೇಖಕರ ವಿಳಾಸ: ರವಿಶಂಕರ್ ವಳಕ್ಕುಂಜ, ಮಲೆ ಮನೆ, ಅಂಚೆ ಮಾಡಾವು, ಕೆಯ್ಯೂರು ಗ್ರಾಮ, ಪುತ್ತೂರು ತಾಲೂಕು, ದ.ಕ – 574210 ಮೊಬೈಲ್: 9164487083
ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುವ ಹುಡುಗಿಯ ತಂದೆ, ತನ್ನ ಮಗಳನ್ನು ಬಹಳ ಸಮಯದಿಂದ ಸಂಪರ್ಕಿಸಲು ಸಾಧ್ಯವಾಗಲಿಲ್ಲ ಮತ್ತು ಅವಳನ್ನು ಕೊಲೆ ಮಾಡಿರಬಹುದು ಎಂದು ಭಯಪಟ್ಟು ಇಮೇಲ್ನಲ್ಲಿ ದೂರು ದಾಖಲಿಸುತ್ತಾನೆ.
ಹುಡುಗಿ ಕಾಣೆಯಾದ 10 ತಿಂಗಳ ನಂತರ ತಂದೆಯಿಂದ ದೂರು ದಾಖಲಾಗಿದೆ ಮತ್ತು ಫರಿದಾಬಾದ್ನಲ್ಲಿ ಕೊಳೆತ ಸ್ಥಿತಿಯಲ್ಲಿ ಬಾಲಕಿಯ ಶವ ಆಕೆಯ ಮನೆಯಲ್ಲಿ ಹೂಳಲ್ಪಟ್ಟ ಸ್ಥಿತಿಯಲ್ಲಿ ಪತ್ತೆಯಾಗುತ್ತದೆ.
ಹರಿಯಾಣದ ಫರಿದಾಬಾದ್ ಜಿಲ್ಲೆಯಲ್ಲಿ ಬಾಲಕಿಯ ಸಾವಿನ ಸುಮಾರು 10 ತಿಂಗಳ ನಂತರ ಆಕೆಯ ಮನೆಯಿಂದ ಕೊಳೆತ ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಇಮೇಲ್ನಲ್ಲಿ, ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುವ ಹುಡುಗಿಯ ತಂದೆ, ತನ್ನ ಮಗಳನ್ನು ಬಹಳ ಸಮಯದಿಂದ ಸಂಪರ್ಕಿಸಲು ಸಾಧ್ಯವಾಗಲಿಲ್ಲ ಮತ್ತು ಅವಳನ್ನು ಕೊಲೆ ಮಾಡಿರಬಹುದು ಎಂದು ಭಯಪಡುತ್ತಾನೆ.
ದೂರನ್ನು ಸ್ವೀಕರಿಸಿದ ನಂತರ, ಫರಿದಾಬಾದ್ ಪೊಲೀಸರು ಕಾರ್ಯಾಚರಣೆಗೆ ಇಳಿದರು ಮತ್ತು ವಿಚಾರಣೆಗಾಗಿ ಹುಡುಗಿಯ ತಾಯಿ ಹನೀಫಾ ಅವರನ್ನು ಕರೆಸಿದರು, ಈ ಸಮಯದಲ್ಲಿ ಅವರು ಸುಮಾರು ಒಂದು ವರ್ಷದ ಹಿಂದೆ, ತನ್ನ ಮಗಳು ಒಬ್ಬ ವ್ಯಕ್ತಿಯೊಂದಿಗೆ ಓಡಿಹೋದಳು.
ಆದರೆ ಸ್ವಲ್ಪ ಸಮಯದ ನಂತರ ಹಿಂತಿರುಗಿದಳು ಎಂದು ಪೊಲೀಸರಿಗೆ ತಿಳಿಸಿದ್ದು ಅವಳು ಹಿಂತಿರುಗಿದ ನಂತರ, ನಾವು ಅವಳನ್ನು ಮನೆಗೆ ಬೀಗ ಹಾಕಲು ಪ್ರಾರಂಭಿಸಿದ್ದೇವೆ ಎಂದು ತಾಯಿ ಹೇಳಿದರು.
