Monday, August 3, 2026
Home Blog Page 66

ಕಾಲೇಜು ವಿದ್ಯಾರ್ಥಿನಿ ನೇಣು ಬಿಗಿದು ಆತ್ಮಹತ್ಯೆ – ಮನೆಯಲ್ಲಿ ಯಾರೂ ಇಲ್ಲದಾಗ ನಡೆದ ಘಟನೆ, ಕಾರಣ ನಿಗೂಢ

ಕಾಲೇಜು ವ್ಯಾಸಂಗ ಮಾಡುತ್ತಿದ್ದ ಹುಡುಗಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಘಟನೆ ನಡೆದದ್ದು ತೀರ್ಥಹಳ್ಳಿಯ ಬಿಳುಕೊಪ್ಪ ಗ್ರಾಮದಲ್ಲಿ.

ಮೃತ ವಿದ್ಯಾರ್ಥಿನಿ ಅಧೀಕ್ಷಾ (20) ಬಾಳೆಬೈಲು ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ತರಗತಿಯಲ್ಲಿ ಓದುತ್ತಿದ್ದಳು. ಗುರುವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾಳೆ.

ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ದೇಹವನ್ನು ಮರಣೋತ್ತರ ಪರೀಕ್ಷೆಗೆ ತೀರ್ಥಹಳ್ಳಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮೃತ ಯುವತಿ ಅಧೀಕ್ಷಾ ಬೆಳಗ್ಗೆ ಎಷ್ಟು ಹೊತ್ತಾದರೂ ಹೊರಗೆ ಬರದೇ ಇದ್ದಿದ್ದರಿಂದ ಅನುಮಾನಗೊಂಡ ಮನೆಯವರು ಬಾಗಿಲು ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿರುವ ವಿಚಾರ ಅರಿವಿಗೆ ಬಂದಿದೆ.

ತಿಂಗಳ ಹಿಂದೆ ಕೊಲೆಯಾದ ಯುವತಿಯ ಶವ ಪತ್ತೆ – ಅವಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರನ ಡೆತ್ ನೋಟ್ ನಿಂದ ಸುಳಿವು ಪತ್ತೆ


ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದ ಮಹಿಳೆಯ ಕೊಳೆತ ಶವವನ್ನು ನವಿ ಮುಂಬೈನಲ್ಲಿ ಪೊಲೀಸರು ಪತ್ತೆ ಮಾಡಿದ್ದಾರೆ. ಆಕೆಯನ್ನು ಆಕೆಯ ಮಾಜಿ ಗೆಳೆಯ ಕತ್ತು ಹಿಸುಕಿ ಕೊಲೆ ಮಾಡಿದ್ದು, ಬಳಿಕ‌ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಡಿಸೆಂಬರ್ 12, 2023 ರಿಂದ ನಾಪತ್ತೆಯಾಗಿದ್ದ 19 ವರ್ಷದ ಮಹಿಳೆಯ ಶವ ಮಂಗಳವಾರ ಪತ್ತೆಯಾಗಿದೆ, ಆಕೆಯ ಪ್ರೇಮಿ ಅವಳನ್ನು ಕೊಂದ ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ವೈಷ್ಣವಿ ಬಾಬರ್ ಅವರ ಕೊಳೆತ ದೇಹವು ನವಿ ಮುಂಬೈನ ಖಾರ್ಘರ್ ಹಿಲ್ಸ್ ಪ್ರದೇಶದ ಅರಣ್ಯದಲ್ಲಿ ಪತ್ತೆಯಾಗಿದೆ.

ವೈಷ್ಣವಿ ಬಾಬರ್ ತನ್ನೊಂದಿಗೆ ಸಂಬಂಧವನ್ನು ಕಡಿದುಕೊಂಡಿದ್ದಕ್ಕಾಗಿ ಕೋಪಗೊಂಡ ಆರೋಪಿ 24 ವರ್ಷದ ವೈಭವ್ ಬುರುಂಗಲೆ ಅವರು ಖಾರ್ಘರ್ ಬೆಟ್ಟಗಳಲ್ಲಿ ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.


