Sunday, August 2, 2026
Home Blog Page 90

ಸಿರಿಬಾಗಿಲಿನಲ್ಲಿ ಸಾಹಿತ್ಯ- ಸಾಂಸ್ಕೃತಿಕ ಉತ್ಸವದ ಸಿರಿ

ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಭವನದ ನೇತೃತ್ವದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಪ್ರಾಯೋಜಕತ್ವದಲ್ಲಿ ಜೂನ್ 3 ಶನಿವಾರ ಹಾಗು 4 ಆದಿತ್ಯವಾರ ‘ಗಡಿನಾಡ ಕಲಾ ಸಾಂಸ್ಕೃತಿಕ ವೈಭವ’ ನಡೆಯಲಿದೆ.

ಬೆಳಗ್ಗೆ 10 ರಿಂದ ಸಂಜಯ ವರೇಗೆ ನಡೆಯುವ ಈ ಕಾರ್ಯಕ್ರಮವನ್ನು ಶನಿವಾರ ಬೆಳಿಗ್ಗೆ 10 ಗಂಟೆಗೆ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀ ಪಾದಂಗಳವರು, ಶ್ರೀ ಶಂಕರಾಚಾರ್ಯ ಸಂಸ್ಥಾನಂ,ಶ್ರೀ ಮದ್ ಎಡನೀರು ಮಠ ಇವರು ದೀಪ ಬೆಳಗಿಸಿ ಉಧ್ಘಾಟಿಸಲಿರುವರು.

ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ, ಶ್ರೀ ನಿತ್ಯಾನಂದ ಯೋಗಾಶ್ರಮ, ಕೊಂಡೆವೂರು ಮಠ ಇವರು ಆಶೀರ್ವಚನ ನೀಡಲಿದ್ದಾರೆ. ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಶ್ರೀ ಪ್ರಕಾಶ್ ಮತ್ತೀಹಳ್ಳಿ ಯವರು ಅಧ್ಯಕ್ಷತೆ ವಹಿಸಲಿದ್ದಾರೆ.. 

11 ಗಂಟೆಗೆ ಪುತ್ತಿಗೆ ರಾಮಕೃಷ್ಣ ಜೋಯಿಸ ವಿರಚಿತ ಶ್ರೀ ರಾಮ ನಿಜಪಟ್ಟಾಭಿಷೇಕ ಪ್ರಸಂಗದ ಅಗ್ನಿ ಪರೀಕ್ಷೆಯ ಭಾಗ ಪ್ರಸಿದ್ದ ಕಲಾವಿದರ ಕೂಡುವಿಕೆಯಿಂದ ತಾಳಮದ್ದಳೆ ರೂಪದಲ್ಲಿ ಪ್ರಸ್ತುತಿಗೊಳ್ಳಲಿದೆ. ಹಿಮ್ಮೇಳದಲ್ಲಿ ಪುತ್ತಿಗೆ ರಘರಾಮ ಹೊಳ್ಳ, ಮುರಾರಿ ಕಡಂಬಳಿತ್ತಾಯ, ವರುಣ್ ಹೆಬ್ಬಾರ್, ಅರ್ಥಧಾರಿಗಳಾಗಿ ವೇದಮೂರ್ತಿ ವಿ ಬಿ ಹಿರಣ್ಯ, ಹರೀಶ್ ಬಳಂತಿಮೊಗರು, ಸುಬ್ರಾಯ ಹೊಳ್ಳ, ಶ್ರುತಕೀರ್ತಿರಾಜ್, ವಿಷ್ಣು ಪ್ರಕಾಶ್ ಪೆರ್ವ, ಬಾಲಕೃಷ್ಣ ಆಚಾರ್ಯ ಭಾಗವಹಿಸಲಿದ್ದಾರೆ. 

ಮಧ್ಯಾಹ್ನ 2-30ರಿಂದ ಗಮಕ ವಾಚನ ಶ್ರೀಹರಿ ಭಟ್ ಹಾಗು ಕೊಚ್ಚಿ ಗೋಪಾಲಕೃಷ್ಣ ಭಟ್ ಅವರಿಂದ, 4 ರಿಂದ ಕಲಾರತ್ನ ಶಂ.ನಾ. ಅಡಿಗ ಕುಂಬ್ಳೆ ಇವರಿಂದ ಹರಿಕಥೆ, ತದನಂತರ ನೃತ್ಯೋಪಾಸನಾ ಕಲಾಕೇಂದ್ರ(ರಿ.) ಪುತ್ತೂರು ಪ್ರಸ್ತುತ ಪಡಿಸುವ “ನೃತ್ಯೋಹಂ” ನಡೆಯಲಿದೆ. ಶ್ರೀಮತಿ ಶಾಲಿನಿ ಆತ್ಮಭೂಷಣ ಪುತ್ತೂರು ಇವರ ಶಿಷ್ಯರಿಂದ. 

4 ನೇ ತಾರೀಕು ಆದಿತ್ಯವಾರ ಬೆಳಗ್ಗೆ ಗಡಿನಾಡ ಕವಿ ರಾಧಾಕೃಷ್ಣ ಕೆ, ಉಳಿಯತ್ತಡ್ಕ ಇವರ ಅಧ್ಯಕ್ಷತೆಯಲ್ಲಿ ಕವಿ ಗೋಷ್ಠಿ, ಕವನ ಗೋಷ್ಠಿ, ಅವಲೋಕನ ನಡೆಯಲಿದೆ. ಈ ಗೋಷ್ಠಿಯನ್ನು ಶ್ರೀಮತಿ ಸೀತಾಲಕ್ಷ್ಮಿ ವರ್ಮ, ವಿಟ್ಲ ಇವರು ಉಧ್ಘಾಟಿಸಲಿದ್ದಾರೆ, ಗಡಿನಾಡ ಸಾಹಿತ್ಯಘಟಕದ ಅಧ್ಯಕ್ಷರಾದ ಯಸ್.ವಿ.ಭಟ್, ಹಿರಿಯ ಪತ್ರೀಕೋದ್ಯಮಿ ಮಲಾರು ಜಯರಾಮ ರೈ, ಶಿವರಾಮ ಕಾಸರಗೋಡು ಇವರು ಮುಖ್ಯ ಅಥಿತಿಗಳಾಗಿ ಭಾಗವಹಿಸಲಿದ್ದಾರೆ. 

ಕು| ಶ್ರದ್ಧಾ ಹೊಳ್ಳ ಮುಳಿಯಾರು ಅವರ “”ಮಾತು- ಮೌನ- ಕೃತಿ”” ಅವಲೋಕನ ಕು| ಸುಜಾತಾ ಮಾಣಿಮೂಲೆ, ಸಂಶೋಧಕಿ ಇವರಿಂದ ನಡೆಯಲಿದೆ.

ಕವನ ವಾಚನ– ಗಾಯನ, ಗಡಿನಾಡಿನಲ್ಲಿ ಕಲೆ- ಸಾಹಿತ್ಯ ಕ್ಕೆ ನೀಡಿದ ಕೀರ್ತಿಶೇಷ ರ ಕೊಡುಗೆಗಳು- ಗಡಿನಾಡ ಸಮಸ್ಯೆಗಳು ವಿಚಾರ ಗೋಷ್ಠಿ ನಡೆಯಲಿದೆ.

5 ಗಂಟೆಗೆ ಸಮಾರೋಪ – ಪ್ರಶಸ್ತಿ ಪ್ರಧಾನ ನಡೆಯಲಿದೆ. 7 ರಿಂದ ವಿಧ್ವಾನ್ ಡಿ.ವಿ.ಹೊಳ್ಳ ವಿರಚಿತ ಗಡಿನಾಡು ಕಾಸರಗೋಡಿನ ಪವಿತ್ರ ಮಧೂರು ಕ್ಷೇತ್ರದ ಕುರಿತಾದ ಚಾರಿತ್ರಿಕ ಕಥೆ, ʼಮಧುಪುರ ಮಹಾತ್ಮೆʼ ಯಕ್ಷಗಾನ ಪ್ರದರ್ಶನ ನಡೆಯಲಿದೆ. ಅಧ್ಯಕ್ಷರು ಮತ್ತು ಸದಸ್ಯರು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನ ಇವರು ಸರ್ವರಿಗೂ ಸ್ವಾಗತವನ್ನು ಕೋರಿದ್ದಾರೆ.

