Saturday, March 14, 2026
Home Blog Page 90

ಅಪ್ರಾಪ್ತ ಬಾಲಕಿ ಸಾಕ್ಷಿ ಹತ್ಯೆ ಪ್ರಕರಣ: ಆರೋಪಿ ಸಾಹಿಲ್‌ಗೆ 2 ದಿನಗಳ ಪೊಲೀಸ್ ಕಸ್ಟಡಿ – ತಾನು ಹಿಂದೂ ಎಂದು ನಂಬಿಸಿ ಲವ್ ಜಿಹಾದ್ ಗೆ ಯತ್ನಿಸಿ ಹತ್ಯೆಗೈದ ಆರೋಪ

ನವದೆಹಲಿ: ದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಸಾಹಿಲ್ ನನ್ನು ರೋಹಿಣಿ ನ್ಯಾಯಾಲಯ ಮಂಗಳವಾರ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ವರದಿಗಳ ಪ್ರಕಾರ, ಭದ್ರತಾ ಕಾರಣಗಳಿಂದ ಸಾಹಿಲ್ ಅವರನ್ನು ಮಂಗಳವಾರ ಬೆಳಗ್ಗೆ ಡ್ಯೂಟಿ ಮ್ಯಾಜಿಸ್ಟ್ರೇಟ್‌ಗಳ ಮುಂದೆ ಹಾಜರುಪಡಿಸಲಾಯಿತು.

ದೆಹಲಿ ಪೊಲೀಸರ ಅಹವಾಲುಗಳನ್ನು ಆಲಿಸಿದ ನಂತರ ಡ್ಯೂಟಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜ್ಯೋತಿ ನಾಯ್ನ್ ಅವರು ಎರಡು ದಿನಗಳ ಬಂಧನವನ್ನು ನೀಡಿದರು.

ದೆಹಲಿ ಪೊಲೀಸರು ಎರಡು ಕಾರಣಗಳನ್ನು ಉಲ್ಲೇಖಿಸಿ ಸಾಹಿಲ್‌ನನ್ನು ಕಸ್ಟಡಿಗೆ ಕೇಳಿದರು: ಮೊದಲನೆಯದಾಗಿ, ಕೊಲೆಗೆ ಬಳಸಿದ ಆಯುಧವು ಇನ್ನೂ ಪತ್ತೆಯಾಗಿಲ್ಲ, ಮತ್ತು ಎರಡನೆಯದಾಗಿ, ಸಾಹಿಲ್ ಅಸಮಂಜಸವಾದ ಹೇಳಿಕೆಗಳನ್ನು ನೀಡುತ್ತಿದ್ದು, ಅದು ತನಿಖೆ ಮತ್ತು ಪರಿಶೀಲಿಸಬೇಕಾಗಿದೆ.

ಸಾಹಿಲ್‌ನನ್ನು ಸೋಮವಾರ ದೆಹಲಿ ಪೊಲೀಸರು ಬುಲಂದ್‌ಶಹರ್‌ನಲ್ಲಿ ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ, ಸಾಹಿಲ್ ಹುಡುಗಿಯನ್ನು ಚಾಕುವಿನಿಂದ ಅನೇಕ ಬಾರಿ ಇರಿದಿರುವುದನ್ನು ಕಾಣಬಹುದು ಮತ್ತು ಅವಳು ನೆಲಕ್ಕೆ ಬಿದ್ದಾಗಲೂ ಅವಳನ್ನು ಇರಿದುಕೊಳ್ಳುವುದನ್ನು ಮುಂದುವರಿಸುತ್ತಾನೆ. ಅವನು ಅವಳನ್ನು ಒದೆದನು ಮತ್ತು ನಂತರ ಹತ್ತಿರದಲ್ಲಿ ಬಿದ್ದಿದ್ದ ಕಾಂಕ್ರೀಟ್ ಚಪ್ಪಡಿಯನ್ನು ತೆಗೆದುಕೊಂಡು ಅವಳ ತಲೆಯನ್ನು ಹೊಡೆದನು.

ಈ ಎಲ್ಲಾ ದೃಶ್ಯಗಳು ಜನರು ಘಟನೆಗಳನ್ನು ನೋಡುವುದನ್ನು ಮತ್ತು ಮಧ್ಯಪ್ರವೇಶಿಸದೆ ಹಿಂದೆ ನಡೆಯುವುದನ್ನು ತೋರಿಸಿದೆ. ಆರೋಪಿ ಸಾಹಿಲ್‌ನನ್ನು ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ANI ಹಂಚಿಕೊಂಡ ತನ್ನ ಬಂಧನದ ಚಿತ್ರದಲ್ಲಿ, ಸಾಕ್ಷಿಯನ್ನು 20 ಕ್ಕೂ ಹೆಚ್ಚು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಸಾಹಿಲ್, ತನ್ನ ಮಣಿಕಟ್ಟಿನ ಮೇಲೆ ಕಾಲವವನ್ನು (ಪವಿತ್ರ ಹಿಂದೂ ದಾರ) ಧರಿಸಿರುವುದನ್ನು ಕಾಣಬಹುದು.