ವೈಭವ್ ತನ್ನ ಆತ್ಮಹತ್ಯಾ ಪತ್ರದಲ್ಲಿ ನಮೂದಿಸಿದ ಕೊಲೆಯ ವಿಚಾರವನ್ನು ಗಮನಿಸಿದ ನಂತರ ಪೊಲೀಸರು ವೈಷ್ಣವಿ ಶವಕ್ಕಾಗಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು.


ವೈಷ್ಣವಿ ಬಾಬರ್ ಡಿಸೆಂಬರ್ 12 ರಂದು ಸಿಯೋನ್‌ನಲ್ಲಿರುವ ತನ್ನ ಕಾಲೇಜಿಗೆ ಹೋದರು ಆದರೆ ಮನೆಗೆ ಹಿಂತಿರುಗಲಿಲ್ಲ, ನಂತರ ಆಕೆಯ ತಾಯಿ ಅದೇ ದಿನ ಕಳಂಬೋಲಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದ ವರದಿಯನ್ನು ದಾಖಲಿಸಿದ್ದಾರೆ.

ಅದೇ ದಿನ, ವೈಭವ್ ಬುರುಂಗಲೆ ಅವರ ದೇಹವು ರೈಲಿನ ಮುಂದೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಜಯಿನಗರ ನಿಲ್ದಾಣದ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಅವರ ಸಾವಿನ ಕುರಿತು ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಸಲು ವಿಶೇಷ ಕಾರ್ಯಪಡೆ ರಚಿಸಲಾಗಿದೆ.

ವೈಭವ್‌ನ ಮೊಬೈಲ್‌ನಲ್ಲಿ ವೈಷ್ಣವಿಯನ್ನು ಕೊಲೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳಲು ಹೊರಟಿರುವುದಾಗಿ ಬರೆದಿರುವ ಆತ್ಮಹತ್ಯಾ ಪತ್ರವನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು ಮತ್ತು ವೈಷ್ಣವಿ ನಾಪತ್ತೆಯಾದ ದಿನ ಇಬ್ಬರೂ ಖಾರ್ಘರ್ ಹಿಲ್ಸ್ ಪ್ರದೇಶದಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದಾರೆ ಎಂದು ಕಂಡುಹಿಡಿದರು.

ಖಾರ್ಘರ್‌ನ ಓವ್ ಕ್ಯಾಂಪ್ ಪ್ರದೇಶದಲ್ಲಿನ ಡಂಪಿಂಗ್ ಗ್ರೌಂಡ್‌ನಲ್ಲಿ ಪೊದೆಗಳಲ್ಲಿ ಬಿದ್ದಿರುವ ವೈಷ್ಣವಿ ಮೃತದೇಹದಲ್ಲಿ ಇದ್ದ, ಕಾಲೇಜಿಗೆ ತೆರಳುವಾಗ ಧರಿಸಿದ್ದ ಉಡುಗೆ, ಕೈ ಗಡಿಯಾರ, ಗುರುತಿನ ಚೀಟಿ ಆಧರಿಸಿ ಆಕೆಯ ದೇಹವನ್ನು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಚತುರ್ಥಚರಣ  ಕಬ್ಸ್ ರಾಜ್ಯಪಾಲರಿಂದ ಪ್ರಶಸ್ತಿ ಸ್ವೀಕಾರ

ಎಂ ಜಶಿತ್ ಆಚಾರ್ಯ ಅದ್ವೈತ ಶಂಕರ ವೈ  ರಾಹುಲ್ ಜಿ ಎಂ        ಸ್ಕಂದ ಎಂ           ವಸಿಷ್ಟ ಸಿ ಎಸ್

ಆರ್ಯನ್ ಪಿ.ಎಲ್       ಸಂಹಿತ್ ಸಿ ಅಲಾರ್       ಕೃತಿಕ್ ಬಿ ಆರ್           ಪ್ರಣವ್ ಕೇಕುಣ್ಣಾಯ  