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ತರಗತಿಗಳ ಪ್ರಾರಂಭೋತ್ಸವ ಕಾರ್ಯಕ್ರಮ – ಮಕ್ಕಳಿಗೆ ಉತ್ತಮ ಶಿಕ್ಷಣ ಒದಗಿಸುವುದು ಹೆತ್ತವರ ಜವಾಬ್ದಾರಿ : ಡಾ.ಎಚ್.ಮಾಧವ ಭಟ್

ಪುತ್ತೂರು: ನಿಸರ್ಗದಲ್ಲಿ ಸಹಜವಾಗಿ ಬದುಕಿ ಬಾಳುವ ಕಲೆಯನ್ನು ಪ್ರಾಣಿ ಪಕ್ಷಿಗಳು ತಮ್ಮ ಮರಿಗಳಿಗೆ ಕಲಿಸುತ್ತವೆ. ಇದು ಪ್ರಕೃತಿ ನಿಯಮ. ಹಾಗೆಯೇ ಮನುಷ್ಯರೂ ಮಕ್ಕಳು ತಮಗೆ ಒದಗಿಸಿದ ಆನಂದವನ್ನು ಮರೆಯದೆ ಅವರ ಭವಿಷ್ಯಕ್ಕಾಗಿ ಒಳ್ಳೆಯ ಶಿಕ್ಷಣ ಸಂಸ್ಥೆಗಳ ಹುಡುಕಾಟ ನಡೆಸುತ್ತೇವೆ ಇದು ಪ್ರಜ್ಞಾವಂತ ಹೆತ್ತವರ ಜವಾಬ್ದಾರಿಯೂ ಹೌದು ಎಂದು ಆಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ, ವಿಶ್ರಾಂತ ಪ್ರಾಚಾರ್ಯ ಡಾ. ಎಚ್. ಮಾಧವ ಭಟ್ ಹೇಳಿದರು.


ಅವರು ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಎರಡು ಅಂಬಿಕಾ ಪದವಿಪೂರ್ವ ವಿದ್ಯಾಲಯಗಳ ಪುನರಾರಂಭದ ಸಂದರ್ಭದಲ್ಲಿ ನೂತನ ಶೈಕ್ಷಣಿಕ ವರ್ಷದ ಪ್ರಥಮ ಪಿಯು ತರಗತಿಗಳ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.


ವಿದ್ಯಾ ಸಂಸ್ಥೆಗಳಲ್ಲಿ ಪಠ್ಯದ ಜತೆಗೆ ಸಂಸ್ಕಾರವನ್ನು ಆಧರಿಸಿದ ಕಾರ್ಯಕ್ರಮಗಳು, ಸರಸ್ವತಿ ಪೂಜೆ, ಯೋಗ, ಭಗವದ್ಗೀತೆ, ಮುಂತಾದವುಗಳನ್ನು ಕಲಿಸುವ ಪರಿಪಾಠ ಅಗತ್ಯ. ಈ ವಿಚಾರಗಳು ವಿದ್ಯಾರ್ಥಿಗಳಲ್ಲಿ ಏಕಾಗ್ರತೆ ಮೂಡಿಸುವುದಕ್ಕೂ ಸಹಕಾರಿ. ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯೊಂದಿಗೆ ಅವರನ್ನು ಸತ್ಪ್ರಜೆಯಾಗಿ ರೂಪಿಸುವಲ್ಲಿ ಹೆತ್ತವರ, ಪೋಷಕರ, ಗುರುಗಳ, ಆಡಳಿತ ಮಂಡಳಿಯ ಸಹಕಾರ ಅಗತ್ಯ. ಆದ್ದರಿಂದ ಕೇವಲ ಅಂಕಗಳಿಗಾಗಿ ಒತ್ತಡ ಹೇರಬಾರದು ಎಂದು ತಿಳಿಸಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಮಾತನಾಡಿ ದೇಶದ ಅವಾಂತರ, ಅವ್ಯವಸ್ಥೆಯನ್ನು ಸರಿಪಡಿಸುವ ಶಕ್ತಿ ಶಿಕ್ಷಣ ಸಂಸ್ಥೆಗಳಿಗಿವೆ. ಧರ್ಮ ಜಾಗೃತಿ, ದೇಶ ಪ್ರೇಮ, ನೈತಿಕತೆ ಮುಂತಾದವುಗಳಲ್ಲಿ ಅಂಬಿಕಾ ಛಾಪನ್ನೊತ್ತಿದೆ. ಶೈಕ್ಷಣಿಕವಾಗಿಯೂ ತುಂಬಾ ಮುಂದಿದೆ. ಪೋಷಕ ಬಂಧುಗಳು ಸಂಸ್ಥೆಯ ಜತೆಗೆ ನಿರಂತರ ಸಂಪರ್ಕವಿಟ್ಟುಕೊಳ್ಳಬೇಕು ಎಂದು ನುಡಿದರು.


ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ದಿನೇಶಕುಮಾರ್ ವೈ.ಎ ಮಾತನಾಡಿ ಪೋಷಕರು ಸಂಸ್ಥೆಗೆ ಕೊಂಡಿಯಾಗಿ ನಡೆದುಕೊಂಡಾಗ ಯಶಸ್ಸು ನಿಶ್ಚಿತ ಎಂದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕೋಶಾಧಿಕಾರಿ ರಾಜಶ್ರೀ ಎಸ್ ನಟ್ಟೋಜ ಮಾತನಾಡಿ ನೀಟ್. ಜೆಇಇ, ಸಿಇಟಿ, ಎನ್‌ಡಿಎ ಮುಂತಾದ ವಿವಿಧ ಪ್ರವೇಶ ಪರೀಕ್ಷೆಗಳ ಬಗ್ಗೆ, ಕಾಲೇಜಿನ ನಿಯಮಾವಳಿಗಳ ಬಗ್ಗೆ ಮಾಹಿತಿ ನೀಡಿದರು.


ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದ ಹತ್ತನೇ ತರಗತಿ ಹಾಗೂ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಅತಿಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸ್ಮರಣಿಕೆ ನೀಡಿ ಗೌರವಿಸಲಾಯಿತು ಎನ್‌ಡಿಎ, ಜೆಇಇ ಪ್ರವೇಶ ಪರೀಕ್ಷೆಯ ಸಾಧಕರನ್ನು ಸನ್ಮಾನಿಸಲಾಯಿತು.

ಮಕ್ಕಳಿಂದ ಹೆತ್ತವರ ಹಾಗೂ ಪೋಷಕರ ಪಾದ ಪೂಜೆಯ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಿ ಸನಾತನ ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಕಾರ್ಯವನ್ನು ನಡೆಸಲಾಯಿತು. ಸಂಸ್ಕಾರವನ್ನು ಅರ್ಥೈಸುವ, ಭರವಸೆಯ ಸಂಕಲ್ಪ ಮೂಡಿಸುವ ಈ ಕಾರ್ಯಕ್ರಮದ ಮಹತ್ವವನ್ನು ವಾಗ್ಮಿ ಶ್ರೀ ಕೃಷ್ಣ ಉಪಾಧ್ಯಾಯರು ತಿಳಿಸಿದರು.


