Saturday, August 29, 2026
Home Blog Page 86

ಶಾಲಾ ಶುಲ್ಕ ಬಾಕಿ – ವಿದ್ಯಾರ್ಥಿಯನ್ನು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯುವಂತೆ ಹೇಳಿದ ಶಿಕ್ಷಕರು – ತನಿಖೆಗೆ ಆದೇಶ


ತಿರುವನಂತಪುರಂನ ಖಾಸಗಿ ಶಾಲೆಯೊಂದರಲ್ಲಿ ಓದುತ್ತಿರುವ ವಿದ್ಯಾರ್ಥಿಯ ಪೋಷಕರು ತಮ್ಮ ಶಾಲಾ ಶುಲ್ಕ ಬಾಕಿ ಇರುವ ಕಾರಣಕ್ಕಾಗಿ ಪ್ರಾಂಶುಪಾಲರು ತಮ್ಮ ಮಗನನ್ನು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ.


ಕೇರಳದ ತಿರುವನಂತಪುರಂನಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವ ವಿದ್ಯಾರ್ಥಿ ಮಾಸಿಕ ಶುಲ್ಕ ಪಾವತಿಸಲು ವಿಫಲವಾದ ಕಾರಣ ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯುವಂತೆ ಒತ್ತಾಯಿಸಲಾಗಿದೆ ಎಂದು ಖಾಸಗಿ ಶಾಲೆಯ ವಿದ್ಯಾರ್ಥಿಯ ಪೋಷಕರು ಶುಕ್ರವಾರ ಆರೋಪಿಸಿದ್ದಾರೆ.

ಘಟನೆಯ ಕುರಿತು ತನಿಖೆ ನಡೆಸುವಂತೆ ಕೇರಳದ ಸಾಮಾನ್ಯ ಶಿಕ್ಷಣ ಸಚಿವ ವಿ ಶಿವನ್‌ಕುಟ್ಟಿ ಶನಿವಾರ ಸಾಮಾನ್ಯ ಶಿಕ್ಷಣ ನಿರ್ದೇಶಕ (ಡಿಜಿಇ) ಶಾನವಾಸ್ ಎಸ್ ಅವರಿಗೆ ಸೂಚನೆ ನೀಡಿದ್ದಾರೆ.

ವಿಚಾರಣೆ ಆಧರಿಸಿ ವರದಿ ಸಲ್ಲಿಸುವಂತೆ ಡಿಜಿಇಗೆ ಸೂಚಿಸಲಾಗಿದೆ.

ಇಂದು ಮಧ್ಯಾಹ್ನ ಅಮೋಘ ತಾಳಮದ್ದಳೆ: ಕರ್ಣ ಪರ್ವ – ಜೋಷಿ, ಸುಣ್ಣಂಬಳ, ಉಜಿರೆ, ಬಳಂತಿಮೊಗರು, ದೇವಕಾನ: ಮಾತಿನ ಸಮರದ ನಿರೀಕ್ಷೆಯಲ್ಲಿ ಪ್ರೇಕ್ಷಕರು

ಇಂದು ದಿನಾಂಕ 27-08-2023 ಆದಿತ್ಯವಾರ ಅಡ್ಯನಡ್ಕದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಪ್ರಸಿದ್ಧ ಕಲಾವಿದರ ಕೂಡುವಿಕೆಯಿಂದ ‘ಕರ್ಣಪರ್ವ’ ಎಂಬ ತಾಳಮದ್ದಳೆ ಕೂಟ ನಡೆಯಲಿದೆ.

ಕಾರ್ಯಕ್ರಮ ಮಧ್ಯಾಹ್ನ 2.30 ಘಂಟೆಗೆ ಆರಂಭವಾಗಲಿದೆ.

ಕರ್ಣ ಪರ್ವ ತಾಳಮದ್ದಳೆಯಲ್ಲಿ ಪ್ರಸಿದ್ಧ ಕಲಾವಿದರ ದಂಡೇ ಇದೆ. ಜೋಷಿ, ಸುಣ್ಣಂಬಳ, ಉಜಿರೆ, ಬಳಂತಿಮೊಗರು, ದೇವಕಾನ ಇವರಿಂದ ಅಮೋಘ ವಾಗ್ವೈಖರಿಯ ಮಾತಿನ ಸಮರ ನಡೆಯಬಹುದು ಎಂಬುದು ತಾಳಮದ್ದಳೆ ಪ್ರಿಯ ಪ್ರೇಕ್ಷಕರ ನಿರೀಕ್ಷೆ.

ವಿವರಗಳಿಗೆ ಚಿತ್ರ ನೋಡಿ.

ಅಸ್ವಸ್ಥಗೊಂಡ ವ್ಯಕ್ತಿ ಕುಸಿದು ಬೀಳುತ್ತಿರುವುದನ್ನು ಕಂಡು ಭಾಷಣ ನಿಲ್ಲಿಸಿದ ಪ್ರಧಾನಿ ಮೋದಿ – ವೈದ್ಯರಲ್ಲಿ ಸಹಾಯ ಮಾಡುವಂತೆ ಮನವಿ – ವೀಡಿಯೋ

ಹೊಸದಿಲ್ಲಿ: ವ್ಯಕ್ತಿಯೊಬ್ಬರು ಅಸ್ವಸ್ಥಗೊಂಡಿರುವುದನ್ನು ಕಂಡು ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ಮಧ್ಯದಲ್ಲಿ ನಿಲ್ಲಿಸಿದರು.