ಪುತ್ತೂರು :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಳದಲ್ಲಿ ನಡೆದ ಕಬ್ಸ್ ಚತುರ್ಥ ಚರಣ ಪರೀಕ್ಷೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ, ಪುತ್ತೂರಿನ  9 ವಿದ್ಯಾರ್ಥಿಗಳು ತೇರ್ಗಡೆಗೊಂಡು ಬೆಂಗಳೂರಿನ ರಾಜ ಭವನದ ಗಾಜಿನ ಮನೆಯಲ್ಲಿ ನಡೆಯುವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಜನವರಿ ತಿಂಗಳ 19ನೇ ತಾರೀಖಿನಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

     ಪ್ರಸ್ತುತ 5ನೇ ತರಗತಿಯ ವಿದ್ಯಾರ್ಥಿಗಳಾದ ಅದ್ವೈತ ಶಂಕರ ವೈ  (ರಾಜೇಶ್ ವೈ ಹಾಗೂ ದಿವ್ಯ ವೈ ದಂಪತಿಯ ಪುತ್ರ ) ಆರ್ಯನ್ ಪಿ .ಎಲ್. (ಪ್ರವೀಣ್ ಕುಮಾರ್ ಕೆ ಹಾಗೂ ಲತಾ ಬಿ ದಂಪತಿಯ ಪುತ್ರ)ಕೃತಿಕ್ ಬಿ ಆರ್( ಬಿ ರಮೇಶ್ ಹಾಗೂ ಅನುಪಮಾ ಬಿ ಎಂ ದಂಪತಿಯ ಪುತ್ರ) ಎಂ ಜಶಿತ್ ಆಚಾರ್ಯ (ಎಂ ಜಯಪ್ರಕಾಶ್ ಹಾಗೂ ಗೌತಮಿ ಕೆ ದಂಪತಿ ಪುತ್ರ )ಪ್ರಣವ್ ಕೇಕುಣ್ಣಾಯ (ಕೃಷ್ಣಪ್ರಸಾದ  ಕೇಕುಣ್ಣಾಯ ಹಾಗೂ ಅರ್ಚನಾ ಕೆ ದಂಪತಿ ಪುತ್ರ) ರಾಹುಲ್ ಜಿ ಎಂ ( ಗಿರೀಶ್ ಎಂ ಹಾಗೂ ಮಲ್ಲಿಕಾ ದಂಪತಿ ಪುತ್ರ ) ಸಂಹಿತ್ ಸಿ  ಅಲಾರ್ (ಚಂದ್ರಹಾಸ ಅಲಾರ್  ಹಾಗೂ ಯಾಮಿನಿ

ದಂಪತಿ  ಪುತ್ರ). ಸ್ಕಂದ ಎಂ  (ಮೋಹನ್ ಹಾಗೂ ಶೋಭಾ ದಂಪತಿಯ ಪುತ್ರ) ವಸಿಷ್ಟ ಸಿ ಎಸ್ (ಚಂದ್ರಶೇಖರ್ ಎಸ್ ಹಾಗೂ ಸುಜಾತ ಡಿ ದಂಪತಿಯ ಪುತ್ರ)  ಹಾಗೂ ಲೇಡಿ ಕಬ್ ಮಾಸ್ಟರ್ ಶ್ರೀಮತಿ ಪುಷ್ಪಲತಾ ಕೆ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸತೀಶ್ ಕುಮಾರ್ ರೈ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸುತ್ತಾರೆ

ಕೆರೆ ಹೊಂಡದಲ್ಲಿ ತಾಯಿ ಮತ್ತು ಇಬ್ಬರು ಎಳೆಯ ಮಕ್ಕಳ ಮೃತ ದೇಹಗಳು ಪತ್ತೆ

ಕೆರೆಯೊಂದರಲ್ಲಿ ತಾಯಿ ಹಾಗೂ ತನ್ನ ಇಬ್ಬರು ಮಕ್ಕಳ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಮಿಟ್ಟೇಮರಿ ಬಳಿಯ ಕೆರೆಯೊಂದರಲ್ಲಿ ಮೃತದೇಹಗಳು ಪತ್ತೆಯಾಗಿವೆ.