ಈ ಸಂದರ್ಭದಲ್ಲಿ ಶ್ರೀಕೃಷ್ಣ ಉಪಾಧ್ಯಾಯರ ಸತ್ಯಾನ್ವೇಷಣೆ ಎಂಬ ವೀಡಿಯೋವನ್ನು ಸುಬ್ರಹ್ಮಣ್ಯ ನಟ್ಟೋಜರು ಬಿಡುಗಡೆಗೊಳಿಸಿದರು. ಅಂಬಿಕಾ ಪದವಿಪೂರ್ವ ವಿದ್ಯಾಲಯ ನೆಲ್ಲಿಕಟ್ಟೆಯ ಶಿಕ್ಷಕ – ರಕ್ಷಕ ಸಂಘದ ಅಧ್ಯಕ್ಷ ಶ್ರೀಕಾಂತ ಶೆಣೈ, ಆಡಳಿತ ಮಂಡಳಿ ಸದಸ್ಯ ಸುರೇಶ ಶೆಟ್ಟಿ, ಅಂಬಿಕಾ ಸಿ.ಬಿ.ಎಸ್.ಇ ವಿದ್ಯಾಲಯದ ಪ್ರಾಚಾರ್ಯೆ ಮಾಲತಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಉಪನ್ಯಾಸಕರಾದ ಕೇಶವ ಕಿಶೋರ್, ತಿಲೋಶ್, ಶೈನಿ.ಕೆ.ಜೆ, ಅಕ್ಷತಾ.ಆರ್ ಸಾಧಕರ ಹೆಸರನ್ನು ವಾಚಿಸಿದರು. ವಿದ್ಯಾರ್ಥಿನಿಯರಾದ ಶ್ರಾವ್ಯ ಮತ್ತು ಹರ್ಷಿತಾ ಪ್ರಾರ್ಥಿಸಿದರು. ಉಪನ್ಯಾಸಕರಾದ ವಿಷ್ಣು ಪ್ರದೀಪ, ಗೀತಾ.ಸಿ.ಕೆ ಹಾಗೂ ಸತೀಶ್ ಇರ್ದೆ ಕಾರ್ಯಕ್ರಮ ನಿರೂಪಿಸಿದರು.

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯೆ ಸುಚಿತ್ರಾ ಪ್ರಭು ಸ್ವಾಗತಿಸಿದರು. ನೆಲ್ಲಿಕಟ್ಟೆ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯ ವಂದಿಸಿದರು.

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮ


ಪುತ್ತೂರು, ಜೂ 2: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ವಿವೇಕಾನಂದ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕ ಡಾ. ಶ್ರೀಶ ಭಟ್ ಹೇಳಿದರು

ವಿವೇಕಾನಂದ ಪದವಿ ಪೂರ್ವಕಾಲೇಜಿನಲ್ಲಿ ವಾಣಿಜ್ಯ ಮತ್ತು ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ನಡೆದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.

ಹೂವಿಗೆ ಪರಿಮಳವಿದ್ದಂತೆ ಮಾನವರಿಗೆ ವ್ಯಕ್ತಿತ್ವ ಅಷ್ಟೇ ಮುಖ್ಯ. ಪ್ರತಿಯೊಬ್ಬರ ಜೀವನದ ಒಳಿತು ಕೆಡಕುಗಳಿಗೆ ಅವರೇ ಶಿಲ್ಪಿಗಳಾಗಿರುತ್ತಾರೆ. ಮನುಷ್ಯ ತನ್ನ ಜೀವನವನ್ನು ತನ್ನಿಷ್ಟದಂತೆ ರೂಪಿಸಿಕೊಳ್ಳುತ್ತಾನೆ ಅಂದರೆ ತನ್ನೆಲ್ಲ ಆಲೋಚನೆಗಳ ವಸ್ತುರೂಪವೇ ಮಾನವನಾಗಿರುತ್ತಾನೆ.

ವ್ಯಕ್ತಿತ್ವವೆಂಬುದು ಹುಟ್ಟಿನಿಂದ ಸಾವಿನವರೆಗೆ ರೂಪುಗೊಳ್ಳುತ್ತಿರುತ್ತದೆ. ಇದರಲ್ಲಿ ಉತ್ತಮ ಸಂಸ್ಕೃತಿ – ಸಂಸ್ಕಾರಗಳನ್ನು ಬೆಳೆಸಿಕೊಳ್ಳಬೇಕು. ಬದುಕುವ ಕಲೆಯನ್ನು ರೂಪಿಸಿಕೊಳ್ಳಬೇಕು. ಅಧ್ಯಯನ ಮತ್ತು ಸಹಕಾರ ಮನೋಭಾವವನ್ನು ಬೆಳೆಸಿಕೊಂಡಾಗ ನಾವು ಹೃದಯವಂತರಾಗಬಹುದು.

ನಮ್ಮ ಬಗ್ಗೆ ನಾವು ಅರಿತುಕೊಳ್ಳಲು ಆರಂಭಿಸುವುದು ಯಶಸ್ಸಿನ ಹಾದಿಯಲ್ಲಿ ಸಾಗುವ ಮೊದಲ ಹೆಜ್ಜೆ. ಜೀವನದಲ್ಲಿಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ.ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ.ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು.

ಸಾಮಾಜಿಕ ಜಾಗೃತಿಯ ಬಗ್ಗೆ ಮತ್ತು ಸಾಮಾಜಿಕ ಮಾಧ್ಯಮಗಳನ್ನು ವಿದ್ಯಾರ್ಥಿಗಳು ನಿಭಾಯಿಸಬೇಕಾದ ರೀತಿಯ ಬಗ್ಗೆ ಇದೇ ಸಂದರ್ಭದಲ್ಲಿ ತಿಳಿಸಿಕೊಟ್ಟರು.

ಉಪನ್ಯಾಸಕಿ ಕವಿತಾ ಮತ್ತು ರಂಜಿನಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ಸಂಜನಾ ಭಟ್ ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.

ಯಕ್ಷಗಾನ ಕಲಾವಿದರ ಸಮಾವೇಶ -2023

ಉಡುಪಿ : ಉಡುಪಿಯ ಯಕ್ಷಗಾನ ಕಲಾರಂಗ ಕಳೆದ 23 ವರ್ಷಗಳಿಂದ ನಡೆಸಿಕೊಂಡು ಬರುತ್ತಿರುವ ಯಕ್ಷನಿಧಿ ಕಲಾವಿದರ 2023ರ ಸಮಾವೇಶವು ಉಡುಪಿಯ ಪೂರ್ಣಪ್ರಜ್ಞ ಸಭಾಂಗಣದಲ್ಲಿ ಜೂನ್, 1 ರಂದು ಸಂಪನ್ನಗೊಂಡಿತು.

ಸಮಾವೇಶವನ್ನು ಖ್ಯಾತ ಕಥಕ್ ಕಲಾವಿದೆ ವಿದುಷಿ ಮಧು ನಟರಾಜ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಅದಮಾರು ಎಜುಕೇಶನ್ ಸೊಸೈಟಿಯ ಆಡಳಿತಾಧಿಕಾರಿ ಡಾ. ಎ. ಪಿ. ಭಟ್, ಕಲಾವಿದರಾದ ಆರ್ಗೋಡು ಮೋಹನದಾಸ್ ಶೆಣೈ, ಕೊಂಡದಕುಳಿ ರಾಮಚಂದ್ರ ಹೆಗಡೆ, ಸರಪಾಡಿ ಅಶೋಕ್ ಶೆಟ್ಟಿ, ಪ್ರೊ. ಕೆ. ಸದಾಶಿವರ್ ರಾವ್ ಉಪಸ್ಥಿತರಿದ್ದರು.

ಉದ್ಘಾಟನೆಯ ಬಳಿಕ ವಿದುಷಿ ಮಧು ನಟರಾಜ ತಂಡದವರಿಂದ ಕಥಕ್ ನೃತ್ಯದ ಪ್ರಾತ್ಯಕ್ಷಿಕೆ ಮತ್ತು ಸಂವಾದ ಕಾರ್ಯಕ್ರಮ ಜರಗಿತು. ಶ್ರೀಮತಿ ವಿದ್ಯಾಪ್ರಸಾದ್ ನಿರೂಪಿಸಿದರು.