ಸಂಬಂಧಿಕರ ನಿಂದೆಯಿಂದ ಬೇಸತ್ತ ಬಾಲಕಿ 2023ರ ಸೆಪ್ಟೆಂಬರ್ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಾಯಿ ಹೇಳಿದ್ದಾಳೆ. ತನ್ನದೇ ಜನರ ನಿಂದನೆಯನ್ನು ತಪ್ಪಿಸಲು, ತಾಯಿ ಮತ್ತು ಅವರ ಸಹೋದರ ಆಕೆಯ ಶವವನ್ನು ಮನೆಯೊಳಗೆ ಹೂಳಿದರು.
ತಾಯಿಯ ಹೇಳಿಕೆಯ ನಂತರ, ಸಹಾಯಕ ಪೊಲೀಸ್ ಕಮಿಷನರ್ (ಮುಜೆಸರ್) ಮಹೇಶ್ ಶೆಯೋರಾನ್, ಬದ್ಖಲ್ ತಹಸೀಲ್ದಾರ್, ವಿಧಿವಿಜ್ಞಾನ ತಜ್ಞರು ಮತ್ತು ದೌಜ್ ಪೊಲೀಸ್ ಠಾಣೆಯ ಪ್ರಭಾರಿ ತಂಡವು ಸ್ಥಳಕ್ಕೆ ಆಗಮಿಸಿ, ಕೊಳೆತ ಸ್ಥಿತಿಯಲ್ಲಿದ್ದ ಬಾಲಕಿಯ ದೇಹವನ್ನು ಅಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮುಂದಿನ ಕ್ರಮಕ್ಕಾಗಿ ಮರಣೋತ್ತರ ಪರೀಕ್ಷೆಯ ವರದಿಯನ್ನು ಕಾಯಲಾಗುತ್ತಿದೆ.
ಕಾರ್ಕಳ: ದೇವಸ್ಥಾನಕ್ಕೆ ತೆರಳುತ್ತಿದ್ದ ವೇಳೆ ನಂದಳಿಕೆಯಲ್ಲಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯೊಬ್ಬರು ಬೈಕ್ ಡಿಕ್ಕಿ ಹೊಡೆದು ಸಾವಿಗೀಡಾಗಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಪ್ರಣಮ್ಯ ಶೆಟ್ಟಿ (14) ಎಂದು ಗುರುತಿಸಲಾಗಿದೆ. ಹತ್ತನೇ ತರಗತಿಯ ವಿದ್ಯಾರ್ಥಿನಿಯಾದ ಈಕೆ ಸ್ಥಳೀಯ ಲಕ್ಷ್ಮಿ ಜನಾರ್ದನ ದೇವಸ್ಥಾನಕ್ಕೆ ದರ್ಶನ ಪಡೆಯಲು ಮನೆಯಿಂದ ಹೊರಟಿದ್ದಳು. ರಸ್ತೆಯಲ್ಲಿ ಸ್ವಲ್ಪ ಮುಂದೆ ಸಾಗುತ್ತಿದ್ದಂತೆ ಈ ಘಟನೆ ಸಂಭವಿಸಿದೆ.
ಬೈಕ್ ಸವಾರನ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಅಪಘಾತ ಸಂಭವಿಸಿದ ಸಮಯದಲ್ಲಿ ವೇಳೆ ಬೈಕ್ ಸವಾರ ರಸ್ತೆಯಿಂದ ತೀವ್ರ ಎಡಕ್ಕೆ ಪಲ್ಟಿಯಾಗಿ ಪ್ರಣಮ್ಯ ಅವರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾರೆ.