ಎಳೆಯ ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ವ್ಯಕ್ತಪಡಿಸಲಾಗಿದೆ.

ಶವಗಳು ತೇಲಾಡುತ್ತಿದ್ದನ್ನು ಕಂಡ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತದೇಹಗಳನ್ನು ಮೇಲಕ್ಕೆ ತೆಗೆಯಲಾಗಿದ್ದು ತಾಯಿ ಚಿಂತಾಮಣಿ ತಾಲೂಕು ಯಗವಕೋಟೆ ನಿವಾಸಿ ರಾಧ ಎಂದು ಪತ್ತೆ ಮಾಡಲಾಗಿದೆ.

ಮಹಿಳೆಯ ಗಂಡ ಮಲ್ಲಿಕಾರ್ಜುನ್ ಮತ್ತು 4 ವರ್ಷದ ಮಗಳು ಪೂರ್ವಿತಾ ಮತ್ತು ಇನ್ನೊಬ್ಬ ಮಗಳಿಗೆ ಇನ್ನೂ ಹೆಸರಿಟ್ಟಿರಲಿಲ್ಲ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಬಾಗೇಪಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

8 ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಯುವತಿ ನೇಣು ಬಿಗಿದು ಆತ್ಮಹತ್ಯೆ – ಡೆತ್ ನೋಟ್ ಪತ್ತೆ

ಪ್ರೀತಿಸಿ 8 ತಿಂಗಳ ಹಿಂದೆಯಷ್ಟೇ ಮದುವೆವಾಗಿದ್ದ ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನೆ ನಡೆದದ್ದು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಎಂಬಲ್ಲಿ.

ಶಮಿತಾ (24) ಎಂಬವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ. ರಾತ್ರಿ ಮಲಗಲು ಮನೆಯ ಉಪ್ಪರಿಗೆಯ ಕೊಠಡಿಗೆ ಹೋಗಿದ್ದಳು. ಬೆಳಗ್ಗೆ ಬಹಳ ಹೊತ್ತಾದರೂ ಹೊರ ಬಂದಿರಲಿಲ್ಲ. ಅನುಮಾನಗೊಂಡ ಮನೆಯ ಕೆಲಸದವರು ಕಿಟಕಿ ತೆರೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡ ವಿಷಯ ಗೊತ್ತಾಗಿದೆ.

ಈ ವೇಳೆಯಲ್ಲಿ ರಾತ್ರಿ ಪಾಳಿ ಕೆಲಸಕ್ಕೆ ಪತಿ ವಿದ್ಯಾರ್ಥ್ ತೆರಳಿದ್ದರು. ಮನೆಯಲ್ಲಿ ಗಂಡನ ತಂದೆ, ತಾಯಿ ಇದ್ದರು.

ಕೊಠಡಿಯಲ್ಲಿ ಡೆತ್‌ನೋಟ್ ಪತ್ತೆಯಾಗಿದೆ, ಅಸೌಖ್ಯತೆಯ ಕಾರಣದಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ನಲ್ಲಿ ಬರೆಯಲಾಗಿದೆ.

ನೊಣಬೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿಜ್ಜಳ ಗ್ರಾಮದ ಶಮಿತಾ 2023ರಲ್ಲಿ ದಾಸನಕೊಡಿಗೆಯ ವಿದ್ಯಾರ್ಥ್ ಜೊತೆ ಮದುವೆವಾಗಿದ್ದರು. ವಿದ್ಯಾರ್ಥ್ ವನ್ಯಜೀವಿ ಅಭಯಾರಣ್ಯ ವಿಭಾಗದ ಅಮಾವಾಸ್ಯೆಬೈಲು ವಲಯ ಅರಣ್ಯದಲ್ಲಿ ಕೆಲಸಮಾಡುತ್ತಿದ್ದರು.

.
ತೀರ್ಥಹಳ್ಳಿಯ ಜೆ.ಸಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಯಿತು. ಆಗುಂಬೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.