ದಕ್ಷಿಣ ಆಫ್ರಿಕಾ ಮತ್ತು ಗ್ರೀಸ್‌ಗೆ ಭೇಟಿ ನೀಡಿ ಹಿಂದಿರುಗಿದ ಬಳಿಕ ದೆಹಲಿಯ ಪಾಲಂ ಏರ್‌ಬೇಸ್‌ನಲ್ಲಿ ಬೃಹತ್ ಜನಸಮೂಹವನ್ನುದ್ದೇಶಿಸಿ ಮೋದಿ ಮಾತನಾಡುತ್ತಿದ್ದರು.

ಅವರು ಮಾತನಾಡುವಾಗ ವಿಶೇಷ ರಕ್ಷಣಾ ಗುಂಪಿನ ಜವಾನ ತೀವ್ರ ಶಾಖದಿಂದಾಗಿ ಕುಸಿದು ಬೀಳುವುದನ್ನು ಗಮನಿಸಿದರು. ಮೋದಿ ತಕ್ಷಣವೇ ಆ ವ್ಯಕ್ತಿಗೆ ಸಹಾಯ ಮಾಡುವಂತೆ ತಮ್ಮ ವೈದ್ಯಕೀಯ ತಂಡವನ್ನು ಕೇಳಿಕೊಂಡರು.

ಇದರ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ಗಳಿಸುತ್ತಿವೆ.

ವೀಡಿಯೋ ನೋಡಿ

‘ಸ್ವಾಮಿ ಕೊರಗಜ್ಜ’ ತಾಳಮದ್ದಳೆ 

ಕರ್ನಾಟಕ ಸೇವಾ ಸಂಘ ಮೋಹನೆ ಆಶ್ರಯದಲ್ಲಿ ‘ಸ್ವಾಮಿ ಕೊರಗಜ್ಜ’ ತಾಳಮದ್ದಳೆ 

ಯಕ್ಷಗಾನದಿಂದ ಸಂಸ್ಕೃತಿಯ ಉಳಿವು:  ಹರೀಶ್ ಶೆಟ್ಟಿ ಶಿಮುಂಜೆ ಪರಾರಿ

 ಮುಂಬೈ: ‘ಕರಾವಳಿಯ ಯಕ್ಷಗಾನ ಕಲೆ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ಪ್ರಧಾನ ಪಾತ್ರ ವಹಿಸಿದೆ. ವಿಶೇಷವಾಗಿ ತುಳುನಾಡಿನಲ್ಲಿ ನಮ್ಮ ಹಿರಿಯರು ಅದನ್ನು ಪೋಷಿಸಿಕೊಂಡು ಬಂದಿದ್ದಾರೆ. ಮುಂಬೈಯಲ್ಲಿ ನೆಲೆಯೂರಿದ ನಾವೆಲ್ಲ ಇಲ್ಲಿ ಹುಟ್ಟಿ ಬೆಳೆದ ಮಕ್ಕಳಿಗೆ ತುಳು ಸಂಸ್ಕೃತಿ ಮತ್ತು ಯಕ್ಷಗಾನದ  ಸೊಗಡನ್ನು ಪರಿಚಯಿಸುವ ಮೂಲಕ ಆ ಪರಂಪರೆಯನ್ನು ಉಳಿಸಿ ಬೆಳೆಸಬೇಕಾಗಿದೆ’ ಎಂದು ಕರ್ನಾಟಕ ಸೇವಾ ಸಂಘ (ರಿ.) ಮೊಹನೆ, ಕಲ್ಯಾಣ್ ಇದರ ಅಧ್ಯಕ್ಷ ಹರೀಶ್ ಶೆಟ್ಟಿ ಶಿಮುಂಜೆ ಪರಾರಿ ಹೇಳಿದ್ದಾರೆ.

          ಕರ್ನಾಟಕ ಸೇವಾ ಸಂಘ ಮೋಹನೆ ಮತ್ತು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಸಹಯೋಗದಲ್ಲಿ ಆಗಸ್ಟ್ 18ರಂದು ಆರ್.ಎಸ್.ಡೈರಿ ಫಾರ್ಮ್ ಮೋಹನೆ ಬಳಿಯ ದಿ.ರಾಜೀವಿ ಪದ್ಮನಾಭ ಶೆಟ್ಟಿ ಮೆಮೋರಿಯಲ್ ಹಾಲ್ ನಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಸಂಚಾಲಕತ್ವದಲ್ಲಿ ಏರ್ಪಡಿಸಿದ ತವರೂರ ನಾಮಾಂಕಿತ ಕಲಾವಿದರಿಂದ ‘ಸ್ವಾಮಿ ಕೊರಗಜ್ಜ’ ತುಳು ತಾಳಮದ್ದಳೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಘದ ಗೌರವಾಧ್ಯಕ್ಷ ದಯಾಶಂಕರ ಪಿ.ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