ಪೂರ್ವಾಹ್ನ 8.30 ರಿಂದ ಡಾ. ಶೈಲಜಾ, ಡಾ. ರಾಜೇಶ್ ನಾವುಡ ಹಾಗೂ ಡಾ. ಸುನೀಲ್ ಮುಂಡ್ಕೂರ್ ತಂಡದವರಿಂದ ಕಲಾವಿದರ ಆರೋಗ್ಯ ತಪಾಸಣಾ ಕಾರ್ಯಕ್ರಮ ನಡೆಯಿತು. ಅಪರಾಹ್ನ 12.00 ಗಂಟೆಯಿಂದ ಪ್ರೊ. ಎಂ. ಎಲ್. ಸಾಮಗರ ಅಧ್ಯಕ್ಷತೆಯಲ್ಲಿ ಕಾಲಮಿತಿ ಪ್ರದರ್ಶನ-ಸುಖ ಕಷ್ಟ ಎಂಬ ವಿಷಯದ ಕುರಿತು ಕಲಾವಿದರು ತಮ್ಮ ಅನಿಸಿಕೆಯನ್ನು ಹಂಚಿಕೊಂಡರು.

ಡಾ. ಜೆ. ಎನ್. ಭಟ್ ಕಲಾವಿದರ ಆರೋಗ್ಯಕ್ಕೆ ಸಂಬಂಧಿಸಿದ ಕೆಲವು ಕಿವಿಮಾತುಗಳನ್ನು ಹೇಳಿದರು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಲಾವಿದರಿಗೆ ಶುಭಹಾರೈಸಿದರು.


ಸಮಾವೇಶದ ಪ್ರಧಾನ ಸಮಾರಂಭ ಅಪರಾಹ್ನ 2.30ಕ್ಕೆ ಶಾಸಕ ಯಶಪಾಲ್ ಸುವರ್ಣರ ಅಧ್ಯಕ್ಷತೆಯಲ್ಲಿ ಜರಗಿತು. ನಿಕಟಪೂರ್ವ ಶಾಸಕ ಕೆ. ರಘುಪತಿ ಭಟ್, ಉದ್ಯಮಿ ಪಿ. ಪುರುಷೋತ್ತಮ ಶೆಟ್ಟಿ, ಕೆನರಾ ಬಸ್ಸು ಮಾಲಕರ ಸಂಘದ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್, ಯಕ್ಷಗಾನ ಅಕಾಡೆಮಿಯ ನಿಕಟಪೂರ್ವ ಅಧ್ಯಕ್ಷ ಡಾ. ಜಿ. ಎಲ್ ಹೆಗಡೆ, ಮೊಗವೀರ ಮಹಾಸಭಾದ ಅಧ್ಯಕ್ಷ ಜಯ ಕೋಟ್ಯಾನ್ ಅಭ್ಯಾಗತರಾಗಿ ಭಾಗವಹಿಸಿದ್ದರು.

ಸಂಸ್ಥೆಯ ಉಪಾಧ್ಯಕ್ಷರುಗಳಾದ ಎಸ್. ವಿ. ಭಟ್, ಪಿ. ಕಿಶನ್ ಹೆಗ್ಡೆ, ವಿ. ಜಿ. ಶೆಟ್ಟಿ ಉಪಸ್ಥಿತರಿದ್ದರು. ಯಕ್ಷನಿಧಿಗೆ ದೊಡ್ಡ ಮೊತ್ತ ನೀಡಿದ ಕಲಾವಿದ ನೀಲ್ಕೋಡು ಶಂಕರ ಹೆಗಡೆಯವರನ್ನು ಗೌರವಿಸಲಾಯಿತು. 17 ಮಂದಿ ಕಲಾವಿದರಿಗೆ ಗೃಹನಿರ್ಮಾಣ ಉಡುಗೊರೆಯಾಗಿ ತಲಾ ರೂ. 10,000/- ದೊಂದಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಆರಂಭದಲ್ಲಿ ವರದಿ ವರ್ಷದಲ್ಲಿ ಅಗಲಿದೆ ಹದಿನೇಳು ಕಲಾವಿದರಿಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು.


ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಾಸ್ತಾವಿಕ ಮಾತುಗಳೊಂದಿಗೆ ಕಾರ್ಯಕ್ರಮ ನಿರೂಪಿಸಿದರು.

ಜತೆಕಾರ್ಯದರ್ಶಿ ಹೆಚ್. ಎನ್. ಶೃಂಗೇಶ್ವರ ವೇದಿಕೆಯ ನಿರ್ವಹಣೆಗೆ ಸಹಕರಿಸಿದರು. ಜತೆಕಾರ್ಯದರ್ಶಿ ನಾರಾಯಣ ಎಂ. ಹೆಗಡೆ ವಂದಿಸಿದರು.

ಚಿನ್ನಾಭರಣ ಅಂಗಡಿಯಿಂದ ಚಿನ್ನದ ಸರ ಕದ್ದ ಬುರ್ಖಾ ಧರಿಸಿದ್ದ ಮಹಿಳೆ – ಮಹಿಳೆ ಚಿನ್ನದ ಸರಗಳನ್ನು ಬ್ಯಾಗ್ ಗೆ ತುರುಕಿಸುವ ದೃಶ್ಯದ ವೀಡಿಯೊ

ಮಲಪ್ಪುರಂ: ಇಲ್ಲಿನ ಚೆಮ್ಮಾಡ್‌ನ ಆಭರಣ ಮಳಿಗೆಯೊಂದರಿಂದ ಬುರ್ಖಾ ಧರಿಸಿದ್ದ ಮಹಿಳೆಯೊಬ್ಬರು 1.5 ಪವನ್‌ನ ಎರಡು ಚಿನ್ನದ ಸರಗಳನ್ನು ಕದ್ದಿದ್ದಾರೆ.

ಗ್ರಾಹಕರಂತೆ ಅಂಗಡಿಯನ್ನು ತಲುಪಿದ ಮಹಿಳೆ ತನ್ನ ಮುಂದೆ ಪ್ರದರ್ಶಿಸಲಾದ ಸಂಗ್ರಹಗಳಿಂದ ಸೇಲ್ಸ್‌ಮ್ಯಾನ್‌ನ ಕಣ್ಣು ತಪ್ಪಿಸಿ, ಎರಡು ಸರಗಳನ್ನು ಕಿತ್ತುಕೊಂಡಳು. ಇನ್ನೂ ಗುರುತು ಸಿಗದ ಮಹಿಳೆ ಚಿನ್ನಾಭರಣ ಕದ್ದು ತನ್ನ ಬ್ಯಾಗ್‌ನೊಳಗೆ ಬಚ್ಚಿಟ್ಟುಕೊಂಡಿರುವ ದೃಶ್ಯವನ್ನು ಸಿಸಿಟಿವಿ ಯಲ್ಲಿ ಚಿತ್ರಿಸಲಾಗಿದೆ.

ಮಹಿಳೆಯೊಬ್ಬರು ಗ್ರಾಹಕರಂತೆ ನಟಿಸಿ ಚಿನ್ನಾಭರಣ ಅಂಗಡಿಯೊಂದರಿಂದ ಎರಡು ಚಿನ್ನದ ಸರ ಕದ್ದಿರುವ ಘಟನೆ ಮಲಪ್ಪುರಂನಲ್ಲಿ ನಡೆದಿದೆ. ಸೇಲ್ಸ್‌ಮ್ಯಾನ್‌ನ ಗಮನ ಸ್ವಲ್ಪ ಬದಲಾದಾಗ, ಅವಳು ಪರಿಣಿತವಾಗಿ ಸರಗಳನ್ನು ಕದ್ದಿದ್ದು ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನೆಕ್ಲೇಸ್ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದಿದ್ದಳು ಈ ವೇಳೆ ಅಂಗಡಿಯಲ್ಲಿ ಭಾರೀ ಜನಸಂದಣಿ ಇತ್ತು. ಮಾರಾಟಗಾರನು ಮಹಿಳೆಯ ಮುಂದೆ ಕೆಲವು ನೆಕ್ಲೇಸ್ಗಳನ್ನು ಪ್ರದರ್ಶಿಸಿದನು.