ಕುರಿಯ ಪ್ರತಿಷ್ಠಾನದಿಂದ ಬಲಿಪ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಯಕ್ಷಗಾನ ಭಾಗವತಿಕೆ ಸ್ಪರ್ಧೆಗೆ ಆಹ್ವಾನ

ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.) ಉಜಿರೆ ಇದರ ರಜತ ಪರ್ವ ಸರಣಿಯ ಸಮಾಪನ ಪ್ರಯುಕ್ತ, ಬಲಿಪ ನಾರಾಯಣ ಭಾಗವತರ ಸ್ಮೃತಿ ಗೌರವಾರ್ಥ ತೆಂಕುತಿಟ್ಟು ಯಕ್ಷಗಾನ ಭಾಗವತಿಕೆ ಸ್ಪರ್ಧೆ ಆಯೋಜಿಸಲಾಗಿದೆ.

ರಜತಪರ್ವ ಸರಣಿಯಲ್ಲಿ ರಾಜ್ಯ ಹಾಗೂ ಹೊರರಾಜ್ಯಗಳಲ್ಲಿ 150 ತಾಳಮದ್ದಳೆಗಳನ್ನು ಸಂಘಟಿಸಲಾಗಿದ್ದು ಸಮಾರೋಪ ಸಮಾರಂಭದ ಪ್ರಯುಕ್ತ, ತೆಂಕುತಿಟ್ಟು ಭಾಗವತಿಕೆಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ, ಪದವಿ ಪೂರ್ವ ಕಾಲೇಜು ವಿಭಾಗ ಹಾಗೂ ಪದವಿ, ಸ್ನಾತಕೋತ್ತರ ಪದವಿ ವಿಭಾಗಗಳಲ್ಲಿ ಪ್ರತ್ಯೇಕ ಸ್ಪರ್ಧೆ ನಡೆಯಲಿದೆ.

ಪ್ರಥಮ, ದ್ವಿತೀಯ, ತೃತೀಯ ಬಹುಮಾನಗಳನ್ನು ನೀಡಲಾಗುವುದು. ಎಲ್ಲ ಸ್ಪರ್ಧಾಳುಗಳಿಗೆ ಪ್ರಯಾಣ ವೆಚ್ಚ ಭರಿಸಲಾಗುವುದು. ಒಬ್ಬ ಸ್ಪರ್ಧಾಳುವಿಗೆ 10 ನಿಮಿಷಗಳ ಕಾಲಾವಕಾಶ ಇದ್ದು, ಹಿಮ್ಮೇಳ ಪರಿಕರ ಹಾಗೂ ನುರಿತ ಹಿಮ್ಮೇಳ ವಾದಕರನ್ನು ಪ್ರತಿಷ್ಠಾನದ ವತಿಯಿಂದ ಒದಗಿಸಲಾಗುವುದು.

ಒಡ್ಡೋಲಗದ ಪದ್ಯ, ಶೃಂಗಾರ, ವೀರರಸದ ಹಾಡುಗಳನ್ನು ಆಯ್ಕೆ ಮಾಡುವುದು ಕಡ್ಡಾಯ. ಕೊಟ್ಟ ಸಮಯದ ಮಿತಿಯಲ್ಲಿ ಎಷ್ಟು ಹಾಡುಗಳನ್ನಾದರೂ ಹಾಡಬಹುದು. ಪೌರಾಣಿಕ ಪ್ರಸಂಗಗಳ ಹಾಡುಗಳನ್ನೇ ಆಯ್ದುಕೊಳ್ಳಬೇಕು.

ಸ್ಪರ್ಧಾಳುಗಳು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕುರಿತು ಪ್ರಾಂಶುಪಾಲರಿಂದ ದೃಢೀಕರಣ ಮಾಡಿರಬೇಕು. ಜ.30ರ ಒಳಗೆ ಆಸಕ್ತರು ಸಂಪರ್ಕಿಸಬೇಕಾದ ವಿಳಾಸ:


ಉಜಿರೆ ಅಶೋಕ ಭಟ್, ಚಿನ್ಮಯ, ಅಜಿತ ನಗರ, ಉಜಿರೆ 574240 ದ.ಕ., ದೂ: 9449510666, 9449255666.

