Sunday, August 2, 2026
Home Blog Page 79

ದೇರಾಜೆ ಸಂಸ್ಮರಣ ಗ್ರಂಥ ಮತ್ತು ಅಭಿನಂದನಾ ಗ್ರಂಥ ಲೋಕಾರ್ಪಣೆ ಹಾಗೂ ದೇರಾಜೆ ಸಂಸ್ಮರಣೆ

0

ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನಂ, ಶ್ರೀಮತ್ ಎಡನೀರು ಮಠದ ಆಶ್ರಯದಲ್ಲಿ ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನವು ದಿನಾಂಕ 14.11.2023ನೇ ಮಂಗಳವಾರ ಅಪರಾಹ್ನ 2 ಗಂಟೆಗೆ ದೇರಾಜೆ ಸೀತಾರಾಮಯ್ಯ ಸಂಸ್ಮರಣ ಸಮಿತಿಯವರು
ಸಂಪಾದಿಸಿದ “ದೇರಾಜೆ ಸೀತಾರಾಮಯ್ಯ ನೆನಪು ನೂರೆಂಟು ” ( ಸಂಸ್ಮರಣ ಗ್ರಂಥ) ಮತ್ತು ” ರಸಋಷಿ ” (ಅಭಿನಂದನಾ ಗ್ರಂಥದ ದ್ವಿತೀಯ ಮುದ್ರಣ) ಈ ಗ್ರಂಥಗಳನ್ನು
ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಶ್ರೀ ಮಠದಲ್ಲಿ ಲೋಕಾರ್ಪಣೆಗೊಳಿಸಲಿದ್ದಾರೆ.


ಸಭಾಧ್ಯಕ್ಷತೆಯನ್ನು ಡಾ..ಟಿ.ಶ್ಯಾಮ್ ಭಟ್,IAS, ಮಾಜೀ ಅಧ್ಯಕ್ಷರು- ಕೆ.ಪಿ.ಎಸ್.ಇ. ಇವರು ವಹಿಸಲಿದ್ದಾರೆ.
ಪ್ರಸಿದ್ಧ ಅರ್ಥಧಾರಿ ಶ್ರೀ ಉಡುವೇಕೋಡಿ ಸುಬ್ಬಪ್ಪಯ್ಯನವರು
ದೇರಾಜೆ ಸಂಸ್ಮರಣೆ ಮಾಡಲಿದ್ದಾರೆ.

ಈ ಮಹತ್ವದ ಗ್ರಂಥದಲ್ಲಿ ಪ್ರಖ್ಯಾತ ಸಾಹಿತಿಗಳು, ಪ್ರಸಿದ್ಧ ಯಕ್ಷಗಾನ ಕಲಾವಿದರೂ, ದೇರಾಜೆಯವರ ಗೆಳೆಯರೂ, ಬಂಧುಗಳೂ, ಮನೆಯವರೂ ಸೇರಿ ಇನ್ನೂರಕ್ಕೂ ಮಿಕ್ಕಿದ ಅಭಿಮಾನಿಗಳು ಬರೆದ ದೇರಾಜೆಯೊಡನಾಟದ ನೆನಪುಗಳು. ದೇರಾಜೆ ಸಂದರ್ಶನಗಳು
ಸುಮಾರು 64 ಪುಟಗಳ ಅಪೂರ್ವ ಫೊಟೊ ಆಲ್ಬಮ್,
ಅಲ್ಲದೇ ಇನ್ನೂ ಅನೇಕ ವಿವರಗಳಿವೆ.


ಇದೊಂದು ಸಂಗ್ರಹ ಯೋಗ್ಯ, ಮೌಲ್ಯಯುತ ಗ್ರಂಥವಾಗಿರುತ್ತದೆ. ಈ ಎರಡು ಪುಸ್ತಕಗಳ ಒಟ್ಟು ಬೆಲೆಯು 1200/-
ರೂಪಾಯಿ ಗಳಾಗಿರುತ್ತದೆ.
(ಪ್ರಕಟಣಾ ಪೂರ್ವ ರೂ.900/-)

ವಿಶೇಷವಾಗಿ ಈ ಕಾರ್ಯಕ್ರಮ ದೊಂದಿಗೆ
ವಿದ್ವಾನ್ ಗಣಪತಿ ಭಟ್ ಮತ್ತು ಎ.ಪಿ.ಪಾಠಕ್ ಅವರ ಹಿಮ್ಮೇಳದೊಂದಿಗೆ
ಶ್ರೀ ದಿವಾಕರ ಹೆಗಡೆಯವರಿಂದ ಏಕವ್ಯಕ್ತಿ ಯಕ್ಷಗಾನ ತಾಳಮದ್ದಲೆ ಜರಗಲಿದೆ.


ಎಲ್ಲಾ ಕಲಾಸಕ್ತ ಸಾಹಿತ್ಯಾಸಕ್ತ ಬಂಧುಗಳು ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಿರಿಬಾಗಿಲು ಪ್ರತಿಷ್ಠಾನ ಮತ್ತು ದೇರಾಜೆ ಸಂಸ್ಮರಣಾ ಸಮಿತಿಯು ವಿನಂತಿಸುತ್ತಿದೆ.