ವರದಿಗಳ ಪ್ರಕಾರ, ಸಾಕ್ಷಿ ಹತ್ಯೆ ಪ್ರಕರಣದ ಆರೋಪಿ ಸಾಹಿಲ್ ಸರ್ಫರಾಜ್ ಖಾನ್ ಕೂಡ ಧಾರ್ಮಿಕ ತಪ್ಪು ಗ್ರಹಿಕೆಯನ್ನು ಸೃಷ್ಟಿಸುವ ವಿಧಾನಗಳನ್ನು ಅನುಸರಿಸಿದ್ದಾನೆ. ಅವರ ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಮತ್ತು ಕೈಯಲ್ಲಿ ಹಿಂದೂಗಳು ಬಳಸುವ ದಾರವಿತ್ತು. ಅವರು ಹುಕ್ಕಾ ಸೇದುತ್ತಿರುವ ವಿಡಿಯೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸಾಹಿಲ್ ಇತರ ಹುಡುಗಿಯರೊಂದಿಗೆ ಸಂಬಂಧ ಹೊಂದಿದ್ದನೆಂದು ಆತನ ಇನ್ಸ್ಟಾಗ್ರಾಮ್ ಖಾತೆಯು ಸಾಬೀತುಪಡಿಸುತ್ತದೆ

ಪೊಲೀಸರು ಆತನ ಖಾತೆಯನ್ನು ಪರಿಶೀಲಿಸಿದಾಗ ಈ ವಿಷಯಗಳು ಸ್ಪಷ್ಟವಾಗಿವೆ. ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕೂಡ ಟ್ವಿಟ್ಟರ್‌ನಲ್ಲಿ ಮುಸ್ಲಿಂ ಆರೋಪಿ ಮಣಿಕಟ್ಟಿನ ಸುತ್ತ ಕಲವಾ ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನು ಲವ್ ಜಿಹಾದ್ ಘಟನೆ ಎಂದು ಕರೆದಿರುವ ಬಿಜೆಪಿ ನಾಯಕ, ಆರೋಪಿಗಳು ಯಾರ ತಂತ್ರದ ಬೆಂಬಲದೊಂದಿಗೆ ಘೋರ ಅಪರಾಧ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಘಟನೆಯ ನಂತರ ಶೈಲ್ ಪರಾರಿಯಾಗಿದ್ದಾನೆ ಎಂದು ಡಿಸಿಪಿ ಔಟರ್ ನಾರ್ತ್ ರವಿಕುಮಾರ್ ಸಿಂಗ್ ವಿಡಿಯೋ ಬೈಟ್‌ನಲ್ಲಿ ತಿಳಿಸಿದ್ದಾರೆ. ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಸಾಹಿಲ್‌ನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಈಗ ಅವರನ್ನು ದೆಹಲಿಗೆ ಕರೆತರುತ್ತಿದ್ದಾರೆ.

ಆರೋಪಿ, ದೆಹಲಿಯ ಶಹಬಾದ್ ಡೈರಿ ಪ್ರದೇಶದ ನಿವಾಸಿ ಮತ್ತು ಮೃತ ಅಪ್ರಾಪ್ತ ಬಾಲಕಿ ಪರಸ್ಪರ ಮೊದಲೇ ತಿಳಿದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಹೇಳಿದರು. ಆರಂಭಿಕ ತನಿಖೆಯ ಪ್ರಕಾರ, ದಾಳಿಯ ಸಮಯದಲ್ಲಿ ಅಪ್ರಾಪ್ತ ವಯಸ್ಕಳ ಸ್ಥಳದ ಬಗ್ಗೆ ಸಾಹಿಲ್‌ಗೆ ತಿಳಿದಿತ್ತು ಎಂದು ಪೊಲೀಸರು ಭಾವಿಸುತ್ತಾರೆ ಎಂದು ಸಿಂಗ್ ಹೇಳಿದರು.

ಆದರೆ ಇತ್ತೀಚಿಗೆ ಸಾಕ್ಷಿಗೆ ಸಾಹಿಲ್ ಮುಸ್ಲಿಂ ಎಂಬ ಸತ್ಯ ಗೊತ್ತಾಗಿತ್ತು. ಇದರಿಂದ ಆಕೆ ಸಾಹಿಲ್‌ಗೆ ಸಂಬಂಧವನ್ನು ಕೊನೆಗೊಳಿಸುವಂತೆ ಕೇಳಿಕೊಂಡಿದ್ದಾಳೆ. ಅಡ್ಡಿಪಡಿಸಿದರೆ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾಳೆ. ಇದರಿಂದ ಆಕೆಯನ್ನು ಸಾಹಿಲ್ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿಮಾಡಿವೆ.

‘ದಿ ವಿಕ್ಟರಿ ಆಫ್ ಸುದರ್ಶನ’ – ಇಂಗ್ಲಿಷ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

 

ಕಾಸರಗೋಡು : ಹೈದರಾಬಾದ್ ಮೂಲದ ಇಂಡಿಯಾ ಪಿ ಎಸ್ ಸಿ ಆಫ್ ಸೈಟ್ ಕಾನ್ಫರೆನ್ಸ್ – 2023 ಬೇಕಲದ ತಾಜ್ ರೆಸಾರ್ಟ್ ನಲ್ಲಿ ಇತ್ತೀಚೆಗೆ (ಮೇ 23) ಜರಗಿತು. 

ಈ ಸಂದರ್ಭದಲ್ಲಿ ಮಂಗಳೂರಿನ ತೋನ್ಸೆ ಯಕ್ಷ ಬಳಗದಿಂದ ಇಂಗ್ಲಿಷ್ ಭಾಷೆಯಲ್ಲಿ ‘ದಿ ವಿಕ್ಟರಿ ಆಫ್ ಸುದರ್ಶನ’ (ಸುದರ್ಶನ  ವಿಜಯ) ತೆಂಕುತಿಟ್ಟು  ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಶ್ಯಾಡ್ಸ್ ಈವೆಂಟ್ಸ್ ಅವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.   