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಕೆ ಎಲ್ ರಾಹುಲ್ ಭೇಟಿ ನೀಡಿ ದೇವರ ದರ್ಶನ

ನಿನ್ನೆಯ ಕೊಲ್ಲೂರು ಕ್ಷೇತ್ರದ ಭೇಟಿಯ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕ್ರಿಕೆಟಿಗ ಕೆಎಲ್ ರಾಹುಲ್ ಭೇಟಿ ನೀಡಿ ದೇವರ ದರ್ಶನ ಪಡೆದರು.

ಖ್ಯಾತ ಕ್ರಿಕೆಟ್ ಆಟಗಾರ ಕೆ.ಎಲ್. ರಾಹುಲ್ ಬುಧವಾರ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ವಿಶೇಷ ಭೇಟಿ ನೀಡಿ, ದೇವರ ದರ್ಶನ ಪಡೆದರು.

ಅವರು ಹೊಸಳಿಗಮ್ಮನ ದೇಗುಲಕ್ಕೂ ತೆರಳಿ ನಮನ ಸಲ್ಲಿಸಿದರು.
ಅವರನ್ನು ದೇವಸ್ಥಾನದ ಅಧಿಕಾರಿಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಅಧಿಕಾರಿಗಳು, ಅರ್ಚಕರು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ಯಕ್ಷಗಾನ ಕಲಾರಂಗ ಕಚೇರಿಗೆ ಪುತ್ತಿಗೆ ಶ್ರೀಗಳ ಭೇಟಿ

0

ಯಕ್ಷಗಾನ ಕಲಾರಂಗ ಕಚೇರಿಗೆ ಪುತ್ತಿಗೆ ಶ್ರೀಗಳ ಭೇಟಿ

ಸರ್ವಜ್ಞ ಪೀಠವನ್ನು ಅಲಂಕರಿಸಲಿರುವ ಭಾವೀ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರು ಪರ್ಯಾಯ ಪೂರ್ವಭಾವಿಯಾಗಿ ಯಕ್ಷಗಾನ ಕಲಾರಂಗದ ಕಚೇರಿಗೆ 16.01.2024ರಂದು ಭೇಟಿ ನೀಡಿದರು.

ಯಕ್ಷಗಾನ ಕಲಾರಂಗದ ಚಟುವಟಿಕೆಗಳನ್ನು ಮೆಚ್ಚಿ, ಮುಂದೆ ಪರ್ಯಾಯದ ಅವಧಿಯಲ್ಲಿ ಸಂಸ್ಥೆಯ ಸಮಾಜಮುಖಿ ಚಟುವಟಿಕೆಗಳಿಗೆ ಸರ್ವ ರೀತಿಯ ಸಹಕಾರ ನೀಡಲಾಗುವುದು ಎಂದು ತಮ್ಮ ಅನುಗ್ರಹ ಸಂದೇಶದಲ್ಲಿ ನುಡಿದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದರು. ಪುತ್ತಿಗೆ ಮಠದ ಅಂತರಾಷ್ಟ್ರೀಯ ಕಾರ್ಯದರ್ಶಿ ಶ್ರೀ ಪಸನ್ನ ಆಚಾರ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ವೀಡಿಯೋ: ದ್ವಿಚಕ್ರ ವಾಹನದ ಮೇಲೆ ಯುವ ಜೋಡಿಯ ರೊಮಾನ್ಸ್ – ಪೊಲೀಸರಿಂದ ಕೇಸ್ ದಾಖಲು

ಯುವ ಜೋಡಿಗಳು ವೇಗವಾಗಿ ಬೈಕುಗಳಲ್ಲಿ ಸಾರ್ವಜನಿಕವಾಗಿ ಪ್ರೀತಿಯನ್ನು ಪ್ರದರ್ಶಿಸುವ (ರೊಮಾನ್ಸ್) ಪ್ರಕರಣಗಳು ದೇಶದ ವಿವಿಧ ಭಾಗಗಳಿಂದ ವರದಿಯಾಗಿವೆ.