ಈ ಬಾರಿಯ ತನ್ನ ಬರ್ತ್ ಡೇ ಆಚರಣೆ ಬಗ್ಗೆ ರಾಧಿಕಾ ಕುಮಾರಸ್ವಾಮಿ ಏನು ಹೇಳಿದ್ದಾರೆ? – ವೀಡಿಯೋ ನೋಡಿ

ನಟಿ ರಾಧಿಕಾ ಕುಮಾರಸ್ವಾಮಿ ಈ ಬಾರಿಯ ತನ್ನ ಬರ್ತ್ ಡೇ ಆಚರಣೆ ಬಗ್ಗೆ ಏನು ಹೇಳಿದ್ದಾರೆ?

ರಾಧಿಕಾ (Radhika Kumarswamy) ತಮ್ಮ ಅಭಿಮಾನಿಗಳಿಗೆ ಒಳ್ಳೆಯ ಸುದ್ದಿ ಕೊಟ್ಟಿದ್ದಾರೆ. ನವೆಂಬರ್ 11ರಂದು ತಮ್ಮ ಹುಟ್ಟುಹಬ್ಬವನ್ನು (Birthday) ಅಭಿಮಾನಿಗಳ ಜೊತೆ ನಟಿ ಆಚರಿಸಿಕೊಳ್ಳಲಿದ್ದಾರೆ.

ಕಳೆದ ಕೆಲವು ವರ್ಷಗಳಿಂದ ಬರ್ತ್‌ಡೇ ಆಚರಣೆಯಿಂದ ದೂರವಿದ್ದರು. ಈ ಬಾರಿ ಅಭಿಮಾನಿಗಳನ್ನು ಭೇಟಿಯಾಗುತ್ತಾರಂತೆ. ಹಾಗೆಂದು ಅವರ ಇನಸ್ಟಾ ಗ್ರಾಂ ವೀಡಿಯೋದಲ್ಲಿ ಅವರೇ ಹೇಳಿಕೊಂಡಿದ್ದಾರೆ.

ಹಾಗಾದರೆ ವೀಡಿಯೋ ನೋಡೋಣ ಬನ್ನಿ.

ತರಗತಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ – ಪ್ರಕರಣ ದಾಖಲಿಸಿದ ಪೊಲೀಸರು

ತರಗತಿಯಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕ – ಪ್ರಕರಣ ದಾಖಲಿಸಿದ ಪೋಲೇಸರು


ಕೊಚ್ಚಿ: ಅಸ್ಸಾಂ ಮೂಲದ ಮೂರನೇ ತರಗತಿ ಬಾಲಕಿಗೆ ಶಿಕ್ಷಕರೊಬ್ಬರು ಲೈಂಗಿಕ ಕಿರುಕುಳ ನೀಡಿದ್ದಾರೆ. ಆಕೆಯ ತರಗತಿಯಲ್ಲಿ ದೌರ್ಜನ್ಯಕ್ಕೆ ಒಳಗಾದಳು.

ತನ್ನ ಖಾಸಗಿ ಅಂಗಗಳಲ್ಲಿ ನೋವಿನಿಂದ ಬಳಲುತ್ತಿದ್ದ ಆಕೆ ತನ್ನ ತಾಯಿಗೆ ದೌರ್ಜನ್ಯದ ಬಗ್ಗೆ ತಿಳಿಸಿದ್ದಾಳೆ. ಇದರೊಂದಿಗೆ ಘಟನೆ ಬೆಳಕಿಗೆ ಬಂದಿದೆ. ಅಂಬಲಮುಗಲ್ ಪೊಲೀಸರು ಶಿಕ್ಷಕನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಆರೋಪಿ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಸರ್ಕಾರಿ ಶಾಲೆಯ ಶಿಕ್ಷಕನಾದ ಆರೋಪಿಗೆ ನಿರೀಕ್ಷಣಾ ಜಾಮೀನು ಪಡೆಯಲು ಪೊಲೀಸರು ಸಹಾಯ ಮಾಡುತ್ತಿದ್ದಾರೆ ಎಂಬ ಆರೋಪವೂ ಇದೆ.

ಪೊಲೀಸರು ಬಾಲಕಿಯ ಹೇಳಿಕೆ ದಾಖಲಿಸಿಕೊಂಡು ಎಫ್ ಐಆರ್ ದಾಖಲಿಸಿದ್ದು ಬಿಟ್ಟರೆ ಬೇರೆ ಯಾವುದೇ ಕಾನೂನು ಕ್ರಮ ಕೈಗೊಂಡಿಲ್ಲ ಎಂಬುದು ಜನರ ಪ್ರತಿಕ್ರಿಯೆ.