       ಕಾರ್ಯಕ್ರಮದಲ್ಲಿ  ಭಾಗವತರಾಗಿ ತೋನ್ಸೆ ಪುಷ್ಕಳ ಕುಮಾರ್, ಹಿಮ್ಮೇಳದಲ್ಲಿ ಶರತ್ ಕುಮಾರ್ ಕದ್ರಿ, ಸುದಾಸ್  ಕಾವೂರು ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಪಾಲ್ಗೊಂಡರು. ಮುಮ್ಮೇಳದಲ್ಲಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ (ದೇವೇಂದ್ರ), ಡಾ.ದಿನಕರ ಎಸ್.ಪಚ್ಚನಾಡಿ (ಸುದರ್ಶನ ) ಮತ್ತು ಶರತ್ ಪಣಂಬೂರು (ಶತ್ರು ಪ್ರಸೂದನ) ಪಾತ್ರ ವಹಿಸಿದರು.

      ತಂಡದ ಬಗ್ಗೆ ಪರಿಚಯ ನೀಡಿದ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ಕರಾವಳಿಯ ಸಾಂಪ್ರದಾಯಿಕ ಯಕ್ಷಗಾನ ಕಲೆಯ ಮಹತ್ವವನ್ನು ತಿಳಿಸಿ ಆಯ್ದುಕೊಂಡ ಪ್ರಸಂಗದ ಕಥಾಸಾರವನ್ನು ಆಂಗ್ಲ ಭಾಷೆಯಲ್ಲಿ ವಿವರಿಸಿದರು.

ಪಿ ಎಸ್ ಸಿ ಮುಖ್ಯಸ್ಥರು ಮತ್ತು ಕಂಪೆನಿಯ ಹಲವಾರು ಪ್ರತಿನಿಧಿಗಳು ಯಕ್ಷಗಾನವನ್ನು ವೀಕ್ಷಿಸಿ ಕಲಾವಿದರನ್ನು ಅಭಿನಂದಿಸಿದರು.

ಯಕ್ಷಗಾನ ಕಲಾರಂಗ ತಾಳಮದ್ದಲೆ ಸಪ್ತಾಹ ಸಮಾರೋಪ – ಶ್ರೀಕರ ಭಟ್ ಹಾಗೂ ಪಾದೇಕಲ್ಲು ವಿಷ್ಣು ಭಟ್‌ರಿಗೆ ಪ್ರಶಸ್ತಿ

ಉಡುಪಿ : ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭ 27-5-2023ರಂದು ಶಿರ್ವದ ಮಹಿಳಾ ಸೌಧದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ಶ್ರೀಕರ ಭಟ್ ಇವರಿಗೆ ಮಟ್ಟಿ ಮುರಲೀಧರ ರಾವ್ ಪ್ರಶಸ್ತಿಯನ್ನು ಹಾಗೂ ಪಂಡಿತ ಪೆರ್ಲ ಕೃಷ್ಣ ಭಟ್ ಪ್ರಶಸ್ತಿಯನ್ನು ಡಾ. ಪಾದೇಕಲ್ಲು ವಿಷ್ಣು ಭಟ್‌ರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಇಪ್ಪತ್ತು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನೊಳಗೊಂಡಿದೆ.

ಇದೇ ಸಂದರ್ಭದಲ್ಲಿ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದ ಕೆಲವು ಶಾಲೆಗಳಲ್ಲಾದರೂ ಯಕ್ಷಶಿಕ್ಷಣ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸಿ ಪ್ರದರ್ಶನ ವ್ಯವಸ್ಥೆ ಮಾಡಬೇಕೆಂಬ ಅಪೇಕ್ಷೆಯನ್ನು ಶಾಸಕರಾದ ಗುರ್ಮೆಯವರು ವ್ಯಕ್ತಪಡಿಸಿದರು.

ಪೆರ್ಲ ಪ್ರಶಸ್ತಿ ಸ್ಥಾಪಿಸಿದ ಕೃಷ್ಣಪ್ರಸಾದ್ ಅಡ್ಯಂತಾಯ ಅಧ್ಯಕ್ಷೀಯ ಮಾತುಗಳನ್ನಾಡಿ ಕಲಾರಂಗದ ಚತುರ್ಮುಖದ ಚಟುವಟಿಕೆಗಳನ್ನು ಮೆಚ್ಚಿ, ಸನ್ಮಾನಿತರನ್ನು ಅಭಿನಂದಿಸಿದರು. ಶಿರ್ವದ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ರಾಮ ಶೆಟ್ಟಿ ಹಾಗೂ ಯಕ್ಷಗಾನ ಅಭಿಮಾನಿ ಬಳಗದ ಪ್ರಮುಖರಾದ ಶ್ರೀಪತಿ ಕಾಮತ್ ಅಭ್ಯಾಗತರಾಗಿ ಭಾಗವಹಿಸಿ ಶುಭ ಹಾರೈಸಿದರು.

ಆರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ತಾಳಮದ್ದಲೆ ಸಪ್ತಾಹವನ್ನು ಸಂಯೋಜಿಸಿದ ಜತೆಕಾರ್ಯದರ್ಶಿ ನಾರಾಯಣ ಎಮ್. ಹೆಗಡೆ ಸನ್ಮಾನಿತರನ್ನು ಪರಿಚಯಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ಎಚ್.ಎನ್. ಶೃಂಗೇಶ್ವರ ಧನ್ಯವಾದ ಸಲ್ಲಿಸಿದರು.

ಉಪಾಧ್ಯಕ್ಷರಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ ಹಾಗೂ ಪೆರ್ಲ ರಾಜಾರಾಮ್ ಭಟ್ ಸಭೆಯಲ್ಲಿ ಉಪಸ್ಥಿತರಿದ್ದರು. ಬಳಿಕ ಶ್ರೀ ಕೃಷ್ಣ ಸಂಧಾನ ತಾಳಮದ್ದಲೆ ಸಂಪನ್ನಗೊ0ಡಿತು.