ಮುಂಬೈನಲ್ಲಿ ವೇಗವಾಗಿ ದ್ವಿಚಕ್ರ ವಾಹನದಲ್ಲಿ ಜೋಡಿಯೊಂದು ರೋಮ್ಯಾನ್ಸ್ ಮಾಡುತ್ತಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟೀಕೆ ವ್ಯಕ್ತವಾಗಿದೆ. ನೋಡುಗರು ರೆಕಾರ್ಡ್ ಮಾಡಿದ ಕ್ಲಿಪ್ ಬಾಂದ್ರಾ ರಿಕ್ಲಮೇಷನ್ ಪ್ರದೇಶದಿಂದ ಬಂದಿದೆ.


ಈ ಪೋಸ್ಟ್ ಅನ್ನು ಬಾಂದ್ರಾ ಬಜ್ ಅವರು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ. ವೀಡಿಯೊದಲ್ಲಿ, ಪುರುಷ ಮತ್ತು ಮಹಿಳೆ ಶಾಲು ಧರಿಸಿ ಸ್ಕೂಟರ್‌ನಲ್ಲಿ ಮುಖಾಮುಖಿಯಾಗಿ ಕುಳಿತುಕೊಂಡು ಇಬ್ಬರೂ ಒಬ್ಬರನ್ನೊಬ್ಬರು ಬಿಗಿಯಾಗಿ ಅಪ್ಪಿಕೊಳ್ಳುತ್ತಾರೆ ಮತ್ತು ವೀಡಿಯೊದ ಕೊನೆಯಲ್ಲಿ ಕ್ಯಾಮರಾವನ್ನು ನೋಡಿ ನಗುತ್ತಾರೆ.

ಇದಲ್ಲದೆ, ಇಬ್ಬರೂ ಜನನಿಬಿಡ ರಸ್ತೆಯಲ್ಲಿ ಹೆಲ್ಮೆಟ್ ಇಲ್ಲದೆ ಕಾಣಿಸಿಕೊಂಡರು
ಈ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅವರ ಬೇಜವಾಬ್ದಾರಿ ಮತ್ತು ಅಶ್ಲೀಲ ನಡವಳಿಕೆಗಾಗಿ ಹಲವರು ಟೀಕಿಸಿದ್ದಾರೆ.


ಇದೀಗ ದಂಪತಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಮುಂಬೈ ಟ್ರಾಫಿಕ್ ಪೊಲೀಸರಿಗೆ ಮನವಿ ಮಾಡಲಾಗಿದೆ.

ನಾಳ ದೇವಸ್ಥಾನದಲ್ಲಿ ತಾಳಮದ್ದಳೆ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಾವನ ಪುರುಷೋತ್ತಮ ಶ್ರೀರಾಮ ತಾಳಮದ್ದಳೆ ಜರಗಿತು.
ಕವಿ ಡಾ. ವಸಂತ ಭಾರದ್ವಾಜ ಕೃತಿಯಾಧರಿತ ಯಜ್ಞ ಸಂರಕ್ಷಣೆಯಿಂದ ರಾಮಘಟ್ಟಾಭಿಷೇಕದ ವರೆಗಿನ ಸನ್ನಿವೇಶಗಳನ್ನು ಕಲಾವಿದರು ರೂಪಕದ ರೀತಿಯಲ್ಲಿ ಪ್ರಸ್ತುತಪಡಿಸಿದರು. ಮೂರು ಗಂಟೆಯ ಅವಧಿಯಲ್ಲಿ 18 ಕಲಾವಿದರು ಭಾಗವಹಿಸಿದ್ದು ವಿಶೇಷವಾಗಿತ್ತು.