ಆರೋಪಿ ಮನೆ ಹಾಗೂ ಇತರೆ ಪ್ರದೇಶಗಳಿಗೆ ತೆರಳಿ ಕುಟುಂಬಸ್ಥರನ್ನು ಭೇಟಿಯಾಗುತ್ತಾನೆ ಎಂಬ ಮಾಹಿತಿ ಗ್ರಾಮಸ್ಥರಿಂದ ಬಂದಿದ್ದರೂ ಪೊಲೀಸರು ಆರೋಪಿ ಪತ್ತೆಗೆ ಕ್ರಮ ಕೈಗೊಂಡಿಲ್ಲ.

ಆಗಷ್ಟೇ ಮಗುವಿಗೆ ಜನ್ಮ ನೀಡಿದ ಹೆಂಡತಿ ಮೋಸ ಮಾಡುತ್ತಿದ್ದಾಳೆ ಎಂದು ಅವಳನ್ನು ಕೊಂದ ಕರ್ನಾಟಕದ ಪೊಲೀಸ್

ಬೆಂಗಳೂರು: ಎರಡು ವಾರಗಳ ಹಿಂದೆಯೇ ಹೆರಿಗೆಯಾಗಿದ್ದ 23 ವರ್ಷದ ಕರ್ನಾಟಕ ಮಹಿಳೆಯನ್ನು ಆಕೆಯ ಪತಿ ಪೊಲೀಸ್ ಸಿಬ್ಬಂದಿಯೊಬ್ಬರು ಬೇರೊಬ್ಬ ಪುರುಷನೊಂದಿಗೆ ಸಂಬಂಧ ಹೊಂದಿದ್ದಾರೆಂದು ಶಂಕಿಸಿ ಕೊಲೆ ಮಾಡಿದ್ದಾರೆ. ಯುವತಿಯ ತಂದೆ ತನ್ನ ಅಳಿಯ ‘ಸೈಕೋ’ ಎಂದು ಹೇಳುತ್ತಾರೆ.


ಮಹಿಳೆಯ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ.

ಪತಿ ಡಿ ಕಿಶೋರ್ ಅವರು ತಮ್ಮ ಪತ್ನಿ ಪ್ರತಿಭಾ ಎಸ್ ಅನ್ನು ಕತ್ತು ಹಿಸುಕುವ ಮೊದಲು ಆತ್ಮಹತ್ಯೆ ಮಾಡಿಕೊಳ್ಳುವ ಉದ್ದೇಶದಿಂದ ವಿಷ ಪದಾರ್ಥವನ್ನು ಸೇವಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಧ್ಯಮ ವರದಿಗಳ ಪ್ರಕಾರ, ಪ್ರತಿಭಾ ಹೊಸಕೋಟೆ ತಾಲೂಕಿನಲ್ಲಿರುವ ತನ್ನ ಪೋಷಕರ ಮನೆಯಲ್ಲಿ ವಾಸಿಸುತ್ತಿದ್ದರು. ಮತ್ತು ಅಕ್ಟೋಬರ್ 28 ರಂದು ಗಂಡು ಮಗುವಿಗೆ ಜನ್ಮ ನೀಡಿದಳು.
ಕಿಶೋರ್ ಸುಮಾರು 230 ಕಿ.ಮೀ ದೂರದಲ್ಲಿರುವ ಚಾಮರಾಜನಗರ ಪಟ್ಟಣದಲ್ಲಿ ವಾಸವಾಗಿದ್ದರು.


ನಮ್ಮ ಮಗಳನ್ನು ಅವನಿಗೆ ಮದುವೆ ಮಾಡಿಕೊಟ್ಟೆವು… ಅವನು ಒಳ್ಳೆಯವನು ಎಂದು ಭಾವಿಸಿ, ಆದರೆ ಅವನು ಅಪರಾಧಿಯಾಗಿ ಹೊರಹೊಮ್ಮಿದನು. ನಮಗೆ ನ್ಯಾಯ ಬೇಕು. ಅವನಿಗೆ ಶಿಕ್ಷೆಯಾಗಬೇಕು. ನನ್ನ ಮಗಳು ಮಾಡಿದ್ದನ್ನು ಬೇರೆ ಹುಡುಗಿ ಅನುಭವಿಸುವುದು ನನಗೆ ಇಷ್ಟವಿಲ್ಲ. ಎಂದು ಯುವತಿಯ ತಂದೆ ಹೇಳಿದರು.

ಕಂಪ್ಯೂಟರ್ ಸೈನ್ಸ್‌ನಲ್ಲಿ ಪದವಿ ಪಡೆದಿದ್ದ ಪ್ರತಿಭಾ ಮತ್ತು ಕೋಲಾರ ಜಿಲ್ಲೆಯ ವೀರಾಪುರದ 32 ವರ್ಷದ ಕಿಶೋರ್ ಕಳೆದ ವರ್ಷ ನವೆಂಬರ್‌ನಲ್ಲಿ ವಿವಾಹವಾಗಿದ್ದರು. ಆಕೆಯ ತಂದೆ ಕೂಡ ವರದಕ್ಷಿಣೆ ಬೇಡಿಕೆಗಳನ್ನು ಆರೋಪಿಸಿದ್ದಾರೆ.