ಮಾರಾಟಗಾರ ಮತ್ತೊಂದು ಮಾದರಿಯನ್ನು ಪಡೆಯಲು ಹೋದನು. ಮಹಿಳೆ ತಕ್ಷಣ ಎರಡು ನೆಕ್ಲೇಸ್ ತೆಗೆದುಕೊಂಡು ತನ್ನ ಬ್ಯಾಗ್ ಗೆ ಹಾಕಿದ್ದಾಳೆ.

ಕೂಡಲೇ ಮಹಿಳೆ ಯಾವುದೇ ಚಿನ್ನವನ್ನು ಖರೀದಿಸದೆ ಅಂಗಡಿಯಿಂದ ಹೊರಬಂದರು. ತಪಾಸಣೆ ನಡೆಸಿದಾಗ ಚಿನ್ನದ ಸರ ನಾಪತ್ತೆಯಾಗಿರುವುದು ಪತ್ತೆಯಾಗಿದೆ.

ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಇದರ ಹಿಂದೆ ಮಹಿಳೆಯ ಕೈವಾಡ ಇರುವುದು ಸ್ಪಷ್ಟವಾಗಿದೆ. ಅಂಗಡಿ ಮಾಲೀಕರ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದರೂ ಮಹಿಳೆ ಪತ್ತೆಯಾಗಿಲ್ಲ.

ಕಾಲೇಜು ವಿದ್ಯಾರ್ಥಿನಿಗೆ ಮಾದಕ ದ್ರವ್ಯ ನೀಡಿ, ಹಲವೆಡೆ ಕರೆದೊಯ್ದು, ಲೈಂಗಿಕ ದೌರ್ಜನ್ಯ ಎಸಗಿ, ತಡರಾತ್ರಿ ರಸ್ತೆಯಲ್ಲಿ ಬಿಟ್ಟುಹೋದ ಪಾತಕಿಗಳು – ಒಬ್ಬನ ಬಂಧನ

ಕಾಲೇಜು ವಿದ್ಯಾರ್ಥಿನಿಯೊಬ್ಬಳಿಗೆ ಮಾದಕ ವಸ್ತು ನೀಡಿ ಹಲವು ಕಡೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಲಾಗಿದೆ.

ಈ ಘಟನೆ ಕೇರಳದ ಕೋಝಿಕ್ಕೋಡಿನ ತಾಮರಸ್ಸೆರಿ ಚುರಂ ಎಂಬಲ್ಲಿ ನಡೆದಿದೆ. ನಂತರ ಆಕೆಯನ್ನು ಕೋಝಿಕ್ಕೋಡಿನ ತಾಮರಸ್ಸೆರಿ ಚುರಂನಲ್ಲಿ ಬಿಡಲಾಯಿತು. ನಿನ್ನೆ ರಾತ್ರಿ ಆಕೆ ಅಲ್ಲಿಂದ ಪತ್ತೆಯಾಗಿದ್ದಾಳೆ.

ಘಟನೆಗೆ ಸಂಬಂಧಿಸಿದಂತೆ ಒಬ್ಬನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಆತನ ವಿವರಗಳನ್ನು ಬಹಿರಂಗಪಡಿಸಿಲ್ಲ. ಇಂದು ಆತನ ಬಂಧನ ದಾಖಲಾಗುವ ಸಾಧ್ಯತೆ ಇದೆ.

ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕಿ ತಾಮರಸ್ಸೆರಿಯ ಖಾಸಗಿ ಕಾಲೇಜಿನ ವಿದ್ಯಾರ್ಥಿನಿ. ಮಂಗಳವಾರದಿಂದ ಬಾಲಕಿ ನಾಪತ್ತೆಯಾಗಿದ್ದಳು.

ಹಾಸ್ಟೆಲ್‌ನಲ್ಲಿದ್ದ ಬಾಲಕಿ ಮನೆಗೆ ಹೋಗುವುದಾಗಿ ತಿಳಿಸಿದ್ದಾಳೆ. ಆಕೆ ವಾಪಸ್ ಬಾರದೆ ಇದ್ದಾಗ ಹಾಸ್ಟೆಲ್ ಅಧಿಕಾರಿಗಳು ಮನೆಗೆ ಕರೆ ಮಾಡಿ ನೋಡಿದಾಗ ಆಕೆ ಅಲ್ಲಿಗೆ ತಲುಪಿಲ್ಲ ಎಂದು ತಿಳಿದು ಬಂದಿದೆ.

ನಂತರ ಆಕೆಯ ತಂದೆ ಪೊಲೀಸರಿಗೆ ದೂರು ನೀಡಿದ್ದರು. ನಿನ್ನೆ ರಾತ್ರಿ ತಾಮರಸ್ಸೆರಿ ಒಂಬತ್ತನೇ ತಿರುವಿನಲ್ಲಿ ಬಾಲಕಿ ಪತ್ತೆಯಾಗಿದ್ದಾಳೆ.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವ – ಸರಸ್ವತಿ ಪೂಜಾ ಮತ್ತು ಗಣಹೋಮ ಕಾರ್ಯಕ್ರಮ

ಪುತ್ತೂರು, ಜೂ 1: ವಿದ್ಯೆ ಎಂದರೆ ಕೇವಲ ಪುಸ್ತಕದ ಮಾಹಿತಿಯಲ್ಲ ಬದಲಿಗೆ ವಿವೇಕ, ಪ್ರಜ್ಞೆ, ಬುದ್ದಿವಂತಿಕೆ ,ಜ್ಞಾನ ತಿಳುವಳಿಕೆಗಳನ್ನು ಒಳಗೊಂಡಿದೆ. ವಿದ್ಯೆ, ಬುದ್ಧಿ, ಸಂಗೀತ ಮತ್ತು ಕಲೆ ಸಂಸ್ಕೃತಿಯ ಪ್ರತೀಕವಾಗಿರುವ ಭಾರತೀಯದೇವತೆ ಸರಸ್ವತಿಯನ್ನು ಪ್ರತಿಯೊಬ್ಬ ವಿದ್ಯಾರ್ಥಿಯು ಪೂಜಿಸಬೇಕು ಎಂದು ಕಶೆಕೋಡಿ ಸೂರ್ಯನಾರಾಯಣ ಭಟ್ ಹೇಳಿದರು.

ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪ್ರಾರಂಭೋತ್ಸವದ ಅಂಗವಾಗಿ ಆಯೋಜಿಸಲಾದ ಸರಸ್ವತಿ ಪೂಜಾ ಮತ್ತು ಗಣಹೋಮ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು.

ಯಾವುದೇ ಒಂದು ವಿದ್ಯಾಸಂಸ್ಥೆ ಅಥವಾ ವಿದ್ಯಾರ್ಥಿಯು ಬೆಳಗಬೇಕಾದರೆ ತನ್ನೊಳಗಿರುವ ಅಂತ:ಶಕ್ತಿಯನ್ನು ಪ್ರಕಟಪಡಿಸಬೇಕು. ಇದಕ್ಕೆ ವಿದ್ಯಾಧಿದೇವತೆಯಾದ ಸರಸ್ವತಿಯ ಪೂರ್ಣನುಗ್ರಹ ಅತ್ಯಗತ್ಯ. ಈ ದಿಶೆಯಲ್ಲಿ ವಿವೇಕಾನಂದ ಪದವಿಪೂರ್ವ ವಿದ್ಯಾಲಯವು ಮಾದರಿಯಾಗಿ ಪ್ರತಿವರ್ಷವು ಇಂತಹ ಜ್ಞಾನಾಭಿವೃದ್ಧಿ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಂಡು ಬರುತ್ತಿದೆ.