ಅಂಬಿಕಾ ಸಿ. ಬಿ. ಎಸ್. ಇ ಯಲ್ಲಿ 2023-24ನೇ ಸಾಲಿನ ಪೂರ್ವ ಪ್ರಾಥಮಿಕ ಹಂತದ ಮೊದಲ ಪೋಷಕರ ಸಭೆ

ಪುತ್ತೂರು : ಪೋಷಕರು ತಮ್ಮ ಮಕ್ಕಳಿಗೆ ಧನಾತ್ಮಕ ಚಿಂತನೆಗಳ ಮೂಲಕ ಪ್ರತಿಕ್ರಿಯೆಯನ್ನು ನೀಡಿ ಪ್ರೋತ್ಸಾಹಿಸಬೇಕು. ಮಕ್ಕಳು ತಪ್ಪು ಮಾಡಿದಾಗ ಅದನ್ನು ನಕಾರಾತ್ಮಕವಾಗಿ  ಪರಿಗಣಿಸದೆ ಆ ತಪ್ಪನ್ನು ತಿದ್ದಿ ಆ ಸನ್ನಿವೇಶವನ್ನು  ನಿಭಾಯಿಸಿಸುವುದು ಪೋಷಕರ ದೊಡ್ಡ ಜವಾಬ್ದಾರಿಯಾಗಿದೆ ಎಂದು ಅಂಬಿಕಾ ಸಿ ಬಿ ಎಸ್ ಇ ಶಾಲೆಯ  ಉಪ ಪ್ರಾಂಶುಪಾಲೆ ಸುಜನಿ ಬೋರ್ಕರ್ ಪೋಷಕರನ್ನು ಉದ್ದೇಶಿಸಿ ಮಾತನಾಡಿದರು.

    ಇವರು ಶನಿವಾರ ನಡೆದ 2023 -24 ನೇ ಸಾಲಿನ  ಪೂರ್ವ ಪ್ರಾಥಮಿಕದ (L. K. G) ವರ್ಷದ ಮೊದಲ ಪೋಷಕರ ಸಭೆಯಲ್ಲಿ ಮಾತನಾಡಿ,ಪೂರ್ವ ಪ್ರಾಥಮಿಕ ಶಾಲಾ ಹಂತ ಅಂದರೆ ಮೂರು, ನಾಲ್ಕು ವರ್ಷದ ಎಳೆಯ ಮಕ್ಕಳು. ಇವರ ಸ್ವಭಾವ, ವರ್ತನೆ, ಕಲಿಕೆ ಹೇಗೆ ಎಂದರೆ ನೋಡಿ ಕಲಿಯುತ್ತಾರೆ. ಇದು ನೋಡಿ ಕಲಿಯುವ ಹಂತವಾಗಿದೆ, ಹಾಗಾಗಿ ಮಕ್ಕಳು ಎಲ್ಲವನ್ನು ನೋಡಿ ಕಲಿಯುತ್ತಾರೆ.

ಹಾಗಾದ ಕಾರಣ ಪೋಷಕರು ಮಕ್ಕಳಿಗೆ ಆದರ್ಶ ಪ್ರಾಯವಾಗಿರಬೇಕು. ನಮ್ಮ ನಡೆ,ನುಡಿಗಳಲ್ಲಿ ನಾವು ಜಾಗೃತವಾಗಿರಬೇಕು ಎಂದು ಕಿವಿಮಾತು ಹೇಳಿದರು. ಜೊತೆಗೆ ಪೂರ್ವ ಪ್ರಾಥಮಿಕ ತರಗತಿ ಚಟುವಟಿಕೆಗಳ ಕುರಿತು ಸ್ಥೂಲ ವಿವರಣೆ ನೀಡಿದರು.

    ಈ ಸಭೆಯಲ್ಲಿ ಅಧ್ಯಕ್ಷ ಸ್ಥಾನವನ್ನು ವಹಿಸಿಕೊಂಡಿದ್ದ ಅಂಬಿಕ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಶ್ರೀ ಸುಬ್ರಹ್ಮಣ್ಯ ನಟ್ಟೋಜರು ಮಗು ಒಂದು ದೀಪದ ಹಾಗೆ ಅದು ಸಮಾಜವನ್ನು ಬೆಳಗುವಂತಹ ದೀಪವಾಗಿ ಬೆಳೆಸಬೇಕು. ನಮ್ಮನ್ನು ಮುಂದೆ ನೋಡಿಕೊಳ್ಳಬೇಕು ಎಂಬ ಉದ್ದೇಶದೊಂದಿಗೆ ಮಕ್ಕಳನ್ನು ಬೆಳೆಸುವುದಲ್ಲ ನಮ್ಮ ದೇಶಕ್ಕೆ, ಸಮಾಜಕ್ಕೆ ಒಳ್ಳೆಯ ಪ್ರಜೆಯಾಗಬೇಕು ರಾಷ್ಟ್ರ ಸೇವೆಗೆ ಮಗುವನ್ನು ತಯಾರು ಮಾಡಬೇಕು ಎಂಬ ಉದ್ದೇಶಕ್ಕಾಗಿ ಮಕ್ಕಳನ್ನು ಬೆಳೆಸಬೇಕು.

ಮುಖ್ಯವಾಗಿ ಮೌಲ್ಯ, ಆಚಾರ- ವಿಚಾರ ನಮ್ಮ ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು. ಶಿಕ್ಷಣ ಎಂದರೆ ಕೇವಲ ಪಠ್ಯಪುಸ್ತಕದ ‘ಎ ಬಿ ಸಿ ಡಿ’ ಮಾತ್ರವಲ್ಲ, ನಮ್ಮ ದೇಶಕ್ಕೆ ಸೇವೆ ಸಲ್ಲಿಸಿದವರಿಗೆ ಗೌರವ ಸೂಚಿಸುವುದು, ಸ್ವಾತಂತ್ರ್ಯ ಹೋರಾಟಗಾರರನ್ನು ನೆನಪಿಸಿಕೊಳ್ಳುವುದು ನಮ್ಮ ಪುರಾಣ ಕಥೆಗಳ ಮೌಲ್ಯವನ್ನು ತಿಳಿದುಕೊಳ್ಳುವುದು ಇವೆಲ್ಲವೂ ಶಿಕ್ಷಣದ ಜೊತೆಯಾದಾಗ ಮಾತ್ರ ನಾವೊಂದು ಒಳ್ಳೆಯ ಮಗುವನ್ನು ಸಮಾಜಕ್ಕೆ ನೀಡಲು ಸಾಧ್ಯ, ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪೋಷಕರ ನಡುವಿನ ಸಂಬಂಧ ಉತ್ತಮವಾಗಿದ್ದರೆ ಎಲ್ಲವೂ ಸಾಧ್ಯ ಎಂದು ತಿಳಿಸಿದರು.

     ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ಶ್ರೀಮತಿ ರಾಜಶ್ರೀ ನಟ್ಟೋಜರು ಉಪಸ್ಥಿತರಿದ್ದರು. ಶಾಲಾ ಪ್ರಾಂಶುಪಾಲೆ ಮಾಲತಿ.ಡಿ. ಭಟ್ ಸ್ವಾಗತಿಸಿ, ಶಿಕ್ಷಕಿಯರು ಕುಮಾರಿ ಶ್ರುತಿ ಶೆಟ್ಟಿ ವಂದಿಸಿ, ಶ್ರೀಮತಿ  ಶೈಲಶ್ರೀ  ಕಾರ್ಯಕ್ರಮವನ್ನು ನಿರೂಪಿಸಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆ – ‘ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ವಿವೇಕಾನಂದ ವಿದ್ಯಾಸಂಸ್ಥೆಯು ಪೂರಕ’ -ರವೀಂದ್ರ ಪಿ

ಪುತ್ತೂರು, ಮೇ 30: ವಿದ್ಯಾರ್ಥಿಗಳ ಬೆಳವಣಿಗೆಯಲ್ಲಿ ಹೆತ್ತವರು ಮತ್ತು ಶಿಕ್ಷಕರ ಪಾತ್ರ ಹಿರಿದು. ತಮ್ಮ ಮಕ್ಕಳೊಡನೆ ಸೂಕ್ಷ್ಮ ಬಾಂಧವ್ಯವನ್ನು ಬೆಳೆಸಿಕೊಂಡು ಅವರ ಸಂವೇದನೆಗೆ ಸ್ಪಂದಿಸಬೇಕು. ಈ ಮೂಲಕ ಸ್ವತಂತ್ರ ವ್ಯಕ್ತಿತ್ವವನ್ನು ಬೆಳೆಸಲು ಸಹಾಯ ಮಾಡಬೇಕು. ಭವಿಷ್ಯದಗುರಿಯು ಪ್ರಾಮಾಣಿಕವಾಗಿದ್ದು ಸ್ಪರ್ಧಾತ್ಮಕ ಮನೋಭಾವವನ್ನು ಬೆಳೆಸಿಕೊಂಡರೆ ಯಶಸ್ಸು ಸಾಧ್ಯ ಎಂದು ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ರವೀಂದ್ರ ಪಿ ಹೇಳಿದರು.


ಅವರು ವಿವೇಕಾನಂದ ಪ.ಪೂ ಕಾಲೇಜಿನಲ್ಲಿ ನಡೆದ ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಪೋಷಕರ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.
ವಿವೇಕಾನಂದ ವಿದ್ಯಾಸಂಸ್ಥೆಯು ಸಮಾಜಕ್ಕೆ ಒಳಿತನ್ನು ಮಾಡುವ ಸಂಸ್ಥೆ. ಶಿಕ್ಷಣದ ನಿಜವಾದ ಉದ್ದೇಶವನ್ನು ಅರ್ಥಗೊಳಿಸಲು ಮತ್ತು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಈ ಸಂಸ್ಥೆಯು ಪೂರಕವಾಗಿದೆ. ನೈತಿಕ ವಿಚಾರಗಳನ್ನು ಮೈಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಲ್ಲಿ ಆದರ್ಶ, ಸಂಸ್ಕಾರ ಮತ್ತು ರಾಷ್ಟ್ರಭಕ್ತಿಯನ್ನು ಪ್ರೇರೇಪಿಸುವ ಮೂಲಕ ವಿದ್ಯಾರ್ಥಿಗಳ ಉನ್ನತಿಗೆ ಸಹಾಯ ಮಾಡುತ್ತದೆ.

ವಿದ್ಯಾರ್ಥಿಗಳು ಜೀವನ ಮೌಲ್ಯಗಳನ್ನು ರೂಪಿಸಿಕೊಂಡು ಸತ್ಪ್ರಜೆಗಳಾಗಿ ಬಾಳಬೇಕು. ಸಾಧನೆಯ ಹಾದಿಯಲ್ಲಿ ಸಾಗಬೇಕು. ಸ್ವಂತಿಕೆ-ಸ್ವಾಭಿಮಾನಗಳನ್ನು ಮೆರೆಯಬೇಕು. ಯಾವುದೇ ಆಕರ್ಷಣೆಗಳಿಗೆ ಒಳಗಾಗದೆ ವಿದ್ಯಾರ್ಥಿಗಳು ನೈತಿಕತೆ, ಆದರ್ಶ ಮತ್ತು ಸಾಧನೆಗಳ ಮೂಲಕ ಪಕ್ವಗೊಳ್ಳಬೇಕು ಎಂದರು.