ಪ್ರಣಮ್ಯ ಅವರನ್ನು ತಕ್ಷಣ ಕಾರ್ಕಳದ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ತಲೆಗೆ ತೀವ್ರ ಸ್ವರೂಪದ ಗಾಯವಾಗಿದ್ದುದರಿಂದ ರಕ್ಷಿಸಲಾಗಲಿಲ್ಲ.
ಪ್ರತಿದಿನ ಸಂಜೆ ಪ್ರಣಮ್ಯ ವಾಡಿಕೆಯಂತೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಳು. ಅವಳು ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದಳು. ಘಟನೆ ಕುರಿತು ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ
ಶಾಲಾ ಜೀವನದಲ್ಲಿಯೇ ಮಕ್ಕಳಿಗೆ ಚುನಾವಣಾ ಅರಿವು ಮೂಡಿಸುವ ನಿಟ್ಟಿನಲ್ಲಿ ವಿದ್ಯಾರ್ಥಿ ಚುನಾವಣೆಯ ಮೂಲಕ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ಪ್ರಕ್ರಿಯೆ ನಡೆಯಿತು.
ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 10ನೇ ತರಗತಿಯ ಆಕಾಶ್ ಪ್ರಭು (ಎಂ ಗುರುಪ್ರಸಾದ್ ಪ್ರಭು ಮತ್ತು ಶ್ರೀಮತಿ ಅಶ್ವಿನಿ ಪ್ರಭು ದಂಪತಿಗಳ ಪುತ್ರ) ಹಾಗೂ ಉಪನಾಯಕಿಯಾಗಿ 9 ನೇ ತರಗತಿಯ ಕುಮಾರಿ ಸುಪ್ರಜಾ ರಾವ್ (ಶ್ರೀ ಪ್ರಶಾಂತ್ ರಾವ್ ಮತ್ತು ಶ್ರೀಮತಿ ಸುಮನಾ ಕೆ ದಂಪತಿಗಳ ಪುತ್ರಿ) ಆಯ್ಕೆಯಾದರು.
ಪ್ರಾಥಮಿಕ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿ ನಾಯಕನಾಗಿ 7ನೇ ತರಗತಿಯ ಸಾಕ್ಷಿನ್ ಆರ್ ರೈ (ಶ್ರೀ ರವೀಂದ್ರನಾಥ್ ರೈ ಮತ್ತು ಶ್ರೀಮತಿ ಜ್ಯೋತಿಲಕ್ಷ್ಮಿ ಜಿ ದಂಪತಿಗಳ ಪುತ್ರ) ಹಾಗೂ ಉಪನಾಯಕನಾಗಿ 6 ನೇ ತರಗತಿಯ ಸ್ಕಂದನ್ ಎಸ್ ( ಶ್ರೀ ನಾಗರಾಜ್ ಎಸ್ ಮತ್ತು ಶ್ರೀಮತಿ ಲಿಖಿತಾ ಪಿ ದಂಪತಿಗಳ ಪುತ್ರ) ಆಯ್ಕೆಯಾದರು.
ಸಭಾಪತಿಯಾಗಿ ಕು. ವರ್ಣಾ.ಕೆ, ಪ್ರತಿಪಕ್ಷ ನಾಯಕರಾಗಿ ಸಾರ್ಥಕ್, ಗೃಹ ಸಚಿವರಾಗಿ ಯಶಸ್, ಶಮನ್ ; ಶಿಕ್ಷಣ ಸಚಿವರಾಗಿ ಲಿಕೀತನ್, ಗಣೇಶ್ ಪಟೇಲ್; ಹಣಕಾಸು ಸಚಿವರಾಗಿ ವಿಕಾಸ್, ಚಂದನ್ ;
ಆರೋಗ್ಯ ಸಚಿವರಾಗಿ ನಿಖಿಲ್, ದೈವಿಕ್ ; ಕ್ರೀಡಾ ಸಚಿವರಾಗಿ ಮನ್ವಿತ್, ಚಿಂತನಾ ; ಸಾಂಸ್ಕೃತಿಕ ಸಚಿವರಾಗಿ ಕೃತಿ, ಅಭಿನವ್ ; ನೀರಾವರಿ ಸಚಿವರಾಗಿ ನಂದಕಿಶೋರ್, ಅಭಿಷೇಕ್ ; ಆಹಾರ ಸಚಿವರಾಗಿ ಶಾನ್ವಿ, ಆರಾಧನ್ ; ಪ್ರಸಾರಖಾತೆ ಸಚಿವರಾಗಿ ಚಿನ್ಮಯಿ, ಅವನಿ. ಎಸ್. ರೈ ; ದಾಖಲೆ ನಿರ್ವಾಹಕರಾಗಿ ದೇಶಿಕ್ ಆಯ್ಕೆಯಾದರು.
ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಇವರ ಮಾರ್ಗದರ್ಶನದಲ್ಲಿ ಸಹಶಿಕ್ಷಕರಾದ ಶ್ರೀ ಭಾಸ್ಕರ ಗೌಡ ಮತ್ತು ಶ್ರೀ ರಾಧಾಕೃಷ್ಣ ರೈ ಇವರ ನೇತೃತ್ವದಲ್ಲಿ 5ನೇ ತರಗತಿ ಮೇಲ್ಪಟ್ಟ ವಿದ್ಯಾರ್ಥಿ ವಿದ್ಯಾರ್ಥಿನಿಯರು ಮತದಾನ ಪ್ರಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಶಾಲಾ ಶಿಕ್ಷಕ ವೃಂದ ಮತಗಟ್ಟೆ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಿದರು.
ತಾಳಮದ್ದಲೆ ಪುರಾಣ ಕತೆಯನ್ನು ಜನಸಾಮಾನ್ಯರಿಗೆ ತಲಪಿಸುವ ಅಪೂರ್ವ ಮಾಧ್ಯಮ – ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ.
ಯಕ್ಷಗಾನ ನಮ್ಮ ನಾಡಿನ ಪರಿಪೂರ್ಣ ಕಲಾಪ್ರಕಾರ. ತಾಳಮದ್ದಲೆ ಏಕಕಾಲದಲ್ಲಿ ಪುರಾಣದ ಕತೆಯನ್ನು ಜನ ಸಾಮಾನ್ಯರಿಗೆ ತಲಪಿಸುತ್ತಾ, ವ್ಯಾಖ್ಯಾನಿಸುತ್ತಾ, ಮುರಿದು ಕಟ್ಟುತ್ತಾ ಬಂದಿದೆ. ಅನೇಕ ವಿದ್ವಾಂಸರು ಇದನ್ನು ಶತಮಾನಗಳಿಂದ ಮಾಡುತ್ತಾ ಬಂದಿದ್ದಾರೆ. ಪ್ರಸ್ತುತ ಸಂಘರ್ಷದ ಸಂದರ್ಭದಲ್ಲಿ ಇದರ ಕೊಡುಗೆ ಅತ್ಯಂತ ಮಹತ್ವದ್ದು ಎಂದು ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಅವರು ಉಡುಪಿಯ ಯಕ್ಷಗಾನ ಕಲಾರಂಗವು ಜೂನ್ 23, 2024 ಭಾನುವಾರದಂದು ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನುಗ್ರಹ ಸಂದೇಶ ನೀಡುತ್ತಿದ್ದರು.
ತಲಾ 20,000/- ನಗದು ಮತ್ತು ಪ್ರಶಸ್ತಿ ಪತ್ರಗಳನ್ನೊಳಗೊಂಡಿರುವ ಮಟ್ಟಿ ಮುರಲೀಧರ ರಾವ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಜಬ್ಬಾರ್ ಸಮೊ ಅವರಿಗೂ, ಪೆರ್ಲ ಕೃಷ್ಣ ಭಟ್ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಸೇರಾಜೆ ಸೀತಾರಾಮ ಭಟ್ ಅವರಿಗೂ ಪ್ರದಾನ ಮಾಡಲಾಯಿತು.
ಶಾರದಾ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರಾದ ಡಾ. ಎಂ. ಬಿ. ಪುರಾಣ ಕರು ಅಧ್ಯಕ್ಷತೆ ವಹಿಸಿದ್ದರು. ವಿದ್ವಾನ್ ಪಂಜ ಭಾಸ್ಕರ ಭಟ್, ಡಾ. ಆದರ್ಶ ಹೆಬ್ಬಾರ್, ಶ್ರೀಮತಿ ರಜನಿ ಹೆಬ್ಬಾರ್ ಅಭ್ಯಾಗತರಾಗಿ ಭಾಗವಹಿಸಿದ್ದರು.
ವೇದಿಕೆಯಲ್ಲಿ ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ ಉಪಸ್ಥಿತರಿದ್ದರು. ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು, ನಾರಾಯಣ ಎಂ. ಹೆಗಡೆ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಎಚ್. ಎನ್. ಶೃಂಗೇಶ್ವರ ವಂದಿಸಿದರು.
ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು. ಪ್ರಶಸ್ತಿ ಪ್ರದಾನದ ಅನಂತರ ಪ್ರಸಿದ್ಧ ಕಲಾವಿದರ ಕೂಡುವಿಕೆಯಲ್ಲಿ ‘ಸೀತಾಪಹಾರ’ ತಾಳಮದ್ದಲೆ ಪ್ರಸ್ತುತಗೊಂಡಿತು.
ಜುಲೈ 1ರಿಂದ ಜುಲೈ 7ರ ವರೆಗೆ ಪುತ್ತೂರಿನಲ್ಲಿ ಅಮೋಘ ತಾಳಮದ್ದಳೆ ಸಪ್ತಾಹ ಜರಗಲಿದೆ.
ಪುತ್ತೂರಿನ ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಶ್ರೀ ಸುಕೃತೀಂದ್ರ ಕಲಾ ಮಂದಿರದಲ್ಲಿ ದಿನಾಂಕ 01.07.2024ರಿಂದ 07.07.2024ರ ವರೆಗೆ ಯಕ್ಷಗಾನ ಕಲಾರಸಿಕರಿಗೆ ಅಮೋಘ ತಾಳಮದ್ದಳೆಗಳ ರಸದೌತಣ ಸಿಗಲಿದೆ.
ಶ್ರೀ ಲಕ್ಷ್ಮೀ ವೆಂಕಟ್ರಮಣ ದೇವಸ್ಥಾನದ ಆಶ್ರಯದಲ್ಲಿ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ ಉಜಿರೆ ಇವರು ಪ್ರಸ್ತುತಪಡಿಸುವ, ಭಾಗವತ ಪದ್ಯಾಣ ಗಣಪತಿ ಭಟ್ ಸಂಸ್ಮರಣೆ, ಕುರಿಯ ಮತ್ತು ಪದ್ಯಾಣ ಪ್ರಶಸ್ತಿ ಪ್ರದಾನ ಮತ್ತು ಏಳು ದಿನಗಳಲ್ಲಿ ತಾಳಮದ್ದಳೆ ಕೂಟ ನಡೆಯಲಿದೆ.
ಈ ಬಾರಿಯ ಪದ್ಯಾಣ ಪ್ರಶಸ್ತಿಯನ್ನು ಭಾಗವತರಾದ ಕುರಿಯ ಗಣಪತಿ ಶಾಸ್ತ್ರಿಗಳಿಗೆ ಮತ್ತು ಕುರಿಯ ಪ್ರಶಸ್ತಿಯನ್ನು ಹಿಮ್ಮೇಳ ಕಲಾವಿದರಾದ ಶ್ರೀ ಸೀತಾರಾಮ ತೋಳ್ಪಾಡಿತ್ತಾಯರಿಗೆ ನೀಡಲಾಗುತ್ತದೆ.