ಭಗವಂತನ ಆಶೀರ್ವಾದದಿಂದ ಸತ್ಕಮ ಕಾರ್ಯಗಳು ಕೈಗೂಡುತ್ತಿವೆ.ಈ ಮೂಲಕ ಎಲ್ಲಾರಿಗೂ ಆಯುರಾರೋಗ್ಯ ಮತ್ತು ಸುಖ, ಶಾಂತಿ, ನೆಮ್ಮದಿ ಲಭಿಸಿ ಉತ್ತಮ ರೀತಿಯಲ್ಲಿ ವಿದ್ಯಾರ್ಥಿಗಳು ವಿದ್ಯಾರ್ಜನೆಗೈದು ಭವ್ಯಭಾರತದ ನಿರ್ಮಾಣ ಮಾಡುವಂತಾಗಲಿ. ಈ ಮೂಲಕ ಸಂಸ್ಥೆಯಲ್ಲಿ ಕಲಿಯುತ್ತಿರುವ ಎಲ್ಲರಿಗೂ ಆ ಸರಸ್ವತಿಯ ಅನುಗ್ರಹವು ಪ್ರಾಪ್ತಿಯಾಗಲಿ ಎಂದು ಶುಭ ಹಾರೈಸಿದರು.

ಬಳಿಕ ವಿದ್ಯಾರ್ಥಿಗಳಿಗೆ ಶಾರದಾ ಶ್ಲೋಕದ ಪಠಣವನ್ನು ಬೋಧಿಸಲಾಯಿತು. ಕಶೆಕೋಡಿ ಸೂರ್ಯನಾರಾಯಣ ಭಟ್ ಇವರ ನೇತೃತ್ವದಲ್ಲಿ ಪೂಜವಿಧಿಗಳು ನೇರವೇರಿದವು.

ಕಾರ್ಯಕ್ರಮದಲ್ಲಿ ಆಡಳಿತ ಮಂಡಳಿಯ ಸಂಚಾಲಕ ಗೋಪಾಲಕೃಷ್ಣ ಭಟ್, ಸದಸ್ಯರಾದ ಡಾ. ಕೆ.ಎನ್ ಸುಬ್ರಹ್ಮಣ್ಯ, ವತ್ಸಲಾರಾಜ್ಞಿ, ಸದಸ್ಯರು, ಶಿಕ್ಷಕ ರಕ್ಷಕ ಸಂಘದ ಪದಾಧಿಕಾರಿಗಳು, ಪ್ರಾಂಶುಪಾಲ ಮಹೇಶ ನಿಟಿಲಾಪುರ, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದ, ವಿದ್ಯಾರ್ಥಿ ಸಮೂಹ ಪೂರ್ಣಹುತಿಯಲ್ಲಿ ಹಾಜರಿದ್ದು ದೇವರ ಕೃಪೆಗೆ ಪಾತ್ರರಾದರು.

ಅಪ್ರಾಪ್ತ ಬಾಲಕಿ ಸಾಕ್ಷಿ ಹತ್ಯೆ ಪ್ರಕರಣ: ಆರೋಪಿ ಸಾಹಿಲ್‌ಗೆ 2 ದಿನಗಳ ಪೊಲೀಸ್ ಕಸ್ಟಡಿ – ತಾನು ಹಿಂದೂ ಎಂದು ನಂಬಿಸಿ ಲವ್ ಜಿಹಾದ್ ಗೆ ಯತ್ನಿಸಿ ಹತ್ಯೆಗೈದ ಆರೋಪ

ನವದೆಹಲಿ: ದೆಹಲಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಅಪ್ರಾಪ್ತ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದ ಆರೋಪಿ ಸಾಹಿಲ್ ನನ್ನು ರೋಹಿಣಿ ನ್ಯಾಯಾಲಯ ಮಂಗಳವಾರ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ವರದಿಗಳ ಪ್ರಕಾರ, ಭದ್ರತಾ ಕಾರಣಗಳಿಂದ ಸಾಹಿಲ್ ಅವರನ್ನು ಮಂಗಳವಾರ ಬೆಳಗ್ಗೆ ಡ್ಯೂಟಿ ಮ್ಯಾಜಿಸ್ಟ್ರೇಟ್‌ಗಳ ಮುಂದೆ ಹಾಜರುಪಡಿಸಲಾಯಿತು.

ದೆಹಲಿ ಪೊಲೀಸರ ಅಹವಾಲುಗಳನ್ನು ಆಲಿಸಿದ ನಂತರ ಡ್ಯೂಟಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಜ್ಯೋತಿ ನಾಯ್ನ್ ಅವರು ಎರಡು ದಿನಗಳ ಬಂಧನವನ್ನು ನೀಡಿದರು.

ದೆಹಲಿ ಪೊಲೀಸರು ಎರಡು ಕಾರಣಗಳನ್ನು ಉಲ್ಲೇಖಿಸಿ ಸಾಹಿಲ್‌ನನ್ನು ಕಸ್ಟಡಿಗೆ ಕೇಳಿದರು: ಮೊದಲನೆಯದಾಗಿ, ಕೊಲೆಗೆ ಬಳಸಿದ ಆಯುಧವು ಇನ್ನೂ ಪತ್ತೆಯಾಗಿಲ್ಲ, ಮತ್ತು ಎರಡನೆಯದಾಗಿ, ಸಾಹಿಲ್ ಅಸಮಂಜಸವಾದ ಹೇಳಿಕೆಗಳನ್ನು ನೀಡುತ್ತಿದ್ದು, ಅದು ತನಿಖೆ ಮತ್ತು ಪರಿಶೀಲಿಸಬೇಕಾಗಿದೆ.

ಸಾಹಿಲ್‌ನನ್ನು ಸೋಮವಾರ ದೆಹಲಿ ಪೊಲೀಸರು ಬುಲಂದ್‌ಶಹರ್‌ನಲ್ಲಿ ಬಂಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಯಲ್ಲಿ, ಸಾಹಿಲ್ ಹುಡುಗಿಯನ್ನು ಚಾಕುವಿನಿಂದ ಅನೇಕ ಬಾರಿ ಇರಿದಿರುವುದನ್ನು ಕಾಣಬಹುದು ಮತ್ತು ಅವಳು ನೆಲಕ್ಕೆ ಬಿದ್ದಾಗಲೂ ಅವಳನ್ನು ಇರಿದುಕೊಳ್ಳುವುದನ್ನು ಮುಂದುವರಿಸುತ್ತಾನೆ. ಅವನು ಅವಳನ್ನು ಒದೆದನು ಮತ್ತು ನಂತರ ಹತ್ತಿರದಲ್ಲಿ ಬಿದ್ದಿದ್ದ ಕಾಂಕ್ರೀಟ್ ಚಪ್ಪಡಿಯನ್ನು ತೆಗೆದುಕೊಂಡು ಅವಳ ತಲೆಯನ್ನು ಹೊಡೆದನು.

ಈ ಎಲ್ಲಾ ದೃಶ್ಯಗಳು ಜನರು ಘಟನೆಗಳನ್ನು ನೋಡುವುದನ್ನು ಮತ್ತು ಮಧ್ಯಪ್ರವೇಶಿಸದೆ ಹಿಂದೆ ನಡೆಯುವುದನ್ನು ತೋರಿಸಿದೆ. ಆರೋಪಿ ಸಾಹಿಲ್‌ನನ್ನು ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯಲ್ಲಿ ಬಂಧಿಸಲಾಗಿದೆ. ANI ಹಂಚಿಕೊಂಡ ತನ್ನ ಬಂಧನದ ಚಿತ್ರದಲ್ಲಿ, ಸಾಕ್ಷಿಯನ್ನು 20 ಕ್ಕೂ ಹೆಚ್ಚು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಸಾಹಿಲ್, ತನ್ನ ಮಣಿಕಟ್ಟಿನ ಮೇಲೆ ಕಾಲವವನ್ನು (ಪವಿತ್ರ ಹಿಂದೂ ದಾರ) ಧರಿಸಿರುವುದನ್ನು ಕಾಣಬಹುದು.

