Saturday, August 1, 2026
Home Blog Page 98

ಚಿತ್ರಸೇನ ಕಾಳಗ, ದುಶ್ಶಾಸನ ವಧೆ, ರಕ್ತರಾತ್ರಿ ಯಕ್ಷಗಾನ ಬಯಲಾಟ 

ಕಟೀಲು ಶ್ರೀದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಕಲಾಮಂಡಳಿಯವರಿಂದ 28ನೇ ವರ್ಷದ ಸೇವಾ ಬಯಲಾಟವಾಗಿ “ಚಿತ್ರಸೇನ ಕಾಳಗ, ದುಶ್ಶಾಸನ ವಧೆ, ರಕ್ತರಾತ್ರಿ” ಯಕ್ಷಗಾನ ಬಯಲಾಟ ತಾ.15.04.2023ನೇ ಶನಿವಾರ ಸಂಜೆ ಗಂಟೆ 6.00ಕ್ಕೆ  ಕನ್ಯಾನದ ಸರಸ್ವತೀ ವಿದ್ಯಾಲಯದ ವಠಾರದಲ್ಲಿ ನಡೆಯಲಿದೆ. 

ಈ ಸಂದರ್ಭದಲ್ಲಿ ಸಂಜೆ 5.30ಗಂಟೆಗೆ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. 

ಶ್ರೀಗಳಾದ –  ಜಿನ್ನಪ್ಪ ನಾಯ್ಕ ಪೆರ್ನೆಮೊಗರು (ಮಾಜಿ ಯೋಧ), ದೇವಸ್ಯ ಕುಂಙ್ಙಣ್ಣಶೆಟ್ಟಿ (ದೈವಪಾತ್ರಿ), ಗಂಗಯ್ಯ ನಲಿಕೆ ಮರ್ತನಾಡಿ (ದೈವನರ್ತಕ), ಎಂ.ಟಿ.ಎಸ್. ಕುಲಾಲ್ (ಯಕ್ಷಗಾನ ಹಾಗೂ ಚಲನಚಿತ್ರ ನಟ) ಇವರನ್ನು ಸನ್ಮಾನಿಸಿ ಗೌರವಿಸಲಾಗುವುದು. ವಿವರಗಳಿಗೆ ಮೇಲಿನ ವೀಡಿಯೊವನ್ನು ನೋಡಿ  

‘ಶ್ರೀ ದೇವಿ ಮಹಾತ್ಮೆ’ ಯಕ್ಷಗಾನ  ಪ್ರದರ್ಶನ

ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತಾರ ಯಕ್ಷಗಾನ ಮಂಡಳಿಯವರಿಂದ ದಿನಾಂಕ 14-04-2023ನೇ ಶುಕ್ರವಾರ ಸಂಜೆ ಘಂಟೆ 5.45ಕ್ಕೆ ಎಕ್ಕಾರು ಗುಡ್ಡೆಸಾನದ ಬಳಿ ‘ಶ್ರೀ ದೇವಿ ಮಹಾತ್ಮೆ’ ಎಂಬ ಪುಣ್ಯ ಕಥಾಭಾಗದ  ಯಕ್ಷಗಾನ  ಪ್ರದರ್ಶನ ಏರ್ಪಡಿಸಲಾಗಿದೆ. 

ಆ ಪ್ರಯುಕ್ತ ಕಲಾಭಿಮಾನಿಗಳಾದ ಎಲ್ಲರನ್ನೂ ಶ್ರೀಮತಿ ಶ್ರುತಿ ಮತ್ತು ಶ್ರೀ ಪದ್ಮನಾಭ ಉಡುಪ ಮತ್ತು ಶ್ರೀಮತಿ ರಾಧ ಉಡುಪ, ಶ್ರೀ ಮಧ್ವರಾಜ ಉಡುಪ ಅವರು ಆದರದಿಂದ ಸ್ವಾಗತಿಸಿದ್ದಾರೆ. ವಿವರಗಳಿಗೆ ಮೇಲಿನ ವೀಡಿಯೊ ನೋಡಿ 

ಮುಂಬೈನಲ್ಲಿ ವ್ಯಕ್ತಿಯೊಬ್ಬ ಇಬ್ಬರು ಯುವತಿಯರನ್ನು ಅಪ್ಪಿಕೊಂಡು ಅಪಾಯಕಾರಿ ಬೈಕ್ ಸ್ಟಂಟ್ ಮಾಡಿದ ಪ್ರಕರಣ – ಮೂವರ ವಿರುದ್ಧ ಪ್ರಕರಣ – ಹುಡುಗಿಯರ ಜೊತೆ ಬೈಕ್ ವೀಲಿಂಗ್ ವೀಡಿಯೊ ನೋಡಿ