     ಕರ್ನಾಟಕ ಸೇವಾ ಸಂಘದ ಸಂಚಾಲಕ ಪ್ರಕಾಶ್ ಆರ್.ಶೆಟ್ಟಿ, ಉಪಾಧ್ಯಕ್ಷರಾದ ನಾಗ ಕಿರಣ್ ಪಿ.ಶೆಟ್ಟಿ ,ಸಂದೇಶ್ ಜೆ. ಪೂಜಾರಿ, ಗೌರವ ಕಾರ್ಯದರ್ಶಿ ಶ್ರೀಕಾಂತ್ ಎಸ್. ಪೂಜಾರಿ, ಕೋಶಾಧಿಕಾರಿ ಕಲ್ಪೇಶ್ ಎಸ್. ಪೂಜಾರಿ, ಜೊತೆ ಕೋಶಾಧಿಕಾರಿ ನಿತೀಶ್ ಡಿ.ಸಾಲಿಯಾನ್, ಮಹಿಳಾ ಕಾರ್ಯಾಧ್ಯಕ್ಷೆ ಶೋಭಾ ಎಸ್. ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ನವೀನ್ ಜೆ. ಪೂಜಾರಿ, ಸಲಹೆಗಾರರಾದ ರಮೇಶ್ ಡಿ. ಮಡಿವಾಳ್, ಸೀತಾರಾಮ್ ಎಸ್. ಶೆಟ್ಟಿ ವೇದಿಕೆಯಲ್ಲಿದ್ದರು.

ಕಾರಣೀಕ ದೈವ ಕೊರಗಜ್ಜನ ಕಥೆ:

          ಅಜೆಕಾರು ಕಲಾಭಿಮಾನಿ ಬಳಗದ ಅಧ್ಯಕ್ಷ ಅಜೆಕಾರು ಬಾಲಕೃಷ್ಣ ಶೆಟ್ಟಿ ಅವರ ಸಂಯೋಜನೆಯಲ್ಲಿ ಊರಿನ ಪ್ರಸಿದ್ಧ ಕಲಾವಿದರಿಂದ ‘ಸ್ವಾಮಿ ಕೊರಗಜ್ಜ’ ತುಳು ಯಕ್ಷಗಾನ ತಾಳಮದ್ದಳೆ ಜರಗಿತು. ತುಳುನಾಡಿನ ಕಾರಣಿಕ ದೈವ ಕೊರಗಜ್ಜನ ಮಹಿಮೆಯನ್ನು ಸಾರುವ ಹರೀಶ್ ಶೆಟ್ಟಿ ಸೂಡ ವಿರಚಿತ ಈ ಪ್ರಸಂಗದ ಹಿಮ್ಮೇಳದಲ್ಲಿ ಭಾಗವತರಾಗಿ ದೇವಿ ಪ್ರಸಾದ್ ಆಳ್ವ ತಲಪಾಡಿ ಮತ್ತು ಚೆಂಡೆ ಮದ್ದಳೆಗಳಲ್ಲಿ ದೇಲಂತಮಜಲು ಸುಬ್ರಹ್ಮಣ್ಯ ಭಟ್ ಹಾಗೂ ಪ್ರಶಾಂತ್ ಶೆಟ್ಟಿ ವಗೆನಾಡು ಭಾಗವಹಿಸಿದರು.

         ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ (ಶಿವಯೋಗಿ – ಪಂಜಂದಾಯ ದೈವ), ಸದಾಶಿವ ಆಳ್ವ ತಲಪಾಡಿ (ಕೊರಗ ತನಿಯ), ಜಯಪ್ರಕಾಶ್ ಶೆಟ್ಟಿ ಪೆರ್ಮುದೆ (ಬೈರಕ್ಕೆ ಬೈದೆದಿ), ದಿನೇಶ್ ಶೆಟ್ಟಿ ಕಾವಳಕಟ್ಟೆ (ಅರಸು ಮಂಜಿಷ್ಣಾಯ ದೈವ), ಹರಿರಾಜ ಶೆಟ್ಟಿಗಾರ್ ಕಿನ್ನಿಗೋಳಿ (ಮೈಸಂದಾಯ)  ಅರ್ಥಧಾರಿಗಳಾಗಿದ್ದರು.

       ಇದೇ ಸಂದರ್ಭದಲ್ಲಿ ಕರ್ನಾಟಕ ಸೇವಾ ಸಂಘದ ವತಿಯಿಂದ ಕಲಾವಿದರನ್ನು ಗೌರವಿಸಲಾಯಿತು. ಸುಬ್ಬಣ್ಣ ಎ.ಶೆಟ್ಟಿ, ಚಿತ್ರಾ ಆರ್. ಶೆಟ್ಟಿ, ರವೀಂದ್ರ ವೈ.ಶೆಟ್ಟಿ, ಸುಬೋಧ್ ಬಿ. ಭಂಡಾರಿ, ಉದಯ್ ಕೆ. ಶೆಟ್ಟಿ, ಸದಾನಂದ ಶೆಟ್ಟಿ, ಸುಧೀರ್ ಜೆ.ಶೆಟ್ಟಿ, ರಾಜೇಶ್ ಜೆ. ಶೆಟ್ಟಿ, ಯೋಗೀಶ್ ಶೆಟ್ಟಿ, ಜಯಂತ್ ಶೆಟ್ಟಿ, ನಾಗರಾಜ್ ಶೆಟ್ಟಿ, ಗಿರೀಶ್ ಶೆಟ್ಟಿ, ಜಗದೀಶ್ ಶೆಟ್ಟಿ, ಅನಿಲ್ ಶೆಟ್ಟಿ, ಪ್ರಶಾಂತ್ ಶೆಟ್ಟಿ, ರಘು ಶೆಟ್ಟಿ, ಸೋಮನಾಥ ಶೆಟ್ಟಿ, ರಾಜಾ ಪೂಂಜಾ , ಅನಿಲ್ ಶೆಟ್ಟಿ ವಾಶಿ, ಪ್ರಶಾಂತ್ ಶೆಟ್ಟಿ ಕುಕ್ಕಿಕಟ್ಟೆ, ಬಿಲ್ಲವರ ಅಸೋಸಿಯೇಷನ್ ಕಲ್ಯಾಣ್ ನ ಕೃಷ್ಣ ಪೂಜಾರಿ, ಸದಾನಂದ ಸುವರ್ಣ, ಜಯಶ್ರೀ ಪೂಜಾರಿ ಮತ್ತಿತರ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು. ನಾಗ ಕಿರಣ್ ಶೆಟ್ಟಿ ಮತ್ತು ಅನಿಲ್ ಬಿ. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