ಉಪನ್ಯಾಸಕಿ ಸ್ನೇಹಾ ಅತಿಥಿಗಳನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಕಾಲೇಜಿನ ನೀತಿ ನಿಯಮಾವಳಿಗಳ ಸ್ಥೂಲ ಪರಿಚಯವನ್ನು ವಿದ್ಯಾರ್ಥಿಗಳಿಗೆ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗೆ ಅಗತ್ಯವಿರುವ ಕೋಚಿಂಗ್ ವ್ಯವಸ್ಥೆಯ ಬಗ್ಗೆ ಮಾಹಿತಿಯನ್ನು ಕೋಚಿಂಗ್‌ ತರಬೇತಿ ಸಂಯೋಜಕ ಭೀಮ ಭಾರದ್ವಾಜ್ ತಿಳಿಸಿದರು.

ಸಿಪ್ಸ್ನಿತ್ಯ ತಂತ್ರಜ್ಞಾನದ ಬಗ್ಗೆ ಮಾಹಿತಿಯನ್ನು ಉಪನ್ಯಾಸಕ ಶ್ರೀವತ್ಸ ನೀಡಿದರು. ಕಾಲೇಜಿನ ವಸತಿ ನಿಲಯದ ನಿಯಮಗಳ ಬಗ್ಗೆ ಮುಖ್ಯ ನಿಲಯಪಾಲಕ ಚೇತನ್ ಮಾಹಿತಿಯನ್ನು ಒದಗಿಸಿಕೊಟ್ಟರು. ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ದೀಪ್ತಿ ಪ್ರಭು, ಪಲ್ಲವಿ ಭಟ್ ಮತ್ತು ಶ್ರುತಿ ಪ್ರಾರ್ಥಿಸಿದರು.


ಕಾರ್ಯಕ್ರಮದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕ ಎಂ. ಗೋಪಾಲಕೃಷ್ಣ ಭಟ್, ಸದಸ್ಯೆ ವತ್ಸಲಾರಾಜ್ಞಿ, ಸದಸ್ಯ ಕೆ.ಎನ್ ಸುಬ್ರಹ್ಮಣ್ಯ ಉಪಸ್ಥಿತರಿದ್ದರು. ಉಪನ್ಯಾಸಕಿ ಹರ್ಷಿತಾ ಪಿ ಕಾರ್ಯಕ್ರಮವನ್ನು ನಿರೂಪಿಸಿ ಶ್ರುತಿ ಎ ವಂದಿಸಿದರು.

ವೃತ್ತಿನಿರತ ಯಕ್ಷಗಾನ ಕಲಾವಿದರ 25ನೇ ವರ್ಷದ ಸಮಾವೇಶ

ಉಡುಪಿ : ಯಕ್ಷಗಾನ ಕಲಾರಂಗ (ರಿ.) ಉಡುಪಿ, ವೃತ್ತಿ ಕಲಾವಿದರ ಕ್ಷೇಮ ಚಿಂತನೆಗೆ ರೂಪಿಸಿದ ಅಂಗಸಂಸ್ಥೆ ಯಕ್ಷನಿಧಿಯ ಮೂಲಕ ಹಲವು ಯೋಜನೆಗಳನ್ನು ಅನುಷ್ಠಾನಕ್ಕೆ ತಂದಿದೆ. ಪ್ರತೀವರ್ಷ ಕಲಾವಿದರ ಸಮಾವೇಶವನ್ನು ನಡೆಸಿಕೊಂಡು ಬಂದಿದೆ.

ಯಕ್ಷನಿಧಿಯ 25ನೇ ವರ್ಷದ ಸಮಾವೇಶ ಜೂನ್ 1, 2023 ಗುರುವಾರ ದಿನಪೂರ್ತಿ ಕಾರ್ಯಕ್ರಮವಾಗಿ ಉಡುಪಿ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಜರಗಲಿದೆ. ಪೂರ್ವಾಹ್ನ 10.00 ಘಂಟೆಗೆ ಕರ್ನಾಟಕ ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಡಾ. ಜಿ.ಎಲ್. ಹೆಗಡೆಯವರ ಆಧ್ಯಕ್ಷತೆಯಲ್ಲಿ ಖ್ಯಾತ ನೃತ್ಯ ಕಲಾವಿದೆ ವಿದುಷಿ ಮಧು ನಟರಾಜ್ ಸಮಾವೇಶವನ್ನು ಉದ್ಘಾಟಿಸಲಿರುವರು.

ಅಪರಾಹ್ನ 2.30 ಗಂಟೆಗೆ ನಾಡೋಜ ಡಾ. ಜಿ. ಶಂಕರ್ ಅಧ್ಯಕ್ಷತೆಯಲ್ಲಿ ಜರಗಲಿರುವ ಸಮಾವೇಶ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅಭ್ಯಾಗತರಾಗಿ ಉಡುಪಿ ಶಾಸಕರಾದ ಯಶಪಾಲ್ ಸುವರ್ಣ, ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಉದ್ಯಮಿ ಆನಂದ ಸಿ. ಕುಂದರ್, ಮಾಜಿ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಪಿ. ಪುರುಷೋತ್ತಮ ಶೆಟ್ಟಿ, ಕೆನರಾ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್, ಮೊಗವೀರ ಮಹಾಸಭಾ ಉಚ್ಚಿಲ ಇದರ ಅಧ್ಯಕ್ಷರಾದ ಜಯ ಕೋಟ್ಯಾನ್ ಭಾಗವಹಿಸಲಿದ್ದಾರೆ.

ಈ ಸಂದರ್ಭದಲ್ಲಿ ಅಶಕ್ತ ಕಲಾವಿದರಿಗೆ ಗೃಹನಿರ್ಮಾಣ ನೆರವು, ವೈದ್ಯಕೀಯ ನೆರವು ನೀಡಲಿದ್ದೇವೆ. ಪೂವಾಹ್ನ 8.30 ರಿಂದ 10.00ರ ವರೆಗೆ ಕಲಾವಿದರ ಆರೋಗ್ಯ ತಪಾಸಣೆ ನಡೆಸಲಾಗುವುದು.