ವೈರಲ್ ವೀಡಿಯೊವೊಂದರಲ್ಲಿ, ಮುಂಬೈನಲ್ಲಿ ವ್ಯಕ್ತಿಯೊಬ್ಬರು ಇಬ್ಬರು ಮಹಿಳೆಯರೊಂದಿಗೆ ಅಪಾಯಕಾರಿ ಬೈಕ್ ಸ್ಟಂಟ್ ಪ್ರದರ್ಶಿಸುವುದನ್ನು ಕಾಣಬಹುದು. ಪೊಲೀಸರು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಇಬ್ಬರು ಮಹಿಳೆಯರೊಂದಿಗೆ ವ್ಯಕ್ತಿಯೊಬ್ಬ ನಡೆಸಿದ ಅಪಾಯಕಾರಿ ಬೈಕ್ ಸ್ಟಂಟ್‌ನ 13 ಸೆಕೆಂಡ್‌ಗಳ ವಿಡಿಯೋ ಮುಂಬೈ ಪೊಲೀಸರನ್ನು ಮೂವರ ವಿರುದ್ಧ ಪ್ರಕರಣ ದಾಖಲಿಸಲು ಪ್ರೇರೇಪಿಸಿತು.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ಕ್ಲಿಪ್‌ನಲ್ಲಿ, ಒಬ್ಬ ಪುರುಷನು ತನ್ನ ಮುಂದೆ ಒಬ್ಬ ಮಹಿಳೆ ಮತ್ತು ಇನ್ನೊಬ್ಬರು ಪಿಲಿಯನ್ ಮೇಲೆ ಕುಳಿತುಕೊಂಡು ವೀಲಿಂಗ್ ಪ್ರದರ್ಶಿಸುತ್ತಿರುವುದನ್ನು ಕಾಣಬಹುದು. ಪುರುಷನು ಮುಂಭಾಗದ ಚಕ್ರಗಳನ್ನು ರಸ್ತೆಯಿಂದ ಮೇಲಕ್ಕೆತ್ತಿ ಹಲವಾರು ಮೀಟರ್‌ಗಳವರೆಗೆ ಸವಾರಿ ಮಾಡುತ್ತಿದ್ದಾಗ ಇಬ್ಬರು ಮಹಿಳೆಯರು ಅವನನ್ನು ಅಪ್ಪಿಕೊಂಡಿದ್ದಾರೆ.

ಬೈಕರ್‌ನ ಮುಂದೆ ಕುಳಿತಿರುವ ಮಹಿಳೆ ಕೈಬೀಸುತ್ತಿದ್ದಾಳೆ, ನಗುತ್ತಿದ್ದಾಳೆ ಮತ್ತು ಗ್ಯಾಂಗ್ ಚಿಹ್ನೆಗಳನ್ನು ತೋರಿಸುತ್ತಿದ್ದಾಳೆ. ಮೂವರು ಪ್ರಯಾಣಿಕರು ಹೆಲ್ಮೆಟ್ ಧರಿಸಿರಲಿಲ್ಲ. ಈ ಕುರಿತು ಬಿಕೆಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ಪತ್ತೆಗೆ ತನಿಖೆ ನಡೆಯುತ್ತಿದೆ.

ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್ ಪೊಲೀಸರು ಮೂವರ ವಿರುದ್ಧ ಐಪಿಸಿಯ ಸೆಕ್ಷನ್ 279 (ಅಪವೇಗದ ಚಾಲನೆ) ಮತ್ತು 336 (ಜೀವಕ್ಕೆ ಅಪಾಯ) ಮತ್ತು ಮೋಟಾರು ವಾಹನ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಮುಂಬೈ ಪೊಲೀಸರು ಮತ್ತೊಂದು ಟ್ವೀಟ್‌ನಲ್ಲಿ, “ಕೇವಲ ದಂಡ ಮಾತ್ರವಲ್ಲ, ಈ ವೀಡಿಯೊದಲ್ಲಿ ಕಂಡುಬರುವ ಆರೋಪಿಗಳ ವಿರುದ್ಧ ಪ್ರಕರಣವನ್ನೂ ದಾಖಲಿಸಲಾಗಿದೆ ಮತ್ತು ಅವರು ಕಾನೂನು ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ” ಎಂದು ಉಲ್ಲೇಖಿಸಿದ್ದಾರೆ.