ಪೊಲೀಸರ ಪ್ರಕಾರ, ಕಿಶೋರ್ ಮತ್ತು ಪ್ರತಿಭಾ ಭಾನುವಾರ ಸಂಜೆ ಟೆಲಿಫೋನ್ ನಲ್ಲಿ ಜೋರಾಗಿ ಮಾತನಾಡಿದರು. ಮಾತುಕತೆ ನಂತರ ಕಣ್ಣೀರು ಹಾಕುತ್ತಿದ್ದ ಮಗಳನ್ನು ಕಂಡು ಆಕೆಯ ತಾಯಿ ಕರೆಯನ್ನು ಕಡಿತಗೊಳಿಸುವಂತೆ ಹೇಳಿದರು ಮತ್ತು ನವಜಾತ ಮಗುವಿಗೆ ತೊಂದರೆಯಾಗುವ ಭಯದಿಂದ ಸ್ವಲ್ಪ ಸಮಯದವರೆಗೆ ಕಿಶೋರ್ ಜೊತೆ ಮಾತನಾಡದಂತೆ ಸೂಚಿಸಿದರು.

ಸೋಮವಾರ ಪ್ರತಿಭಾ ಅವರ ಫೋನ್ ಪರಿಶೀಲಿಸಿದಾಗ 150 ಮಿಸ್ಡ್ ಕಾಲ್‌ಗಳು ಪತ್ತೆಯಾಗಿವೆ.


ನಂತರ ದಿನದಲ್ಲಿ ಕಿಶೋರ್ ತನ್ನ ಅತ್ತೆಯ ಮನೆಗೆ ಬಂದಿಳಿದ ಮತ್ತು ಬೀಗ ಹಾಕಿದ ಕೋಣೆಯೊಳಗೆ ತನ್ನ ಹೆಂಡತಿಯನ್ನು ಕೊಂದನು. ಈ ವೇಳೆ ಪ್ರತಿಭಾ ಅವರ ತಾಯಿ ಛಾವಣಿಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕಿಶೋರ್ ತಪ್ಪಿಸಿಕೊಳ್ಳುವ ಮೊದಲು ತನ್ನ ಅತ್ತೆಗೆ ತಪ್ಪೊಪ್ಪಿಕೊಂಡಿದ್ದಾನೆ. “ಕೊಂದು ಬಿಟ್ಟೆ ಅವಳ್ನಾ, ಕೊಂದು ಬಿಟ್ಟೆ (ನಾನು ಅವಳನ್ನು ಕೊಂದಿದ್ದೇನೆ, ನಾನು ಅವಳನ್ನು ಕೊಂದಿದ್ದೇನೆ)” ಎಂದು ಅವನು ಕೂಗಿ ಹೇಳುತ್ತಾ ಓಡಿ ಹೋಗಿದ್ದನು.

ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ – ಮಿಜಾರು ಮೋಹನ ಶೆಟ್ಟಿಗಾರ್ ಗೆ ಪ್ರಶಸ್ತಿ ಮತ್ತು ಯಕ್ಷಗಾನ ಪ್ರದರ್ಶನ

ಮೂರನೆಯ ವರ್ಷದ ಶ್ರೀ ಹರಿಲೀಲಾ ಯಕ್ಷನಾದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಇದೇ ಬರುವ ದಿನಾಂಕ 19.11.2023ರ ಆದಿತ್ಯವಾರ ಅಪರಾಹ್ನ 2 ಘಂಟೆಯಿಂದ ನಡೆಯಲಿದೆ.

ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಖ್ಯಾತ ಮದ್ದಳೆಗಾರ ಮಿಜಾರು ಶ್ರೀ ಮೋಹನ ಶೆಟ್ಟಿಗಾರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ನಂತರ ತಾಳಮದ್ದಳೆ ಮತ್ತು ಯಕ್ಷಗಾನ ಪ್ರದರ್ಶನ ನಡೆಯಲಿದೆ. ವಿವರಗಳಿಗೆ ಚಿತ್ರ ನೋಡಿ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಯಕ್ಷಗಾನ – ಕರ್ಗಲ್ಲು ವಿಶ್ವೇಶ್ವರ ಭಟ್ಟರಿಗೆ ಗಣ್ಯರ ಸಮಕ್ಷಮ ಸನ್ಮಾನ

ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿನ್ನೆ ನಡೆದ ಯಕ್ಷಗಾನ ಕಾರ್ಯಕ್ರಮದ ಸಂದರ್ಭದಲ್ಲಿ ಯಕ್ಷಗುರು ಶ್ರೀ ಕರ್ಗಲ್ಲು ವಿಶ್ವೇಶ್ವರ ಭಟ್ಟರನ್ನು ಗಣ್ಯರ ಸಮಕ್ಷಮ ಸನ್ಮಾನಿಸಲಾಯಿತು.