ಪೂರ್ವಾಹ್ನ 10.30 ಗಂಟೆಗೆ ವಿದುಷಿ ಮಧು ನಟರಾಜ್ ಮತ್ತು ಬಳಗದವರಿಂದ ನೃತ್ಯ ಪ್ರಾತ್ಯಕ್ಷಿಕೆ ಜರಗಲಿದೆ.

ಅಪರಾಹ್ನ 12.00ಗಂಟೆಗೆ ಕಲಾವಿದರಿಂದ ‘ಸಮಯಮಿತಿ ಯಕ್ಷಗಾನ ಸುಖ-ಕಷ್ಟ’ ಎಂಬ ವಿಷಯದ ಕುರಿತು ಕಲಾವಿದರು ಅನುಭವ ಹಂಚಿಕೊಳ್ಳಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಡಿಂಬಾ ವಿವಾಹ, ಅಂಗಾರಪರ್ಣ ಕಾಳಗ, ಕರ್ಣಾರ್ಜುನ ಕಾಳಗ – ಬಜಪೆ ಬಸ್ ಸ್ಟಾಂಡ್ ಬಳಿಯಲ್ಲಿ ಇಂದು ಕಟೀಲು ಮೇಳದ ಯಕ್ಷಗಾನ

ಬಜಪೆ ಬಸ್ ಸ್ಟಾಂಡ್ ಬಳಿಯಲ್ಲಿ ಮೇ 25ರಂದು ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಯಕ್ಷಗಾನ ಪ್ರದರ್ಶನ ನಡೆಯಲಿದೆ. 

25.05.2023ರಂದು  ಗುರುವಾರ ಸಂಜೆ 5.45 ಘಂಟೆಯಿಂದ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಸಂಜೆ  5.45 ಘಂಟೆಗೆ ಆರಂಭವಾಗಲಿರುವ ಯಕ್ಷಗಾನ ಪ್ರದರ್ಶನದಲ್ಲಿ ಕಟೀಲು ಮೇಳದ ಕಲಾವಿದರಿಂದ ಹಿಡಿಂಬಾ ವಿವಾಹ, ಅಂಗಾರಪರ್ಣ ಕಾಳಗ, ಕರ್ಣಾರ್ಜುನ ಕಾಳಗ ಎಂಬ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ ಎಂದು ಮೇಳದ ಪ್ರಕಟಣೆ ತಿಳಿಸಿದೆ.  

ಬನ್ನಂಜೆ ಶಿವಗಿರಿ ಸಭಾಭವನದಲ್ಲಿ ತಾಳಮದ್ದಲೆಗೆ ಚಾಲನೆ

ತಾಳಮದ್ದಲೆ ಸಪ್ತಾಹದ ಅಂಗವಾಗಿ 3ನೇ ದಿನ ಬನ್ನಂಜೆ ಶ್ರೀ ಶಿವಗಿರಿ ಸಭಾಭವನದಲ್ಲಿ ಹರ್ಷ ಸಮೂಹ ಸಂಸ್ಥೆಯ ಮುಖ್ಯಸ್ಥರಾದ ಸೂರ್ಯಪ್ರಕಾಶ್‌ ಅವರು 23-05-2023ರಂದು ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಬನ್ನಂಜೆ ಬಿಲ್ಲವರ ಸೇವಾ ಸಂಘದ ಕಾರ್ಯದರ್ಶಿ ಆನಂದ ಪೂಜಾರಿ ಹಾಗೂ ಕಲಾರಂಗದ ಉಪಾಧ್ಯಕರುಗಳಾದ ಎಸ್. ವಿ.ಭಟ್, ಕಿಶನ್ ಹೆಗ್ಡೆ, ಜತೆ ಕಾರ್ಯದರ್ಶಿಗಳಾದ ನಾರಾಯಣ ಎಂ. ಹೆಗಡೆ, ಎಚ್. ಎನ್. ಶೃಂಗೇಶ್ವರ, ಕಾರ್ಯದರ್ಶಿ ಮುರಲಿ ಕಡೆಕಾರ್ ಉಪಸ್ಥಿತರಿದ್ದರು.

ಗಣೇಶ್ ಬ್ರಹ್ಮಾರ ಕಾರ್ಯಕ್ರಮ ನಿರೂಪಿಸಿದರು. ನಂತರ ತಾಳಮದ್ದಲೆ ವಾಮನ ಚರಿತ್ರೆ ಪ್ರಸ್ತುತಗೊಂಡಿತು.

ಕಟೀಲು ಕ್ಷೇತ್ರದಲ್ಲಿ ಪತ್ತನಾಜೆಯಂದು ಆರು ಮೇಳಗಳ ಯಕ್ಷಗಾನ ಪ್ರದರ್ಶನ – ವಿದ್ಯುನ್ಮತಿ ಕಲ್ಯಾಣ, ಮೀನಾಕ್ಷಿ ಕಲ್ಯಾಣ, ರತಿ ಕಲ್ಯಾಣ, ಶ್ರೀನಿವಾಸ ಕಲ್ಯಾಣ 

ಕಟೀಲು ಕ್ಷೇತ್ರದಲ್ಲಿ ಮೇ 26ರಂದು ಈ ವರ್ಷದ ತಿರುಗಾಟದ ಕೊನೆಯ ಸೇವೆಯಾಟದ ಅಂಗವಾಗಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿಯ ಆರು ಮೇಳಗಳ ಯಕ್ಷಗಾನ ಪ್ರದರ್ಶನ ನಡೆಯಲಿದೆ.

26.05.2023ರಂದು ಸಂಜೆ 7 ಘಂಟೆಯಿಂದ ಮರುದಿನ ಬೆಳಿಗ್ಗಿನ ವರೆಗೆ ಯಕ್ಷಗಾನ ಪ್ರದರ್ಶನ ನಡೆಯಲಿದೆ.