ಬೈಕ್‌ನಲ್ಲಿದ್ದ ಇಬ್ಬರು ಮಹಿಳೆಯರ ವಿರುದ್ಧ ಬಿಕೆಸಿ ಪೊಲೀಸ್ ಠಾಣೆಯಲ್ಲಿ ಕುಮ್ಮಕ್ಕು ನೀಡಿದವರಂತೆ ಪ್ರಕರಣ ದಾಖಲಿಸಲಾಗಿದೆ ಎಂದು ವರದಿಗಳು ತಿಳಿಸಿವೆ. ಅದೇ ಎಫ್‌ಐಆರ್‌ನಲ್ಲಿ ಅವರ ವಿರುದ್ಧ ಐಪಿಸಿ ಸೆಕ್ಷನ್ 114 ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ವೇತನ ವಿತರಣೆ ವಿಳಂಬ ಖಂಡಿಸಿ ಕೆಎಸ್‌ಆರ್‌ಟಿಸಿ ವಿರುದ್ಧ ಬ್ಯಾಡ್ಜ್‌ ಧರಿಸಿದ್ದ ಮಹಿಳಾ ಕಂಡಕ್ಟರ್‌ ವರ್ಗಾವಣೆ

ಕೆಎಸ್‌ಆರ್‌ಟಿಸಿಯಲ್ಲಿ ವೇತನ ವಿತರಣೆ ವಿಳಂಬ ಖಂಡಿಸಿ ಬ್ಯಾಡ್ಜ್ ಧರಿಸಿ ಪ್ರತಿಭಟನೆ ನಡೆಸಿದ ಮಹಿಳಾ ಕಂಡಕ್ಟರ್‌ರನ್ನು ವರ್ಗಾವಣೆ ಮಾಡಲಾಗಿದೆ.

ಅಖಿಲಾ ಬ್ಯಾಡ್ಜ್ ಧರಿಸಿ ಪ್ರತಿಭಟನೆ ನಡೆಸುತ್ತಿರುವ ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಅಖಿಲಾ ಅವರು ‘ಸಂಬಳ ರಹಿತ ಸೇವೆ 44ನೇ ದಿನ’ ಎಂಬ ಬ್ಯಾಡ್ಜ್ ಧರಿಸಿದ್ದರು.

ಕೆಎಸ್‌ಆರ್‌ಟಿಸಿ ವೈಕಂ ಡಿಪೋದಲ್ಲಿ ಕಂಡಕ್ಟರ್ ಆಗಿದ್ದ ಅಖಿಲಾ ಸಿ ನಾಯರ್ ಅವರನ್ನು ಪಾಲಾ ಡಿಪೋಗೆ ವರ್ಗಾವಣೆ ಮಾಡಲಾಗಿದೆ.

ವರ್ಗಾವಣೆ ಆದೇಶದಲ್ಲಿ ಸರ್ಕಾರ ಮತ್ತು ಕೆಎಸ್‌ಆರ್‌ಟಿಸಿಗೆ ಮಾನಹಾನಿ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿದ್ದು, ಈ ಕಾರಣಕ್ಕೆ ಕ್ರಮ ಕೈಗೊಳ್ಳಲಾಗಿದೆ.

10ನೇ ತರಗತಿ ಪರೀಕ್ಷೆ ಮುಗಿಸಿದ ದಿನವೇ ಶಾಲೆಯಿಂದ ನೇರವಾಗಿ ಊಟಿಗೆ ತೆರಳುತ್ತಿದ್ದ ಐವರು ವಿದ್ಯಾರ್ಥಿಗಳ ತಂಡ – ಮಾರ್ಗಮಧ್ಯದಲ್ಲಿ ಪೊಲೀಸರ ಕೈಗೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮುಗಿಸಿ ಪೋಷಕರಿಗೆ ತಿಳಿಸದೆ ಊಟಿಗೆ ತೆರಳುತ್ತಿದ್ದ ವಿದ್ಯಾರ್ಥಿಗಳನ್ನು ಕಣ್ಣೂರು ರೈಲ್ವೆ ಪೊಲೀಸರು ಹಿಡಿದಿದ್ದಾರೆ.

ಬಾಲಕಿಯರು ಸೇರಿದಂತೆ ಐದು ಮಂದಿಯ ಗ್ಯಾಂಗ್ ಕಳೆದ ಬುಧವಾರ ತಮ್ಮ ಶಾಲಾ ಸಮವಸ್ತ್ರವನ್ನು ಬದಲಾಯಿಸಿಕೊಂಡು ಕೊಲ್ಲಂ ರೈಲು ನಿಲ್ದಾಣವನ್ನು ತಲುಪಿದ್ದರು.