 ಭಜನೆ – ಅನ್ನದಾನ :

        ಕಾರ್ಯಕ್ರಮದ ಅಂಗವಾಗಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯವರಿಂದ ಭಜನೆ ಹಾಗೂ ದಿ.ರಾಜೀವಿ ಪದ್ಮನಾಭ ಶೆಟ್ಟಿ ಅವರ ಸ್ಮರಣಾರ್ಥ ಮಕ್ಕಳಿಂದ ಅನ್ನದಾನ ಏರ್ಪಡಿಸಲಾಗಿತ್ತು. ನಂದೀಶ್ ಪೂಜಾರಿ ಅವರ ಪುಷ್ಪಾಲಂಕಾರ ಗಮನ ಸೆಳೆಯಿತು.

ವಿದ್ಯಾರ್ಥಿಗಳಿಗೆ ಅಗತ್ಯ ವಸ್ತು ಮತ್ತು ಸಿಹಿತಿಂಡಿ ವಿತರಣೆ

ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಲಿ. ಕಾರವಾರ ಇದರ ಶಿರ್ವ ಶಾಖೆಯ ವತಿಯಿಂದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆಯಂದು ಆಕ್ಸಿಲಿಯಮ್ ನಿವಾಸದ ವಿದ್ಯಾರ್ಥಿಗಳಿಗೆ ಅಗತ್ಯ ವಸ್ತುಗಳನ್ನು ಮತ್ತು ಸಿಹಿತಿಂಡಿ ವಿತರಿಸಲಾಯಿತು.

ಈ ಸಂದರ್ಭದಲ್ಲಿ ಶಿರ್ವ ಆರೋಗ್ಯ ಮಾತಾ ಚರ್ಚಿನ ಮುಖ್ಯ ಧರ್ಮಗುರುಗಳು ಫಾ| ಲೆಸ್ಲಿ ಡಿಸೋಜ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷರಾದ ಮೆಲ್ವಿನ್ ಅರಾನ್ನಾ, ಉದ್ಯಮಿ ಕೆ. ಶ್ರೀಧರ ಕಾಮತ್, ಕಾನ್ವೆಂಟಿನ ಮೇಲ್ವಿಚಾರಕಿ ಲೀಮಾ,

ಶಾಖಾ ವ್ಯವಸ್ಥಾಪಕರಾದ ಪ್ರಮೀಳಾ ಲೋಬೋ ಮತ್ತು ಕಾನ್ವೆಂಟಿನ ಧರ್ಮ ಭಗಿನಿಯರು ಹಾಗೂ ಶಾಖೆಯ ಸಿಬ್ಬಂದಿಗಳು ಹಾಜರಿದ್ದರು.

ತಲ್ಲೂರು ಕನಕಾ- ಅಣ್ಣಯ್ಯ ಶೆಟ್ಟಿ ಸಂಸ್ಮರಣ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’: ಹಿರಿಯ ಮೃದಂಗ ವಾದಕ ವಿದ್ವಾನ್ ಕೆ. ಬಾಬು ರೈ ಅವರಿಗೆ – ಶತಮಾನದ ಶ್ರೇಷ್ಠ ಕಲಾವಿದ ಕೆ. ಬಾಬು ರೈ – ಶ್ರೀ ಶ್ರೀ ಸಚ್ಚಿದಾನಂದ ಭಾರತೀ