ಯಕ್ಷಮಿತ್ರರು ಸುಬ್ರಹ್ಮಣ್ಯ ಆಯೋಜಿಸಿದ ಹಾಗೂ ಸಿರಿಬಾಗಿಲು ವೆಂಕಪ್ಪಯ್ಯ ಪ್ರತಿಷ್ಠಾನ ಸಂಯೋಜನೆ ಮಾಡಿದ ಕಾರ್ಯಕ್ರಮದಲ್ಲಿ ಶ್ರೀಯುತರ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಗಣ್ಯರು ಸನ್ಮಾನಿತರಿಗೆ ಶುಭ ಹಾರೈಸಿದರು.

ಬಳಿಕ ಪ್ರಸಿದ್ಧ ಕಲಾವಿದರ ಭಾಗವಹಿಸುವಿಕೆಯಲ್ಲಿ ಶ್ರೀ ಕೃಷ್ಣಲೀಲೆ, ಕಾಳಿಂಗ ಮರ್ದನ, ಕಂಸವಧೆ ಎಂಬ ಯಕ್ಷಗಾನ ಪ್ರದರ್ಶನ ನಡೆಯಿತು.

ಪತ್ರಿಕೋದ್ಯದಲ್ಲಿ ಪ್ರಾಯೋಗಿಕವಾಗಿ ತೊಡಗಿಸಿಕೊಂಡಾಗ ಮಾತ್ರ ಗುರಿ ತಲುಪಲು ಸಾಧ್ಯ


ಪತ್ರಿಕೋದ್ಯಮ ಶಿಕ್ಷಣ ಅಂದ್ರೇನೆ ವಿಭಿನ್ನ, ಇಲ್ಲಿ ಪ್ರಾಯೋಗಿಕವಾಗಿ ನಮ್ಮನ್ನು ನಾವು ತೊಡಗಿಸಿಕೊಂಡಾಗ ಮಾತ್ರ ಗುರಿ ತಲುಪಲು ಸಾಧ್ಯ. ವಿದ್ಯಾರ್ಥಿ ಜೀವನದಲ್ಲಿ ಬರುವ ಅವಕಾಶಗಳನ್ನು ಸರಿಯಾಗಿ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಹಿರಿಯ ವಿದ್ಯಾರ್ಥಿ ಹಾಗೂ ಟಿವಿ9 ವೆಬ್ಸೈಟ್ ನ ಉಪ ಸಂಪಾದಕ ರಾಕೇಶ್ ನಾಯಕ್ ಹೇಳಿದರು.


ಇವರು ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣ ಜ್ಯ (ಸ್ವಾಯತ್ತ) ಸ್ನಾತಕೋತ್ತರ ಪತ್ರಿಕೋದ್ಯಮ ವಿಭಾಗದ ಸಹಯೋಗದಲ್ಲಿ ನಡೆದ ಮೊದಲ ಪತ್ರಕರ್ತ ಮೇಷ್ಟ್ರು ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿದರು.


ಮಾಧ್ಯಮ ಲೋಕದಲ್ಲಿ ಹಲವಾರು ಅವಕಾಶಗಳಿವೆ, ಅದರಲ್ಲಿಯೂ ಮುದ್ರಣ ಮಾಧ್ಯಮದಲ್ಲಿ ಸಾಕಷ್ಟು ಸಾಧ್ಯತೆಗಳಿವೆ. ಜೋತೆಗೆ ಅನೇಕ ಪ್ರಚಲಿತ ಸುದ್ದಿಗಳಿಗೆ ಗಮನ ಹರಿಸುವುದು ಮುಖ್ಯ. ವೃತ್ತಿ ಜೀವನ ಇಲ್ಲಿ ಆರಂಭಿಸಿದರೆ ನಮ್ಮ ಬರವಣ ಗೆ, ಆಲೋಚನಾ ಶಕ್ತಿ ಇನ್ನಷ್ಟು ಅಭಿವೃದ್ಧಿಪಡಿಸಿಕೊಳ್ಳಬಹುದು ಎಂದು ತಿಳಿಸುವುದರ ಜೊತೆಗೆ ತಮ್ಮ ವೃತ್ತಿ ಜೀವನದ ಅನುಭವಗಳನ್ನು ಹಂಚಿಕೊಂಡರು.


ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಶ್ರೀಪ್ರಿಯ ಪಿ, ಸುತನ್ ಕೇವಳ ಉಪಸ್ಥಿತರಿದ್ದರು.


ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿನಿ ನೀತ ರವೀಂದ್ರ ಸ್ವಾಗತಿಸಿ, ಹರಿಪ್ರಸಾದ್ ವಂದಿಸಿದರು. ವಿದ್ಯಾರ್ಥಿನಿ ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು.

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ವಿದ್ಯಾರ್ಥಿಗಳ ವಿಶೇಷ ಸಾಧನೆ

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್: ವಿದ್ಯಾಭಾರತಿ ಕರ್ನಾಟಕ:

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆ:

ವಿವೇಕಾನಂದ ಆಂಗ್ಲ ಮಾಧ್ಯಮ ವಿದ್ಯಾರ್ಥಿನಿ ಅಭಿಜ್ಞಾ ಶಾಂಭವಿ ಎಸ್.ಜಿ.ಎಫ್.ಐಗೆ ಆಯ್ಕೆ

ವಿದ್ಯಾಭಾರತಿ ಸಂಯೋಜಿತ ಶಾಲೆಗಳ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯು ದಿನಾಂಕ ಒಕ್ಟೋಬರ್ 28,29, 30 ರಂದು ಮಧ್ಯಪ್ರದೇಶದ ದೇವಾಸ್‍ನಲ್ಲಿ ನಡೆಯಿತು. ಈ ಸ್ಪರ್ದೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.

ಬಾಲವರ್ಗದ ಬಾಲಕಿಯರ ವಿಭಾಗದಲ್ಲಿ:(14ರ ವಯೋಮಾನದ) ಅಭಿಜ್ಞಾ ಶಾಂಭವಿ, 6ನೇ ತರಗತಿ(ಶ್ರೀ ಸುಧೀರ್ ಮತ್ತು ಶ್ರೀಮತಿ ಲತಾ ದಂಪತಿ ಪುತ್ರಿ) –ಪ್ರಥಮ ಸ್ಥಾನ ದೊಂದಿಗೆ ಚಿನ್ನ ಪದಕ, ಮಹತಿ, 6ನೇ ತರಗತಿ(ಶ್ರೀ ಶಿವರಂಜನ್.ಎಂ ಮತ್ತು ಶ್ರೀಮತಿ ಲಾವಣ್ಯ ಭಟ್ ದಂಪತಿ ಪುತ್ರಿ)- ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದಿರುತ್ತಾಳೆ.

ಕಿಶೋರ ವರ್ಗದ ಬಾಲಕರ ವಿಭಾಗದಲ್ಲಿ (17ರ ವಯೋಮಾನದ) – ಪ್ರಮಥ.ಎಂ.ಭಟ್, 10ನೇ ತರಗತಿ(ಶ್ರೀ ರವಿನಾರಾಯಣ.ಎಂ ಮತ್ತು ಶ್ರೀಮತಿ ಶರಾವತಿ ದಂಪತಿ ಪುತ್ರ) – ದ್ವಿತೀಯ ಸ್ಥಾನದೊಂದಿಗೆ ಬೆಳ್ಳಿ ಪದಕ ಪಡೆದಿರುತ್ತಾನೆ.

ಪ್ರಥಮ ಸ್ಥಾನ ಪಡೆದ ಅಭಿಜ್ಞಾ ಶಾಂಭವಿ ಎಸ್.ಜಿ.ಎಫ್.ಐ ಗೆ ಆಯ್ಕೆಯಾಗಿರುತ್ತಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯರು ಶಾಲಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಯುವಕ ಮತ್ತು ಲಿವ್ ಇನ್ ಸಂಗಾತಿ ಯುವತಿ ಆತ್ಮಹತ್ಯೆ


ಬೆಂಗಳೂರು: ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಮಲಯಾಳಿ ಯುವಕ ಮತ್ತು ಬೆಂಗಾಲಿ ಮಹಿಳೆ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಇವರಿಬ್ಬರನ್ನು ಇಡುಕ್ಕಿಯ ಅಬಿಲ್ ಅಬ್ರಹಾಂ (29) ಮತ್ತು ಕೋಲ್ಕತ್ತಾದ ಸೌಮಿನಿ ದಾಸ್ (20) ಎಂದು ಗುರುತಿಸಲಾಗಿದ್ದು, ಬೆಂಗಳೂರಿನ ಕೊತ್ತನೂರು ದೊಡ್ಡಗುಬ್ಬಿಯಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಹಚ್ಚಿಕೊಂಡಿದ್ದಾರೆ. ಘಟನೆ ಭಾನುವಾರ ಬೆಳಕಿಗೆ ಬಂದಿದೆ.

ಸೌಮಿನಿ ಸ್ಥಳದಲ್ಲೇ ಸಾವನ್ನಪ್ಪಿದರು ಮತ್ತು ಅಬಿಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದರು. ಇಬ್ಬರೂ ಮೂರು ದಿನಗಳ ಹಿಂದೆ ಒಟ್ಟಿಗೆ ಇರಲು ಪ್ರಾರಂಭಿಸಿದರು. ಮದುವೆಯಾದ ಸೌಮಿನಿ ಮಾರತ್ತಹಳ್ಳಿಯ ಖಾಸಗಿ ನರ್ಸಿಂಗ್ ಕಾಲೇಜಿನ ಎರಡನೇ ವರ್ಷದ ವಿದ್ಯಾರ್ಥಿನಿ.

ಆಕೆ ತನ್ನ ಪತಿ ಸ್ವತಂತ್ರ ಜೀವನ ನಡೆಸಲು ಅವಕಾಶ ನೀಡದ ಕಾರಣ ಆತನೊಂದಿಗೆ ಬಾಳಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಳು ಎನ್ನಲಾಗಿದೆ. ಅವಳು ತನ್ನ ಲಿವ್-ಇನ್ ಪಾಲುದಾರನ ಬಗ್ಗೆ ಅವನಿಗೆ ಹೇಳಿದ್ದಳು ಮತ್ತು ಅವನೊಂದಿಗೆ ತನ್ನ ಜೀವನವನ್ನು ಕಳೆಯಲು ತನ್ನ ಇಚ್ಛೆಯನ್ನು ವ್ಯಕ್ತಪಡಿಸಿದ್ದಳು.

ನರ್ಸಿಂಗ್ ನೇಮಕಾತಿ ಏಜೆನ್ಸಿಯ ಮಾಲೀಕ ಅಬಿಲ್, ಬ್ಯಾಚುಲರ್ ಆಗಿದ್ದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಕೊತ್ತನೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಘಟನೆ ಸಂಬಂಧ ಕೊತ್ತನೂರು ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಇಬ್ಬರ ಮೊಬೈಲ್ ಫೋನ್ ಗಳನ್ನು ಪರಿಶೀಲಿಸಲಾಗುತ್ತಿದೆ.

ಯಕ್ಷಗಾನ ಕಲಾರಂಗ ಪ್ರಶಸ್ತಿ-2023’ ಪ್ರಕಟ – ಗುಂಡಿಮಜಲು, ರಾಧಾಕೃಷ್ಣ ನಾವಡ, ಸಿದ್ಧಕಟ್ಟೆ, ಚಿದಂಬರ ಬಾಬು ಸೇರಿದಂತೆ 22 ಜನರಿಗೆ ಪ್ರಶಸ್ತಿ


ಪ್ರತಿವರ್ಷ ಯಕ್ಷಗಾನ ಕಲಾರಂಗವು ಹಿರಿಯ ಸಾಧಕರ ಸ್ಮರಣಾರ್ಥ ಮತ್ತು ಗೌರವಾರ್ಥ ಸಾಧಕ ಕಲಾವಿದರಿಗೆ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ನೀಡುತ್ತಿದ್ದು, ಈ ಬಾರಿ ತೆಂಕು ಹಾಗೂ ಬಡಗುತಿಟ್ಟಿನ ಈ ಕೆಳಗಿನ 21 ಹಿರಿಯ ಯಕ್ಷಗಾನ ಕಲಾವಿದರು ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.


ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಚಿದಂಬರ ಬಾಬು, ಕೊಣಂದೂರು, ಶಿವಮೊಗ್ಗ
ಪ್ರೊ. ಬಿ. ವಿ. ಆಚಾರ್ಯ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಎಚ್. ಗೋವಿಂದ ಉರಾಳ, ಕೋಟ
ನಿಟ್ಟೂರು ಸುಂದರ ಶೆಟ್ಟಿ – ಮಹೇಶ ಡಿ. ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಶ್ರೀ ವಸಂತ ಶೆಟ್ಟಿ, ಮುಂಡ್ಕೂರು


ಬಿ. ಜಗಜ್ಜೀವನದಾಸ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಕೆ. ಎಸ್. ಶಿವಶಂಕರ ಭಟ್, ತೀರ್ಥಹಳ್ಳಿ, ಶಿವಮೊಗ್ಗ
ಕೆ. ವಿಶ್ವಜ್ಞ ಶೆಟ್ಟಿ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಸಂಜೀವ ಕೊಠಾರಿ, ಬೈಂದೂರು, ಉಡುಪಿ
ಕುತ್ಪಾಡಿ ಆನಂದ ಗಾಣ ಗ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಸೀತೂರು ಎಚ್. ಎಸ್. ಅನಂತ ಪದ್ಮನಾಭ ರಾವ್, ಚಿಕ್ಕಮಗಳೂರು


ಭಾಗವತ ನಾರ್ಣಪ್ಪ ಉಪ್ಪೂರ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಗಣಪತಿ ಭಾಗ್ವತ, ಕಂವಾಳೆ, ಯಲ್ಲಾಪುರ
ಮಾರ್ವಿ ರಾಮಕೃಷ್ಣ ಹೆಬ್ಬಾರ, ಮಾರ್ವಿ ವಾದಿರಾಜ ಹೆಬ್ಬಾರ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಎಂ. ರಘುರಾಮ ಮಡಿವಾಳ, ಮಂದಾರ್ತಿ, ಉಡುಪಿ
ಸಿರಿಯಾರ ಮಂಜು ನಾಯ್ಕ ಸ್ಮರಣಾರ್ಥ ಪ್ರಶಸ್ತಿ : ಕೋಡಿ ಶ್ರೀ ವಿಶ್ವನಾಥ ಗಾಣಿಗ, ಹಾಲಾಡಿ


ಕೋಟ ವೈಕುಂಠ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಅಶೋಕ ಭಟ್ಟ, ಸಿದ್ದಾಪುರ, ಉ.ಕ.
ಪಡಾರು ನರಸಿಂಹ ಶಾಸ್ತಿç ಸ್ಮರಣಾರ್ಥ ಪ್ರಶಸ್ತಿ : ಶ್ರೀ ಸುಬ್ರಾಯ ನಾರಾಯಣ ಭಂಡಾರಿ, ಗುಣವಂತೆ, ಉ.ಕ.
ಕಡಿಯಾಳಿ ಸುಬ್ರಾಯ ಉಪಾಧ್ಯ ಸ್ಮರಣಾರ್ಥ ಪ್ರಶಸ್ತಿ : ಶ್ರೀ ವಿಠಲ ಕುಲಾಲ, ಚೋರಾಡಿ, ಉಡುಪಿ
ಮಲ್ಪೆ ಶಂಕರನಾರಾಯಣ ಸಾಮಗ ಸ್ಮರಣಾರ್ಥ ಪ್ರಶಸ್ತಿ : ಶ್ರೀ ವೈ. ವಾಸುದೇವ ರಾವ್, ಎರ್ಮಾಳು


ಐರೋಡಿ ರಾಮ ಗಾಣಿಗ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಪ್ರಭಾಕರ ಹೆಗಡೆ, ಈಚಲಕೊಪ್ಪ, ಸಾಗರ
ಮಾನ್ಯ ತಿಮ್ಮಯ್ಯ ಸ್ಮರಣಾರ್ಥ ಪ್ರಶಸ್ತಿ : ಶ್ರೀ ಮಧೂರು ರಾಧಾಕೃಷ್ಣ ನಾವಡ, ಕಾಸರಗೋಡು
ಎಚ್. ಪರಮೇಶ್ವರ ಐತಾಳ್ ಸ್ಮರಣಾರ್ಥ ಪ್ರಶಸ್ತಿ : ಶ್ರೀ ರತ್ನಾಕರ ಆಚಾರ್ಯ, ಪಡುಬಿದ್ರೆ
ಕಡಂದೇಲು ಪುರುಷೋತ್ತಮ ಭಟ್ ಪ್ರಶಸ್ತಿ : ಗುಂಡಿಮಜಲು ಶ್ರೀ ಗೋಪಾಲ ಭಟ್ಟ, ಬಂಟ್ವಾಳ


ಕಡತೋಕ ಕೃಷ್ಣ ಭಾಗವತ್ ಪ್ರಶಸ್ತಿ : ಶ್ರೀ ತ್ರ್ಯಂಬಕ ಹೆಗಡೆ, ಇಡುವಾಣ , ಸಾಗರ
ಬಿ. ಪಿ. ಕರ್ಕೇರಾ ಪ್ರಶಸ್ತಿ : ಸಿದ್ಧಕಟ್ಟೆ ಶ್ರೀ ಸದಾಶಿವ ಶೆಟ್ಟಿಗಾರ್, ಬೆಳ್ತಂಗಡಿ
ಕೋಳ್ಯೂರು ರಾಮಚಂದ್ರ ರಾವ್ ಗೌರವಾರ್ಥ ಪ್ರಶಸ್ತಿ : ಶ್ರೀ ಯನ್. ವಸಂತ ಗೌಡ, ಕಾಯರ್ತಡ್ಕ, ಬೆಳ್ತಂಗಡಿ
ಶ್ರೀಮತಿ ಪ್ರಭಾವತಿ ವಿ. ಶೆಣೈ – ಶ್ರೀ ಯು. ವಿಶ್ವನಾಥ ಶೆಣೈ ಗೌರವಾರ್ಥ ಪ್ರಶಸ್ತಿ : ಶ್ರೀ ಶ್ರೀಧರ ಪೂಜಾರಿ ಪಂಜಾಜೆ, ಬಂಟ್ವಾಳ

ಯಕ್ಷಚೇತನ ಪ್ರಶಸ್ತಿಯನ್ನು ಸಂಸ್ಥೆಯ ಹಿರಿಯ ಕಾರ್ಯಕರ್ತ ಶ್ರೀ ವಿಜಯಕುಮಾರ್ ಮುದ್ರಾಡಿ ಇವರಿಗೆ ನೀಡಲಾಗುವುದು. ಯಕ್ಷಚೇತನ ಪ್ರಶಸ್ತಿಯನ್ನು ಹೊರತು ಪಡಿಸಿ ಉಳಿದೆಲ್ಲಾ ಪ್ರಶಸ್ತಿಗಳು ತಲಾ ರೂ. 20,000/- ನಗದು ಸಹಿತ ಪ್ರಶಸ್ತಿ ಪರಿಕರಗಳನ್ನೊಳಗೊಂಡಿರುತ್ತದೆ.

ಪ್ರಶಸ್ತಿ ಪ್ರದಾನ ಸಮಾರಂಭ ನವೆಂಬರ್ 18, 2023 ಶನಿವಾರ ಸಂಜೆ 5.00ರಿಂದ 7.00ರ ವರೆಗೆ ಶ್ರೀ ಕ್ಷೇತ್ರ ಕಟೀಲಿನ ಸರಸ್ವತೀ ಸದನದಲ್ಲಿ ಜರಗಲಿರುವುದು ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತಿಳಿಸಿದ್ದಾರೆ.