ಅವರಿಗೆ ಊಟಿಗೆ ಹೋಗಬೇಕೆನಿಸಿತು, ಆದರೆ ಯಾವ ರೈಲು ಹತ್ತಬೇಕು ಎಂಬುದು ಗೊತ್ತಿರಲಿಲ್ಲ. ಕಣ್ಣೂರಿಗೆ ಟಿಕೆಟ್ ಖರೀದಿಸಿ ನಿಜಾಮುದ್ದೀನ್ ಎಕ್ಸ್ ಪ್ರೆಸ್ ಹತ್ತಿದರು. ವಿದ್ಯಾರ್ಥಿಗಳ ಗ್ಯಾಂಗ್ ಬಳಿ ಕೇವಲ 2500 ರೂಪಾಯಿ ಇತ್ತು.

ರೈಲು ರಾತ್ರಿ 11.30 ರ ಸುಮಾರಿಗೆ ಕಣ್ಣೂರು ರೈಲು ನಿಲ್ದಾಣವನ್ನು ತಲುಪಿತು. ಆದರೆ ಅವರು ಒಳಗೆಯೇ ಇದ್ದರು. ರೈಲು ಹೊರಡುವ ಮುನ್ನವೇ ಚಾತನೂರು ಸಿಐ ಶಿವಕುಮಾರ್ ದೂರವಾಣಿ ಮೂಲಕ ನೀಡಿದ ಸೂಚನೆ ಮೇರೆಗೆ ರೈಲ್ವೇ ಪೊಲೀಸರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.

ಅವರನ್ನು ಚತ್ತನೂರು ಪೊಲೀಸರಿಗೆ ಒಪ್ಪಿಸಲಾಗಿದೆ. ಇಬ್ಬರು ಬಾಲಕಿಯರು ಮತ್ತು ಒಬ್ಬ ಹುಡುಗನನ್ನು ಪರವೂರು ನ್ಯಾಯಾಲಯಕ್ಕೆ ಹಾಜರುಪಡಿಸಿ ಅವರ ಪೋಷಕರೊಂದಿಗೆ ಕಳುಹಿಸಿಕೊಡಲಾಗಿದೆ. ಉಳಿದ ಇಬ್ಬರನ್ನು ಕೌನ್ಸೆಲಿಂಗ್‌ಗೆ ಒಳಪಡಿಸಲಾಗಿದೆ.

ಬೆಂಗಳೂರು ಯುವತಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ನಾಲ್ವರಿಂದ ಸಾಮೂಹಿಕ ಅತ್ಯಾಚಾರ, ಎಲ್ಲಾ ಆರೋಪಿಗಳ ಬಂಧನ

ಚಲಿಸುತ್ತಿದ್ದ ಕಾರಿನಲ್ಲಿ ನಾಲ್ಕು ಮಂದಿ ಸೇರಿ, ಒಬ್ಬ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಚಲಿಸುತ್ತಿದ್ದ ಕಾರಿನಲ್ಲಿ ನಾಲ್ವರು ಬೆಂಗಳೂರಿನ ಮಹಿಳೆಯನ್ನು ಅಪಹರಿಸಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಶುಕ್ರವಾರ ಪಿಟಿಐಗೆ ತಿಳಿಸಿದ್ದಾರೆ.

ಪೊಲೀಸರು ಎಲ್ಲಾ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಕೋರಮಂಗಲದ ನ್ಯಾಷನಲ್ ಗೇಮ್ಸ್ ವಿಲೇಜ್ ಪಾರ್ಕ್‌ನಲ್ಲಿ ಮಹಿಳೆ ಕುಳಿತಿದ್ದಾಗ ನಾಲ್ವರು ಮಾರ್ಚ್ 25 ರಂದು ರಾತ್ರಿ 10 ಗಂಟೆಗೆ ಮಹಿಳೆಯನ್ನು ತಮ್ಮ ಕಾರಿಗೆ ಎಳೆದುಕೊಂಡು ವಾಹನವನ್ನು ವೇಗವಾಗಿ ಚಲಾಯಿಸಿದ್ದಾರೆ.