ಶತಮಾನದ ಶ್ರೇಷ್ಠ ಕಲಾವಿದ ಕೆ. ಬಾಬು ರೈ – ಶ್ರೀ ಶ್ರೀ ಸಚ್ಚಿದಾನಂದ ಭಾರತೀ


ಉಡುಪಿಯ ಯಕ್ಷಗಾನ ಕಲಾರಂಗವು ಪ್ರತೀ ವರ್ಷ ವಿದ್ವಾಂಸರಿಗೆ ನೀಡುವ 40,000 ರೂಪಾಯಿ ನಿಧಿಯನ್ನೊಳಗೊಂಡಿರುವ ತಲ್ಲೂರು ಕನಕಾ- ಅಣ್ಣಯ್ಯ ಶೆಟ್ಟಿ ಸಂಸ್ಮರಣ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ಯನ್ನು ಹಿರಿಯ ಮೃದಂಗ ವಾದಕ ವಿದ್ವಾನ್ ಕೆ. ಬಾಬು ರೈ ಅವರಿಗೆ ಆಗಸ್ಟ್ 15, 2023ರಂದು ಎಡನೀರು ಮಠದಲ್ಲಿ ಕೆ. ಬಾಬು ರೈಯವರ ಶತಮಾನೋತ್ಸವ ಆಚರಣೆಯ ಸಂದರ್ಭ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಮಾಡಿ ಶ್ರೀಗಳು ತಮ್ಮ ಅನುಗ್ರಹ ಸಂದೇಶದಲ್ಲಿ ಬಾಬು ರೈಗಳು ಶತಾಯುಷಿ ಕಲಾವಿದರಷ್ಟೇ ಅಲ್ಲ ಶತಮಾನದ ಶ್ರೇಷ್ಠ ಕಲಾವಿದರು. ಅವರ ವಿನಯಗುಣ, ಸರಳತೆ, ಜೀವನೋತ್ಸಾಹ ಕಿರಿಯರಿಗೆ ಮಾದರಿಯಾಗಿದೆ. ಸಾಮಾಜಿಕ, ಸಾಂಸ್ಕೃತಿಕ ಕಾಳಜಿಯಿಂದ ಕೆಲಸ ಮಾಡುತ್ತಿರುವ ಉಡುಪಿಯ ಯಕ್ಷಗಾನ ಕಲಾರಂಗ ಅಭಿನಂದನಾರ್ಹ ಸಂಸ್ಥೆ ಎಂದು ನುಡಿದರು.

ತಲ್ಲೂರು ಫ್ಯಾಮಿಲಿ ಟ್ರಸ್ಟ್ನ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ, ಶ್ರೀಮತಿ ಗಿರಿಜಾ ಶಿವರಾಮ ಶೆಟ್ಟಿ, ಪ್ರದೀಪ ಕುಮಾರ್ ಕಲ್ಕೂರ, ಕೆ. ಬಾಬು ರೈ ಶತಮಾನೋತ್ಸವ ಸಮೀತಿಯ ಅಧ್ಯಕ್ಷ ರಾಮಪ್ರಸಾದ ಕಾಸರಗೋಡು, ಕಾರ್ಯದರ್ಶಿ ಶಿವರಾಮ ಕಾಸರಗೋಡು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಮೀಜೀಯವರಿಗೆ ಫಲವಸ್ತು ಸಮರ್ಪಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಅಭಿನಂದನೆಯ ಮಾತುಗಳನ್ನಾಡಿದರು.

ಸಂಸ್ಥೆಯ ದಾನಿಗಳಾದ ಡಾ. ಜೆ. ಎನ್. ಭಟ್, ಯು. ಎಸ್. ರಾಜಗೋಪಾಲ ಆಚಾರ್ಯ ಹಾಗೂ ಉಪಾಧ್ಯಕ್ಷ ಎಸ್. ವಿ. ಭಟ್, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ ಮತ್ತು ಸದಸ್ಯರುಗಳಾದ ಎಂ. ಎಲ್. ಸಾಮಗ, ಪ್ರತಿಭಾ ಎಂ. ಎಲ್. ಸಾಮಗ, ವಿದ್ಯಾಪ್ರಸಾದ್, ರಾಜೀವಿ, ಸುದರ್ಶನ್ ಬಾಯರಿ ಉಪಸ್ಥಿತರಿದ್ದರು.

ಮೂರು ವರ್ಷದ ಮಗುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಉತ್ತರ ಪ್ರದೇಶದ: ಕುಶಿನಗರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ನಲ್ಲಿ ಆರೋಪಿ ಎಂದು ಹೆಸರಿಸಲಾದ 15 ವರ್ಷದ ಬಾಲಕನನ್ನು ಶುಕ್ರವಾರ ಬಂಧಿಸಲಾಗಿದೆ.


ಎಫ್‌ಐಆರ್‌ನಲ್ಲಿ ಮಾಡಲಾದ ಆರೋಪಗಳನ್ನು ಪ್ರಾಥಮಿಕವಾಗಿ ನಿಜವೆಂದು ಕಂಡುಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದ್ದು, ಬಾಲಕಿಯನ್ನು ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ (ಸಿಎಚ್‌ಸಿ) ದಾಖಲಿಸಲಾಗಿದೆ.


ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಬಾಲಕಿ ತನ್ನ ನಿವಾಸದಲ್ಲಿ ಆಟವಾಡುತ್ತಿದ್ದಳು ಆಕೆಯ ಪೋಷಕರು ಮಾರುಕಟ್ಟೆಗೆ ಹೋಗಿದ್ದರು, ಆಕೆಯ ಅಜ್ಜಿ ಪಕ್ಕದ ಮನೆಯಲ್ಲಿದ್ದರು.

ನೆರೆಯ 15 ವರ್ಷದ ಹುಡುಗ ಅವಳೊಂದಿಗೆ ಆಟವಾಡಲು ಪ್ರಾರಂಭಿಸಿದನು. ಅವನು ಹುಡುಗಿಯನ್ನು ನಿರ್ಜನ ಸ್ಥಳಕ್ಕೆ ಕರೆದೊಯ್ದು ಅಲ್ಲಿ ಅತ್ಯಾಚಾರ ಎಸಗಿದನು” ಎಂದು ಎಸ್‌ಎಚ್‌ಒ ಉಪಾಧ್ಯಾಯ ಹೇಳಿದರು.