ವರದಿಗಳ ಪ್ರಕಾರ, ಸಾಕ್ಷಿ ಹತ್ಯೆ ಪ್ರಕರಣದ ಆರೋಪಿ ಸಾಹಿಲ್ ಸರ್ಫರಾಜ್ ಖಾನ್ ಕೂಡ ಧಾರ್ಮಿಕ ತಪ್ಪು ಗ್ರಹಿಕೆಯನ್ನು ಸೃಷ್ಟಿಸುವ ವಿಧಾನಗಳನ್ನು ಅನುಸರಿಸಿದ್ದಾನೆ. ಅವರ ಕೊರಳಿನಲ್ಲಿ ರುದ್ರಾಕ್ಷಿ ಮಾಲೆ ಮತ್ತು ಕೈಯಲ್ಲಿ ಹಿಂದೂಗಳು ಬಳಸುವ ದಾರವಿತ್ತು. ಅವರು ಹುಕ್ಕಾ ಸೇದುತ್ತಿರುವ ವಿಡಿಯೋಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸಾಹಿಲ್ ಇತರ ಹುಡುಗಿಯರೊಂದಿಗೆ ಸಂಬಂಧ ಹೊಂದಿದ್ದನೆಂದು ಆತನ ಇನ್ಸ್ಟಾಗ್ರಾಮ್ ಖಾತೆಯು ಸಾಬೀತುಪಡಿಸುತ್ತದೆ

ಪೊಲೀಸರು ಆತನ ಖಾತೆಯನ್ನು ಪರಿಶೀಲಿಸಿದಾಗ ಈ ವಿಷಯಗಳು ಸ್ಪಷ್ಟವಾಗಿವೆ. ಬಿಜೆಪಿ ನಾಯಕ ಕಪಿಲ್ ಮಿಶ್ರಾ ಕೂಡ ಟ್ವಿಟ್ಟರ್‌ನಲ್ಲಿ ಮುಸ್ಲಿಂ ಆರೋಪಿ ಮಣಿಕಟ್ಟಿನ ಸುತ್ತ ಕಲವಾ ಧರಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನು ಲವ್ ಜಿಹಾದ್ ಘಟನೆ ಎಂದು ಕರೆದಿರುವ ಬಿಜೆಪಿ ನಾಯಕ, ಆರೋಪಿಗಳು ಯಾರ ತಂತ್ರದ ಬೆಂಬಲದೊಂದಿಗೆ ಘೋರ ಅಪರಾಧ ಮಾಡಿದ್ದಾರೆ ಎಂದು ಪ್ರಶ್ನಿಸಿದ್ದಾರೆ.

ಘಟನೆಯ ನಂತರ ಶೈಲ್ ಪರಾರಿಯಾಗಿದ್ದಾನೆ ಎಂದು ಡಿಸಿಪಿ ಔಟರ್ ನಾರ್ತ್ ರವಿಕುಮಾರ್ ಸಿಂಗ್ ವಿಡಿಯೋ ಬೈಟ್‌ನಲ್ಲಿ ತಿಳಿಸಿದ್ದಾರೆ. ಉತ್ತರ ಪ್ರದೇಶದ ಬುಲಂದ್‌ಶಹರ್ ಜಿಲ್ಲೆಯ ಸಾಹಿಲ್‌ನನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಈಗ ಅವರನ್ನು ದೆಹಲಿಗೆ ಕರೆತರುತ್ತಿದ್ದಾರೆ.

ಆರೋಪಿ, ದೆಹಲಿಯ ಶಹಬಾದ್ ಡೈರಿ ಪ್ರದೇಶದ ನಿವಾಸಿ ಮತ್ತು ಮೃತ ಅಪ್ರಾಪ್ತ ಬಾಲಕಿ ಪರಸ್ಪರ ಮೊದಲೇ ತಿಳಿದಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಅವರು ಹೇಳಿದರು. ಆರಂಭಿಕ ತನಿಖೆಯ ಪ್ರಕಾರ, ದಾಳಿಯ ಸಮಯದಲ್ಲಿ ಅಪ್ರಾಪ್ತ ವಯಸ್ಕಳ ಸ್ಥಳದ ಬಗ್ಗೆ ಸಾಹಿಲ್‌ಗೆ ತಿಳಿದಿತ್ತು ಎಂದು ಪೊಲೀಸರು ಭಾವಿಸುತ್ತಾರೆ ಎಂದು ಸಿಂಗ್ ಹೇಳಿದರು.

ಆದರೆ ಇತ್ತೀಚಿಗೆ ಸಾಕ್ಷಿಗೆ ಸಾಹಿಲ್ ಮುಸ್ಲಿಂ ಎಂಬ ಸತ್ಯ ಗೊತ್ತಾಗಿತ್ತು. ಇದರಿಂದ ಆಕೆ ಸಾಹಿಲ್‌ಗೆ ಸಂಬಂಧವನ್ನು ಕೊನೆಗೊಳಿಸುವಂತೆ ಕೇಳಿಕೊಂಡಿದ್ದಾಳೆ. ಅಡ್ಡಿಪಡಿಸಿದರೆ ಪೊಲೀಸರಿಗೆ ದೂರು ನೀಡುವುದಾಗಿ ಬೆದರಿಕೆ ಹಾಕಿದ್ದಾಳೆ. ಇದರಿಂದ ಆಕೆಯನ್ನು ಸಾಹಿಲ್ ಕೊಲೆ ಮಾಡಿದ್ದಾನೆ ಎಂದು ಪ್ರಾಥಮಿಕ ತನಿಖೆಯನ್ನು ಉಲ್ಲೇಖಿಸಿ ಮಾಧ್ಯಮಗಳು ವರದಿಮಾಡಿವೆ.

‘ದಿ ವಿಕ್ಟರಿ ಆಫ್ ಸುದರ್ಶನ’ – ಇಂಗ್ಲಿಷ್ ಭಾಷೆಯಲ್ಲಿ ಯಕ್ಷಗಾನ ಪ್ರದರ್ಶನ

 

ಕಾಸರಗೋಡು : ಹೈದರಾಬಾದ್ ಮೂಲದ ಇಂಡಿಯಾ ಪಿ ಎಸ್ ಸಿ ಆಫ್ ಸೈಟ್ ಕಾನ್ಫರೆನ್ಸ್ – 2023 ಬೇಕಲದ ತಾಜ್ ರೆಸಾರ್ಟ್ ನಲ್ಲಿ ಇತ್ತೀಚೆಗೆ (ಮೇ 23) ಜರಗಿತು. 

ಈ ಸಂದರ್ಭದಲ್ಲಿ ಮಂಗಳೂರಿನ ತೋನ್ಸೆ ಯಕ್ಷ ಬಳಗದಿಂದ ಇಂಗ್ಲಿಷ್ ಭಾಷೆಯಲ್ಲಿ ‘ದಿ ವಿಕ್ಟರಿ ಆಫ್ ಸುದರ್ಶನ’ (ಸುದರ್ಶನ  ವಿಜಯ) ತೆಂಕುತಿಟ್ಟು  ಯಕ್ಷಗಾನವನ್ನು ಪ್ರದರ್ಶಿಸಲಾಯಿತು. ಶ್ಯಾಡ್ಸ್ ಈವೆಂಟ್ಸ್ ಅವರ ಸಂಯೋಜನೆಯಲ್ಲಿ ಜಿಲ್ಲೆಯ ಪ್ರಸಿದ್ಧ ಕಲಾವಿದರು ಭಾಗವಹಿಸಿದ್ದರು.   