ಪೊಲೀಸರ ಪ್ರಕಾರ, ಚಲಿಸುತ್ತಿದ್ದ ಕಾರಿನಲ್ಲಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ. ಮಾರ್ಚ್ 26 ರಂದು ಬೆಳಿಗ್ಗೆ ಆಕೆಯನ್ನು ಆಕೆಯ ಮನೆಯ ಬಳಿ ಇಳಿಸಿದರು ಮತ್ತು ಘಟನೆಯ ಬಗ್ಗೆ ಪೊಲೀಸರಿಗೆ ತಿಳಿಸಿದರೆ “ಭೀಕರ ಪರಿಣಾಮ” ಎಂದು ಬೆದರಿಕೆ ಹಾಕಿದರು ಎಂದು ಪಿಟಿಐ ವರದಿ ಮಾಡಿದೆ.

ನಂತರ ಸಂತ್ರಸ್ತೆ ಚಿಕಿತ್ಸೆ ಪಡೆದು ಪೊಲೀಸರಿಗೆ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. “ನಾವು ಈ ವಿಷಯದ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಎಲ್ಲಾ ನಾಲ್ವರನ್ನು ಬಂಧಿಸಲಾಗಿದೆ ಮತ್ತು ಅವರನ್ನು ವಿಚಾರಣೆ ನಡೆಸಲಾಗುತ್ತಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

42ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಸಂಸ್ಕೃತ ಶಿಕ್ಷಕ, ವೆಂಕಟೇಶ್ ಪ್ರಸಾದ್ ಗೆ ಕಂಚಿನ ಪದಕ

42ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಪುತ್ತೂರು, ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ, ವೆಂಕಟೇಶ್ ಪ್ರಸಾದ್ ಅವರು (1.35 ಮೀ) ಕಂಚಿನ ಪದಕ ಗಳಿಸಿದ್ದಾರೆ

ಪುತ್ತೂರು, ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಂಸ್ಕೃತ ಶಿಕ್ಷಕ ಪುತ್ತೂರು ತಾಲೂಕು, ದರ್ಬೆತ್ತಡ್ಕದ  ವೆಂಕಟೇಶ್ ಪ್ರಸಾದ್ ಇವರು 45ರ ವಯೋಮಾನ ವಿಭಾಗದ ಎತ್ತರ ಜಿಗಿತದಲ್ಲಿ ತೃತೀಯ ಸ್ಥಾನ ಪಡೆದು 42ನೇ ರಾಷ್ಟ್ರೀಯ ಹಿರಿಯರ ಕ್ರೀಡಾಕೂಟದಲ್ಲಿ ಎತ್ತರ ಜಿಗಿತದಲ್ಲಿ ಕಂಚಿನ ಪದಕದ ಗರಿಮೆಗೆ ಪಾತ್ರರಾಗಿದ್ದಾರೆ.

ಅಂಬಿಕಾದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಗಣಿತ ಮತ್ತು ವಿಜ್ಞಾನ ಕೋಚಿಂಗ್

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿನ ಅಂಬಿಕಾ ವಿದ್ಯಾಲಯದ ಆಶ್ರಯದಲ್ಲಿ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗಾಗಿ ರಜಾ ಅವಧಿಯ ವಿಶೇಷ ತರಬೇತಿ ತರಗತಿಗಳು ಎಪ್ರಿಲ್ 3ರಿಂದ ಆರಂಭಗೊಳ್ಳಲಿವೆ. ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಒಂಬತ್ತನೆಯ ತರಗತಿಯನ್ನು ಪೂರೈಸಿದ ವಿದ್ಯಾಥಿಗಳಿಗೆ ಈ ವಿಶೇಷ ತರಬೇತಿ ತರಗತಿಗಳಿಗೆ ಹಾಜರಾಗುವುದಕ್ಕೆ ಅವಕಾಶವಿದೆ. ಗಣಿತ ಹಾಗೂ ವಿಜ್ಞಾನ ವಿಷಯಗಳಲ್ಲಿ ತರಬೇತಿ ತರಗತಿಗಳು ನಡೆಯಲಿವೆ.