ನಂತರ ಮನೆಗೆ ತಲುಪಿದ ಆಕೆ ರಕ್ತಸ್ರಾವದಿಂದ ಪ್ರಜ್ಞಾಹೀನಳಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಪೊಲೀಸ್ ತಂಡ ಬಾಲಕಿಯನ್ನು ದುಧಿಯಲ್ಲಿರುವ ಸ್ಥಳೀಯ ಸಿಎಚ್‌ಸಿಗೆ ಕರೆದೊಯ್ದಿದೆ. ಬಾಲಕಿಗೆ ಪ್ರಜ್ಞೆ ಬಂದ ನಂತರ ಆಕೆ ತನ್ನ ತಂದೆ ತಾಯಿ ಮತ್ತು ಅಜ್ಜಿಯ ಬಳಿ ತನಗಾದ ಕಷ್ಟವನ್ನು ಹೇಳಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಜ್ಜಿಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶುಕ್ರವಾರ ಆತನನ್ನು ಬಂಧಿಸಿದ್ದಾರೆ.

ಅವನಿ ಎಸ್ ನಾಯಕ್ ವಿದ್ಯಾಭಾರತಿ ಕ್ಷೇತ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ವಿವೇಕಾನಂದ ಪ.ಪೂ ಕಾಲೇಜಿನ ಅವನಿ ಎಸ್ ನಾಯಕ್ ವಿದ್ಯಾಭಾರತಿ ಕ್ಷೇತ್ರ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆ

ಪುತ್ತೂರು, ಅ 13: ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆದ ವಿದ್ಯಾಭಾರತಿ ರಾಜ್ಯಮಟ್ಟದ ಚೆಸ್ ಪಂದ್ಯಾಟದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಅವನಿ ಎಸ್ ನಾಯಕ್ ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಪ್ರತಿನಿಧಿಸಿ

ಪ್ರಥಮ ಸ್ಥಾನವನ್ನು ಪಡೆದು ಹೈದರಾಬಾದ್‌ನಲ್ಲಿ ನಡೆಯಲಿರುವ ಕ್ಷೇತ್ರ ಮಟ್ಟದ ಚೆಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

ಈಕೆ ವಿವೇಕಾನಂದ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಸುಮರವರ ಪುತ್ರಿ. ವಿದ್ಯಾರ್ಥಿನಿಯ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ ಅಭಿನಂದಿಸಿದ್ದಾರೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ವರ್ತುಲದ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರ

ದಿನಾಂಕ 5-8-2023 ಶನಿವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ವರ್ತುಲದ ಶಿಕ್ಷಕರಿಗಾಗಿ ಒಂದು ದಿನದ ಕಾರ್ಯಾಗಾರ ’Pedagogical Training for Teachers’ ನಡೆಯಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ವಿವೇಕಾನಂದ ವರ್ತುಲದ ಅಡಿಯಲ್ಲಿ ಬರುವ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಇಂದ್ರಪ್ರಸ್ಥ ವಿದ್ಯಾಲಯ, ಉಪ್ಪಿನಂಗಡಿ, ವಿವೇಕಾನಂದ ಸಿಬಿಎಸ್ಸಿ ಸ್ಕೂಲ್, ನೆಹರೂನಗರ – ಈ ಶಾಲೆಗಳ 153 ಅಧ್ಯಾಪಕರುಗಳು ಈ ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಕಾರ್ಯಕ್ರಮದ ಉದ್ಘಾಟನೆಯನ್ನು ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷರಾಗಿರುವ ಶ್ರೀ ಸತೀಶ್ ರಾವ್ ಅವರು ದೀಪ ಬೆಳಗಿಸುವುದರ ಮೂಲಕ ನೆರವೇರಿಸಿಕೊಟ್ಟು, ವಿದ್ಯಾರ್ಥಿಗಳಲ್ಲಿ ಭಾವನಾತ್ಮಕ , ಸಾಮಾಜಿಕವಾದ ಬೆಳವಣಿಗೆ ಪ್ರಾಥಮಿಕ ಹಂತದಲ್ಲಿ ಆಗಬೇಕಾದರೆ ಶಿಕ್ಷಕರಿಗೆ ಶೈಕ್ಷಣಿಕ ಕಾರ್ಯಗಾರಗಳು ಅತಿ ಅಗತ್ಯ. ಶಿಕ್ಷಕರಜ್ಞಾನ, ಆಲೋಚನೆಗಳು ಅಗಾಧವಾಗುವುದರೊಂದಿಗೆ ದೇಶದ ಪ್ರಗತಿಯಾಗಲಿ ಎಂಬುದಾಗಿ ಶುಭ ಹಾರೈಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿರುವಂತಹ ಡಾ|ಎಂ.ಶಿವಪ್ರಕಾಶ್ ಇವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಮಾತನಾಡಿ, ದೇಶಸಮೃದ್ಧ ಸದೃಢವಾಗುವಂತಹ ಕಡೆಗೆ ಶಿಕ್ಷಣವನ್ನು ರೂಪಿಸಬೇಕಾಗಿದೆ ಈ ನಿಟ್ಟಿನಲ್ಲಿ ಶಿಕ್ಷಕರ ಪಾತ್ರ ಅತಿ ಪ್ರಮುಖವಾದದ್ದು, ಶಿಕ್ಷಕರುಗುರುಗಳಾಗಿ, ಪರಮಗುರುಗಳಾಗಿ, ಪರಾತ್ಪರಗುರುಗಳಾಗಿ ಕರ್ತವ್ಯವನ್ನು ನಿರ್ವಹಿಸಬೇಕಾಗಿದೆ ಎಂದರು.