ಸಂಜೆ ಏಳು ಘಂಟೆಗೆ ಆರಂಭವಾಗಲಿರುವ ಯಕ್ಷಗಾನ ಪ್ರದರ್ಶನದಲ್ಲಿ ಆರು ಮೇಳಗಳ ಕಲಾವಿದರಿಂದ  ವಿದ್ಯುನ್ಮತಿ ಕಲ್ಯಾಣ, ಮೀನಾಕ್ಷಿ ಕಲ್ಯಾಣ, ರತಿ ಕಲ್ಯಾಣ, ಶ್ರೀನಿವಾಸ ಕಲ್ಯಾಣ ಎಂಬ ಪ್ರಸಂಗಗಳು ಪ್ರಸ್ತುತಿಗೊಳ್ಳಲಿವೆ ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ. 

ಓಡಿಹೋದ ವರನನ್ನು 20 ಕಿಮೀಗಿಂತ ಹೆಚ್ಚು ಓಡಿಸಿ, ಅವನನ್ನು ಮದುವೆಯ ಮಂಟಪಕ್ಕೆ ಮರಳಿ ಕರೆತಂದ ವಧು

ಉತ್ತರ ಪ್ರದೇಶದ ಬರೇಲಿಯಲ್ಲಿ ವಧುವಿನ ಮದುವೆಯ ದಿನವು ಆಕೆಯ ವರನಿಗೆ ಅನಿರೀಕ್ಷಿತ ಬೆನ್ನಟ್ಟುವಿಕೆಯಾಗಿ ಮಾರ್ಪಟ್ಟಿದೆ, ಏಕೆಂದರೆ ವರನು ತಾನು ಮದುವೆಯಾಗಲು ಒಪ್ಪಿಕೊಂಡ ವಧುವನ್ನು ಮದುವೆಯಾಗಲು ನಿರಾಕರಿಸಿದನು.

ವರನು ತನ್ನನ್ನು ತಿರಸ್ಕರಿಸಿದ್ದನ್ನು ಒಪ್ಪಿಕೊಳ್ಳಲು ಸಾಧ್ಯವಾಗದೆ, ವಧು, ತನ್ನ ಮದುವೆಯ ಉಡುಪನ್ನು ಧರಿಸಿ, ಆ ವ್ಯಕ್ತಿಯನ್ನು ಹುಡುಕಲು ಮತ್ತು ಅವನನ್ನು ಮದುವೆಯಾಗಲು 20 ಕಿಲೋಮೀಟರ್‌ಗಳಷ್ಟು ಓಡಿ ಹಿಡಿದು ತಂದಳು.

ಎರಡೂವರೆ ವರ್ಷದಿಂದ ತನ್ನೊಡನೆ ರಿಲೇಶನ್ ಶಿಪ್ ಹೊಂದಿದ್ದ ತನ್ನ ವರ ಮದುವೆಯಾಗುವುದಿಲ್ಲ ಎಂದು ಹೇಳಿದಾಗ ತಾನೂ ಅವನನ್ನು ಹುಡುಕಿಕೊಂಡು ಹೋಗಲು ನಿರ್ಧರಿಸಿದಳು. ಮದುವೆಯ ದಿನ ಆಕೆ ಫೋನ್ ಮಾಡಿದಾಗ ತಾನು ತನ್ನ ತಾಯಿಯನ್ನು ಮದುವೆಗೆ ಕರೆದುಕೊಂಡು ಬರಲು ಹೋಗಿರುವುದಾಗಿ ವರ ಹೇಳಿದರೂ ಆಕೆ ಅದನ್ನು ನಂಬಲಿಲ್ಲ.

ಬರೇಲಿ ನಗರ ವ್ಯಾಪ್ತಿಯ ಹೊರಗಿರುವ ಪೊಲೀಸ್ ಠಾಣೆಯ ಬಳಿ ಬಸ್‌ನಲ್ಲಿ ವರ ಪತ್ತೆಯಾಗಿದ್ದಾನೆ. ಎರಡು ಗಂಟೆಗಳ ಕಾಲ ನಡೆದ ನಾಟಕೀಯ ವಿನಿಮಯದ ನಂತರ, ವಧು, ಆಕೆಯ ಕುಟುಂಬ ಹಾಗೂ ವ್ಯಕ್ತಿಯ ಕುಟುಂಬದವರು ಅವರನ್ನು ದೇವಸ್ಥಾನಕ್ಕೆ ಕರೆದೊಯ್ದರು.

ವರನ ಮನೆಯವರು ಮದುವೆಗೆ ಒಪ್ಪಿಗೆ ಸೂಚಿಸಿದರು ಮತ್ತು ಬರೇಲಿ ನಗರದ ಹೊರಗಿನ ದೇವಸ್ಥಾನದಲ್ಲಿ ಇಬ್ಬರನ್ನು ವಿವಾಹ ಬಂಧನಕ್ಕೆ ಒಳಪಡಿಸಲಾಯಿತು.

ಸಮಾರಂಭದ ವೀಡಿಯೋಗಳು ಸರಳ ಉಡುಪಿನಲ್ಲಿ ವರನನ್ನು ಹಾಗೂ ಮದುವೆಯ ಉಡುಪಿನಲ್ಲಿ ವಧುವನ್ನು ತೋರಿಸುತ್ತವೆ. ವರನೊಂದಿಗಿನ ತನ್ನ ತನ್ನ ಎರಡೂವರೆ ವರ್ಷಗಳ ಸಂಬಂಧವನ್ನು ವಿವಾಹದ ಮೂಲಕ ಗಟ್ಟಿಗೊಳಿಸಿದ ವಧುವಿನ ಧೈರ್ಯಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.