ಒಂಬತ್ತನೆಯ ತರಗತಿಯ ಪರೀಕ್ಷೆಗಳು ಮುಗಿದಿದ್ದು ಹೆಚ್ಚಿನ ವಿದಾರ್ಥಿಗಳು ಅತಿಯಾದ ಮೊಬೈಲ್, ಟಿವಿ ಬಳಕೆಯಿಂದಾಗಿ ಓದಿನ ವಾತಾವರಣದಿಂದ ದೂರ ಸರಿಯುತ್ತಿದ್ದಾರೆ ಎಂಬ ಕೂಗು ಹೆತ್ತವರಿಂದ ಕೇಳಿಬರುತ್ತಿದೆ. ಕೊರೋನಾ ಕಾಲದಲ್ಲಿ ಅನಿವಾರ್ಯವಾಗಿ ಮೊಬೈಲ್ ಮೊರೆ ಹೋಗಿದ್ದ ವಿದ್ಯಾಥಿಗಳಲ್ಲಿ ಹೆಚ್ಚಿನವರು ಈಗ ಮೊಬೈಲ್ ಬಳಕೆಯನ್ನು ಚಟವಾಗಿ ಬೆಳೆಸಿಕೊಂಡಿರುವುದು ಹೆತ್ತವರ ಆತಂಕವನ್ನು ಹೆಚ್ಚಿಸಿದೆ. ಜತೆಗೆ ಹತ್ತನೆಯ ತರಗತಿ ಎಂಬುದು ವಿದ್ಯಾರ್ಥಿಗಳ ಬದುಕಿನಲ್ಲಿ ಅತಿ ಮುಖ್ಯ ಘಟ್ಟವಾಗಿರುವುದರಿಂದ ರಜಾ ಅವಧಿಯಲ್ಲಿನ ತರಗತಿಗಳು ಅತ್ಯಂತ ಪ್ರಾಮುಖ್ಯ ಎನಿಸಿವೆ.


ಹತ್ತನೆಯ ತರಗತಿ ಪರೀಕ್ಷೆಯನ್ನು ಎದುರಿಸುವ ವಿದ್ಯಾರ್ಥಿಗಳಲ್ಲಿ ಅನೇಕರಿಗೆ ಗಣಿತ ಹಾಗೂ ವಿಜ್ಞಾನ ಕಬ್ಬಿಣದ ಕಡಲೆಯಂತಾಗುತ್ತಿದ್ದು, ಈ ನೆಲೆಯಲ್ಲಿ ಶಾಲಾ ಆರಂಭಕ್ಕೂ ಪೂರ್ವದಲ್ಲಿ ತರಗತಿ, ತರಬೇತಿಗಳು ನಡೆದಲ್ಲಿ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ. ಹೆಚ್ಚಿನ ಮಾಹಿತಿಗಾಗಿ : 08251 233488, 298188, 9071655688

ಮಹಾಂತೇಶ ನವಲಕಲ್ ಮತ್ತು ಶ್ರೀಲೋಲ ಸೋಮಯಾಜಿಯವರಿಗೆ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿ

ಧಾರವಾಡದ ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯು ನೀಡುವ 2022ನೇ ಸಾಲಿನ ರಾಘವೇಂದ್ರ ಪಾಟೀಲ ಕಥಾ ಪ್ರಶಸ್ತಿಯು ಮಹಾಂತೇಶ ನವಲಕಲ್ ಅವರ ‘ಬುದ್ಧಗಂಟೆಯ ಸದ್ದು ಮತ್ತು ಇತರೆ ಕತೆಗಳು’ ಹಾಗೂ ಶ್ರೀಲೋಲ ಸೋಮಯಾಜಿಯವರ ‘ನ ಪ್ರಮದಿತವ್ಯಂ’ ಎಂಬ ಕಥಾಸಂಕಲನಗಳ ಹಸ್ತಪ್ರತಿಗಳಿಗೆ ದೊರತಿದೆ. 

ಕನ್ನಡದ ಖ್ಯಾತ ವಿಮರ್ಶಕ ಪ್ರೊ. ಟಿ. ಪಿ. ಅಶೋಕ ಮತ್ತು ಖ್ಯಾತ ಕಥೆಗಾರ ಡಾ. ಕೆ. ಸತ್ಯನಾರಾಯಣ ಅವರು ತೀರ್ಪುಗಾರರಾಗಿದ್ದು ಸರ್ವಾನುಮತದಿಂದ ಈ ಹಸ್ತಪ್ರತಿಗಳನ್ನು ಆಯ್ಕೆ ಮಾಡಿದ್ದಾರೆ. ಈ ಪ್ರಶಸ್ತಿ 20000=00 ರೂ. ನಗದು, ಪ್ರಶಸ್ತಿ ಫಲಕ ಮತ್ತು ಸನ್ಮಾನ ಒಳಗೊಂಡಿರುತ್ತದೆ. 