       ಕಾರ್ಯಕ್ರಮದಲ್ಲಿ  ಭಾಗವತರಾಗಿ ತೋನ್ಸೆ ಪುಷ್ಕಳ ಕುಮಾರ್, ಹಿಮ್ಮೇಳದಲ್ಲಿ ಶರತ್ ಕುಮಾರ್ ಕದ್ರಿ, ಸುದಾಸ್  ಕಾವೂರು ಮತ್ತು ಹರಿಶ್ಚಂದ್ರ ನಾಯಗ ಮಾಡೂರು ಪಾಲ್ಗೊಂಡರು. ಮುಮ್ಮೇಳದಲ್ಲಿ ಪ್ರೊ.ಭಾಸ್ಕರ ರೈ ಕುಕ್ಕುವಳ್ಳಿ (ದೇವೇಂದ್ರ), ಡಾ.ದಿನಕರ ಎಸ್.ಪಚ್ಚನಾಡಿ (ಸುದರ್ಶನ ) ಮತ್ತು ಶರತ್ ಪಣಂಬೂರು (ಶತ್ರು ಪ್ರಸೂದನ) ಪಾತ್ರ ವಹಿಸಿದರು.

      ತಂಡದ ಬಗ್ಗೆ ಪರಿಚಯ ನೀಡಿದ ಕಲಾವಿದ ಭಾಸ್ಕರ ರೈ ಕುಕ್ಕುವಳ್ಳಿ ಕರಾವಳಿಯ ಸಾಂಪ್ರದಾಯಿಕ ಯಕ್ಷಗಾನ ಕಲೆಯ ಮಹತ್ವವನ್ನು ತಿಳಿಸಿ ಆಯ್ದುಕೊಂಡ ಪ್ರಸಂಗದ ಕಥಾಸಾರವನ್ನು ಆಂಗ್ಲ ಭಾಷೆಯಲ್ಲಿ ವಿವರಿಸಿದರು.

ಪಿ ಎಸ್ ಸಿ ಮುಖ್ಯಸ್ಥರು ಮತ್ತು ಕಂಪೆನಿಯ ಹಲವಾರು ಪ್ರತಿನಿಧಿಗಳು ಯಕ್ಷಗಾನವನ್ನು ವೀಕ್ಷಿಸಿ ಕಲಾವಿದರನ್ನು ಅಭಿನಂದಿಸಿದರು.

ಯಕ್ಷಗಾನ ಕಲಾರಂಗ ತಾಳಮದ್ದಲೆ ಸಪ್ತಾಹ ಸಮಾರೋಪ – ಶ್ರೀಕರ ಭಟ್ ಹಾಗೂ ಪಾದೇಕಲ್ಲು ವಿಷ್ಣು ಭಟ್‌ರಿಗೆ ಪ್ರಶಸ್ತಿ

ಉಡುಪಿ : ಯಕ್ಷಗಾನ ಕಲಾರಂಗ ಆಯೋಜಿಸಿದ ತಾಳಮದ್ದಲೆ ಸಪ್ತಾಹದ ಸಮಾರೋಪ ಸಮಾರಂಭ 27-5-2023ರಂದು ಶಿರ್ವದ ಮಹಿಳಾ ಸೌಧದಲ್ಲಿ ಜರಗಿತು.

ಈ ಸಂದರ್ಭದಲ್ಲಿ ಶ್ರೀ ಶ್ರೀಕರ ಭಟ್ ಇವರಿಗೆ ಮಟ್ಟಿ ಮುರಲೀಧರ ರಾವ್ ಪ್ರಶಸ್ತಿಯನ್ನು ಹಾಗೂ ಪಂಡಿತ ಪೆರ್ಲ ಕೃಷ್ಣ ಭಟ್ ಪ್ರಶಸ್ತಿಯನ್ನು ಡಾ. ಪಾದೇಕಲ್ಲು ವಿಷ್ಣು ಭಟ್‌ರಿಗೆ ಪ್ರದಾನ ಮಾಡಲಾಯಿತು. ಪ್ರಶಸ್ತಿಯು ಇಪ್ಪತ್ತು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಪತ್ರವನ್ನೊಳಗೊಂಡಿದೆ.

ಇದೇ ಸಂದರ್ಭದಲ್ಲಿ ಕಾಪು ಶಾಸಕರಾದ ಶ್ರೀ ಗುರ್ಮೆ ಸುರೇಶ್ ಶೆಟ್ಟಿಯವರನ್ನು ಸಂಸ್ಥೆಯ ವತಿಯಿಂದ ಅಭಿನಂದಿಸಲಾಯಿತು. ಕಾಪು ವಿಧಾನಸಭಾ ಕ್ಷೇತ್ರದ ಕೆಲವು ಶಾಲೆಗಳಲ್ಲಾದರೂ ಯಕ್ಷಶಿಕ್ಷಣ ಟ್ರಸ್ಟ್ ಮೂಲಕ ವಿದ್ಯಾರ್ಥಿಗಳಿಗೆ ಯಕ್ಷಗಾನ ಕಲಿಸಿ ಪ್ರದರ್ಶನ ವ್ಯವಸ್ಥೆ ಮಾಡಬೇಕೆಂಬ ಅಪೇಕ್ಷೆಯನ್ನು ಶಾಸಕರಾದ ಗುರ್ಮೆಯವರು ವ್ಯಕ್ತಪಡಿಸಿದರು.

ಪೆರ್ಲ ಪ್ರಶಸ್ತಿ ಸ್ಥಾಪಿಸಿದ ಕೃಷ್ಣಪ್ರಸಾದ್ ಅಡ್ಯಂತಾಯ ಅಧ್ಯಕ್ಷೀಯ ಮಾತುಗಳನ್ನಾಡಿ ಕಲಾರಂಗದ ಚತುರ್ಮುಖದ ಚಟುವಟಿಕೆಗಳನ್ನು ಮೆಚ್ಚಿ, ಸನ್ಮಾನಿತರನ್ನು ಅಭಿನಂದಿಸಿದರು. ಶಿರ್ವದ ನಿವೃತ್ತ ಮುಖ್ಯೋಪಾಧ್ಯಾಯ ಶ್ರೀ ರಾಮ ಶೆಟ್ಟಿ ಹಾಗೂ ಯಕ್ಷಗಾನ ಅಭಿಮಾನಿ ಬಳಗದ ಪ್ರಮುಖರಾದ ಶ್ರೀಪತಿ ಕಾಮತ್ ಅಭ್ಯಾಗತರಾಗಿ ಭಾಗವಹಿಸಿ ಶುಭ ಹಾರೈಸಿದರು.

ಆರಂಭದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಂ. ಗಂಗಾಧರ ರಾವ್ ಸ್ವಾಗತಿಸಿದರು. ತಾಳಮದ್ದಲೆ ಸಪ್ತಾಹವನ್ನು ಸಂಯೋಜಿಸಿದ ಜತೆಕಾರ್ಯದರ್ಶಿ ನಾರಾಯಣ ಎಮ್. ಹೆಗಡೆ ಸನ್ಮಾನಿತರನ್ನು ಪರಿಚಯಿದರು. ಕಾರ್ಯದರ್ಶಿ ಮುರಲಿ ಕಡೆಕಾರ್ ನಿರೂಪಿಸಿದ ಕಾರ್ಯಕ್ರಮದ ಕೊನೆಯಲ್ಲಿ ಎಚ್.ಎನ್. ಶೃಂಗೇಶ್ವರ ಧನ್ಯವಾದ ಸಲ್ಲಿಸಿದರು.

ಉಪಾಧ್ಯಕ್ಷರಾದ ಎಸ್. ವಿ. ಭಟ್, ವಿ. ಜಿ. ಶೆಟ್ಟಿ ಹಾಗೂ ಪೆರ್ಲ ರಾಜಾರಾಮ್ ಭಟ್ ಸಭೆಯಲ್ಲಿ ಉಪಸ್ಥಿತರಿದ್ದರು. ಬಳಿಕ ಶ್ರೀ ಕೃಷ್ಣ ಸಂಧಾನ ತಾಳಮದ್ದಲೆ ಸಂಪನ್ನಗೊ0ಡಿತು.