ಈ ಶೈಕ್ಷಣಿಕ ಕಾರ್ಯಾಗಾರದ ಉದ್ಘಾಟನಾ ಸಮಾರಂಭದಲ್ಲಿ ವೇದಿಕೆಯಲ್ಲಿ, ಇಂದ್ರಪ್ರಸ್ಥ ವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯರಾಗಿರುವಂತಹ ಶ್ರೀಯುತ ಜಯಪ್ರಸಾದ್ ಕಡಮ್ಮಾಜೆ, ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಆಡಳಿತ ಮಂಡಳಿ ಅಧ್ಯಕ್ಷರಾಗಿರುವ ಶ್ರೀಮತಿ ವಸಂತಿ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಗುರುಗಳಾದ ಶ್ರೀಮತಿ ಸಂಧ್ಯಾ, ವಿವೇಕಾನಂದ ಸೆಂಟ್ರಲ್ ಸ್ಕೂಲ್ ನ ಮುಖ್ಯ ಗುರುಗಳಾದ ಶ್ರೀಮತಿ ಸಿಂಧು ವಿ.ಜಿ, ಇಂದ್ರಪ್ರಸ್ಥ ವಿದ್ಯಾಲಯದ ಮುಖ್ಯ ಗುರುಗಳಾದ ವೀಣಾ ಆರ್ ಪ್ರಸಾದ್, ವಿವೇಕಾನಂದ ವರ್ತುಲದ ಸಂಯೋಜಕರಾಗಿರುವಂತಹ ಶ್ರೀಮತಿ ರೇಖಾ ಆಚಾರ್ಯ ಇವರು ಉಪಸ್ಥಿತರಿದ್ದರು.

ಈ ಶೈಕ್ಷಣಿಕ ತರಬೇತಿ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಸೂರ್ಯನಾರಾಯಣ ಕಶೆಕೋಡಿ, ರಾಜೇಶ್ ಶೆಟ್ಟಿ ಹಾಗೆ ಶ್ರದ್ಧಾ ಎಲ್ ರೈ ಭಾಗವಹಿಸಿದ್ದರು.

ಕಾರ್ಯಗಾರವು ಮೂರು ಅವಧಿಯಲ್ಲಿ ನಡೆದಿದ್ದು ಮೊದಲ ಅವಧಿಯಲ್ಲಿ ಕಶೆಕೊಡಿ ಸೂರ್ಯನಾರಾಯಣ ಭಟ್ ಅವರು ಭಾರತೀಯ ಸಂಸ್ಕೃತಿ ಮತ್ತು ಶಿಕ್ಷಣ ಎಂಬ ವಿಷಯದ ಬಗ್ಗೆ ಮಾತನಾಡಿ, ಭದ್ರ ಭಾರತದ ಬುನಾದಿಯನ್ನು ಹೊತ್ತಿರುವ ಶಿಕ್ಷಕರು ಮಗುವಿಗೆ ದಾರಿ ತೋರಿಸುವ ದೀಪವಾಗಬೇಕು ಹಾಗೆ ವಿದ್ಯೆಯಿಂದ ವ್ಯಕ್ತಿ ನಿರ್ಮಾಣ, ವ್ಯಕ್ತಿ ನಿರ್ಮಾಣದಿಂದ ರಾಷ್ಟ್ರ ನಿರ್ಮಾಣವಾಗುವಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ತಯಾರುಗೊಳಿಸಬೇಕಾಗಿದೆ. ಮಕ್ಕಳಲ್ಲಿ ಆತ್ಮವಿಶ್ವಾಸವನ್ನು ತುಂಬಿ ನಮ್ಮ ಸಂಸ್ಕೃತಿಯೇ ನಮಗೆ ಶಿಕ್ಷಣ ಎಂಬ ಅರಿವನ್ನು ಈ ಕಾಲಘಟ್ಟದಲ್ಲಿ ಮೂಡಿಸುವುದು ಅತಿ ಅನಿವಾರ್ಯವಾಗಿದೆ ಎಂದರು.