ಭಾಗವತರು ಶ್ರೀಮತಿ ಮಲ್ಲಿಕಾ ಶೆಟ್ಟಿ ಸಿದ್ದಕಟ್ಟೆ, ಶ್ರೀ ನಿತೀಶ್ ಮನೋಳಿತ್ತಾಯ ಮತ್ತು ಹಿಮ್ಮೇಳದಲ್ಲಿ ವಾಸುದೇವ ಆಚಾರ್ಯ ಉಜಿರೆ,ಮುರಲೀಧರ ಆಚಾರ್ಯ ನೇರೆಂಕಿ, ಶ್ರೀಪತಿ ಭಟ್ ಉಪ್ಪಿನಂಗಡಿ, ಚಂದ್ರಶೇಖರ ಆಚಾರ್ಯ ಗೇರುಕಟ್ಟೆ ಮತ್ತು ಅರ್ಥಧಾರಿಗಳಾಗಿ ಮಧೂರು ಮೋಹನ ಕಲ್ಲೂರಾಯ (ವಿಶ್ವಾಮಿತ್ರ )ಗೋಪಾಲ ಶೆಟ್ಟಿ(ಹನುಮಂತ) ಜಯರಾಮ ಭಟ್ ದೇವಸ್ಯ(ಶ್ರೀ ರಾಮ) ಸತೀಶ ಶಿರ್ಲಾಲು(ದಶರಥ)

ದಿನೇಶ್ ಭಟ್ ಬಳೆಂಜ(ಶ್ರೀ ರಾಮ)ಹರೀಶ್ ಆಚಾರ್ಯ ಬಾರ್ಯ(ಜನಕ)ರಾಘವ ಮೆದಿನ(ಸೀತೆ )ರಾಘವ ಗೇರುಕಟ್ಟೆ (ದೇವೇಂದ್ರ)ಜಯರಾಮ ಬಲ್ಯ(ದನು ಮತ್ತು ಕಬಂಧ)ಶಿವಾನಂದ ಭಂಡಾರಿ(ತಾಟಕಿ)ಜಿನೇಂದ್ರ ಜೈನ್ ಬಳ್ಳಮಂಜ(ರಾವಣ ) ರಾಹುಲ್ ಶೆಟ್ಟಿ ಗೇರುಕಟ್ಟೆ(ಲಕ್ಷ್ಮಣ ) ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀ ರಾಮ) ಭಾಗವಹಿಸಿದ್ದರು.

ಕಳಿಯ ಸೇವಾ ಸಹಕಾರಿ ಬ್ಯಾಂಕಿನ ಅಧ್ಯಕ್ಷ ವಸಂತ ಮಜಲು, ಬೆಳ್ತಂಗಡಿ ಸಹಕಾರ ಭಾರತಿ ಅಧ್ಯಕ್ಷ ರಾಜೇಶ್ ಪೆರ್ಮುಡ, ಪ್ರಧಾನ ಅರ್ಚಕರಾದ ರಾಘವೇಂದ್ರ ಆಸ್ರಣ್ಣ, ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾದ ಭುವನೇಶ ಗೇರುಕಟ್ಟೆ ,ಶ್ರೀನಾಳ ಮೇಳದ ಪ್ರಬಂಧಕ ರಾಘವ .ಎಚ್ ಕಲಾವಿದರನ್ನು ಗೌರವಿಸಿದರು.

ದೇವಳದ ಕಚೇರಿ ವ್ಯವಸ್ಥಾಪಕರಾದ ಗಿರೀಶ್ ಶೆಟ್ಟಿನಾಳ ಸ್ವಾಗತಿಸಿ ಕಥಾ ಸಂಯೋಜನೆ ಮಾಡಿದ ದಿವಾಕರ ಆಚಾರ್ಯ ಗೇರುಕಟ್ಟೆ ವಂದಿಸಿದರು. ಅರ್ಕುಳ ಸುಬ್ರಾಯ ಆಚಾರ್ಯ ಪ್ರತಿಷ್ಠಾನ ಮತ್ತು ಉಪ್ಪಿನಂಗಡಿ ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಈ ಕಾರ್ಯಕ್ರಮಕ್ಕೆ ಸಹಕಾರವನ್ನು ನೀಡಿತ್ತು.