ಎಪ್ರಿಲ್ 16ರಂದು ಧಾರವಾಡದ ರಂಗಾಯಣದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಖ್ಯಾತ ಕವಿ ಡಾ. ಎಚ್. ಎಸ್. ವೆಂಕಟೇಶ ಮೂರ್ತಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ರಾಘವೇಂದ್ರ ಪಾಟೀಲ ಸಾಹಿತ್ಯ ವೇದಿಕೆಯ ಸಂಚಾಲಕ ವಿಕಾಸ ಹೊಸಮನಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬಪ್ಪಳಿಗೆಯ ಅಂಬಿಕಾ ಪದವಿ ಮಹಾವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ – ‘ಶೃಂಗೇರಿಯಲ್ಲಿ ನಿರ್ಮಾಣವಾದ ಶಾರದೆ ವಿಗ್ರಹ ಕಾಶ್ಮೀರದಲ್ಲಿ ಪ್ರತಿಷ್ಠೆ’ : ಸುಬ್ರಹ್ಮಣ್ಯ ನಟ್ಟೋಜ

ಪುತ್ತೂರು: ಶೃಂಗೇರಿಯಲ್ಲಿ ನಿರ್ಮಾಣವಾದ 3 ಅಡಿ ಎತ್ತರ, 100 ಕೆ.ಜಿ ತೂಕದ ಪಂಚಲೋಹದ ಶಾರದಾ ಮಾತೆಯ ವಿಗ್ರಹವನ್ನು ಪಾಕ್ ಗಡಿ ಬಳಿಯ ತೀತ್ವಾಲ್ ಬಳಿ ಇತ್ತೀಚೆಗೆ ಯಶಸ್ವಿಯಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ತನ್ಮೂಲಕ ಒಂದನೇ ಶತಮಾನದಿಂದಲೂ ಹಿಂದೂಗಳ ಧಾರ್ಮಿಕ ಶ್ರದ್ಧಾಕೇಂದ್ರವಾಗಿದ್ದು, ತದನಂತರ ದುಷ್ಟ ಅರಸರು ಹಾಗೂ ಪಾಕ್ ದಾಳಿಯಿಂದ ಶಿಥಿಲವಾಗಿದ್ದ ಈ ಶಾರದಾದೇವಿಯ ಆರಾಧನಾ ಸ್ಥಳ ಮತ್ತೆ ಪುನರುಜ್ಜೀವಗೊಂಡಿದೆ ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಸುಬ್ರಹ್ಮಣ್ಯ ನಟ್ಟೋಜ ಹೇಳಿದರು.


ಅವರು ಬುಧವಾರ ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಮಹಾವಿದ್ಯಾಲಯದಲ್ಲಿ “ಕಾಶ್ಮೀರದ ಶಾರದಾ ಪೀಠದಲ್ಲಿ ಶಾರದೆ ದೇಗುಲ ಪ್ರತಿಷ್ಠಾಪನೆ” ಕುರಿತು ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.


ಈ ಹಿಂದೆ ಇದ್ದ ಈ ದೇಗುಲದ ಸುತ್ತುಪೌಳಿಯನ್ನು ಮತಾಂಧ ರಾಜರು ನಾಶ ಮಾಡಿದ್ದರು. ಬಳಿಕ ಭಾರತ ಪಾಕಿಸ್ಥಾನ ಯುದ್ಧ ಸಂದರ್ಭದಲ್ಲಿ ಪಾಕಿಸ್ತಾನ ಸೈನಿಕರು ದೇಗುಲವನ್ನು ಸಂಪೂರ್ಣ ಹಾಳುಗೆಡವಿದರು. ಇದರ ಪಕ್ಕದಲ್ಲೇ ಕಿಶನ್ ಗಂಗಾ ನದಿ ಹರಿಯುತ್ತಿದ್ದು, ಅದರಾಚೆಗೆ ಪಾಕ್ ಆಕ್ರಮಿತ ಗಡಿ ಭಾಗವಿದೆ. ದೇಗುಲದ ಕೂಗಳತೆ ದೂರದಲ್ಲಿ ಪಾಕಿಸ್ತಾನ ಅತಿಕ್ರಮಿತ ಭಾರತದ ಪ್ರದೇಶವಿದೆ.

ಈಗ ಸ್ಥಾಪನೆಯಾಗಿರುವ ಶಾರದಾ ಮಂದಿರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಸರ್ವಜ್ಞ ಪೀಠಕ್ಕಿಂದ ಏಳು ಕಿಲೋಮೀಟರ್ ದೂರದಲ್ಲಿದೆ. ಇದೀಗ ಸರ್ವಜ್ಞ ಪೀಠವನ್ನು ಅಲಂಕರಿಸಿದ ಶ್ರೀ ಶಂಕರಾಚಾರ್ಯರು ನಡೆದಾಡಿದ ಜಾಗದಲ್ಲಿ ಮತ್ತೆ ಶಾರದ ಮಾತೆಯ ವಿಗ್ರಹ ಈಗ ಪ್ರತಿಷ್ಠಾಪನೆಗೊಂಡ0ತಾಗಿದೆ. ಭಾರತೀಯ ಸೇನಾಧಿಕಾರಿಗಳ ಸಹಕಾರದೊಂದಿಗೆ ದೇಗುಲದಲ್ಲಿ ಪೂಜಾ ಕಾರ್ಯಗಳು ನಡೆದವು ಎಂದು ಮಾಹಿತಿ ನೀಡಿದರು.


ಕಾಶ್ಮೀರ ಪಂಡಿತರ ನೇತೃತ್ವ:
ದೇಗುಲ ನಾಶದ ಬಳಿಕ ಸ್ಥಳೀಯ ಕಾಶ್ಮೀರಿ ಪಂಡಿತರೂ ಸ್ಥಳದಿಂದ ದೂರವಾಗಿದ್ದರು. ಆದರೆ ಇದೀಗ ಮತ್ತೆ ದೇಗುಲದತ್ತ ಆಗಮಿಸುತ್ತಿದ್ದಾರೆ. ರವೀಂದ್ರ ಪಂಡಿತ್ ಎಂಬವರ ನೇತೃತ್ವದಲ್ಲಿ ದೇಗುಲ ನಿರ್ಮಾಣವಾಗಿದೆ. ವಿಶೇಷವೆಂದರೆ ಸ್ಥಳೀಯ ಮುಸ್ಲಿಮರೂ ಈ ದೇಗುಲ ನಿರ್ಮಾಣಕ್ಕೆ ಕೈಜೋಡಿಸಿದ್ದಾರೆ. ಪ್ರತಿಷ್ಠಾಪನೆ ಸಂದರ್ಭ ಕೆಲವೇ ಕೆಲವು ಹಿಂದೂಗಳು ಭಾಗವಹಿಸಿದ್ದರು. ವಿಶೇಷವೆಂದರೆ ತಮಿಳುನಾಡಿನಿಂದ ವೃದ್ಧ ದಂಪತಿಗಳೂ ಪೂಜೆಗಾಗಿ ತೀತ್ವಾಲ್‌ಗೆ ಆಗಮಿಸಿದ್ದರು ಎಂದು ವಿವರಣೆ ನೀಡಿದರು.

ದೈವೀ ಶಕ್ತಿ ಅನಾವರಣ:
ತೀತ್ವಾಲ್ ಬಳಿ ಮೈಕೊರೆವ ಚಳಿ ಇದ್ದು, ಪ್ರತಿಷ್ಠಾಪನೆ ನಡೆವ ಹಿಂದಿನ ದಿನ ಪ್ರಬಲ ಭೂಕಂಪ ನಡೆದಿತ್ತು. ರಿಕ್ಟರ್ ಮಾಪಕದಲ್ಲಿ 6.6 ತೀವ್ರತೆ ದಾಖಲಾಗಿತ್ತು. ರಾತ್ರಿ ಮಲಗಿದ್ದ ನಾವು ಮನೆಯಿಂದ ಹೊರಗೆ ಓಡಿಬಂದೆವು. ಆದರೆ ಅಷ್ಟು ತೀವ್ರ ಭೂಕಂಪನವಾದರೂ ಯಾವುದೇ ಸಮಸ್ಯೆ ಉಂಟಾಗದಿರುವುದು ದೈವೀ ಶಕ್ತಿ ತನ್ನ ಪವಾಡ ತೋರಿಸಿರುವುದಕ್ಕೆ ಸಾಕ್ಷಿಯಾಗಿದೆ ಎಂದು ಮಾಹಿತಿ ನೀಡಿದರು.

ಪೋಟೊ ಹಾಗೂ ದೃಶ್ಯಾವಳಿಗಳ ಮೂಲಕ ವಿದ್ಯಾರ್ಥಿಗಳಿಗೆ ದೇಗುಲ ಪ್ರತಿಷ್ಟಾಪನೆಯ ಕುರಿತಾದ ಮಾಹಿತಿ ನೀಡಲಾಯಿತು.
ಈ ಸಂದರ್ಭ ಪ್ರಾಚಾರ್ಯ ರಾಕೇಶ ಕುಮಾರ್ ಕಮ್ಮಜೆ, ಅಂಬಿಕಾ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಗಣೇಶ್ ಪ್ರಸಾದ್, ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.