ಎರಡನೆಯ ಅವಧಿಗೆ ಸಂಪನ್ಮೂಲವ್ಯಕ್ತಿಯಾಗಿ ಆಗಮಿಸಿದ ಶ್ರೀರಾಜೇಶ್ ಶೆಟ್ಟಿ ಮಂಗಳೂರು ಇವರು ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಮನೋಭಾವನೆಯನ್ನು ಯಾವ ರೀತಿ ಬೆಳೆಸಬಹುದು, ಅವರಲ್ಲಿ ಪ್ರಶ್ನೆಗಳನ್ನು ಕೇಳುವಂತಹ ಗುಣಗಳನ್ನು ಶಿಕ್ಷಕರಾದ ನಾವು ಹೇಗೆ ಬೆಳೆಸಬೇಕು ಎಂಬುದರ ಬಗ್ಗೆ ತಿಳಿಸಿದರು. ನಮ್ಮ ಆಚಾರ, ವಿಚಾರ, ನಂಬಿಕೆ ಎಲ್ಲದರ ಹಿಂದಿನ ವೈಜ್ಞಾನಿಕ ಅರಿವು ಏನು ಎಂಬ ಪ್ರಶ್ನೆಗಳಿಗೆ ವೈಜ್ಞಾನಿಕ ಉತ್ತರವನ್ನು ವಿದ್ಯಾರ್ಥಿಗಳು ಕಂಡುಕೊಳ್ಳುವಲ್ಲಿ ಶಿಕ್ಷಕರು ಅವರಿಗೆ ಮಾರ್ಗದರ್ಶನವನ್ನು ನೀಡಬೇಕಾಗಿದೆ, ಅದಕ್ಕಾಗಿ ಶಿಕ್ಷಕನಾದವನಲ್ಲಿ ಬೇಕಾದ ಗುಣಗಳ ಬಗ್ಗೆ ಸವಿವರವಾಗಿ ತಿಳಿಸಿಕೊಟ್ಟರು.

ಮೂರನೇ ಅವಧಿಯ ಸಂಪನ್ಮೂಲ ವ್ಯಕ್ತಿಯಾದ ಶ್ರೀಮತಿ ಶ್ರದ್ಧಾ ಎಲ್. ರೈ ವಿದ್ಯಾರ್ಥಿಗಳಲ್ಲಿ ಕಲಿಕಾನ್ಯೂನತೆಯ ಬಗ್ಗೆ ಮಾಹಿತಿಯನ್ನು ನೀಡಿ, ಅವುಗಳನ್ನು ಬಗೆಹರಿಸುವ ಮಾರ್ಗೋಪಾಯಗಳ ಬಗ್ಗೆ ತಿಳಿಸಿದರು.

ಸಮಾರೋಪ ಸಮಾರಂಭದಲ್ಲಿ ವಿವೇಕಾನಂದ ಆಡಳಿತ ಮಂಡಳಿಯ ಸದಸ್ಯರಾಗಿರುವ ಶ್ರೀಮತಿ ಅಮೃತ ಪ್ರಸಾದ್ , ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯಸ್ಥರಾದ ಶ್ರೀ ಸತೀಶ್ ಕುಮಾರ್ ರೈ, ಶ್ರೀಮತಿ ಸಂಧ್ಯಾ, ಶ್ರೀಮತಿ ಮಮತಾ ಉಪಸ್ಥಿತರಿದ್ದರು.

ಹೆತ್ತವರ ನಿರ್ಲಕ್ಷ್ಯ – ಚಿರತೆ ದಾಳಿಗೆ ಬಲಿಯಾದ ಆರು ವರ್ಷದ ಬಾಲಕಿ

ತಿರುಮಲ (ಆಂಧ್ರಪ್ರದೇಶ), ಆಗಸ್ಟ್ 12 ಆಂಧ್ರಪ್ರದೇಶದ ತಿರುಮಲದಲ್ಲಿ ಚಿರತೆಯೊಂದು ಆರು ವರ್ಷದ ಬಾಲಕಿಯನ್ನು ಕೊಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.


ಲಕ್ಷಿತಾ ಎಂಬ ಬಾಲಕಿ ಶುಕ್ರವಾರ ರಾತ್ರಿ ನರಸಿಂಹಸ್ವಾಮಿ ದೇವಸ್ಥಾನದ ಬಳಿ ಅಲಿಪಿರಿ ವಾಕ್‌ವೇನಲ್ಲಿ ತಿರುಮಲಕ್ಕೆ ಬರುತ್ತಿದ್ದಾಗ ನಾಪತ್ತೆಯಾಗಿದ್ದು, ಶನಿವಾರ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದ ಸಮೀಪ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಲಕ್ಷಿತಾ ಅವರ ತಂದೆ ದಿನೇಶ್, “ತಿರುಮಲದಲ್ಲಿ ಪಾದಚಾರಿ ಮಾರ್ಗವನ್ನು ಹತ್ತುವಾಗ, ಕೆಲವು ಹೆಜ್ಜೆ ಮುಂದಿದ್ದ ಅವರ ಮಗಳು ಬಿಸ್ಕೆಟ್ ಪ್ಯಾಕೆಟ್ ಖರೀದಿಸಲು ಹೋಗಿದ್ದಳು. ಭಕ್ತಾದಿಗಳ ದಟ್ಟಣೆಯಿಂದಾಗಿ ಮುಂದೆ ಬಂದಿದ್ದಾಳೆ ಎಂದುಕೊಂಡೆವು, ಆದರೆ ಸ್ವಲ್ಪ ಸಮಯದ ನಂತರ ನಮಗೆ ಅವಳು ಸಿಗಲಿಲ್ಲ. ನಂತರ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ಬಳಿ ಚಿರತೆ ದಾಳಿಗೆ ಬಲಿಯಾಗಿದ್ದಾಳೆ.


ಸ್ಥಳಕ್ಕಾಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ತಿರುಪತಿ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ.